MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Business
  • ಬೆಂಗಳೂರಿಗಿದ್ದ ಸಿಲಿಕಾನ್‌ ಸಿಟಿ ಹೆಸರನ್ನು ಗಟ್ಟಿಗೊಳಿಸಿದ ರತನ್‌ ಟಾಟಾ!

ಬೆಂಗಳೂರಿಗಿದ್ದ ಸಿಲಿಕಾನ್‌ ಸಿಟಿ ಹೆಸರನ್ನು ಗಟ್ಟಿಗೊಳಿಸಿದ ರತನ್‌ ಟಾಟಾ!

ಮಾಹಿತಿ ತಂತ್ರಜ್ಞಾನ, ಆಟೋ ಮೊಬೈಲ್‌, ಆತಿಥ್ಯ ಸೇರಿದಂತೆ ಸರಿಸುಮಾರು 20ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಟಾಟಾ ಸಮೂಹ ಸಂಸ್ಥೆ ತನ್ನ ಛಾಪು ಮೂಡಿಸಿದೆ. ಅಲ್ಲದೆ, ಅಷ್ಟೂ ಉದ್ಯಮವನ್ನೂ ಬೆಂಗಳೂರಿನಲ್ಲಿ ಆರಂಭಿಸಿದ ಶ್ರೇಯಸ್ಸು ರತನ್‌ ಟಾಟಾ ಅವರದ್ದಾಗಿದೆ.  

1 Min read
Author : Govindaraj S
Published : Oct 11 2024, 07:36 AM IST
Share this Photo Gallery
  • FB
  • TW
  • Linkdin
  • Whatsapp
14

ಬೆಂಗಳೂರು (ಅ.11): ದೇಶದ ಅತಿದೊಡ್ಡ ಸಂಸ್ಥೆ ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರು ಬೆಂಗಳೂರಿಗಿದ್ದ ಸಿಲಿಕಾನ್‌ ಸಿಟಿಯ ಹೆಸರನ್ನು ಗಟ್ಟಿಗೊಳಿಸಲು ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಸೇರಿದಂತೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನ, ಆಟೋ ಮೊಬೈಲ್‌, ಆತಿಥ್ಯ ಸೇರಿದಂತೆ ಸರಿಸುಮಾರು 20ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಟಾಟಾ ಸಮೂಹ ಸಂಸ್ಥೆ ತನ್ನ ಛಾಪು ಮೂಡಿಸಿದೆ. 

24

ಅಲ್ಲದೆ, ಅಷ್ಟೂ ಉದ್ಯಮವನ್ನೂ ಬೆಂಗಳೂರಿನಲ್ಲಿ ಆರಂಭಿಸಿದ ಶ್ರೇಯಸ್ಸು ರತನ್‌ ಟಾಟಾ ಅವರದ್ದಾಗಿದೆ. ಅದರಲ್ಲೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಸ್ಥಾನ ಹೊಂದಿರುವ 1968ರಲ್ಲಿ ಮುಂಬೈ (ಆಗಿನ ಬಾಂಬೆ)ನಲ್ಲಿ ಆರಂಭವಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ (ಟಿಸಿಎಸ್‌)ನ್ನು ನಂತರ ಬೆಂಗಳೂರಿಗೆ ವರ್ಗಾಯಿಸಿದ ಕೀರ್ತಿ ರತನ್‌ ಟಾಟಾ ಅವರದ್ದಾಗಿದೆ.
 

34

ಅದರ ಜತೆಗೆ ಟಾಟಾ ಟೀ ಉತ್ಪಾದನಾ ಘಟಕಗಳು ರಾಜ್ಯದಲ್ಲಿವೆ. ಕೊಡಗು, ಚಿಕ್ಕಮಗಳೂರಿನಲ್ಲಿ ಟಾಟಾ ಸಂಸ್ಥೆಯ ನಿರ್ವಹಣೆಯಲ್ಲಿರುವ ಟೀ ಎಸ್ಟೇಟ್‌ ಇದ್ದು, ಅವುಗಳು ಟಾಟಾ ಟೀ ಉತ್ಪನ್ನಕ್ಕೆ ಬಹುಮುಖ್ಯ ಕಚ್ಛಾ ವಸ್ತು ಪೂರೈಕೆ ಪ್ರದೇಶವಾಗಿದೆ. ಹಾಗೆಯೇ, ಕೊಡಗಿನಲ್ಲಿ ಕಾಫಿ ಎಸ್ಟೇಟ್‌ನ್ನು ಕೂಡ ಟಾಟಾ ಸಂಸ್ಥೆ ಹೊಂದಿದೆ. ಅದರ ಜತೆಗೆ ಬೆಂಗಳೂರಿನಲ್ಲಿ ಸ್ಟಾರ್‌ ಬಜಾರ್‌, ಇಂಡಿಯನ್‌ ಹೋಟೆಲ್ಸ್‌ ಸಂಸ್ಥೆ ಅಡಿಯಲ್ಲಿ ತಾಜ್‌ ಹೋಟೆಲ್‌ಗಳು, ಟಾಟಾ ಮೋಟಾರ್ಸ್‌ ಹೀಗೆ ಹಲವು ಉದ್ಯಮಗಳನ್ನು ಆರಂಭಿಸಿದ ಕೀರ್ತಿ ರತನ್‌ ಟಾಟಾ ಅವರದ್ದಾಗಿದೆ. ಒಂದು ಅಂದಾಜಿನ ಪ್ರಕಾರ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ 6 ಸಾವಿರ ಕೋಟಿ ರು.ಗೂ ಹೆಚ್ಚಿನ ಹೂಡಿಕೆಯನ್ನು ಟಾಟಾ ಸಮೂಹ ಸಂಸ್ಥೆ ಹೂಡಿಕೆ ಮಾಡಿದೆ.

44

ರತನ್‌ ಟಾಟಾ ಅವರ ಕೊಡುಗೆ ಕುರಿತು ವಿವರಿಸಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)ನ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅವರು, ರತನ್‌ ಟಾಟಾ ಅವರು ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಟಾಟಾ ಸಮೂಹ ಸಂಸ್ಥೆಯ ಪ್ರತಿಯೊಂದು ಉದ್ಯಮವೂ ಬೆಂಗಳೂರು ಹಾಗೂ ರಾಜ್ಯದಲ್ಲಿವೆ. ಪ್ರಮುಖವಾಗಿ ಟಾಟಾ ಮೋಟಾರ್ಸ್‌, ಟಾಟಾ ಟೀ, ಟಾಟಾ ಸ್ಟೀಲ್‌, ಟಿಸಿಎಸ್‌ನಂತಹ ಸಂಸ್ಥೆಗಳು ನಗರದಲ್ಲಿ ಕಚೇರಿಗಳನ್ನು ಹೊಂದಿವೆ. ರತನ್‌ ಟಾಟಾ ಅವರ ದೂರದೃಷ್ಟಿತ್ವದಿಂದಾಗಿ ಬೆಂಗಳೂರಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ ಎಂದಿದ್ದಾರೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಬೆಂಗಳೂರು

Latest Videos
Recommended Stories
Recommended image1
ಈ ರಾಶಿ ಜನರು ಹೊಸ ವರ್ಷ 2026 ರಲ್ಲಿ ಲಕ್ಷಾಧಿಪತಿಗಳಾಗುತ್ತಾರೆ, ಬಂಪರ್ ಯಶಸ್ಸು, ಸಂತೋಷ ಮತ್ತು ಸಮೃದ್ಧಿ
Recommended image2
2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?
Recommended image3
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved