MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಕೇರಳದಲ್ಲಿ 'ಕಾಂತಾರ 1' ಲಾಭದ ಪಾಲಿಗೆ ವಿತರಕರು, ಪ್ರದರ್ಶಕರ ಮಧ್ಯೆ ಗುದ್ದಾಟ!

ಕೇರಳದಲ್ಲಿ 'ಕಾಂತಾರ 1' ಲಾಭದ ಪಾಲಿಗೆ ವಿತರಕರು, ಪ್ರದರ್ಶಕರ ಮಧ್ಯೆ ಗುದ್ದಾಟ!

ಕಾಂತಾರ 1 ಚಿತ್ರ ಬಿಡುಗಡೆಯಾದ ಮೊದಲ ಎರಡು ವಾರಗಳ ಥಿಯೇಟರ್‌ ಕಲೆಕ್ಷನ್‌ನ ಲಾಭದ ಪಾಲಿನಲ್ಲಿ ಶೇ.55ರಷ್ಟು ಪಾಲು ನೀಡಬೇಕು’ ಎಂದು ಷರತ್ತು ಹಾಕಿದೆ ಎನ್ನಲಾಗಿದೆ. ಈ ಷರತ್ತಿಗೆ ಪ್ರದರ್ಶಕರು ಒಪ್ಪುತ್ತಿಲ್ಲ.

1 Min read
Author : Govindaraj S
Published : Sep 11 2025, 05:25 PM IST
Share this Photo Gallery
  • FB
  • TW
  • Linkdin
  • Whatsapp
17
ವಿತರಕರು ಮತ್ತು ಪ್ರದರ್ಶಕರ ಮಧ್ಯೆ ಗುದ್ದಾಟ
Image Credit : instagram

ವಿತರಕರು ಮತ್ತು ಪ್ರದರ್ಶಕರ ಮಧ್ಯೆ ಗುದ್ದಾಟ

ಕೇರಳದಲ್ಲಿ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಚಿತ್ರದ ಲಾಭದ ಪಾಲಿಗೆ ವಿತರಕರು ಮತ್ತು ಪ್ರದರ್ಶಕರ ಮಧ್ಯೆ ಗುದ್ದಾಟ ನಡೆದಿದೆ. ಕಲೆಕ್ಷನ್ ಲಾಭದ ಪಾಲಿನಲ್ಲಿ ಶೇ.55 ತಮಗೆ ಬರಬೇಕು ಎಂದು ವಿತರಕರು ಕೇಳಿರುವುದೇ ಗಲಾಟೆಗೆ ಕಾರಣವಾಗಿದ್ದು, ಒಮ್ಮತದ ನಿರ್ಧಾರಕ್ಕೆ ಬರುವವರೆಗೆ ಅಲ್ಲಿನ ಪ್ರದರ್ಶಕರು ಈ ಚಿತ್ರವನ್ನು ಬಿಡುಗಡೆ ಮಾಡದೆ ಇರಲು ನಿರ್ಧರಿಸಿದ್ದಾರೆ.

27
ಶೇ.55ರಷ್ಟು ಪಾಲು ನೀಡಬೇಕು
Image Credit : stockPhoto

ಶೇ.55ರಷ್ಟು ಪಾಲು ನೀಡಬೇಕು

ಚಿತ್ರದ ವಿತರಣೆ ಹಕ್ಕುಗಳನ್ನು ಪಡೆದುಕೊಂಡಿರುವ ನಟ ಹಾಗೂ ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ಸಾರಥ್ಯದ ಪೃಥ್ವಿರಾಜ್‌ ಪ್ರೊಡಕ್ಷನ್‌, ‘ಚಿತ್ರ ಬಿಡುಗಡೆಯಾದ ಮೊದಲ ಎರಡು ವಾರಗಳ ಥಿಯೇಟರ್‌ ಕಲೆಕ್ಷನ್‌ನ ಲಾಭದ ಪಾಲಿನಲ್ಲಿ ಶೇ.55ರಷ್ಟು ಪಾಲು ನೀಡಬೇಕು’ ಎಂದು ಷರತ್ತು ಹಾಕಿದೆ ಎನ್ನಲಾಗಿದೆ.

Related Articles

Related image1
ವಿಶ್ವಾದ್ಯಂತ ಒಂದೇ ದಿನ ರಿಷಬ್‌ ಶೆಟ್ಟಿ 'ಕಾಂತಾರ ಚಾಪ್ಟರ್ 1' ಬಿಡುಗಡೆ
Related image2
ಕಾಂತಾರ ಚಾಪ್ಟರ್ 1 ಬಗ್ಗೆ ತೆಲಗು ರಾಜ್ಯಗಳಲ್ಲಿ ಹರಿದಾಡ್ತಿರೋ ಸುದ್ದಿ ನಿಜವೇ?
37
ಷರತ್ತು ಒಪ್ಪಲು ಸಾಧ್ಯವಿಲ್ಲ
Image Credit : Instagram

ಷರತ್ತು ಒಪ್ಪಲು ಸಾಧ್ಯವಿಲ್ಲ

ಈ ಷರತ್ತಿಗೆ ಪ್ರದರ್ಶಕರು ಒಪ್ಪುತ್ತಿಲ್ಲ. ಯಾಕೆಂದರೆ ಕೇರಳದಲ್ಲಿ ಪ್ರದರ್ಶಕರು ಬೇರೆ ಚಿತ್ರಗಳಿಗೆ ಶೇ.50ರಷ್ಟು ಲಾಭದ ಪಾಲನ್ನು ನಿಗದಿ ಮಾಡಿದ್ದು, ಪೃಥ್ವಿರಾಜ್‌ ಪ್ರೊಡಕ್ಷನ್‌ನ ಬೇಡಿಕೆ ಅದನ್ನು ಮೀರಿದೆ. ಹಾಗಾಗಿ ಷರತ್ತು ಒಪ್ಪಲು ಸಾಧ್ಯವಿಲ್ಲ’ ಎನ್ನುವುದು ಪ್ರದರ್ಶಕರ ವಾದ.

47
ನಿರ್ಮಾಪಕರಿಗೆ ಶೇ.40ರಷ್ಟು ಮಾತ್ರ ಲಾಭದಲ್ಲಿ ಪಾಲು
Image Credit : instagram

ನಿರ್ಮಾಪಕರಿಗೆ ಶೇ.40ರಷ್ಟು ಮಾತ್ರ ಲಾಭದಲ್ಲಿ ಪಾಲು

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೇರಳ ಚಲನಚಿತ್ರ ಪ್ರದರ್ಶಕರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ್‌ ಅವರು, ಬೇರೆ ರಾಜ್ಯಗಳಲ್ಲಿ ಬಿಡುಗಡೆಯಾಗುವ ಮಲಯಾಳಂ ಚಿತ್ರಗಳಿಗೆ ಅಲ್ಲಿನ ವಿತರಕರು ನಮ್ಮ ನಿರ್ಮಾಪಕರಿಗೆ ಶೇ.40ರಷ್ಟು ಮಾತ್ರ ಲಾಭದಲ್ಲಿ ಪಾಲು ಕೊಡುತ್ತಿದ್ದಾರೆ.

57
ನಿರ್ಮಾಪಕರಿಗೆ ಹೆಚ್ಚಿನ ಲಾಭ
Image Credit : stockPhoto

ನಿರ್ಮಾಪಕರಿಗೆ ಹೆಚ್ಚಿನ ಲಾಭ

ಪೃಥ್ವಿರಾಜ್‌ ಪ್ರೊಡಕ್ಷನ್‌ ಕೇಳುವಷ್ಟು ಲಾಭದ ಮೊತ್ತವು ನಮ್ಮ ನಿರ್ಮಾಪಕರಿಗೆ ಬೇರೆ ರಾಜ್ಯಗಳಲ್ಲಿ ಸಿಗದಿದ್ದಾಗ ನೀವು ಯಾಕೆ ಬೇರೆ ಭಾಷೆ ನಿರ್ಮಾಪಕರಿಗೆ ಹೆಚ್ಚಿನ ಲಾಭ ಗಳಿಸಲು ಸಹಾಯ ಮಾಡಲು ಇಷ್ಟೊಂದು ಆಸಕ್ತಿ ತೋರಿಸುತ್ತಿದ್ದೀರಿ ಎಂದು ಹೇಳಿದ್ದಾರೆ.

67
ಲಾಭದ ಹಂಚಿಕೆ ಗಲಾಟೆ
Image Credit : instgram

ಲಾಭದ ಹಂಚಿಕೆ ಗಲಾಟೆ

ಒಟ್ಟಿನಲ್ಲಿ ಇಬ್ಬರ ನಡುವಿನ ಈ ಲಾಭದ ಹಂಚಿಕೆ ಗಲಾಟೆ ಕಾರಣದಿಂದ ಸದ್ಯಕ್ಕೆ ಕೇರಳ ಚಲನಚಿತ್ರ ಪ್ರದರ್ಶಕರ ಒಕ್ಕೂಟವು ‘ಕಾಂತಾರ 1’ ಚಿತ್ರವನ್ನು ಪ್ರದರ್ಶಿಸದಿರಲು ನಿರ್ಧರಿಸಿದೆ. ಈ ಸಮಸ್ಯೆ ಶೀಘ್ರವೇ ಬಗೆ ಹರಿಯುವ ನಿರೀಕ್ಷೆಯೂ ಇದೆ. ಈ ಕುರಿತು ಪ್ರತ್ರಿಕ್ರಿಯೆ ನೀಡಲು ಹೊಂಬಾಳೆ ಫಿಲಂಸ್‌ ಪ್ರತಿನಿಧಿಗಳು ಸಂಪರ್ಕಕ್ಕೆ ಸಿಗಲಿಲ್ಲ.

77
ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆ
Image Credit : our own

ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆ

30ಕ್ಕೂ ಹೆಚ್ಚು ದೇಶಗಳಲ್ಲಿ ಕಾಂತಾರ 1 ರಿಲೀಸ್: ಅ.2ರಂದು ಕಾಂತಾರ 1 ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರವೊಂದು ಈ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ರಿಷಬ್ ಶೆಟ್ಟಿ
ಕಾಂತಾರ ಚಲನಚಿತ್ರ
ಮನರಂಜನಾ ಸುದ್ದಿ
ಸಿನಿಮಾ

Latest Videos
Recommended Stories
Recommended image1
Now Playing
ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Recommended image2
ಶಾರುಖ್ ಜೊತೆ ಡಾನ್ಸ್ ನಿರಾಕರಿಸಿದ ವಧು, ಅಸಮಾಧಾನಗೊಂಡ ಫ್ಯಾನ್ಸ್
Recommended image3
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!
Related Stories
Recommended image1
ವಿಶ್ವಾದ್ಯಂತ ಒಂದೇ ದಿನ ರಿಷಬ್‌ ಶೆಟ್ಟಿ 'ಕಾಂತಾರ ಚಾಪ್ಟರ್ 1' ಬಿಡುಗಡೆ
Recommended image2
ಕಾಂತಾರ ಚಾಪ್ಟರ್ 1 ಬಗ್ಗೆ ತೆಲಗು ರಾಜ್ಯಗಳಲ್ಲಿ ಹರಿದಾಡ್ತಿರೋ ಸುದ್ದಿ ನಿಜವೇ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved