- Home
- Entertainment
- Cine World
- ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು, ರಿಷಬ್ ಶೆಟ್ಟಿ ದೈತ್ಯ ಪ್ರತಿಭೆ: ರುಕ್ಮಿಣಿ ವಸಂತ್ ಹೇಳಿದ್ದೇನು?
ಸಿನಿಮಾ ಮೇಕಿಂಗ್ ವೇಳೆ ಎಲ್ಲವನ್ನೂ ಏಕಕಾಲಕ್ಕೆ ಗ್ರಹಿಸುವಯಶ್ ಅವರ ದೃಷ್ಟಿಕೋನ ನನಗೆ ಅಚ್ಚರಿ ತರಿಸಿತು. ರಿಷಬ್ ಅವರು ಅಂಥಾ ದೈತ್ಯ ಪ್ರತಿಭೆ’ ಎಂದೂ ರುಕ್ಮಿಣಿ ವಸಂತ್ ಹೇಳಿದ್ದಾರೆ.

ಸಿನಿಮಾವನ್ನೂ ಮೀರಿದ ಅಗಾಧ ಗ್ರಹಿಕೆ
‘ಸಿನಿಮಾ ಮೇಕಿಂಗ್ ವೇಳೆ ಎಲ್ಲವನ್ನೂ ಏಕಕಾಲಕ್ಕೆ ಗ್ರಹಿಸುವ ಯಶ್ ಅವರ ದೃಷ್ಟಿಕೋನ ನನಗೆ ಅಚ್ಚರಿ ತರಿಸಿತು. ಅವರದು ಸಿನಿಮಾವನ್ನೂ ಮೀರಿದ ಅಗಾಧ ಗ್ರಹಿಕೆ. ಅದೊಂಥರ ಸಾಂಸ್ಕೃತಿಕ ಯುಗ ಧರ್ಮದಂತಿರುತ್ತದೆ’.
‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ
ಯಶ್ ಬಗ್ಗೆ ರುಕ್ಮಿಣಿ ವಸಂತ್ ಆಡಿರುವ ಮಾತುಗಳಿವು. ಈ ಮೂಲಕ ರುಕ್ಮಿಣಿ, ಯಶ್ ಕುರಿತಾದ ತಮ್ಮ ಗ್ರಹಿಕೆಗಳನ್ನು ದಾಖಲಿಸುವ ಜೊತೆಗೆ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದನ್ನು ಅಧಿಕೃತಗೊಳಿಸಿದ್ದಾರೆ.
ರಿಷಬ್ ದೈತ್ಯ ಪ್ರತಿಭೆ
‘ಕಾಂತಾರದ ಜಗತ್ತು ನಮ್ಮ ಕಲ್ಪನೆಯನ್ನೂ ಮೀರಿದ್ದು. ಆಳದವರೆಗೆ ಹಬ್ಬಿರುವ ಸಾಂಸ್ಕೃತಿಕ ಬೇರುಗಳನ್ನು ಸ್ಪರ್ಶಿಸಿ ವರ್ತಮಾನಕ್ಕೂ ಅನ್ವಯಿಸಿ ಕತೆ ಹೇಳುವ ಕಲೆ ದೊಡ್ಡದು. ರಿಷಬ್ ಅವರು ಅಂಥಾ ದೈತ್ಯ ಪ್ರತಿಭೆ’ ಎಂದೂ ರುಕ್ಮಿಣಿ ಹೇಳಿದ್ದಾರೆ.
ತಳಮಟ್ಟದಿಂದಲೇ ಅದ್ಭುತ ಕೆಲಸ
ನನಗೆ ಪ್ಯಾನ್ ಇಂಡಿಯಾ ಸ್ಟಾರ್ ಅನ್ನೋದಕ್ಕಿಂತಲೂ ಭಾಷೆಯನ್ನು ಮಾಧ್ಯಮವಾಗಿಟ್ಟು ಹೆಚ್ಚು ಹೆಚ್ಚು ಜನರನ್ನು ತಲುಪುವುದೇ ಮುಖ್ಯ. ಕನ್ನಡ ಚಿತ್ರರಂಗದಲ್ಲಿ ತಳಮಟ್ಟದಿಂದಲೇ ಅದ್ಭುತ ಕೆಲಸಗಳಾಗುತ್ತಿವೆ.
ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ
ಕೆಜಿಎಫ್, ಕಾಂತಾರದಂಥಾ ಜಗತ್ತು ತಿರುಗಿ ನೋಡುವ ಸಿನಿಮಾಗಳ ಜೊತೆಗೆ ‘ಸನ್ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ’ ಎಂಬ ಆಸ್ಕರ್ ರೇಸ್ನಲ್ಲಿರುವ ಕಿರುಚಿತ್ರದ ಜೊತೆಗೆ ವೈವಿಧ್ಯಮಯ ಸಿನಿಮಾಗಳು ಬರುತ್ತಿವೆ. ಇಂಥಾ ಇಂಡಸ್ಟ್ರಿಯಿಂದ ಬಂದು, ಈ ಚಿತ್ರರಂಗ ಗರಿಗೆದರುವ ಹೊತ್ತಿನಲ್ಲಿ ಮುಖ್ಯ ಭೂಮಿಕೆಯಲ್ಲಿರುವುದು ಖುಷಿ ಅನಿಸುತ್ತದೆ ಎಂದಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

