MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ಮಚ್ಚು-ಲಾಂಗು ಹಿಡಿದು ಇಡೀ ಏರಿಯಾಗೆ ಬೆದರಿಸಿದ ಅನ್ಯಕೋಮಿನ ಪುಂಡರು!

ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ಮಚ್ಚು-ಲಾಂಗು ಹಿಡಿದು ಇಡೀ ಏರಿಯಾಗೆ ಬೆದರಿಸಿದ ಅನ್ಯಕೋಮಿನ ಪುಂಡರು!

ಬೆಂಗಳೂರಿನ ಹೆಣ್ಣೂರಿನಲ್ಲಿ ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ಶುರುವಾದ ಸಣ್ಣ ಜಗಳವು, ಐವರ ಗುಂಪೊಂದು ಮಚ್ಚು-ಲಾಂಗುಗಳಿಂದ ಬಡಾವಣೆಯ ನಿವಾಸಿಗಳಿಗೆ ಪ್ರಾಣ ಬೆದರಿಕೆ ಹಾಕುವಷ್ಟರ ಮಟ್ಟಿಗೆ ಉಲ್ಬಣಗೊಂಡಿದೆ. ಈ ದಾಂಧಲೆಯಿಂದ ಬೆಚ್ಚಿಬಿದ್ದ ಸ್ಥಳೀಯರು, ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

2 Min read
Author : Sathish Kumar KH
Published : Oct 20 2025, 10:05 PM IST
Share this Photo Gallery
  • FB
  • TW
  • Linkdin
  • Whatsapp
16
ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ರೌಡಿಸಂ
Image Credit : Asianet News

ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ರೌಡಿಸಂ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮನೆಯ ಮುಂದೆ ಪಟಾಕಿ ಹೊಡೆಯುತ್ತಿದ್ದ ವೇಳೆ ಸಣ್ಣ ಕಿಡಿಯೊಂದು ಸಿಡಿದಿದ್ದಕ್ಕೆ ಅನ್ಯಕೋಮಿನ ಐವರು ಸೇರಿಕೊಂಡು ಮಚ್ಚು-ಲಾಂಗು ಹಿಡಿದ ಇಡೀ ಏರಿಯಾದಲ್ಲಿನ ಎಲ್ಲ ಜನರಿಗೆ ಪ್ರಾಣ ಬೆದರಿಕೆ ಹಾಕಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

26
ಬೆಚ್ಚಿಬಿದ್ದ ಹೆಣ್ಣೂರು ಬಡಾವಣೆಯ ನಿವಾಸಿಗಳು
Image Credit : Asianet News

ಬೆಚ್ಚಿಬಿದ್ದ ಹೆಣ್ಣೂರು ಬಡಾವಣೆಯ ನಿವಾಸಿಗಳು

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಅಟ್ಟಹಾಸದಿಂದ ಹೆಣ್ಣೂರು ಬಡಾವಣೆಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ಸ್ಥಳೀಯರ ಧೈರ್ಯದಿಂದ ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ತಡರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹೆಣ್ಣೂರು ಬಡಾವಣೆಯ ದೊಡ್ಡೆರಾಮಣ್ಣ ಬಡಾವಣೆ ಬಳಿ ನಡೆದಿದೆ. ಸರ್ವಜ್ಞನಗರ ನಿವಾಸಿಗಳೆನ್ನಲಾದ ಐವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು.

Related Articles

Related image1
ದೀಪಾವಳಿ ಮೊದಲ ದಿನವೇ ಪಟಾಕಿ ಅವಘಡ, ಬಾಲಕ ಸೇರಿ ಇಬ್ಬರ ಕಣ್ಣಿಗೆ ಗಾಯ
Related image2
ಪರಪ್ಪನ ಅಗ್ರಹಾರದಲ್ಲಿ ನಟಿ ಪವಿತ್ರಾ ಗೌಡ ಕಣ್ಣೀರು: ಮಗಳೊಂದಿಗೆ ದೀಪಾವಳಿ ಹಬ್ಬ ಮಾಡಲಾಗದೇ ಸಂಕಟ
36
ಪಟಾಕಿ ಕಿಡಿಯಿಂದ ಶುರುವಾದ ಗಲಾಟೆ
Image Credit : Asianet News

ಪಟಾಕಿ ಕಿಡಿಯಿಂದ ಶುರುವಾದ ಗಲಾಟೆ

ಈ ದಾಂಧಲೆಗೆ ಕಾರಣವಾದ ಸಣ್ಣ ವಿಷಯವು ಪಟಾಕಿ ಹೊಡೆಯುವ ವಿಚಾರವಾಗಿದೆ. ಆರೋಪಿಗಳಲ್ಲಿ ಒಬ್ಬನಾದ ಅಮೀನ್ ಷರೀಫ್ ರಾತ್ರಿ 10 ಗಂಟೆ ಸುಮಾರಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಸ್ಥಳೀಯರು ಹೊಡೆಯುತ್ತಿದ್ದ ಪಟಾಕಿಯ ಸಣ್ಣ ಕಿಡಿಯೊಂದು ಷರೀಫ್‌ಗೆ ತಾಗಿತ್ತು ಎನ್ನಲಾಗಿದೆ. ಇದರಿಂದಾಗಿ ಅದೇ ಸ್ಥಳದಲ್ಲಿ ಷರೀಫ್ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ಶುರುವಾಯಿತು.

46
ಮಚ್ಚು ಲಾಂಗ್ ಸಮೇತ ಗ್ಯಾಂಗ್ ಕರ್ಕೊಂಡು ಬಂದ:
Image Credit : Asianet News

ಮಚ್ಚು ಲಾಂಗ್ ಸಮೇತ ಗ್ಯಾಂಗ್ ಕರ್ಕೊಂಡು ಬಂದ:

ಸಣ್ಣ ಗಲಾಟೆ ನಡೆದ ಕೆಲವೇ ನಿಮಿಷಗಳಲ್ಲಿ ಷರೀಫ್ ತನ್ನ ಸಹಚರರನ್ನು ಮತ್ತು ಸಂಬಂಧಿಕರನ್ನು ಕರೆದುಕೊಂಡು ಮಾರಕಾಸ್ತ್ರಗಳಾದ ಲಾಂಗು ಮತ್ತು ಮಚ್ಚುಗಳೊಂದಿಗೆ ವಾಪಸ್ ಬಂದಿದ್ದಾರೆ. ಬಂದ ಕೂಡಲೇ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ, ಕೆಲವರಿಗೆ ಹೆದರಿಸಿ-ಬೆದರಿಸಿದ್ದಾರೆ. ಮಾರಕಾಸ್ತ್ರಗಳೊಂದಿಗೆ ರಸ್ತೆಯಲ್ಲಿ ಪುಂಡರು ದಾಂಧಲೆ ನಡೆಸುತ್ತಿದ್ದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದಾರೆ.

56
ಮೂವರು ಪುಡಿ ರೌಡಿಗಳ ಬಂಧನ:
Image Credit : Asianet News

ಮೂವರು ಪುಡಿ ರೌಡಿಗಳ ಬಂಧನ:

ಪುಡಿ ರೌಡಿಗಳ ಈ ಕೃತ್ಯದಿಂದ ಹೆದರದ ಸ್ಥಳೀಯ ಯುವಕರು ಒಂದಾಗಿ, ದಾಂಧಲೆ ನಡೆಸುತ್ತಿದ್ದ ಆರೋಪಿಗಳನ್ನು ಹಿಡಿದಿದ್ದಾರೆ. ಬಳಿಕ ಈ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಮೀನ್ ಷರೀಫ್, ಸೈಯದ್ ಅರ್ಬಾಸ್ ಮತ್ತು ಶೀದ್ ಖಾದರ್ ಎಂದು ಗುರುತಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

66
ಹವಾ ಮೆಂಟೇನ್ ಮಾಡಲು ಕೃತ್ಯ:
Image Credit : Asianet News

ಹವಾ ಮೆಂಟೇನ್ ಮಾಡಲು ಕೃತ್ಯ:

ಕಿರಣ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ವೇಳೆ, ಆರೋಪಿಗಳು ಏರಿಯಾದಲ್ಲಿ ತಮ್ಮ 'ಹವಾ ಮೇಂಟೇನ್' ಮಾಡಲು ಈ ಕೃತ್ಯವನ್ನು ಎಸಗಿದ್ದಾರೆ ಎಂಬುದು ತಿಳಿದುಬಂದಿದೆ. ಪೊಲೀಸರು ಆರೋಪಿಗಳ ವಿರುದ್ಧ ಆರ್ಮ್ಸ್ ಆ್ಯಕ್ಟ್ (Arms Act) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು
ಬೆಂಗಳೂರು ನಗರ
ಕ್ರೈಮ್ ನ್ಯೂಸ್
ದೀಪಾವಳಿ

Latest Videos
Recommended Stories
Recommended image1
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
Recommended image2
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
Recommended image3
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ
Related Stories
Recommended image1
ದೀಪಾವಳಿ ಮೊದಲ ದಿನವೇ ಪಟಾಕಿ ಅವಘಡ, ಬಾಲಕ ಸೇರಿ ಇಬ್ಬರ ಕಣ್ಣಿಗೆ ಗಾಯ
Recommended image2
ಪರಪ್ಪನ ಅಗ್ರಹಾರದಲ್ಲಿ ನಟಿ ಪವಿತ್ರಾ ಗೌಡ ಕಣ್ಣೀರು: ಮಗಳೊಂದಿಗೆ ದೀಪಾವಳಿ ಹಬ್ಬ ಮಾಡಲಾಗದೇ ಸಂಕಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved