MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ

ದಾವಣಗೆರೆ ರಾಟ್‌ವೀಲರ್ ನಾಯಿಗಳ ಡೆಡ್ಲಿ ಅಟ್ಯಾಕ್; 50ಕ್ಕೂ ಹೆಚ್ಚು ಕಡೆ ಕಚ್ಚಿಸಿಕೊಂಡ ಮಹಿಳೆ ದುರ್ಮರಣ

ದಾವಣಗರ ತಾಲೂಕಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ರಾಟ್‌ ವೀಲರ್ ನಾಯಿಗಳು ಮಾರಣಾಂತಿಕ ದಾಳಿ ನಡೆಸಿವೆ. ಈ ಘಟನೆಯಲ್ಲಿ ಅನಿತಾ ಎಂಬ ಮಹಿಳೆ ಗಾಯಗೊಂಡು ಸಾವನ್ನಪ್ಪಿದ್ದಾರೆ.

2 Min read
Author : Sathish Kumar KH
Published : Dec 05 2025, 07:38 PM IST
Share this Photo Gallery
  • FB
  • TW
  • Linkdin
  • Whatsapp
18
ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ
Image Credit : Asianet News

ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ

ದಾವಣಗೆರೆ ತಾಲೂಕಿನಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಕಾಳಜಿ ವಹಿಸದೆ ರಸ್ತೆಯಲ್ಲಿ ಬಿಡಲಾಗಿದ್ದ ರಾಟ್‌ವೀಲರ್ (Rottweiler) ನಾಯಿಗಳ ದಾಳಿಗೆ ವಿವಾಹಿತೆಯೊಬ್ಬರು ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದಾಳಿಯಿಂದ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು, ದಾಳಿ ಮಾಡಿದ ನಾಯಿಗಳನ್ನು ಹಗ್ಗದಿಂದ ಕಟ್ಟಿ ಬೀದಿಯಲ್ಲಿ ಎಳೆದುಕೊಂಡು ಹೋಗಿದ್ದಾರೆ.

28
ಅನಿತಾ ಮೃತ ಮಹಿಳೆ
Image Credit : Asianet News

ಅನಿತಾ ಮೃತ ಮಹಿಳೆ

ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಅನಿತಾ (38) ಮೃತ ದುರ್ದೈವಿ. ಘಟನೆ ದಾವಣಗೆರೆ ತಾಲೂಕಿನ ವನ್ನೂರು ಹೊರವಲಯ ಮತ್ತು ಹೊನ್ನೂರು ಗೊಲ್ಲರಹಟ್ಟಿ ಬಳಿ ಕಳೆದ ರಾತ್ರಿ 11:30 ರ ಸುಮಾರಿಗೆ ನಡೆದಿದೆ.

Related Articles

Related image1
ಮಹಿಳೆ ಮೇಲೆ ಸಾಕು ನಾಯಿ ದಾಳಿ: ಕ್ಷಮೆ ಬದಲು ಸಂತ್ರಸ್ತೆಯ ಕೆನ್ನೆಗೆ ಹೊಡೆದ ನಾಯಿ ಮಾಲಕಿ
Related image2
ಅಂಗಡಿ ಎದುರಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಭೀಕರ ದಾಳಿ ಮಾಡಿ ಕಣ್ಣಗುಡ್ಡೆ ಕಿತ್ತು ಸಾಯಿಸಿದ ಬೀದಿ ನಾಯಿ!
38
ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್
Image Credit : Asianet News

ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆ ಮೇಲೆ ಡೆಡ್ಲಿ ಅಟ್ಯಾಕ್

ಅನಿತಾ ಅವರು ಕಳೆದ ರಾತ್ರಿ ತಮ್ಮ ಮಕ್ಕಳೊಂದಿಗೆ ಜಗಳವಾಡಿ ಬೇಸರಗೊಂಡು, ತಮ್ಮ ಮಲ್ಲಶೆಟ್ಟಿಹಳ್ಳಿ ಗ್ರಾಮದ ಮನೆಯಿಂದ ನಡೆದುಕೊಂಡು ತವರು ಮನೆ ವಡ್ಡನಹಳ್ಳಿಗೆ ಹೊರಟಿದ್ದರು. ವನ್ನೂರು ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಯಾರೋ ಆಗುಂತಕರು ಬಿಟ್ಟು ಹೋಗಿದ್ದ ರಾಟ್‌ವೀಲರ್‌ ನಾಯಿಗಳು ಏಕಾಏಕಿ ಅವರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿವೆ.

48
50ಕ್ಕೂ ಹೆಚ್ಚು ಕಡೆ ಕಚ್ಚಿದ ನಾಯಿ
Image Credit : Asianet News

50ಕ್ಕೂ ಹೆಚ್ಚು ಕಡೆ ಕಚ್ಚಿದ ನಾಯಿ

ವರದಿಗಳ ಪ್ರಕಾರ, ಈ ನಾಯಿಗಳು ಅನಿತಾ ಅವರ ದೇಹದ ಮೇಲೆ ಸುಮಾರು 50ಕ್ಕೂ ಹೆಚ್ಚು ಕಡೆ ಕಚ್ಚಿ ವಿಕೃತವಾಗಿ ಗಾಯಗೊಳಿಸಿವೆ. ರಕ್ತಸ್ರಾವದಿಂದಾಗಿ ತೀವ್ರ ಅಸ್ವಸ್ಥರಾದ ಅನಿತಾ ಅವರು ಸ್ಥಳದಲ್ಲೇ ಬಿದ್ದು ಒದ್ದಾಡುತ್ತಿದ್ದರು.

58
ಚಿಕಿತ್ಸೆ ಫಲಕಾರಿಯಾಗದೆ ಸಾವು
Image Credit : Asianet News

ಚಿಕಿತ್ಸೆ ಫಲಕಾರಿಯಾಗದೆ ಸಾವು

ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದರೂ, ವಿಷಯ ಗ್ರಾಮಸ್ಥರಿಗೆ ತಿಳಿದಿದ್ದು ಬೆಳಗಿನ ಜಾವ 3:30ರ ಸುಮಾರಿಗೆ. ತಕ್ಷಣವೇ ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ಅನಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲು ಹೊರಟರು. ಆದರೆ, ದಾರಿಯಲ್ಲಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಳಿ ಅನಿತಾ ಕೊನೆಯುಸಿರೆಳೆದರು.

68
ಶಿರಾ ಸರ್ಕಾರಿ ಆಸ್ಪತ್ರೆಯ ಶವಾಗಾರ
Image Credit : Asianet News

ಶಿರಾ ಸರ್ಕಾರಿ ಆಸ್ಪತ್ರೆಯ ಶವಾಗಾರ

ಪ್ರಸ್ತುತ ಮೃತ ಮಹಿಳೆಯ ಶವವು ತುಮಕೂರು ಜಿಲ್ಲೆ ಶಿರಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿದೆ. ಅಲ್ಲಿ ಮರಣೋತ್ತರ ಪರೀಕ್ಷೆ (Post Mortem) ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ.

78
ನಾಯಿಗಳನ್ನು ಎಳೆದುತಂದ ಗ್ರಾಮಸ್ಥರು
Image Credit : Asianet News

ನಾಯಿಗಳನ್ನು ಎಳೆದುತಂದ ಗ್ರಾಮಸ್ಥರು

ಈ ಭೀಕರ ದಾಳಿಯಿಂದ ತೀವ್ರ ಆಕ್ರೋಶಗೊಂಡ ಹೊನ್ನೂರು ಗೊಲ್ಲರಹಟ್ಟಿ ಮತ್ತು ಮಲ್ಲಶೆಟ್ಟಿಹಳ್ಳಿ ಗ್ರಾಮಸ್ಥರು, ದಾಳಿಗೆ ಕಾರಣವಾದ ರಾಟ್‌ವೀಲರ್‌ ನಾಯಿಗಳನ್ನು ಹಿಡಿದು, ಹಗ್ಗ ಕಟ್ಟಿ ಕೋಲಿಗೆ ಬಿಗಿದು ಗ್ರಾಮದ ಬೀದಿಗಳಲ್ಲಿ ಎಳೆದುಕೊಂಡು ಹೋಗಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಅಪಾಯಕಾರಿ ನಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ಹೋದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

88
ನಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ಹೋದ ಆಗುಂತಕರು
Image Credit : Asianet News

ನಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ಹೋದ ಆಗುಂತಕರು

ಈ ಘಟನೆ ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ನಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ಹೋದ ಆಗುಂತಕರನ್ನು ಮತ್ತು ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ದಾವಣಗೆರೆ
ನಾಯಿ
ನಾಯಿ ದಾಳಿ
ಮಹಿಳೆಯರು

Latest Videos
Recommended Stories
Recommended image1
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
Recommended image2
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Recommended image3
Karnataka News Live: ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು - Jaya Bachchan ಬಾಯ್ಕಾಟ್‌ ಆಗ್ತಾರಾ?
Related Stories
Recommended image1
ಮಹಿಳೆ ಮೇಲೆ ಸಾಕು ನಾಯಿ ದಾಳಿ: ಕ್ಷಮೆ ಬದಲು ಸಂತ್ರಸ್ತೆಯ ಕೆನ್ನೆಗೆ ಹೊಡೆದ ನಾಯಿ ಮಾಲಕಿ
Recommended image2
ಅಂಗಡಿ ಎದುರಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಭೀಕರ ದಾಳಿ ಮಾಡಿ ಕಣ್ಣಗುಡ್ಡೆ ಕಿತ್ತು ಸಾಯಿಸಿದ ಬೀದಿ ನಾಯಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved