ಶುಭ್ಮನ್ ಗಿಲ್ ನಾಯಕತ್ವಕ್ಕೆ ಕುತ್ತು? ಭಾರತ ಏಕದಿನ ತಂಡಕ್ಕೆ ಹೊಸ ನಾಯಕ ಎಂಟ್ರಿ?
ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಿಂದ ಹೊರಬಿದ್ದ ಶುಭ್ಮನ್ ಗಿಲ್ಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆಯಿದೆ. ಗಿಲ್ಗೆ ಏಕದಿನ ತಂಡದ ನಾಯಕತ್ವವೂ ಕೈತಪ್ಪುವ ಸಾಧ್ಯತೆಯಿದೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.

ಗಿಲ್ ನಾಯಕತ್ವದಿಂದ ಔಟ್?
ಶುಭ್ಮನ್ ಗಿಲ್ 2025ರ ಮಧ್ಯದಲ್ಲಿ ಭಾರತ ಏಕದಿನ ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕವಾಗಿದ್ದಾರೆ. ಸದ್ಯ ಶ್ರೇಯಸ್ ಅಯ್ಯರ್ ಏಕದಿನ ತಂಡದ ಉಪನಾಯಕರಾಗಿದ್ದಾರೆ.
ಟಿ20 ವಿಶ್ವಕಪ್ನಿಂದ ಗಿಲ್ ಔಟ್
ಇದೀಗ ಡಿಸೆಂಬರ್ 20ರಂದು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದಾಗ ಉಪನಾಯಕರಾಗಿದ್ದ ಶುಭ್ಮನ್ ಗಿಲ್ ಅವರನ್ನು ಕೈಬಿಡಲಾಗಿದೆ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು.
ಶ್ರೇಯಸ್ ಅಯ್ಯರ್ ನೂತನ ಏಕದಿನ ತಂಡದ ನಾಯಕ?
ಇನ್ನು ಇದೆಲ್ಲದರ ನಡುವೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಭಾರತ ಏಕದಿನ ತಂಡದ ನಾಯಕತ್ವದಿಂದ ಶುಭ್ಮನ್ ಗಿಲ್ ಅವರನ್ನು ಕೆಳಗಿಳಿಸಿ ಶ್ರೇಯಸ್ ಅಯ್ಯರ್ಗೆ ಕ್ಯಾಪ್ಟನ್ ಪಟ್ಟ ಕಟ್ಟಲಾಗುತ್ತದೆ ಎನ್ನುವ ಸುದ್ದಿ ವೈರಲ್ ಆಗುತ್ತಿದೆ.
ಯಾಕೆ ಹೀಗೆ?
ಗಿಲ್ ನಾಯಕರಾದ ಬಳಿಕ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಅವರ ಬ್ಯಾಟಿಂಗ್ ಪ್ರದರ್ಶನದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ. ಗಿಲ್ ನಾಯಕತ್ವದ ಜತೆಗೆ ಬ್ಯಾಟರ್ ಆಗಿ ಒತ್ತಡ ನಿಭಾಯಿಸಲು ವಿಫಲವಾಗುತ್ತಿರುವುದು ಬಿಸಿಸಿಐ ಆಯ್ಕೆ ಸಮಿತಿ ತಲೆನೋವು ಹೆಚ್ಚುವಂತೆ ಮಾಡಿದೆ.
ಅಯ್ಯರ್ ಬಗ್ಗೆ ಬಿಸಿಸಿಐ ಲೆಕ್ಕಾಚಾರವೇನು?
ಹೀಗಾಗಿ ಗಿಲ್ ಅವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿ ಶ್ರೇಯಸ್ ಅಯ್ಯರ್ಗೆ ನಾಯಕತ್ವ ಪಟ್ಟ ಕಟ್ಟಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ ಐಪಿಎಲ್ನಲ್ಲಿ ಯಶಸ್ವಿಯಾಗಿ ತಂಡವನ್ನು ಮುನ್ನಡೆಸಿದ್ದಾರೆ. ಇದರ ಜತೆಗೆ ಏಕದಿನ ಕ್ರಿಕೆಟ್ನಲ್ಲಿ ಅಯ್ಯರ್ ಸ್ಥಿತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.
ಕೆ ಎಲ್ ರಾಹುಲ್ ಹಂಗಾಮಿ ನಾಯಕ
ಇನ್ನು ಇತ್ತೀಚೆಗೆ ಗಾಯದ ಸಮಸ್ಯೆಯಿಂದ ಶ್ರೇಯಸ್ ಅಯ್ಯರ್ ಹಾಗೂ ಶುಭ್ಮನ್ ಗಿಲ್ ಭಾರತ ಏಕದಿನ ತಂಡದಿಂದ ಹೊರಗುಳಿದಿದ್ದರು. ಈ ವೇಳೆ ಕೆ ಎಲ್ ರಾಹುಲ್ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯಲ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು.
ಅಯ್ಯರ್ಗೆ ನಾಯಕತ್ವ ಪಟ್ಟ
ಆದರೆ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಶುಭ್ಮನ್ ಗಿಲ್ ಬದಲಿಗೆ ಮುಂಬೈ ಮೂಲದ ಶ್ರೇಯಸ್ ಅಯ್ಯರ್ಗೆ ಬಿಸಿಸಿಐ ಭಾರತ ಏಕದಿನ ತಂಡದ ನಾಯಕತ್ವ ಕಟ್ಟಲು ಮುಂದಾಗಿದೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.

