MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Cine World
  • ಕಾಂತಾರ ಚಾಪ್ಟರ್ 1 ಟ್ರೇಲರ್; ಕಾಮಿಡಿ ಕಿಲಾಡಿಗಳು ಹಾಸ್ಯನಟ ರಾಕೇಶ್ ಪೂಜಾರಿ ಪಾತ್ರವೂ ರಿವೀಲ್!

ಕಾಂತಾರ ಚಾಪ್ಟರ್ 1 ಟ್ರೇಲರ್; ಕಾಮಿಡಿ ಕಿಲಾಡಿಗಳು ಹಾಸ್ಯನಟ ರಾಕೇಶ್ ಪೂಜಾರಿ ಪಾತ್ರವೂ ರಿವೀಲ್!

ಕಾಂತಾರ: ಚಾಪ್ಟರ್ 1 ಟ್ರೇಲರ್, ದಂತಕಥೆಯ ಮೂಲ ಅನಾವರಣಗೊಳಿಸುತ್ತದೆ. ಕಾಡಿನ ನಾಯಕ ಮತ್ತು ರಾಣಿಯ ಪ್ರೀತಿಯಿಂದ ರಾಜನ ವಿರುದ್ಧ ಯುದ್ಧ ಪ್ರಾರಂಭ. ಕಾಂತಾರ ಚಾಪ್ಟರ್ 1 ಟ್ರೇಲರ್ ನೋಡಿದವರಿಗೆ ಈಗಲೇ ಟಿಕೆಟ್ ಬುಕಿಂಗ್ ಮಾಡಬೇಕು ಎನ್ನುವಷ್ಟು ಕುತೂಹಲ ಸೃಷ್ಟಿಸಿದೆ.

2 Min read
Author : Sathish Kumar KH
Published : Sep 22 2025, 02:43 PM IST
Share this Photo Gallery
  • FB
  • TW
  • Linkdin
  • Whatsapp
112
Image Credit : YouTube

ಅಪ್ಪಯ್ಯ ಈ ಜಾಗದಲ್ಲಿ ಎಂತಕ್ಕೆ ಮಾಯವಾಗಿದ್ದು, ನಮ್ಮ ಹಿರಿಯರು ಇದ್ದಿದ್ದು ಇಲ್ಲೇ. ಅದೊಂದು ದೊಡ್ಡ ದಂತಕಥೆ ಎನ್ನುವ ಮೂಲಕ ಕಾಂತಾರದ ದೈವ ಕಾಣೆಯಾದ ಸ್ಥಳದಿಂದಲೇ ಟ್ರೇಲರ್ ಆರಂಭವಾಗುತ್ತದೆ.

212
Image Credit : YouTube

ಧರ್ಮವನ್ನು ಕಾಪಾಡುವುದಕ್ಕೆ ಈಶ್ವರ ದೇವರು ಯಾವಾಗಲೂ ಗಣಗಳನ್ನು ಕಳಿಸುತ್ತಲೇ ಇರುತ್ತಾನೆ. ಈಶ್ವರ ಬಂದು ನೆಲೆಸಿದ್ದು ಈ ಪುಣ್ಯ ಭೂಮಿಯಲ್ಲಿ.

Related Articles

Related image1
ವಿಶ್ವದಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ 'ಕಾಂತಾರ ಅಧ್ಯಾಯ 1' ಟ್ರೇಲರ್ ಬಿಡುಗಡೆ!
Related image2
'ಚೌಕ' ಪಿಲ್ಲರ್ ರಚಿಸಿ 'ಕಾಂತಾರ ಚಾಪ್ಟರ್-1' ಟ್ರೈಲರ್ ರಿಲೀಸ್‌ಗೆ ಸಜ್ಜಾದ ರಿಷಬ್ ಶೆಟ್ಟಿ!
312
Image Credit : YouTube

ಕಾಂತಾರದ ಒಳಗೆ ಯಾವತ್ತೂ ಹೋಗಬೇಡಿ ಎಂದು ರಾಜ ತನ್ನ ಮಕ್ಕಳಿಗೆ ಹೇಳುವ ದೃಶ್ಯವೂ ಇದೆ. ಇಲ್ಲಿ ಕಾಂತಾರ ಎನ್ನುವುದು ಒಂದು ದೊಡ್ಡ ಕೋಟೆಯಂತೆ ಇದ್ದು, ಅಲ್ಲಿಗೆ ಹೋದರೆ ಸಾವೇ ಗತಿ ಎನ್ನುವಂತೆ ತೋರಿಸಲಾಗಿದೆ.

412
Image Credit : YouTube

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಮಧ್ಯದಲ್ಲಿ ಸ್ನೇಹಿತನ ಮದುವೆಗೆ ಹೋಗಿ ಡ್ಯಾನ್ಸ್ ಮಾಡುತ್ತಲೇ ಕುಸಿದುಬಿದ್ದು ಮೃತಪಟ್ಟ ಹಾಸ್ಯನಟ ರಾಕೇಶ್ ಪೂಜಾರಿಯನ್ನೂ ಟ್ರೇಲರ್‌ನಲ್ಲಿ ತೋರಿಸಲಾಗಿದೆ.

512
Image Credit : YouTube

ಕಾಂತಾರ ಲೆಜೆಂಡ್ ಚಾಪ್ಟರ್-1 ಟ್ರೇಲರ್‌ನಲ್ಲಿ ಎಲ್ಲಿಯೂ ಕಾಂತಾರದ ಸಪ್ತಮಿ ಗೌಡಳನ್ನು ತೋರಿಸಿಲ್ಲ. ಇಲ್ಲಿ ನಟಿಯಾಗಿ ರುಕ್ಮಿಣಿ ವಸಂತ ಅವರನ್ನು ತೋರಿಸಲಾಗಿದೆ. ರುಕ್ಮಿಣಿ ಥೇಟ್ ರಾಣಿಯಂತೆ ಸಿನಿಮಾದಲ್ಲಿ ಕಂಗೊಳಿಸಿದ್ದಾಳೆ.

612
Image Credit : YouTube

ಕಾಂತಾರದ ಚಾಪ್ಟರ್ 1 ರುಕ್ಮಿಣಿ ವಸಂತ ಅವರ ಸುತ್ತಲೂ ಕಟ್ಟಿಕೊಳ್ಳುತ್ತದೆ. ಕಾಂತಾರ ನಾಡಿದನ ಜನರ ನಾಯಕ ಹಾಗೂ ರಾಣಿಗೆ ಪ್ರೀತಿಯಾಗುತ್ತದೆ. ಅವರಿಬ್ಬರ ಪ್ರೀತಿಯಿಂದಲೇ ರಾಜ ಮತ್ತು ಕಾಂತಾರ ಕಾಡಿನ ಜನರ ನಡುವಿನ ಯುದ್ಧ ಆರಂಭವಾಗಲಿದೆ. ಇದರಲ್ಲಿ ದೈವದ ಪ್ರವೇಶ ಹೇಗೆ ಆಗಲಿದೆ ಎಂಬುದು ಕುತೂಹಲವಿದೆ.

712
Image Credit : YouTube

ಇನ್ನು ಕರಾವಳಿ ತೀರದಲ್ಲಿ ವ್ಯಾಪಾರಿ ಕೇಂದ್ರವನ್ನು ಸ್ಥಾಪಿಸಿಕೊಂಡು ಅಲ್ಲಿ ಕಾಂತಾರ ನಾಡಿನ ಜನರನ್ನು ಒತ್ತೆಯಾಳುಗಳ ರೀತಿಯಲ್ಲಿ ಕೆಲಸ ಮಾಡಿಸಿಕೊಳ್ಳುತ್ತಾರೆ ಎಂಬ ದೃಶ್ಯವೂ ಕಂಡುಬರುತ್ತದೆ.

812
Image Credit : YouTube

ಕಾಡಿನಲ್ಲಿ ಜನರ ಚಿತ್ರಣವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಕಾಡಿನ ಬಂಡೆಗಳ ಮೇಲೆ ನಿಂತ ನಾಯಕನ ಮುಂದೆ ಬೆಂಕಿಯ ಪಂಜಿ ಹಿಡಿದು ನಿಂತಿರುವ ಜನರು ಹಾಗೂ ಕಾಡಿನ ತಾತ್ಕಾಲಿಕ ತೂಗು ಸೇತುವೆ ಎಲ್ಲವೂ ಕಾಡಿನ ದೃಶ್ಯಗಳನ್ನು ಕಟ್ಟಿಕೊಟ್ಟಿದೆ.

912
Image Credit : YouTube

ಹಾಲಿವುಡ್, ಬಾಲಿವುಡ್, ಕಾಲಿವುಡ್ ಸಿನಿಮಾದ ದೃಶ್ಯ ಶೈಲಿಗಳನ್ನು ಇಲ್ಲಿ ನೋಡಬಹುದು. ಬಾಹುಬಲಿ, ಪುಷ್ಪ, ಕೆಜಿಎಫ್ ರೀತಿಯ ಅನೇಕ ಸನ್ನಿವೇಶಗಳು ಈ ಕಥೆಯಲ್ಲಿ ಅಡಗಿವೆಯೇ ಎಂಬ ಅನುಮಾನ ಬಂದರೂ ಕಾಂತಾರದ ಕಥೆಯಲ್ಲಿಯೇ ಎಲ್ಲವೂ ಒಳಗೊಂಡಿವೆ ಎಂಬುದಂತೂ ಪಕ್ಕಾ ಆಗುತ್ತದೆ.

1012
Image Credit : YouTube

ಯುವರಾಣಿ ರುಕ್ಮಿಣಿ ಜೊತೆಗೆ ರಿಷಬ್ ಶೆಟ್ಟಿ ಅಭಿನಯ ಮಾತ್ರ ಅದ್ಭುತ ಕಾಂಬಿನೇಷನ್ ರೀತಿ ವರ್ಕ್ ಆಗಿದೆ. ಇಬ್ಬರ ಯುದ್ಧಕಲೆ ಪ್ರದರ್ಶನ, ರೊಮ್ಯಾನ್ಸ್, ಬೀದಿಗಳಲ್ಲಿ ಹಾಗೂ ಕಾಡಿನಲ್ಲಿ ಸುತ್ತಾಡುವ ದೃಶ್ಯಗಳು ಪ್ರೇಕ್ಷಕರನ್ನು ಸೆಳೆಯುತ್ತವೆ.

1112
Image Credit : YouTube

ಕುಲಕ್ಕೆ ಅಂಟಿದ ರಕ್ತವನ್ನು ಕಾಂತಾರದ ಜನರ ರಕ್ತದಿಂದ ತೊಳೆಯುತ್ತೇವೆ ಎನ್ನುವ ಮಾತಂತೂ ಯುದ್ಧದ ಭೀಕರತೆಯನ್ನು ಹಾಗೂ ಕಾಡಿನ ಜನರನ್ನು ಮೃಗಗಳಂತೆ ಬೇಟೆ ದೃಶ್ಯಗಳನ್ನು ಕಟ್ಟಿಕೊಡಲಾಗಿದೆ.

1212
Image Credit : YouTube

ಕಾಡಿನ ಜನರನ್ನು ನಾಶ ಮಾಡುತ್ತಾ ಕಾಡಿನ ದೈವಕ್ಕೆ ಅಪಮಾನ ಮಾಡಿದ ರಾಜರ ಸೈನ್ಯದ ವಿರುದ್ಧ ಹೋರಾಡುವುದಕ್ಕೆ ಹಾಗೂ ಕುತಂತ್ರಿಗಳನ್ನು ದಮನ ಮಾಡುವುದಕ್ಕೆ ಕಾಡಿನ ಜನರ ದೈವವೇ ಬೆಂಕಿಯಾಗಿ ಕಾಣಿಸಿಕೊಳ್ಳುತ್ತದೆ. ಈ ದೃಶ್ಯ ಮೈನವಿರೇಳಿಸುತ್ತದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕಾಂತಾರ ಚಲನಚಿತ್ರ
ರಿಷಬ್ ಶೆಟ್ಟಿ
ರುಕ್ಮಿಣಿ ವಸಂತ್
ಸ್ಯಾಂಡಲ್‌ವುಡ್

Latest Videos
Recommended Stories
Recommended image1
ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
Recommended image2
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?
Recommended image3
ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್: ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?
Related Stories
Recommended image1
ವಿಶ್ವದಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ 'ಕಾಂತಾರ ಅಧ್ಯಾಯ 1' ಟ್ರೇಲರ್ ಬಿಡುಗಡೆ!
Recommended image2
'ಚೌಕ' ಪಿಲ್ಲರ್ ರಚಿಸಿ 'ಕಾಂತಾರ ಚಾಪ್ಟರ್-1' ಟ್ರೈಲರ್ ರಿಲೀಸ್‌ಗೆ ಸಜ್ಜಾದ ರಿಷಬ್ ಶೆಟ್ಟಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved