Hassan: ಕಲ್ಯಾಣಕ್ಕೆ ವಧು ಸಿಗದ್ದಕ್ಕೆ ಕಲ್ಯಾಣಿಗೆ ಬಿದ್ದು ಪ್ರಾಣ ಬಿಟ್ಟ ಹಾಸನದ ಯುವಕ
ಹಾಸನ ಜಿಲ್ಲೆಯ ಬೇಲೂರಿನಲ್ಲಿ, ಮದುವೆಯಾಗಲು ಹೆಣ್ಣು ಸಿಗದ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ವಧು ಹುಡುಕಾಟದಲ್ಲಿದ್ದ ಪದವೀಧರ ವಿನಯ್, ಪೋಷಕರು ಬೈದಿದ್ದರಿಂದಲೂ ನೊಂದಿದ್ದ ಎಂದು ಹೇಳಲಾಗಿದೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣ
ನಾಲ್ಕು ವರ್ಷದಿಂದ ಮದುವೆಯಾಗಲು ಹೆಣ್ಣು ಹುಡುಕಿದ್ರೂ ಯುವಕನಿಗೆ ಹುಡುಗಿ ಸಿಕ್ಕಿರಲಿಲ್ಲ. ಇದರಿಂದ ನೊಂದ ಯುವಕ ಕಲ್ಯಾಣಿಗೆ ಧುಮುಕಿ ಪ್ರಾಣ ಕಳೆದುಕೊಂಡಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಕಲ್ಯಾಣಿ
ನಾಗರಾಜ್-ಪದ್ಮಾ ಎಂಬವರು ಪುತ್ರ 35 ವರ್ಷದ ವಿನಯ್ ಆತ್ಮಹ*ತ್ಯೆಗೆ ಶರಣಾದ ಯುವಕ. ವಿಷ್ಣು ಸಮುದ್ರ ಕೆರೆಯ ಪಕ್ಕದಲ್ಲಿರುವ ಕಲ್ಯಾಣಿಯಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲೂಕಿನ ಗುಡ್ದೂರು ಗ್ರಾಮದ ನಿವಾಸಿಯಾಗಿದ್ದ ವಿನಯ್, ಕಳೆದ ಹತ್ತು ವರ್ಷಗಳಿಂದ ಬೇಲೂರು ಪಟ್ಟಣದ ಶಂಕರದೇವರ ಪೇಟೆಯಲ್ಲಿ ವಾಸವಿದ್ದನು.
ನಾಲ್ಕು ವರ್ಷಗಳಿಂದ ಹುಡುಕಾಟ
ಪದವಿಧರನಾಗಿದ್ದ ವಿನಯ್, ಬೇಲೂರಿನಲ್ಲಿ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದನು. ಹುಡುಗಿ ಸಿಗದ ಹಿನ್ನೆಲೆಯಲ್ಲಿ ವಿನಯ್ ಮನನೊಂದಿದ್ದ ಎಂದು ತಿಳಿದು ಬಂದಿದೆ. ಇದರಿಂದ ಕಳೆದ ಒಂದು ವಾರದಿಂದ ಕೆಲಸಕ್ಕೂ ಹೋಗದೇ ವಿನಯ್ ಮನೆಯಲ್ಲಿದ್ದನು.
ಸ್ಥಳಕ್ಕೆ ಪೊಲೀಸರ ಭೇಟಿ
ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದಿದ್ರರಿಂದ ಪೋಷಕರು ಬೈದಿದ್ದರು. ಈ ಎಲ್ಲಾ ಘಟನೆಗಳಿಂದ ನೊಂದ ವಿನಯ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯ ಮೀನುಗಾರರ ಸಹಾಯದಿಂದ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಪಿಎಸ್ಐ ಪಾಟೀಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

