MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ತಾಯಿಯ ಜೊತೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಪ್ರಖ್ಯಾತ ಟಿವಿ ನಿರೂಪಕಿ ಆತ್ಮಹತ್ಯೆ!

ತಾಯಿಯ ಜೊತೆ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಪ್ರಖ್ಯಾತ ಟಿವಿ ನಿರೂಪಕಿ ಆತ್ಮಹತ್ಯೆ!

ಪ್ರಖ್ಯಾತ ಟಿವಿ ನಿರೂಪಕಿ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐದು ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದ ಅವರು ತಾಯಿ ಮತ್ತು ಮಗಳೊಂದಿಗೆ ವಾಸಿಸುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

2 Min read
Author : Santosh Naik
| Updated : Jun 28 2025, 02:32 PM IST
Share this Photo Gallery
  • FB
  • TW
  • Linkdin
  • Whatsapp
110
Image Credit : Instagram

ತಾಯಿಯ ಜೊತೆ ನಗರದ ಪ್ರಮುಖ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಪ್ರಖ್ಯಾತ ಟಿವಿ ನಿರೂಪಕಿ (famous tv anchor) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದ ಚಕ್ಕಡಪಲ್ಲಿಯಲ್ಲಿ (chikkadpally) ಈ ಘಟನೆ ನಡೆದಿದೆ.

210
Image Credit : Instagram

ತೆಲುಗು ಸುದ್ದಿವಾಹಿನಿಯೊಂದರ (Telugu News Anchor) ನ್ಯೂಸ್‌ ನಿರೂಪಕಿ 35 ವರ್ಷದ ಸ್ವೇಚ್ಛಾ ವೋಟರ್ಕರ್ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಅನುಸಾರ ಇದು ಆತ್ಮಹತ್ಯೆ ಆಗಿರುವ ಸಾಧ್ಯತೆ ಇದೆ ಎಂದಿದ್ದಾರೆ.

Related Articles

Related image1
ರೈತರ ಕಷ್ಟಕ್ಕಿಲ್ಲ ಸರ್ಕಾರ, ಒಂದೇ ವಾರದಲ್ಲಿ ಮೂವರ ಆತ್ಮಹತ್ಯೆ!
Related image2
'ಅವರಷ್ಟು ವಿನಮ್ರ ವ್ಯಕ್ತಿಯ ನೋಡೇ ಇಲ್ಲ..' ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಸಾವಿಗೆ ಶೋಕ ವ್ಯಕ್ತಪಡಿಸಿದ್ದರು ಶೆಫಾಲಿ!
310
Image Credit : Instagram

ಶುಕ್ರವಾರ ರಾತ್ರಿ 9.20ರ ವೇಳೆಗೆ ತಮಗೆ ಈ ಮಾಹಿತಿ ಸಿಕ್ಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಜವಾಹರ್‌ನಗರದಲ್ಲಿನ ಆರ್‌ಟಿಸಿ ಗ್ರಾಸ್‌ ರೋಡ್‌ ಶಾಲಂ ಲತಾ ನಿಲಯಂನ ಪೆಂಟ್‌ಹೌಸ್‌ನಲ್ಲಿ ಸ್ವೇಚ್ಛಾ ತನ್ನ ತಾಯಿ ಹಾಗೂ ಶಾಲೆಗೆ ಹೋಗುವ ಹೆಣ್ಣು ಮಗುವಿನ ಜೊತೆ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

410
Image Credit : Instagram

ಅಪಾರ್ಟ್‌ಮೆಂಟ್‌ನ ಬಾಗಿಲು ಒಡೆದು ಒಳಹೊಕ್ಕು ನೋಡಿದಾಗ ಸ್ವೇಚ್ಛಾ ವೋಟರ್ಕರ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಂದಾಜು ರಾತ್ರಿ 8.30ರ ವೇಳೆಗೆ ಈ ಕೃತ್ಯ ಮಾಡಿಕೊಂಡಿರಬಹುದು ಎಂದು ಅಂದಾಜಿಸಿದ್ದಾರೆ.

510
Image Credit : Instagram

ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವೇಚ್ಛಾ ಮಗಳು ಸಂಜೆ ಶಾಲೆಯಿಂದ ಮನೆಗೆ ಹಿಂದಿರುಗಿದ ನಂತರ, ಬೆಡ್‌ರೂಮ್‌ ಬಾಗಿಲನ್ನು ಪದೇ ಪದೇ ತಟ್ಟಿದಾಗ ಒಳಗಿನಿಂದ ಯಾವುದೇ ಉತ್ತರ ಬಂದಿರಲಿಲ್ಲ. ಗಾಬರಿಗೊಂಡ ಮಗು ನೆರೆಹೊರೆಯವರಿಗೆ ಮಾಹಿತಿ ನೀಡಿತು, ನಂತರ ಅವರು ಬಾಗಿಲನ್ನು ಬಲವಂತವಾಗಿ ತೆರೆದಾಗ ಶ್ವೇತಾಳ ಒಳಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

610
Image Credit : Instagram

ಘಟನಾ ಸ್ಥಳಕ್ಕೆ ತಕ್ಷಣವೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಯಿತು, ಆದರೆ ವೈದ್ಯರು ಸ್ವೇಚ್ಛಾಅದಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ವಿಷಯ ತಿಳಿದ ಸ್ವಲ್ಪ ಹೊತ್ತಿನಲ್ಲೇ ಚಿಕ್ಕಡಪಲ್ಲಿ ಪೊಲೀಸರು ಆಗಮಿಸಿ ಆಕೆಯ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ತನಿಖೆ ಆರಂಭಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು.

710
Image Credit : Instagram

ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಐದು ವರ್ಷದ ಹಿಂದೆ ತನ್ನ ಪತಿಗೆ ಈಕೆ ವಿಚ್ಛೇದನ ನೀಡಿದ್ದಳು. ಆ ಬಳಿಕ ತನ್ನ 14 ವರ್ಷದ ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದಳು ಎನ್ನಲಾಗಿದೆ.

810
Image Credit : Instagram

ಪತ್ರಕರ್ತ ವಸತಿ ಸಮಾಜದ ಚುನಾವಣೆಯಲ್ಲಿ ಅವರು ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಸ್ವೇಚ್ಛಾ ಸಾವಿನ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಚಿಕ್ಕಡಪಲ್ಲಿ ಇನ್ಸ್‌ಪೆಕ್ಟರ್ ರಾಜುನಾಯಕ್ ತಿಳಿಸಿದ್ದಾರೆ.

910
Image Credit : Instagram

ಸ್ವೇಚ್ಛಾ ಅವರ ತಾಯಿ ರಾಮನಗರದಲ್ಲಿ ವಾಸವಿದ್ದರು. ಆಕೆಯ ತಂದೆ ಶಂಕರ್‌ ಪಿಡಿಎಸ್‌ಯು ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆಕೆಯ ತಾಯಿ ಶ್ರೀದೇವಿ, ಚೈತನ್ಯ ಮಹಿಳಾ ಸಂಘದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

1010
Image Credit : Instagram

ಸ್ವೇಚ್ಛಾ ನ್ಯೂಸ್‌ ರೀಡರ್‌, ಪ್ರೆಸೆಂಟರ್‌ ಹಾಗೂ ಸಾಕಷ್ಟು ನ್ಯೂಸ್‌ ಚಾನೆಲ್‌ಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದರು. ಅದಲ್ಲದೆ, ಡಿಜಿಟಲ್‌ ಕಂಟೆಂಟ್‌ ಕ್ರಿಯೇಟರ್‌ ಆಗಿಯೂ ಹೆಸರು ವಾಸಿಯಾಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಆಂಧ್ರ ಪ್ರದೇಶ
ತೆಲಂಗಾಣ
ಆತ್ಮಹತ್ಯೆ
ಕ್ರೈಮ್ ನ್ಯೂಸ್
ಭಾರತ ಸುದ್ದಿ

Latest Videos
Recommended Stories
Recommended image1
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
Recommended image2
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು
Recommended image3
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ
Related Stories
Recommended image1
ರೈತರ ಕಷ್ಟಕ್ಕಿಲ್ಲ ಸರ್ಕಾರ, ಒಂದೇ ವಾರದಲ್ಲಿ ಮೂವರ ಆತ್ಮಹತ್ಯೆ!
Recommended image2
'ಅವರಷ್ಟು ವಿನಮ್ರ ವ್ಯಕ್ತಿಯ ನೋಡೇ ಇಲ್ಲ..' ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌ ಸಾವಿಗೆ ಶೋಕ ವ್ಯಕ್ತಪಡಿಸಿದ್ದರು ಶೆಫಾಲಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved