MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಬಿಹಾರ ಗೆಲುವಿಗೆ ಕಾಂಗ್ರೆಸ್‌ನಿಂದ 'ದಶ'ಸೂತ್ರ: ಇದು 5+1+4=10 ಲೆಕ್ಕಾಚಾರ

ಬಿಹಾರ ಗೆಲುವಿಗೆ ಕಾಂಗ್ರೆಸ್‌ನಿಂದ 'ದಶ'ಸೂತ್ರ: ಇದು 5+1+4=10 ಲೆಕ್ಕಾಚಾರ

Bihar assembly election strategy: ಬಿಹಾರ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಕಾಂಗ್ರೆಸ್, ಕರ್ನಾಟಕ ಮತ್ತು ತೆಲಂಗಾಣ ಮಾದರಿಯ 'ದಶ ಸೂತ್ರ' ರಣತಂತ್ರವನ್ನು ಸಿದ್ಧಪಡಿಸಿದೆ. ಇದು 5+1+4=10 ಲೆಕ್ಕಾಚಾರವಾಗಿದೆ.

2 Min read
Author : Mahmad Rafik
Published : Sep 29 2025, 02:32 PM IST
Share this Photo Gallery
  • FB
  • TW
  • Linkdin
  • Whatsapp
16
ಬಿಹಾರ ಗೆಲ್ಲಲು ಕಾಂಗ್ರೆಸ್ ದಶ ಸೂತ್ರ
Image Credit : Facebook

ಬಿಹಾರ ಗೆಲ್ಲಲು ಕಾಂಗ್ರೆಸ್ ದಶ ಸೂತ್ರ

ಬಿಹಾರ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ತಯಾರಿ ಮಾಡಿಕೊಳ್ಳುತ್ತಿವೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆ ನಡೆಯುತ್ತಿದ್ದು, ಚುನಾವಣೆ ಪ್ರಚಾರ ಮತ್ತು ರೂಪರೇಷಗಳ ಕುರಿತು ಯೋಜನೆ ತಯಾರಿಸಿಕೊಳ್ಳುತ್ತಿವೆ. ಬಿಹಾರ ಗೆಲ್ಲಲು ಕಾಂಗ್ರೆಸ್ ದಶ ಸೂತ್ರ ಸಿದ್ಧ ಮಾಡಿಕೊಂಡಿದೆ ಎಂದು ವರದಿಯಾಗಿದೆ.

26
ಕಾಂಗ್ರೆಸ್ 10 ಗ್ಯಾರಂಟಿ
Image Credit : Facebook

ಕಾಂಗ್ರೆಸ್ 10 ಗ್ಯಾರಂಟಿ

ತನ್ನ ಪ್ರಣಾಳಿಕೆಯಲ್ಲಿ ಬಿಹಾರ ಜನತೆಗೆ ಕಾಂಗ್ರೆಸ್ 10 ಗ್ಯಾರಂಟಿ ನೀಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಗ್ಯಾರಂಟಿಗಳಿಂದಾಗಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದ ಸರ್ಕಾರ ರಚನೆ ಮಾಡಿದೆ. ಹಾಗಾಗಿ ಇಲ್ಲಿಯ ಚುನಾವಣಾ ರಣರಂತ್ರಗಳನ್ನು ಬಿಹಾರದಲ್ಲಿ ಪ್ರಯೋಗಿಸಲು ಕಾಂಗ್ರೆಸ್ ಮುಂದಾಗಿದೆಯಂತೆ.

Related Articles

Related image1
ರಾಜ್ಯದಲ್ಲೂ ಬಿಹಾರ ರೀತಿ ಮತಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಆರಂಭ: ರಾಜ್ಯ ಚುನಾವಣಾಧಿಕಾರಿ
Related image2
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
36
ಕರ್ನಾಟಕ & ತೆಲಂಗಾಣ ಮಾದರಿ
Image Credit : Facebook

ಕರ್ನಾಟಕ & ತೆಲಂಗಾಣ ಮಾದರಿ

ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ, ತೆಲಂಗಾಣ ಮತ್ತು ಕರ್ನಾಟಕದ ಡೇಟಾ ಮಾದರಿಯಲ್ಲಿಯೇ ಬಿಹಾರದಲ್ಲಿ ಕ್ಯಾಂಪೇನ್ ಆರಂಭಿಸುವುದು. ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸೋದು. ಈ ಡೇಟಾ ಆಧರಿಸಿ ಅಲ್ಲಿಯ ಸ್ಥಳೀಯ ವಿಷಯಗಳನ್ನು ಮುಂದಿಟ್ಟು ಚುನಾವಣೆ ಪ್ರಚಾರ ನಡೆಸೋದು ಕಾಂಗ್ರೆಸ್‌ನ ಲೆಕ್ಕಾಚಾರವಾಗಿದೆ. ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳ ಲಾಭವನ್ನು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥ ಮಾಡಿಸಲು ಕಾಂಗ್ರೆಸ್ ಮುಂದಾಗಿದೆ.

46
5+1+4=10 ಲೆಕ್ಕಾಚಾರ
Image Credit : Facebook

5+1+4=10 ಲೆಕ್ಕಾಚಾರ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅಧಿಕಾರಕ್ಕೆ ಬರುತ್ತಿದ್ದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಯಗಳನ್ನು ಜಾರಿಗೆ ತಂದಿದೆ. ಇದಾದ ನಂತರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಐದರ ಜೊತೆ ರಾಜೀವ್ ಆರೋಗ್ಯಶ್ರೀ ಆರೋಗ್ಯ ಯೋಜನೆಯಡಿ ಬಡವರಿಗೆ 10 ಲಕ್ಷ ರೂ. ವಿಮೆಯ ಗ್ಯಾರಂಟಿ ಘೋಷಿಸಿತ್ತು.

56
 6 ಗ್ಯಾರಂಟಿಗಳ ಜೊತೆ ಹೊಸ 4 ಭರವಸೆ
Image Credit : Facebook

6 ಗ್ಯಾರಂಟಿಗಳ ಜೊತೆ ಹೊಸ 4 ಭರವಸೆ

ಇದೀಗ ಬಿಹಾರ ಚುನಾವಣೆಯಲ್ಲಿ 6 ಗ್ಯಾರಂಟಿಗಳ ಜೊತೆ ಹೊಸ ನಾಲ್ಕು ಭರವಸೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಲು ಕಾಂಗ್ರೆಸ್ ಚಿಂತಿಸಿದೆ ಎನ್ನಲಾಗುತ್ತಿದೆ. ಹೊಸ ನಾಲ್ಕು ಭರವಸೆಗಳು ಏನಾಗಿರಬಹುದು ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದಡೆ ತೆಲಂಗಾಣದ ಕಾರ್ಯಕರ್ತರನ್ನು ಬಿಹಾರ ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಹಾರ ಚುನಾವಣೆ ಪೂರ್ವ ಸಮೀಕ್ಷೆ: ಬಿಹಾರಿಗಳು ಲಾಟೀನು ಹಿಡಿತಾರಾ? ಕಮಲ ಮುಡೀತಾರಾ?

66
ಮಹಿಳಾ ಮತದಾರರ ಮೇಲೆ ಕಣ್ಣು
Image Credit : Facebook

ಮಹಿಳಾ ಮತದಾರರ ಮೇಲೆ ಕಣ್ಣು

ಈಗಾಗಲೇ ಮಹಿಳಾ ಮತದಾರರನ್ನು ಸೆಳೆಯಲು 10 ಸಾವಿರ ನೀಡೋದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಇದಕ್ಕಾಗಿ ಕಾಂಗ್ರೆಸ್‌ನಿಂದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೆಚ್ಚು ಚುನಾವಣಾ ಪ್ರಚಾರ ನಡೆಸುವ ಸಾಧ್ಯತೆಗಳಿವೆ. ಇದಕ್ಕಾಗಿ ದೇಶದ ಪ್ರಮುಖ ಕಾಂಗ್ರೆಸ್ ನಾಯಕಿ ಮತ್ತು ಕಾರ್ಯಕರ್ತೆಯರು ಬಿಹಾರಗೆ ಆಗಮಿಸಬಹುದು ಎನ್ನಲಾಗಿದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣಾ ಪೂರ್ವ ಸಮೀಕ್ಷೆ: ಇಬ್ಬರಲ್ಲಿ ಯಾರಿಗೆ ಸ್ಪಷ್ಟ ಬಹುಮತ?

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಹಾರ
ಕಾಂಗ್ರೆಸ್
ರಾಹುಲ್ ಗಾಂಧಿ
ಪ್ರಿಯಾಂಕಾ ಗಾಂಧಿ
ವಿಧಾನಸಭಾ ಚುನಾವಣೆ
ಚುನಾವಣೆ

Latest Videos
Recommended Stories
Recommended image1
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
Recommended image2
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
Recommended image3
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
Related Stories
Recommended image1
ರಾಜ್ಯದಲ್ಲೂ ಬಿಹಾರ ರೀತಿ ಮತಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಆರಂಭ: ರಾಜ್ಯ ಚುನಾವಣಾಧಿಕಾರಿ
Recommended image2
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved