MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು

ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು

ಮಹೇಶ್ ಶೆಟ್ಟಿ ತಿಮರೋಡಿ, ಕೆಲವು ದಿನಗಳಿಂದ ನಾಪತ್ತೆಯಾದ ನಂತರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ.

1 Min read
Author : Mahmad Rafik
Published : Nov 03 2025, 11:23 AM IST
Share this Photo Gallery
  • FB
  • TW
  • Linkdin
  • Whatsapp
14
ಮಹೇಶ್ ಶೆಟ್ಟಿ ತಿಮರೋಡಿ
Image Credit : Asianet News

ಮಹೇಶ್ ಶೆಟ್ಟಿ ತಿಮರೋಡಿ

ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿಯೂ ಮಹೇಶ್ ಶೆಟ್ಟಿ ತಿಮರೋಡಿ ಹೆಸರು ಕೇಳಿ ಬಂದಿದೆ

24
ಧರ್ಮಸ್ಥಳದ ಬುರುಡೆ ಷಡ್ಯಂತ್ರ
Image Credit : Asianet News

ಧರ್ಮಸ್ಥಳದ ಬುರುಡೆ ಷಡ್ಯಂತ್ರ

ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣಕ್ಕೆ ಸಂಬಂಧ ಮಹೇಶ್‌ ಶೆಟ್ಟಿ ತಿಮರೋಡಿ ಸೇರಿ ನಾಲ್ವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ ಜಾರಿ ಮಾಡಿತ್ತು. ವಿಚಾರಣೆಗೆ ಹಾಜರಾಗದಿದ್ರೆ ಬಂಧನದ ಎಚ್ಚರಿಕೆ ನೀಡಿತ್ತು. ಬಿಎನ್‌ಎಸ್ಎಸ್ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿತ್ತು.

Related Articles

Related image1
ಧರ್ಮಸ್ಥಳ ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ: ಸಂಸದ ಯದುವೀರ್ ಒಡೆಯರ್ ಕಿಡಿ
Related image2
Dharmasthala Burude Gang: ಇದನ್ನೇ ನಾವು ಬಡ್ಕೊಂಡಿದ್ದು, ಅವರು ಹೇಳ್ತಿರೋದು ಸುಳ್ಳು: ಕಿರಿಕ್ ಕೀರ್ತಿ
34
ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ
Image Credit : Social Media

ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ

ಸುಮಾರು ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದ್ರೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್, ತಿಮರೋಡಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಕೋರ್ಟ್ ಮೆಟ್ಟಿಲಲ್ಲಿ ಅಣ್ಣಪ್ಪ ತೀರ್ಪು ನೀಡ್ತಾನೆ: ಬುರುಡೆ ಗ್ಯಾಂಗ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಆಕ್ರೋಶ

44
ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ದಾಖಲಾದ ಐದು ಪ್ರಕರಣ
Image Credit : ‍X

ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ದಾಖಲಾದ ಐದು ಪ್ರಕರಣ

1. ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ, ಕ್ಯಾಮರಾಮೆನ್ ಮೇಲೆ ಹಲ್ಲೆ ಸೇರಿ ಐದು ಕೇಸ್ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ದಾಖಲಾಗಿದೆ.

2. 100ಕ್ಕೂ ಅಧಿಕ ಜನರು ಸೇರಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿ ದೊಂಬಿ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರ ಸ್ವಯಂ ಪ್ರೇರಿತ ಕೇಸು

3. ಯೂ ಟ್ಯೂಬ್ ನಲ್ಲಿ ಪ್ರಚೋದನಕಾರಿ ಹೇಳಿಕೆ ಹಿನ್ನೆಲೆ ಚರಣ್ ಎಂಬವರ ದೂರಿನಡಿ ದಾಖಲಾದ ಎಫ್ಐಆರ್

4. ಮನೆಯಲ್ಲಿ ‌ಅಕ್ರಮ ಶಸ್ತ್ರಾಸ್ತ್ರ ಸಿಕ್ಕಿದ ಹಿನ್ನೆಲೆ ಎಸ್ಐಟಿ ಎಸ್ಪಿ ಸೈಮನ್ ದೂರಿನಡಿ ದಾಖಲಾದ ಎಫ್ಐಆರ್

5. ಬ್ರಹ್ಮಾವರ ಪೊಲೀಸ್‌ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಲು ಬಂದಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕೇಸು

ಇದನ್ನೂ ಓದಿ: ನ.12ರವರೆಗೂ ಧರ್ಮಸ್ಥಳ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ತಡೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಧರ್ಮಸ್ಥಳ
ಮಹೇಶ್ ಶೆಟ್ಟಿ ತಿಮರೋಡಿ
ಎಸ್.ಐ.ಟಿ.

Latest Videos
Recommended Stories
Recommended image1
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
Recommended image2
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
Recommended image3
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
Related Stories
Recommended image1
ಧರ್ಮಸ್ಥಳ ಕೇಸ್ ಕೊಟ್ಟವರ ಒಂದೊಂದೇ ಬಣ್ಣ ಈಗ ಬಯಲಾಗುತ್ತಿದೆ: ಸಂಸದ ಯದುವೀರ್ ಒಡೆಯರ್ ಕಿಡಿ
Recommended image2
Dharmasthala Burude Gang: ಇದನ್ನೇ ನಾವು ಬಡ್ಕೊಂಡಿದ್ದು, ಅವರು ಹೇಳ್ತಿರೋದು ಸುಳ್ಳು: ಕಿರಿಕ್ ಕೀರ್ತಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved