MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಆಸ್ಟ್ರೇಲಿಯಾ ಎದುರಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿ 5 ಸ್ಪಷ್ಟ ಸಂದೇಶ ಕೊಟ್ಟ ಬಿಸಿಸಿಐ!

ಆಸ್ಟ್ರೇಲಿಯಾ ಎದುರಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿ 5 ಸ್ಪಷ್ಟ ಸಂದೇಶ ಕೊಟ್ಟ ಬಿಸಿಸಿಐ!

ಮುಂಬೈ: ಇದೇ ಅಕ್ಟೋಬರ್ 19ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಸೀಮಿತ ಓವರ್‌ಗಳ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಿಸಲಾಗಿದೆ. ಈ ಮೂಲಕ ಬಿಸಿಸಿಐ ಆಯ್ಕೆ ಸಮಿತಿಯು ಐದು ಸ್ಪಷ್ಟ ಸಂದೇಶವನ್ನು ರವಾನಿಸಿದೆ. 

1 Min read
Author : Naveen Kodase
Published : Oct 05 2025, 01:54 PM IST
Share this Photo Gallery
  • FB
  • TW
  • Linkdin
  • Whatsapp
17
ಆಸೀಸ್ ಸರಣಿಗೆ ಭಾರತ ತಂಡ
Image Credit : Getty

ಆಸೀಸ್ ಸರಣಿಗೆ ಭಾರತ ತಂಡ

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು, ಮುಂಬರುವ ಆಸ್ಟ್ರೇಲಿಯಾ ಎದುರಿನ 3 ಪಂದ್ಯಗಳ ಏಕದಿನ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ.

27
ಬಿಸಿಸಿಐ ಕೊಟ್ಟ 5 ಸ್ಪಷ್ಟ ಸಂದೇಶ
Image Credit : X/Sachin mishra (Hindu)

ಬಿಸಿಸಿಐ ಕೊಟ್ಟ 5 ಸ್ಪಷ್ಟ ಸಂದೇಶ

ಏಕದಿನ ಸರಣಿಗೆ ರೋಹಿತ್ ಶರ್ಮಾ ಕೆಳಗಿಳಿಸಿ ಶುಭ್‌ಮನ್ ಗಿಲ್‌ಗೆ ನಾಯಕ ಪಟ್ಟ ಕಟ್ಟಿದೆ. ಇದರ ಜತೆಗೆ ಬಿಸಿಸಿಐ ಆಯ್ಕೆ ಸಮಿತಿಯು 5 ಸ್ಪಷ್ಟ ಸಂದೇಶವನ್ನು ರವಾನಿಸಿದೆ. ಏನದು ನೋಡೋಣ ಬನ್ನಿ.

Related Articles

Related image1
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಪ್ರವಾಸವೇ ಕೊನೆ ಸರಣಿ?
Related image2
ಒಂದೂ ಮ್ಯಾಚ್ ಸೋಲದೇ ಎರಡು ಐಸಿಸಿ ಟ್ರೋಫಿ ಗೆದ್ರೂ ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್ ನೀಡಿದ್ದೇಕೆ?
37
1. ಶುಭ್‌ಮನ್ ಗಿಲ್ ದೀರ್ಘಕಾಲಿಕ ಕ್ಯಾಪ್ಟನ್
Image Credit : ANI

1. ಶುಭ್‌ಮನ್ ಗಿಲ್ ದೀರ್ಘಕಾಲಿಕ ಕ್ಯಾಪ್ಟನ್

ಶುಭ್‌ಮನ್ ಗಿಲ್ ಅವರನ್ನು ದೀರ್ಘಕಾಲಿಕ ಕ್ಯಾಪ್ಟನ್ ಮಾಡುವ ಸಂದೇಶವನ್ನು ಬಿಸಿಸಿಐ ರವಾನಿಸಿದೆ. ಈಗಾಗಲೇ ಟೆಸ್ಟ್ ತಂಡದ ನಾಯಕರಾಗಿರುವ ಯುವ ಬ್ಯಾಟರ್ ಶುಭ್‌ಮನ್ ಗಿಲ್‌ಗೆ ಏಕದಿನ ನಾಯಕತ್ವದ ಜವಬ್ದಾರಿಯು ಹೆಗಲೇರಿದೆ. ಈ ಮೂಲಕ ಭವಿಷ್ಯದ ತಂಡ ಕಟ್ಟಲು ಗಿಲ್‌ಗೆ ಸಾಕಷ್ಟು ಸಮಯಾವಕಾಶವನ್ನು ಬಿಸಿಸಿಐ ನೀಡಿದೆ.

47
2. ರೋಹಿತ್-ಕೊಹ್ಲಿ ಕ್ರಿಕೆಟ್ ಭವಿಷ್ಯದ ಬಗ್ಗೆ ಗ್ಯಾರಂಟಿಯಿಲ್ಲ
Image Credit : ANI

2. ರೋಹಿತ್-ಕೊಹ್ಲಿ ಕ್ರಿಕೆಟ್ ಭವಿಷ್ಯದ ಬಗ್ಗೆ ಗ್ಯಾರಂಟಿಯಿಲ್ಲ

ದಿಗ್ಗಜ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಯಾವುದೇ ವಿಶೇಷ ಸೌಕರ್ಯಗಳಿರುವುದಿಲ್ಲ ಎನ್ನುವ ಸಂದೇಶ ರವಾನೆಯಾಗಿದೆ. ಜತೆಗೆ ಅಗರ್ಕರ್, ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಬೇಕಿದ್ರೆ ದೇಶಿ ಕ್ರಿಕೆಟ್ ಆಡುವುದು ಕಡ್ಡಾಯ ಎಂದು ಪುನರುಚ್ಚರಿಸಿದ್ದಾರೆ.

57
3. ಅಭಿಷೇಕ್ ಹಿಂದಿಕ್ಕಿ ಜೈಸ್ವಾಲ್‌ಗೆ ಏಕದಿನ ತಂಡದಲ್ಲಿ ಮಣೆ
Image Credit : Getty

3. ಅಭಿಷೇಕ್ ಹಿಂದಿಕ್ಕಿ ಜೈಸ್ವಾಲ್‌ಗೆ ಏಕದಿನ ತಂಡದಲ್ಲಿ ಮಣೆ

ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದಾರೆ. ಹೀಗಿದ್ದೂ ಏಕದಿನ ತಂಡಕ್ಕೆ ಜೈಸ್ವಾಲ್‌ಗೆ ಮಣೆ ಹಾಕಲಾಗಿದೆ. ರೋಹಿತ್ ನಿವೃತ್ತಿ ಬಳಿಕ ಗಿಲ್ ಜತೆ ಏಕದಿನ ಕ್ರಿಕೆಟ್‌ನಲ್ಲಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನುವ ಸಂದೇಶ ರವಾನೆಯಾಗಿದೆ.

67
4. ಒತ್ತಡದಲ್ಲಿ ಜಡೇಜಾ-ಶಮಿ!
Image Credit : ANI

4. ಒತ್ತಡದಲ್ಲಿ ಜಡೇಜಾ-ಶಮಿ!

ಅನುಭವಿ ಆಲ್ರೌಂಡರ್ ಜಡೇಜಾ ಹಾಗೂ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಯುವ ಆಲ್ರೌಂಡರ್ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್‌ಗೆ ಆಲ್ರೌಂಡರ್ ರೂಪದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ಶಮಿ ಬದಲಿಗೆ ಹರ್ಷಿತ್ ರಾಣಾ, ಪ್ರಸಿದ್ದ್ ಕೃಷ್ಣ, ಅರ್ಶದೀಪ್‌ಗೆ ಸ್ಥಾನ ನೀಡಿರುವುದು ಜಡ್ಡು-ಶಮಿ ಏಕದಿನ ಕ್ರಿಕೆಟ್ ಬದುಕು ಯುಗಾಂತ್ಯವಾಯಿತಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ.

77
5 ನಿತೀಶ್ ಕುಮಾರ್ ರೆಡ್ಡಿಗೆ ಸುವರ್ಣಾವಕಾಶ
Image Credit : SOCIAL MEDIA

5 ನಿತೀಶ್ ಕುಮಾರ್ ರೆಡ್ಡಿಗೆ ಸುವರ್ಣಾವಕಾಶ

ಹಾರ್ದಿಕ್ ಪಾಂಡ್ಯ ಗಾಯಗೊಂಡಿರುವುದರಿಂದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿಗೆ ತಮ್ಮನ್ನು ತಾವು ಏಕದಿನ ತಂಡದಲ್ಲಿ ಭದ್ರವಾಗಿ ನೆಲೆಕಂಡುಕೊಳ್ಳಲು ಸುವರ್ಣಾವಕಾಶ ಒದಗಿ ಬಂದಿದೆ. ನಿತೀಶ್ ಕುಮಾರ್ ಈ ಅವಕಾಶ ಹೇಗೆ ಬಳಸಿಕೊಳ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಬಿಸಿಸಿಐ
ಟೀಮ್ ಇಂಡಿಯಾ
ರೋಹಿತ್ ಶರ್ಮಾ
ಶುಭಮನ್ ಗಿಲ್

Latest Videos
Recommended Stories
Recommended image1
ದಕ್ಷಿಣ ಆಫ್ರಿಕಾ ಎದುರಿನ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಮೇಜರ್ ಚೇಂಜ್?
Recommended image2
ಕೆಎಸ್‌ಸಿಎ ಚುನಾವಣೆ: ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
Recommended image3
ಭಾರತ-ಆಫ್ರಿಕಾ ಫೈನಲ್ ಫೈಟ್: ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
Related Stories
Recommended image1
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಪ್ರವಾಸವೇ ಕೊನೆ ಸರಣಿ?
Recommended image2
ಒಂದೂ ಮ್ಯಾಚ್ ಸೋಲದೇ ಎರಡು ಐಸಿಸಿ ಟ್ರೋಫಿ ಗೆದ್ರೂ ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್ ನೀಡಿದ್ದೇಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved