MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಶುಭ್‌ಮನ್ ಗಿಲ್ ಅಲ್ಲ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಹೊಸ ಕ್ಯಾಪ್ಟನ್! ಇಲ್ಲಿದೆ ಬಿಗ್ ಅಪ್‌ಡೇಟ್ಸ್

ಶುಭ್‌ಮನ್ ಗಿಲ್ ಅಲ್ಲ, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಹೊಸ ಕ್ಯಾಪ್ಟನ್! ಇಲ್ಲಿದೆ ಬಿಗ್ ಅಪ್‌ಡೇಟ್ಸ್

ಬೆಂಗಳೂರು: ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಪ್ರತಿಭಾನ್ವಿತ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಅಯ್ಯರ್‌ಗೆ ಗುಡ್‌ ನ್ಯೂಸ್ ನೀಡಲು ಬಿಸಿಸಿಐ ಮುಂದಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

2 Min read
Author : Naveen Kodase
Published : Aug 21 2025, 01:21 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : ANI

ಸೆಪ್ಟೆಂಬರ್ 09ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಶ್ರೇಯಸ್ ಅಯ್ಯರ್ ಅವರನ್ನು ತಂಡದಿಂದ ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

29
Image Credit : Getty

ಕಳೆದೊಂದು ವರ್ಷದಲ್ಲಿ ಶ್ರೇಯಸ್ ಅಯ್ಯರ್ ಟಿ20 ಮಾದರಿಯಲ್ಲಿ ಅದ್ಭುತ ಲಯದಲ್ಲಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅಯ್ಯರ್, ಪಂಜಾಬ್ ಕಿಂಗ್ಸ್ ಪರ 600+ ರನ್ ಬಾರಿಸುವುದರ ಜತೆಗೆ ಪಂಜಾಬ್ ಕಿಂಗ್ಸ್‌ ತಂಡವನ್ನು ನಾಯಕನಾಗಿ ಫೈನಲ್‌ಗೇರಿಸಿದ್ದರು.

Related Articles

Related image1
ಏಷ್ಯಾಕಪ್ 2025: ಶ್ರೇಯಸ್, ಜೈಸ್ವಾಲ್ ಟೀಂ ಇಂಡಿಯಾದಿಂದ ಹೊರಬಿದ್ದಿದ್ದೇಕೆ? ಮಾಜಿ ಕ್ರಿಕೆಟಿಗ ಗರಂ
Related image2
ಏಷ್ಯಾಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ; ಸ್ಟಾರ್ ವಿಕೆಟ್‌ ಕೀಪರ್‌ ಔಟ್!
39
Image Credit : Getty

ಇದೆಲ್ಲದರ ಹೊರತಾಗಿಯೂ ಶ್ರೇಯಸ್ ಅಯ್ಯರ್ ಅವರನ್ನು ಏಷ್ಯಾಕಪ್ ಟೂರ್ನಿಗೆ ಭಾರತ ತಂಡದಿಂದ ಹೊರಗಿಡಲಾಗಿದೆ. ಆದರೆ ಇದೀಗ ಬಿಸಿಸಿಐ ಶ್ರೇಯಸ್ ಅಯ್ಯರ್‌ಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾಗಿದೆ.

49
Image Credit : ANI

ಸದ್ಯ ಭಾರತ ತಂಡದಲ್ಲಿ ವಿವಿಧ ಮಾದರಿಯ ಕ್ರಿಕೆಟ್‌ಗೆ ಬೇರೆ ಬೇರೆ ನಾಯಕರಿದ್ದಾರೆ. ಟೆಸ್ಟ್‌ ಕ್ರಿಕೆಟ್‌ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿರುವುದರಿಂದ ಶುಭ್‌ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.

59
Image Credit : X

ಇನ್ನು ಕಳೆದ ವರ್ಷ ಐಸಿಸಿ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದಾದ ಬಳಿಕ ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದಾರೆ. ಸದ್ಯ ಏಷ್ಯಾಕಪ್ ಟೂರ್ನಿಗೆ ಗಿಲ್ ಉಪನಾಯಕರಾಗಿ ನೇಮಕವಾಗಿದ್ದಾರೆ.

69
Image Credit : ANI

ಸದ್ಯ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನಾಯಕರಾಗಿ ಮುಂದುವರೆದಿದ್ದಾರೆ. ಇದೀಗ ದೈನಿಕ್ ಜಾಗರಣ್ ವರದಿಯ ಪ್ರಕಾರ ಭಾರತ ಏಕದಿನ ಮಾದರಿಯ ಕ್ರಿಕೆಟ್‌ಗೆ ಶುಭ್‌ಮನ್ ಗಿಲ್ ಬದಲು ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ಪಟ್ಟಕಟ್ಟಲು ಮುಂದಾಗಿದೆ ಎಂದು ವರದಿಯಾಗಿದೆ.

79
Image Credit : ANI

2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ 243 ರನ್ ಬಾರಿಸುವ ಮೂಲಕ ಭಾರತ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದರು. ಅಯ್ಯರ್ ಏಕದಿನ ಮಾದರಿಯ ಕ್ರಿಕೆಟ್‌ನಲ್ಲಿ ನಂಬಿಗಸ್ಥ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.

89
Image Credit : Getty

ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಗುರಿ ಹೊಂದಿದ್ದಾರೆ, ಒಂದು ವೇಳೆ ಅದಕ್ಕೂ ಮೊದಲೇ ರೋಹಿತ್ ಶರ್ಮಾ ವಯಸ್ಸಿನ ಕಾರಣದಿಂದ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರೆ, ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ಪಟ್ಟ ಕಟ್ಟುವ ಲೆಕ್ಕಾಚಾರ ಬಿಸಿಸಿಐ ಮುಂದಿದೆ ಎಂದು ವರದಿಯಾಗಿದೆ.

99
Image Credit : Getty

ಮೂರು ಮಾದರಿಯ ಕ್ರಿಕೆಟ್‌ಗೆ ಒಬ್ಬರೇ ನಾಯಕರಿರಬೇಕು ಎನ್ನುವುದು ಒಂದು ವಾದ ಎನಿಸಿದೆ. ಆದರೆ ವರ್ಕ್‌ಲೋಡ್ ಮ್ಯಾನೇಜ್‌ ಮಾಡುವ ಉದ್ದೇಶದಿಂದ ಟಿ20 ಹಾಗೂ ಟೆಸ್ಟ್‌ಗೆ ಗಿಲ್, ಏಕದಿನ ಕ್ರಿಕೆಟ್‌ಗೆ ಅಯ್ಯರ್ ಕ್ಯಾಪ್ಟನ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಟೀಮ್ ಇಂಡಿಯಾ
ಶುಭಮನ್ ಗಿಲ್
ಶ್ರೇಯಸ್ ಅಯ್ಯರ್
ಏಷ್ಯಾ ಕಪ್

Latest Videos
Recommended Stories
Recommended image1
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
Recommended image2
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!
Recommended image3
ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್: ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್
Related Stories
Recommended image1
ಏಷ್ಯಾಕಪ್ 2025: ಶ್ರೇಯಸ್, ಜೈಸ್ವಾಲ್ ಟೀಂ ಇಂಡಿಯಾದಿಂದ ಹೊರಬಿದ್ದಿದ್ದೇಕೆ? ಮಾಜಿ ಕ್ರಿಕೆಟಿಗ ಗರಂ
Recommended image2
ಏಷ್ಯಾಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ; ಸ್ಟಾರ್ ವಿಕೆಟ್‌ ಕೀಪರ್‌ ಔಟ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved