MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Crime
  • ಆಸ್ತಿಗಾಗಿ ಮಗಳನ್ನು 3ನೇ ಮಹಡಿಯಿಂದ ತಳ್ಳಿದ ಮಲತಾಯಿ; ಅಮ್ಮಾ, ಅಮ್ಮಾ..., ಎನ್ನತ್ತಲೇ ಪ್ರಾಣಬಿಟ್ಟ ಮಗು!

ಆಸ್ತಿಗಾಗಿ ಮಗಳನ್ನು 3ನೇ ಮಹಡಿಯಿಂದ ತಳ್ಳಿದ ಮಲತಾಯಿ; ಅಮ್ಮಾ, ಅಮ್ಮಾ..., ಎನ್ನತ್ತಲೇ ಪ್ರಾಣಬಿಟ್ಟ ಮಗು!

ಬೀದರ್‌ನಲ್ಲಿ, ಆಸ್ತಿಗಾಗಿ ಮಲತಾಯಿಯೊಬ್ಬಳು ತನ್ನ 7 ವರ್ಷದ ಮಲಮಗಳು ಶಾನವಿಯನ್ನು 3ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾಳೆ. ಆರಂಭದಲ್ಲಿ ಆಕಸ್ಮಿಕ ಸಾವು ಎಂದು ನಂಬಲಾಗಿದ್ದ ಈ ಘಟನೆಯು, ಪಕ್ಕದ ಮನೆಯ ಸಿಸಿಟಿವಿ ದೃಶ್ಯಗಳಿಂದ ಕೊಲೆ ಎಂದು ಬಯಲಾಗಿದೆ.

2 Min read
Author : Sathish Kumar KH
Published : Sep 16 2025, 05:14 PM IST
Share this Photo Gallery
  • FB
  • TW
  • Linkdin
  • Whatsapp
16
ಆಸ್ತಿ ವ್ಯಾಮೋಹಕ್ಕೆ ಮಲಮಗಳ ಬಲಿ
Image Credit : Asianet News

ಆಸ್ತಿ ವ್ಯಾಮೋಹಕ್ಕೆ ಮಲಮಗಳ ಬಲಿ

ಬೀದರ್ (ಸೆ.16): ಆಸ್ತಿಗಾಗಿ ಹಣದ ವ್ಯಾಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು ತನ್ನ ಮಲಮಗಳನ್ನೇ 3ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಈ ಘಟನೆ ಆಗಸ್ಟ್ 27 ರಂದು ನಡೆದಿತ್ತಾದರೂ, ಅಕ್ಕಪಕ್ಕದ ಮನೆಯವರ ಸಿಸಿಟಿವಿ ದೃಶ್ಯಗಳು ಲಭ್ಯವಾದ ಬಳಿಕ ಕ್ರೂರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲತಾಯಿ ರಾಧಾಳನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

26
ಆಸ್ತಿ ಹಂಚಿಕೆ ಆಗಬಾರದೆಂದು ಕೊಲೆ
Image Credit : Asianet News

ಆಸ್ತಿ ಹಂಚಿಕೆ ಆಗಬಾರದೆಂದು ಕೊಲೆ

ಕ್ರೌರ್ಯದ ಕೃತ್ಯ ಬಯಲು

ಮೃತ ಬಾಲಕಿ ಶಾನವಿ (7) ತಾಯಿ ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ನಂತರ, ಶಾನವಿ ತಂದೆ ಸಿದ್ಧಾಂತ ಅವರು 2023ರಲ್ಲಿ ರಾಧಾಳನ್ನು ಎರಡನೇ ವಿವಾಹವಾಗಿದ್ದರು. ಈ ದಂಪತಿಗೆ ಇಬ್ಬರು ಅವಳಿ ಮಕ್ಕಳು ಜನಿಸಿದ್ದರು. ಇದರಿಂದ ಆಸ್ತಿ ಹಂಚಿಕೆಯಾಗಬಹುದೆಂಬ ಭಯದಿಂದ ರಾಧಾ, ಶಾನವಿಯನ್ನು ತನ್ನ ದಾರಿಯಿಂದ ತೆಗೆದುಹಾಕಲು ನಿರ್ಧರಿಸಿದ್ದಾಳೆ.

Related Articles

Related image1
ಕಾಮುಕ ಶಿಕ್ಷಕನ ಕೃತ್ಯಕ್ಕೆ ಬೆಚ್ಚಿಬಿದ್ದ ಬೀದರ್: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗಣಿತ ಶಿಕ್ಷಕನಿಂದಲೇ ಬಲತ್ಕಾರ!
Related image2
ಬೀದರ್ ಜಿಲ್ಲೆಯಲ್ಲಿ ರಾಕ್ಷಸಿ ಕೃತ್ಯ, ನರ್ಸರಿಗೆ ತೆರಳಿಗೆ 4 ವರ್ಷದ ಬಾಲಕಿ ಮೇಲೆ ಅತ್ಯಾ*ರ
36
ಕುರ್ಚಿಯ ಮೇಲೆ ನಿಲ್ಲಿಸಿ ತಳ್ಳಿದ ಮಲತಾಯಿ
Image Credit : Asianet News

ಕುರ್ಚಿಯ ಮೇಲೆ ನಿಲ್ಲಿಸಿ ತಳ್ಳಿದ ಮಲತಾಯಿ

ಆಗಸ್ಟ್ 27 ರಂದು, ರಾಧಾ ಆಟ ಆಡಿಸುವ ನೆಪದಲ್ಲಿ ಶಾನವಿಯನ್ನು ಮನೆಯ 3ನೇ ಮಹಡಿಗೆ ಕರೆದೊಯ್ದಿದ್ದಾಳೆ. ಅಲ್ಲಿ, ಕುರ್ಚಿಯ ಮೇಲೆ ಅವಳನ್ನು ನಿಲ್ಲಿಸಿ, ನಂತರ ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಾಳೆ. ಈ ಕೃತ್ಯದ ನಂತರ ಆಕೆ ಏನೂ ಆಗದಂತೆ ಮನೆಗೆ ಹಿಂತಿರುಗಿ ಮಲಗಿದ್ದಳು. ಮಗು ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ನಂಬಿದ್ದರು. ಹಾಗಾಗಿ, ಮಗುವಿನ ತಂದೆ ಸಿದ್ಧಾಂತ ಆಗಸ್ಟ್ 28ರಂದು ಗಾಂಧಿ ಗಂಜ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ದೂರು ನೀಡಿದ್ದರು.

46
ಮಗಳನ್ನು ತಳ್ಳಿ ಬೆಚ್ಚಗೆ ಮಲಗಿದ ಕೊಲೆಗಾತಿ
Image Credit : Asianet News

ಮಗಳನ್ನು ತಳ್ಳಿ ಬೆಚ್ಚಗೆ ಮಲಗಿದ ಕೊಲೆಗಾತಿ

ಸಿಸಿಟಿವಿಯಲ್ಲಿ ನೋವಿನ ದೃಶ್ಯಗಳು

ಸೆಪ್ಟೆಂಬರ್ 12ರಂದು ಪಕ್ಕದ ಮನೆಯ ಮಾಲೀಕರು ತಮ್ಮ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಭಯಾನಕ ಸತ್ಯ ಬಯಲಾಗಿದೆ. ಸಿಸಿಟಿವಿಯಲ್ಲಿ ರಾಧಾ ಸಂಶಯಾಸ್ಪದ ರೀತಿಯಲ್ಲಿ ಶಾನವಿ ಜೊತೆ ಮಹಡಿಯ ಮೇಲೆ ಓಡಾಡುವುದು, ನಂತರ ಅವಳನ್ನು ತಳ್ಳಿ ಅವಸರದಲ್ಲಿ ಮನೆ ಒಳಗೆ ಹೋಗುವುದು ಸ್ಪಷ್ಟವಾಗಿ ಸೆರೆಯಾಗಿದೆ. ಈ ದೃಶ್ಯಗಳನ್ನು ನೋಡಿದ ನೆರೆಮನೆಯವರು ತಕ್ಷಣ ಸಿದ್ಧಾಂತ ಅವರ ವಾಟ್ಸಾಪ್‌ಗೆ ಈ ವಿಡಿಯೋವನ್ನು ಕಳುಹಿಸಿದ್ದಾರೆ.

56
ರಸ್ತೆಗೆ ಬಂದು ಒದ್ದಾಡಿ ಪ್ರಾಣ ಬಿಟ್ಟ ಮಗು
Image Credit : Asianet News

ರಸ್ತೆಗೆ ಬಂದು ಒದ್ದಾಡಿ ಪ್ರಾಣ ಬಿಟ್ಟ ಮಗು

ಸಿಸಿಟಿವಿ ದೃಶ್ಯಗಳು ಕೇವಲ ಹತ್ಯೆಯ ಕ್ಷಣವನ್ನು ಮಾತ್ರ ತೋರಿಸಿಲ್ಲ. ಮೂರನೇ ಮಹಡಿಯಿಂದ ಕೆಳಗೆ ಬಿದ್ದರೂ ಬದುಕಿದ್ದ ಪುಟ್ಟ ಶಾನವಿ, ರಸ್ತೆಯ ಮೇಲೆ ನೋವಿನಿಂದ ಒದ್ದಾಡುತ್ತಿರುವ ಭಯಾನಕ ದೃಶ್ಯಗಳು ಕೂಡ ಸೆರೆಯಾಗಿವೆ. ನೆಲಕ್ಕೆ ಬಿದ್ದ ನಂತರವೂ, ಬಾಲಕಿ ಜೀವನ್ಮರಣದ ಹೋರಾಟ ನಡೆಸಿ, ಮೆಲ್ಲನೆ ನಡೆದುಕೊಂಡು ಬಂದು ರಸ್ತೆಯಲ್ಲಿ ಜೀವ ಬಿಟ್ಟಿದ್ದಾಳೆ. ಈ ದೃಶ್ಯಗಳನ್ನು ನೋಡಿದ ಸುತ್ತಮುತ್ತಲಿನ ಹಲವು ಜನರು ಆಕೆಯನ್ನು ರಕ್ಷಿಸಲು ಧಾವಿಸಿದ್ದರೂ, ಪ್ರಯೋಜನವಾಗಿಲ್ಲ.

66
ಜೈಲಿಗೆ ಸೇರಿದ ಮಲತಾಯಿ
Image Credit : Asianet News

ಜೈಲಿಗೆ ಸೇರಿದ ಮಲತಾಯಿ

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ, ಮೃತ ಬಾಲಕಿಯ ಅಜ್ಜಿ ವಿಜಯಶ್ರೀ ಸುರೇಶ್ ಅವರು ಮಲತಾಯಿ ರಾಧಾ ವಿರುದ್ಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ, ಆಸ್ತಿ ಇಬ್ಬಾಗ ಆಗುತ್ತೆ ಎಂಬ ಭಯದಿಂದ ಮಗುವನ್ನು ತಳ್ಳಿ ಕೊಲೆ ಮಾಡಿರುವುದಾಗಿ ರಾಧಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. 

ಸದ್ಯ, ಆರೋಪಿ ರಾಧಾ ನ್ಯಾಯಾಂಗ ಬಂಧನದಲ್ಲಿದ್ದಾಳೆ. ಈ ಅಮಾನವೀಯ ಕೃತ್ಯದಿಂದ ಇಡೀ ಬೀದರ್ ನಗರವೇ ಬೆಚ್ಚಿಬಿದ್ದಿದ್ದು, ಪಾಪಿ ಮಲತಾಯಿಗೆ ಅತಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೀದರ್
ತಾಯಿ
ಆಸ್ತಿ ವಿವಾದ
ಕರ್ನಾಟಕ ಸುದ್ದಿ
ಕ್ರೈಮ್ ನ್ಯೂಸ್

Latest Videos
Recommended Stories
Recommended image1
ಡೆಡ್ಲಿ ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ; ಮೂವರು ಮಕ್ಕಳು ಅನಾಥ
Recommended image2
ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
Recommended image3
ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
Related Stories
Recommended image1
ಕಾಮುಕ ಶಿಕ್ಷಕನ ಕೃತ್ಯಕ್ಕೆ ಬೆಚ್ಚಿಬಿದ್ದ ಬೀದರ್: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಗಣಿತ ಶಿಕ್ಷಕನಿಂದಲೇ ಬಲತ್ಕಾರ!
Recommended image2
ಬೀದರ್ ಜಿಲ್ಲೆಯಲ್ಲಿ ರಾಕ್ಷಸಿ ಕೃತ್ಯ, ನರ್ಸರಿಗೆ ತೆರಳಿಗೆ 4 ವರ್ಷದ ಬಾಲಕಿ ಮೇಲೆ ಅತ್ಯಾ*ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved