ನಟಿ ತಮನ್ನಾ ಭಾಟಿಯಾ ಭಾನುವಾರ ಬೆಳಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ತಮನ್ನಾ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಬೇಡಿದರು.
ನಟಿ ತಮನ್ನಾ ಭಾಟಿಯಾ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ದೇವರ ದರ್ಶನ ಪಡೆದ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗಿನ 'ವ್ವಾನ್' ಚಿತ್ರದಲ್ಲಿ ತಮನ್ನಾ ಕಾಣಿಸಿಕೊಳ್ಳಲಿದ್ದಾರೆ. ನಟಿ ತಮನ್ನಾ ಭಾಟಿಯಾ ಭಾನುವಾರ ಬೆಳಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ತಮನ್ನಾ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಆಶೀರ್ವಾದ ಬೇಡಿದರು. ವಿಷ್ಣುವಿನ ಅವತಾರವಾದ ವೆಂಕಟೇಶ್ವರ ಸ್ವಾಮಿಗೆ ಮುಡಿಪಾದ ಈ ದೇವಸ್ಥಾನ, ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. 'ಬಾಹುಬಲಿ' ಖ್ಯಾತಿಯ ನಟಿ ತಮ್ಮ ಈ ಭೇಟಿಯ ಚಿತ್ರಗಳನ್ನು ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಹಂಚಿಕೊಂಡಿದ್ದಾರೆ.
ಶೇಷಾಚಲಂ ಬೆಟ್ಟದ ಏಳನೇ ಶಿಖರದ ಮೇಲೆ ಈ ತಿರುಮಲ ವೆಂಕಟೇಶ್ವರ ದೇವಸ್ಥಾನವಿದೆ. ಇದು ಭಾರತದ ಅತ್ಯಂತ ಪೂಜ್ಯನೀಯ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಬಾಲಾಜಿ ಎಂದೂ ಕರೆಯಲ್ಪಡುವ ವೆಂಕಟೇಶ್ವರ ಸ್ವಾಮಿಯ ಈ ಶತಮಾನಗಳಷ್ಟು ಹಳೆಯ ದೇಗುಲಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇತ್ತೀಚಿನ ವಾರಗಳಲ್ಲಿ ಹಲವು ಸೆಲೆಬ್ರಿಟಿಗಳು ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಫೆಮಿನಾ ಮಿಸ್ ಇಂಡಿಯಾ 2020 ಮಾನಸ ವಾರಣಾಸಿ ಕೂಡ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು.
ತಮನ್ನಾ ಭಾಟಿಯಾ ಸಿನಿಮಾ ವಿಚಾರ
ಇನ್ನು ಸಿನಿಮಾ ವಿಚಾರಕ್ಕೆ ಬಂದರೆ, ತಮನ್ನಾ ಭಾಟಿಯಾ ಅವರು ದೀಪಕ್ ಮಿಶ್ರಾ ಮತ್ತು ಅರುಣಾಭ್ ಕುಮಾರ್ ನಿರ್ದೇಶನದ 'ವ್ವಾನ್' ಚಿತ್ರದಲ್ಲಿ ಮುಂದೆ ಕಾಣಿಸಿಕೊಳ್ಳಲಿದ್ದಾರೆ. ಏಕ್ತಾ ಕಪೂರ್ ನಿರ್ಮಿಸಿರುವ ಈ ಚಿತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ನಟಿಸಿದ್ದಾರೆ. ಈ ವರ್ಷ ರಕ್ಷಾ ಬಂಧನದ ಪ್ರಯುಕ್ತ ಸಿನಿಮಾ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಆಗಸ್ಟ್ 28 ರಂದು ಚಿತ್ರ ತೆರೆಗೆ ಬರಲಿದೆ.


