ಕೊಹ್ಲಿ-ರೋಹಿತ್ 2027ರ ವಿಶ್ವಕಪ್ ಆಡ್ತಾರಾ? ಮೊದಲ ಸಲ ಅಚ್ಚರಿ ಹೇಳಿಕೆ ಕೊಟ್ಟ ಗೌತಮ್ ಗಂಭೀರ್!
ಬೆಂಗಳೂರು: ಭಾರತದ ದಿಗ್ಗಜ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡ್ತಾರಾ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಈ ಕುರಿತಂತೆ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಮೊದಲ ಸಲ ತುಟಿಬಿಚ್ಚಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸ ಕೈಗೊಂಡ ಭಾರತ
ತವರಿನಲ್ಲಿ ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಬೀಗಿದ ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಇದೀಗ ಸೀಮಿತ ಓವರ್ಗಳ ಸರಣಿಯನ್ನಾಡಲು ಆಸ್ಟ್ರೇಲಿಯಾ ವಿಮಾನ ಏರಿದೆ.
ಟೀಂ ಇಂಡಿಯಾ ಜೆರ್ಸಿಯಲ್ಲಿ ಕಣಕ್ಕಿಳಿಯಲು ರೋಹಿತ್-ಕೊಹ್ಲಿ ರೆಡಿ
ಇನ್ನು ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಇದೇ ಮೊದಲ ಸಲ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿ ತೊಟ್ಟು ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಅಭಿಮಾನಿಗಳು ಇವರಿಬ್ಬರ ಆಟ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.
ರೋಹಿತ್-ಕೊಹ್ಲಿ ಭವಿಷ್ಯದ ಬಗ್ಗೆ ತುಟಿಬಿಚ್ಚಿದ ಗಂಭೀರ್
ಇನ್ನು ಕೆಲವರು ಕೊಹ್ಲಿ-ರೋಹಿತ್ ಪಾಲಿಗೆ ಆಸ್ಟ್ರೇಲಿಯಾ ಎದುರಿನ ಸರಣಿಯೇ ಕೊನೆಯ ಅಂತಾರಾಷ್ಟ್ರೀಯ ಸರಣಿಯಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಅದ್ರೆ ಕೊಹ್ಲಿ-ರೋಹಿತ್ ಶರ್ಮಾ ಭವಿಷ್ಯದ ಕುರಿತಂತೆ ಇದೇ ಮೊದಲ ಸಲ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ತುಟಿಬಿಚ್ಚಿದ್ದಾರೆ.
ಏಕದಿನ ವಿಶ್ವಕಪ್ ಟೂರ್ನಿಗೆ ಸಾಕಷ್ಟು ಕಾಲಾವಕಾಶವಿದೆ
2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನೂ ಎರಡೂವರೆ ವರ್ಷ ಸಮಯವಿದೆ. ಆ ಬಗ್ಗೆ ಈಗಲೇ ಯೋಚಿಸಲು ಆಗಲ್ಲ ಎಂದು ಟೀಂ ಇಂಡಿಯಾ ಹೆಡ್ ಕೋಚ್ ಗಂಭೀರ್ ಹೇಳಿದ್ದಾರೆ.
ಕೊಹ್ಲಿ-ರೋಹಿತ್ ಗುಣಮಟ್ಟದ ಆಟಗಾರರು ಎಂದ ಗೌತಿ
ಖಂಡಿತವಾಗಿಯೂ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಗುಣಮಟ್ಟದ ಆಟಗಾರರು. ಆಸ್ಟ್ರೇಲಿಯಾ ಎದುರಿನ ಸರಣಿಯನ್ನು ಇಬ್ಬರೂ ಉತ್ತಮವಾಗಿ ಬಳಸಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಗೌತಿ ಹೇಳಿದ್ದಾರೆ.
ಫಿಟ್ನೆಸ್-ಫಾರ್ಮ್ ಬಗ್ಗೆ ಸ್ಪಷ್ಟ ಸಂದೇಶ ರವಾನೆ
ಇನ್ನು ಇದೇ ವೇಳೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಸರಣಿಗಳಿಗೆ ಆಯ್ಕೆಯಾಗಬೇಕಿದ್ದರೆ ಲಯ ಹಾಗೂ ಫಿಟ್ನೆಸ್ ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

