MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ನಾನು ಅಡುಗೆಯಲ್ಲಿನ ಉಪ್ಪು; BJP-JDUಗೆ ಬಿಹಾರದಲ್ಲಿ ತಮ್ಮ ಪಕ್ಷದ ತಾಕತ್ತು ನೆನಪಿಸಿದ ಚಿರಾಗ್ ಪಾಸ್ವಾನ್

ನಾನು ಅಡುಗೆಯಲ್ಲಿನ ಉಪ್ಪು; BJP-JDUಗೆ ಬಿಹಾರದಲ್ಲಿ ತಮ್ಮ ಪಕ್ಷದ ತಾಕತ್ತು ನೆನಪಿಸಿದ ಚಿರಾಗ್ ಪಾಸ್ವಾನ್

Chirag Paswan Warning For BJP: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ಕ್ಷೇತ್ರ ಹಂಚಿಕೆ ಕಗ್ಗಂಟಾಗಿದೆ. ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ತಮ್ಮ ಲೋಕ ಜನಶಕ್ತಿ ಪಕ್ಷಕ್ಕೆ ಹೆಚ್ಚಿನ ಹಾಗೂ ಗುಣಮಟ್ಟದ ಕ್ಷೇತ್ರಗಳನ್ನು ಕೇಳುತ್ತಿದ್ದಾರೆ

2 Min read
Author : Mahmad Rafik
Published : Sep 16 2025, 07:45 PM IST
Share this Photo Gallery
  • FB
  • TW
  • Linkdin
  • Whatsapp
15
ಬಿಹಾರದಲ್ಲಿ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರ
Image Credit : Chirag Pawan FB

ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ

ಇಡೀ ದೇಶದ ಕಣ್ಣು ಬಿಹಾರ ಚುನಾವಣೆಯತ್ತ ನೆಟ್ಟಿದೆ. ಚುನಾವಣೆ ದಿನಾಂಕ ಪ್ರಕಟಕ್ಕೂ ಮೊದಲೇ ಎಲ್ಲಾ ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿವೆ. ಸದ್ಯ ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರವಿದೆ. ಇನ್ನು ಬಿಹಾರದಲ್ಲಿ ತನ್ನದೇ ಸಾಮರ್ಥ್ಯ ಹೊಂದಿರುವ ಲೋಕ್ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷರಾಗಿರು ಚಿರಾಗ್ ಪಾಸ್ವಾನ್ ಕೇಂದ್ರದ ಮೋದಿ ಸಂಪುಟದಲ್ಲಿದ್ದಾರೆ. ಹಾಗಾಗಿ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಈ ಎರಡು ಪಕ್ಷಗಳೊಂದಿಗೆ ಕ್ಷೇತ್ರಗಳನ್ನು ಹಂಚಿಕೊಳ್ಳಬೇಕಾಗುತ್ತದೆ.

25
ಪಕ್ಷದ ಶಕ್ತಿ ಪ್ರದರ್ಶನ
Image Credit : Chirag Pawan FB

ಪಕ್ಷದ ಶಕ್ತಿ ಪ್ರದರ್ಶನ

ಇದೀಗ ಕೇಂದ್ರ ಸಚಿವರಾಗಿರುವ ಚಿರಾಗ್ ಪಾಸ್ವಾನ್, ತಮ್ಮ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಈ ಮೂಲಕ ಕಡಿಮೆ ಕ್ಷೇತ್ರಗಳಿಗೆ ತಮ್ಮ ಒಪ್ಪಿಗೆ ಇಲ್ಲ ಎಂಬ ಸಂದೇಶವನ್ನು ಸೂಕ್ಷ್ಮವಾಗಿ ಬಿಜೆಪಿಗೆ ರವಾನಿಸುವ ಕೆಲಸವನ್ನು ಚಿರಾಗ್ ಪಾಸ್ವಾನ್ ಮಾಡಿದ್ದಾರೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ 20 ರಿಂದ 25 ಸಾವಿರ ಮತಗಳನ್ನು ನಮ್ಮ ಪಕ್ಷ ಹೊಂದಿದೆ ಎಂದಿದ್ದಾರೆ.

Related Articles

Related image1
ಬಿಹಾರ ಚುನಾವಣೆ: ಈಗಲೇ ಗ್ಯಾರಂಟಿ ಭಾಗ್ಯ ಘೋಷಣೆ
Related image2
ಚುನಾವಣೆಗೂ ಮೊದಲೇ ಮಿತ್ರ ಪಕ್ಷಕ್ಕೆ ಶಾಕ್ ಕೊಟ್ಟ ನಿತೀಶ್ ಕುಮಾರ್; ಮೋದಿಗಿಂತ ಒಂದು ಹೆಜ್ಜೆ ಮುಂದಿಟ್ಟ ಜೆಡಿಯು
35
ನನಗೆ ಕ್ವಾಲಿಟಿ ಕ್ಷೇತ್ರಗಳು ಬೇಕು
Image Credit : Chirag Pawan FB

ನನಗೆ ಕ್ವಾಲಿಟಿ ಕ್ಷೇತ್ರಗಳು ಬೇಕು

ಖಾಸಗಿ ವಾಹಿನಿಗೆ ಸಂದರ್ಶನ ನೀಡಿರುವ ಚಿರಾಗ್ ಪಾಸ್ವಾನ್, ಬಿಹಾರದ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ನನಗೆ ಕ್ವಾಲಿಟಿ ಕ್ಷೇತ್ರಗಳು ಬೇಕು, ಇದಕ್ಕಾಗಿ ನಾನು ಕಠಿಣ ಹೋರಾಟ ಮಾಡಲು ಸಿದ್ಧವಾಗಿದ್ದೇನೆ. ಕಡಿಮೆ ಅಥವಾ ಅವರು ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧೆಗೆ ನಮ್ಮ ಪಕ್ಷ ಒಪ್ಪಲ್ಲ ಎಂದಿದ್ದಾರೆ. ಚಿರಾಗ್ ಪಾಸ್ವಾನ್ ಸುಮಾರು 40 ಕ್ಷೇತ್ರಗಳನ್ನು ಕೇಳುತ್ತಿದ್ದಾರೆ ಎನ್ನಲಾಗಿದೆ. ಆದ್ರೆ ಈ ಸಂಖ್ಯೆ ಬಗ್ಗೆ ಚಿರಾಗ್ ಪಾಸ್ವಾನ್ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

45
20-25 ಸಾವಿರ ನಿರ್ಣಾಯಕ ಮತ
Image Credit : Chirag Pawan FB

20-25 ಸಾವಿರ ನಿರ್ಣಾಯಕ ಮತ

ಸಂದರ್ಶನದಲ್ಲಿ ಮುಂದುವರಿದು ಮಾತನಾಡಿರುವ ಚಿರಾಗ್ ಪಾಸ್ವಾನ್, ನಾನು ಅಡುಗೆಯಲ್ಲಿನ ಉಪ್ಪು ಇದ್ದಂತೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಲೋಕ್ ಜನಶಕ್ತಿ ಪಕ್ಷ ಕನಿಷ್ಠ 20-25 ಸಾವಿರ ನಿರ್ಣಾಯಕ ಮತಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಮತ್ತು ಜೆಡಿಯುಗೆ ಗೆಲ್ಲಲು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಬೆಂಬಲ ಬೇಕಾಗುತ್ತೆ ಎಂಬ ಮಹತ್ವದ ಸಂದೇಶ ರವಾನಿಸಿದ್ದಾರೆ.

55
ಮೂರು ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ
Image Credit : Chirag Pawan FB

ಮೂರು ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ

ಕೆಲ ಮಾಧ್ಯಮಗಳ ವರದಿ ಪ್ರಕಾರ, ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಬಿಜೆಪಿ ಕೇವಲ 25 ಕ್ಷೇತ್ರಗಳನ್ನು ನೀಡಲು ಮುಂದಾಗಿದೆಯಂತೆ. ಆದ್ರೆ ಪಾಸ್ವಾನ್ ಮಾತ್ರ ಈ ಹಂಚಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಸಿಎಂ ನಿತೀಶ್ ಕುಮಾರ್ ಹೆಚ್ಚಿನ ಪಾಲು ಜೆಡಿಯು ಪಕ್ಷದ್ದಾಗಿರಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಹಾಗಾಗಿ ಮೂರು ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಕಗ್ಗಂಟಾಗಿ ಪರಿಣಮಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬಿಹಾರ
ವಿಧಾನಸಭಾ ಚುನಾವಣೆ
ಬಿಜೆಪಿ
ರಾಜಕೀಯ ಪಕ್ಷ
ರಾಜಕೀಯ ಸುದ್ದಿ

Latest Videos
Recommended Stories
Recommended image1
Chinnu Pappu: ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?
Recommended image2
ಚಿನ್ನ ಅಡವಿಟ್ಟವರಿಗೆ ಗುಡ್ ನ್ಯೂಸ್... ಸಾಲ ಮನ್ನಾ ಬಗ್ಗೆ ಶೀಘ್ರದಲ್ಲೇ ಮಹತ್ವದ ಘೋಷಣೆ?
Recommended image3
ರಾಹುಲ್ ಗಾಂಧಿ ಹಾಗೂ ಸರ್ಕಾರದ ಮಧ್ಯೆ ಗಲಾಟೆಗೆ ಕಾರಣವಾದ ಸೇನಾ ಮುಖ್ಯಸ್ಥರ ಪ್ರಕಟವಾಗದ ಪುಸ್ತಕ: ದೆಹಲಿ ಪೊಲೀಸರಿಂದ FIR
Related Stories
Recommended image1
ಬಿಹಾರ ಚುನಾವಣೆ: ಈಗಲೇ ಗ್ಯಾರಂಟಿ ಭಾಗ್ಯ ಘೋಷಣೆ
Recommended image2
ಚುನಾವಣೆಗೂ ಮೊದಲೇ ಮಿತ್ರ ಪಕ್ಷಕ್ಕೆ ಶಾಕ್ ಕೊಟ್ಟ ನಿತೀಶ್ ಕುಮಾರ್; ಮೋದಿಗಿಂತ ಒಂದು ಹೆಜ್ಜೆ ಮುಂದಿಟ್ಟ ಜೆಡಿಯು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved