MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Astrology
  • Festivals
  • ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ: ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ

ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ: ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ

ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

2 Min read
Author : Govindaraj S
Published : Dec 21 2025, 07:32 PM IST
Share this Photo Gallery
  • FB
  • TW
  • Linkdin
  • Whatsapp
17
ಶ್ರೀ ಕೃಷ್ಣನಿಗೆ ಸಮರ್ಪಣಾ ಕಾರ್ಯಕ್ರಮ
Image Credit : Asianet News

ಶ್ರೀ ಕೃಷ್ಣನಿಗೆ ಸಮರ್ಪಣಾ ಕಾರ್ಯಕ್ರಮ

ಉಡುಪಿ (ಡಿ.21): ಪಾಶ್ಚಾತ್ಯ ದೇಶಗಳಿಗೆ ಶ್ರೀ ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಪರ್ಯಾಯ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಬೆಂಗಳೂರಿನ ಇಸ್ಕಾನ್ ವತಿಯಿಂದ ಇಸ್ಕಾನ್ ಸಂಸ್ಥಾಪಕ ಶೀಲ ಪ್ರಭುಪಾದ ಅವರಿಗೆ ಕಳೆದ ಕುಂಭಮೇಳದ ಸಂದರ್ಭದಲ್ಲಿ ಅಖಾಡ ಪರಿಷತ್ ವತಿಯಿಂದ ನೀಡಲಾದ `ವಿಶ್ವ ಗುರು 'ಗೌರವವನ್ನು ಶ್ರೀ ಕೃಷ್ಣನಿಗೆ ಸಮರ್ಪಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

27
ಅಪೂರ್ವ ಕ್ಷಣ
Image Credit : Asianet News

ಅಪೂರ್ವ ಕ್ಷಣ

ಇದೊಂದು ಶ್ರೀ ಕೃಷ್ಣ ಮಠದ ಇತಿಹಾಸದಲ್ಲಿಯೇ ಸುವರ್ಣ ಅಕ್ಷರದಲ್ಲಿ ಬರೆದಿಡಬೇಕಾದ ಅಪೂರ್ವ ಕ್ಷಣ ಎಂದು ಬಣ್ಣಿಸಿದ ಶ್ರೀಗಳು, ಶ್ರೀಕೃಷ ವಂದೇ ಜಗದ್ಗುರುಂ ಎನ್ನುವಾಗ ಅವನ ಸನ್ನಿಧಾನದಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸುಯೋಗವೇ ಸರಿ. ಶ್ರೀ ಕೃಷ್ಣನೇ ಹೇಳಿದಂತೆ ಕಲಿಯುಗದಲ್ಲಿ ಧರ್ಮ ರಕ್ಷಣೆಗಾಗಿ ಭಗವಂತನ ಅವತಾರ ಭಕ್ತರ ರೂಪದಲ್ಲಿ ಆಗುತ್ತದೆ. ಇದರಂತೆ ಆಚಾರ್ಯ ಮಧ್ವರು, ಶ್ರೀ ಪ್ರಭುಪಾದರ ಅವತಾರವಾಗಿದೆ. ವಿಶ್ವ ಗುರುವಾಗಿ ಶ್ರೀ ಕೃಷ್ಣಭಕ್ತಿ ಸಾರವನ್ನು ಜಗದೆಲ್ಲೆಡೆ ಸಾರಿದ ಶ್ರೀ ಪ್ರಭುಪಾದಾರಿಗೆ ಇದೀಗ ಶ್ರೀಕೃಷ್ಣ ಹಾಗೂ ಆಚಾರ್ಯ ಮಧ್ವರು ಒಂದಾಗಿ ಮತ್ತೊಮ್ಮೆ ವಿಶ್ವ ಗುರು ಉಪಾಧಿ ನೀಡಿ ಹರಸಿದ್ದಾರೆ.

Related Articles

Related image1
ಉಡುಪಿ, ಗೋಕರ್ಣ ಮಠಗಳಿಂದ ದೇಶಕ್ಕೆ ಸಾಂಸ್ಕೃತಿಕ ಶಕ್ತಿ : ಮೋದಿ
Related image2
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
37
ದೇವಭೂಮಿ
Image Credit : Asianet News

ದೇವಭೂಮಿ

ಹೀಗಾಗಿ ಇದು ಮಿನಿ ಕುಂಭವಾಗಿದೆ ಎಂದು ಅವರು ನುಡಿದರು. ಪ್ರಭುಪಾದರು ಕೂಡಾ ಮಧ್ವ ಪರಂಪರೆಯಲ್ಲಿಯೇ ಅಂದರೆ ಮಧ್ವಗೌಡೀಯ ಪರಂಪರೆಯಿಂದಲೇ ಬಂದಿರುವುದು ಮಹಾಸಂತೋಷ ತಂದಿದೆ. ಹೀಗಾಗಿ ಪ್ರಭುಪಾದರಿಗೆ ವಿಶ್ವಗುರು ಪದವಿ ಶ್ರೀಕೃಷ್ಣನ ಅನುಗ್ರಹದಿಂದಲೇ ಸಿಕ್ಕಿದೆ. 1976ರಲ್ಲಿ ನಮ್ಮ ಪ್ರಥಮ ಪರ್ಯಾಯ ಸಂದರ್ಭದಲ್ಲಿ ಶ್ರೀ ಪ್ರಭುಪಾದರು ಉಡುಪಿಗೆ ಆಗಮಿಸಿದ್ದರು. ಇದೀಗ ನಮ್ಮ ನಾಲ್ಕನೇ ಪರ್ಯಾಯಾವಧಿಯಲ್ಲಿ ಅವರು ವಿಶ್ವಗುರುವಾಗಿ ಬಂದಿರುವುದು ಸಂತೋಷ ತಂದಿದೆ ಎಂದು ಪುತ್ತಿಗೆ ಶ್ರೀಗಳು ತಿಳಿಸಿದರು. ಉತ್ತರ ಪ್ರದೇಶ ಭಗವಂತ ಬೇರೆ ಬೇರೆ ಅವತಾರದಲ್ಲಿ ಜನಿಸಿದ ಪುಣ್ಯ ಭೂಮಿ ಆದ್ದರಿಂದಲೇ ಅದು ದೇವಭೂಮಿ.

47
ದಕ್ಷಿಣೋತ್ತರ ಸಂಗಮ
Image Credit : Asianet News

ದಕ್ಷಿಣೋತ್ತರ ಸಂಗಮ

ದಕ್ಷಿಣ ಭಾರತ ಆಚಾರ್ಯ (ಗುರುಗಳು)ರಾದ ಮಧ್ವರು, ರಾಮಾನುಜರು, ಶಂಕರರು ಮೊದಲಾದವರು ಅವತರಿಸಿದ ಪುಣ್ಯಭೂಮಿ. ಹರಿದ್ವಾರ ನಿರಂಜನಿ ಅಖಾಡದ ಆಚಾರ್ಯ ಮಹಾಮಂಡಲೇಶ್ವರ ಶ್ರೀ ಕೈಲಾಶಾನಂದ ಗಿರಿ ಅವರು ಉಡುಪಿಗೆ ಆಗಮಿಸುವ ಮೂಲಕ ಇಲ್ಲಿ ದಕ್ಷಿಣೋತ್ತರ ಸಂಗಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಹರಿದ್ವಾರ ನಿರಂಜನಿ ಅಖಾಡದ ಮಹಾಮಂಡಲೇಶ್ವರ ಶ್ರೀ ಕೈಲಾಸಾನಂದ ಗಿರಿ ಮಹಾರಾಜ್ ಅವರಿಗೆ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಶ್ರೀಕೃಷ್ಣನ ಕಡೆಗೋಲು, ಪ್ರಸಾದ ನೀಡಿ ಗೌರವಿಸಿದರು. ಹಾಗಯೇ ಮಹಾಮಂಡಲೇಶ್ವರ ಶ್ರೀ ಕೈಲಾಸಾನಂದ ಗಿರಿ ಅವರಿಂದ ಪುತ್ತಿಗೆ ಉಭಯಶ್ರೀಗಳಿಗೆ ಗೌರವಾರ್ಪಣೆ ನಡೆಯಿತು.

57
ಅತ್ಯಂತ ಪ್ರಿಯವಾದ ಸ್ಥಳ
Image Credit : Asianet News

ಅತ್ಯಂತ ಪ್ರಿಯವಾದ ಸ್ಥಳ

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕೈಲಾಸಾನಂದ ಗಿರಿ ಅವರು, ಇಸ್ಕಾನ್ ಸಂಸ್ಥಾಫಕ ಶ್ರೀಲ ಪ್ರಭುಪಾದ ಅವರಿಗೆ `ವಿಶ್ವಗುರು ' ಬಿರುದನ್ನು ನೀಡುವುದು ಸಮಸ್ತ ಅಖಾಡಗಳ ಒಪ್ಪಿಗೆಯಿಂದ ಘೋಷಿಸಲಾಗಿತ್ತು. ಗೀತಾಚಾರ್ಯನ ನಾಡಾದ ಕರ್ನಾಟಕ ನನಗೆ ಅತ್ಯಂತ ಪ್ರಿಯವಾದ ಸ್ಥಳವಾಗಿದೆ. ಹರಿದ್ವಾರ ಬಿಟ್ಟರೆ ನೀವು ಎಲ್ಲಿರಲು ಇಷ್ಟಪಡುತ್ತೀರಾ ಎಂದು ಯಾರಾದರೂ ಪ್ರಶ್ನಿಸಿದರೆ ನಾನು ನಿಶ್ಚಯವಾಗಿಯೂ ` ಕರ್ನಾಟಕ ' ಎನ್ನುತ್ತೇನೆ. ಯಾಕೆಂದರೆ ಇದು ಅಧ್ಯಾತ್ಮದ ಭೂಮಿಯಾಗಿದೆ.

67
ಶ್ರೀಲ ಪ್ರಭುಪಾದ ಚರಿತಾಮೃತಮ್
Image Credit : Asianet News

ಶ್ರೀಲ ಪ್ರಭುಪಾದ ಚರಿತಾಮೃತಮ್

ತನ್ನ ಭಕ್ತನಿಗಾಗಿ ತಿರುಗಿ ನಿಂತು ದರ್ಶನಕೊಟ್ಟ ಶ್ರೀಕೃಷ್ಣನ ನಾಡಾಗಿದೆ ಎಂದರು. ಕಾರ್ಯಕ್ರಮದಲ್ಲಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅವರು ರಚಿಸಿದ `ಶ್ರೀಲ ಪ್ರಭುಪಾದ ಚರಿತಾಮೃತಮ್ ಕನ್ನಡ ಮಹಾಕಾವ್ಯದ ಲೋಕಾರ್ಪಣೆ ನಡೆಯಿತು. ಇಸ್ಕಾನ್ ಬೆಂಗಳೂರು ಮತ್ತು ಅಕ್ಷಯಪಾತ್ರ ಫೌಂಡೇಶನ್ ಅಧ್ಯಕ್ಷ ಮಧು ಪಂಡಿತ್ ದಾಸ್ ಪ್ರಾಸ್ತಾವಿಕ ಮಾತುಗಳಲ್ಲಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಪುತ್ತಿಗೆ ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು, ಇಸ್ಕಾನ್ ಬೆಂಗಳೂರಿನ ಚಂಚಲಪತಿ ದಾಸರು, ವಾಸುದೇವ ಕೇಶವ ದಾಸರು ಮೊದಲಾದವರು ಉಪಸ್ಥಿತರಿದ್ದರು.

77
ಹರಿನಾಮ ಸಂಕೀರ್ತನೆ
Image Credit : Asianet News

ಹರಿನಾಮ ಸಂಕೀರ್ತನೆ

ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಭಗವದ್ ಗೀತಾ ಪಾರಾಯಣ ಮತ್ತು ಇಸ್ಕಾನ್ ಭಕ್ತಾದಿಗಳಿಂದ ಹರಿನಾಮ ಸಂಕೀರ್ತನೆ ನಡೆಯಿತು. ಇಸ್ಕಾನ್ ಬೆಂಗಳೂರು ಸಂಸ್ಥೆಯ ಉಪಾಧ್ಯಕ್ಷ ಚಂಚಲಾಪತಿ ದಾಸ್ ಅವರು ಚಂಚಲಪತಿ ಸ್ವಾಗತ ಭಾಷಣ ನೀಡಿದರು. ಈ ಸಂದರ್ಭದಲ್ಲಿ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದ ಸಂದರ್ಭದಲ್ಲಿ ಶ್ರೀ ಪ್ರಭುಪಾದರಿಗೆ ವಿಶ್ವಗುರು ಬಿರುದು ನೀಡಿ ಗೌರವಿಸಿದ ಕ್ಷಣಗಳ ವೀಡಿಯೋ ಪ್ರದರ್ಶನ, ಪ್ರಧಾನಿ ಮೋದಿ ಅವರ ಸಂದೇಶದ ಮರು ಪ್ರದರ್ಶನ ನಡೆಯಿತು. ಶ್ರೀಕೃಷ್ಣ ಸಮರ್ಪಣೋತ್ಸವದ ಫಲಕದ ಅನಾವರಣ, ಶ್ರೀಲ ಪ್ರಭುಪಾದರ ಮೂರ್ತಿಗೆ ಯತಿತ್ರಯರಿಂದ ಪುಷ್ಪವೃಷ್ಟಿ ನಡೆಯಿತು.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಹಬ್ಬ
ಕರ್ನಾಟಕ ಸುದ್ದಿ
ಉಡುಪಿ
ಸುದ್ದಿ

Latest Videos
Recommended Stories
Recommended image1
Ramayana: ಲಕ್ಷ್ಮಣನ ವಿಜಯದ ಹಿಂದೆ ಊರ್ಮಿಳೆಯ ನಿದ್ರೆಯ ರಹಸ್ಯ!
Recommended image2
ಡಿಸೆಂಬರ್ 29 ರ ನಂತರ ಈ 3 ರಾಶಿಗೆ ಅಚಲ ಅದೃಷ್ಟ, ಹೊಸ ವರ್ಷದ ಮೊದಲು 'ಧನ' ಯೋಗ!
Recommended image3
2026 ರಲ್ಲಿ ಈ 4 ದಿನಾಂಕಗಳಲ್ಲಿ ಜನಿಸಿದ ಹುಡುಗಿಯರು ಅದೃಷ್ಟವಂತರು
Related Stories
Recommended image1
ಉಡುಪಿ, ಗೋಕರ್ಣ ಮಠಗಳಿಂದ ದೇಶಕ್ಕೆ ಸಾಂಸ್ಕೃತಿಕ ಶಕ್ತಿ : ಮೋದಿ
Recommended image2
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved