MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Sports
  • Cricket
  • ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ಪಾಕ್ ಸೋಲಿನ ಗಾಯದ ಮೇಲೆ ಬರೆ ಎಳೆದ ಮೋದಿ: ಫೀಲ್ಡ್‌ನಲ್ಲೂ ಆಪರೇಷನ್ ಸಿಂದೂರ

ನವದೆಹಲಿ: 2025ರ ಏಷ್ಯಾಕಪ್ ಟೂರ್ನಿಯ ಫೈನಲ್‌ನಲ್ಲಿ ಬದ್ದ ಎದುರಾಳಿ ಪಾಕಿಸ್ತಾನವನ್ನು ಭಾರತ ಬಗ್ಗುಬಡಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ, ನೆರೆಯ ಪಾಕಿಸ್ತಾನವನ್ನು ಕಾಲೆಳೆದಿದ್ದಾರೆ. ಈ ಮೂಲಕ ಸೋತ ಪಾಕ್ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ.

1 Min read
Author : Naveen Kodase
Published : Sep 29 2025, 10:50 AM IST
Share this Photo Gallery
  • FB
  • TW
  • Linkdin
  • Whatsapp
17
ಒಂಬತ್ತನೇ ಏಷ್ಯಾಕಪ್ ಗೆದ್ದ ಭಾರತ
Image Credit : Getty

ಒಂಬತ್ತನೇ ಏಷ್ಯಾಕಪ್ ಗೆದ್ದ ಭಾರತ

2025ರ ಏಷ್ಯಾಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಒಂಬತ್ತನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

27
ಭಾರತದ ಅದ್ಭುತ ಆಟ
Image Credit : Getty

ಭಾರತದ ಅದ್ಭುತ ಆಟ

ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ತಿಲಕ್ ವರ್ಮಾ ಆಕರ್ಷಕ ಬ್ಯಾಟಿಂಗ್ ಹಾಗೂ ಕುಲ್ದೀಪ್ ಯಾದವ್ ಮಿಂಚಿನ ದಾಳಿಯ ನೆರವಿನಿಂದ ಟೀಂ ಇಂಡಿಯಾ 5 ವಿಕೆಟ್ ಅಂತರದ ಜಯ ಸಾಧಿಸುವ ಮೂಲಕ ಏಷ್ಯಾಕಪ್ ಟ್ರೋಫಿ ಗೆದ್ದು ಬೀಗಿದೆ.

Related Articles

Related image1
ಏಷ್ಯಾಕಪ್ ಟ್ರೋಫಿ ಸ್ವೀಕರಿಸದ ಚಾಂಪಿಯನ್ ಭಾರತ! ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ
Related image2
ಕ್ಷಣ ಕ್ಷಣಕ್ಕೂ ತಿರುವು ಪಡೆದ ಏಷ್ಯಾಕಪ್ ಫೈನಲ್, ಪಾಕ್ ಬಗ್ಗು ಬಡಿದು ಟ್ರೋಫಿ ಗೆದ್ದ ಭಾರತ
37
ಭಾರತಕ್ಕೆ ಸರಿಸಾಟಿಯಿಲ್ಲ
Image Credit : Getty

ಭಾರತಕ್ಕೆ ಸರಿಸಾಟಿಯಿಲ್ಲ

ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ ತಂಡವು ಪಾಕಿಸ್ತಾನ ಎದುರು ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ತಮಗೆ ಪಾಕ್ ಯಾವ ವಲಯದಲ್ಲೂ ಸರಿಸಾಟಿಯಲ್ಲ ಎನ್ನುವ ಸ್ಪಷ್ಟ ಸಂದೇಶ ರವನಿಸಿದೆ.

47
ಪಾಕ್ ಕಾಲೆಳೆದ ಮೋದಿ
Image Credit : Getty

ಪಾಕ್ ಕಾಲೆಳೆದ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಇದರ ಜತೆಗೆ ಪಾಕ್‌ನ ಕಾಲೆಳೆದಿದ್ದಾರೆ.

57
ಮೋದಿ ಅಭಿನಂದನೆ
Image Credit : ANI

ಮೋದಿ ಅಭಿನಂದನೆ

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 'ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂದೂರ. ಫಲಿತಾಂಶ ಒಂದೇ - ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು' ಎಂದಿದ್ದಾರೆ.

67
ಆಪರೇಷನ್ ಸಿಂದೂರ್ ಕಾರ್ಯಚರಣೆ
Image Credit : Google

ಆಪರೇಷನ್ ಸಿಂದೂರ್ ಕಾರ್ಯಚರಣೆ

ಪಾಕ್ ಪ್ರೇರಿತ ಉಗ್ರರು ನಡೆಸಿದ ಪೆಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತ ಕಳೆದ ಮೇ 6-7ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬೇರೂರಿದ್ದ 9 ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂದೂರ್ ಕಾರ್ಯಚರಣೆ ಮಾಡಿ, ಉಗ್ರನೆಲೆಗಳನ್ನು ಧ್ವಂಸಗೊಳಿಸಿತ್ತು.

77
ಗಣ್ಯರ ಅಭಿನಂದನೆ
Image Credit : Getty

ಗಣ್ಯರ ಅಭಿನಂದನೆ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಭಾರತದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಕ್ರಿಕೆಟ್
ಏಷ್ಯಾ ಕಪ್
ಟೀಮ್ ಇಂಡಿಯಾ
ಪಾಕಿಸ್ತಾನ
ನರೇಂದ್ರ ಮೋದಿ
ಆಪರೇಷನ್ ಸಿಂಧೂರ

Latest Videos
Recommended Stories
Recommended image1
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!
Recommended image2
ಭಾರತ ಎದುರಿನ 3ನೇ ಏಕದಿನ ಪಂದ್ಯಕ್ಕೂ ಮುನ್ನ ದಕ್ಷಿಣ ಆಫ್ರಿಕಾಗೆ ಬಿಗ್ ಶಾಕ್! 2 ಸ್ಟಾರ್ ಆಟಗಾರರು ಔಟ್!
Recommended image3
ಮದುವೆ ಮುಂದೂಡಿಕೆ ಬಳಿಕ ಸ್ಮೃತಿ ಮಂಧನಾ ಮೊದಲ ಪೋಸ್ಟ್: ನಿಶ್ಚಿತಾರ್ಥ ಉಂಗುರ ನಾಪತ್ತೆ! ಏನಾಯ್ತು ಎಂದ ಫ್ಯಾನ್ಸ್
Related Stories
Recommended image1
ಏಷ್ಯಾಕಪ್ ಟ್ರೋಫಿ ಸ್ವೀಕರಿಸದ ಚಾಂಪಿಯನ್ ಭಾರತ! ಕ್ರಿಕೆಟ್ ಇತಿಹಾಸದಲ್ಲೇ ಕಂಡು ಕೇಳರಿಯದ ಘಟನೆ
Recommended image2
ಕ್ಷಣ ಕ್ಷಣಕ್ಕೂ ತಿರುವು ಪಡೆದ ಏಷ್ಯಾಕಪ್ ಫೈನಲ್, ಪಾಕ್ ಬಗ್ಗು ಬಡಿದು ಟ್ರೋಫಿ ಗೆದ್ದ ಭಾರತ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved