MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮನೆ-ಮನೆ ಜಾತಿ ಗಣತಿಗೆ ಹೋದ ಸರ್ಕಾರಿ ಶಾಲೆಯ ಟೀಚರ್ ದಾರಿ ಮಧ್ಯದಲ್ಲಿಯೇ ಸಾವು!

ಮನೆ-ಮನೆ ಜಾತಿ ಗಣತಿಗೆ ಹೋದ ಸರ್ಕಾರಿ ಶಾಲೆಯ ಟೀಚರ್ ದಾರಿ ಮಧ್ಯದಲ್ಲಿಯೇ ಸಾವು!

ಬಾಗಲಕೋಟೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯವನ್ನು ಮುಗಿಸಿ ಮಗನೊಂದಿಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದ ಶಿಕ್ಷಕಿ ದಾನಮ್ಮ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಸರ್ಕಾರಿ ನೌಕರರಲ್ಲಿ ಆತಂಕ ಸೃಷ್ಟಿಸಿದೆ.

1 Min read
Author : Sathish Kumar KH
Published : Oct 03 2025, 09:25 PM IST
Share this Photo Gallery
  • FB
  • TW
  • Linkdin
  • Whatsapp
15
ಜಾತಿ ಗಣತಿಗೆ ಹೋದ ದಾನಮ್ಮ ಟೀಚರ್ ಸಾವು
Image Credit : Asianet News

ಜಾತಿ ಗಣತಿಗೆ ಹೋದ ದಾನಮ್ಮ ಟೀಚರ್ ಸಾವು

ಬಾಗಲಕೋಟೆ (ಅ.03): ರಾಜ್ಯದಲ್ಲಿ ಪ್ರಗತಿಯಲ್ಲಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯವನ್ನು ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಈ ದುರಂತ ಘಟನೆಯು ಬಾಗಲಕೋಟೆ ಜಿಲ್ಲೆಯಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

25
ಬೈಕ್ ನಿಯಂತ್ರಣ ತಪ್ಪಿ ಬಿದ್ದು ದುರಂತ
Image Credit : Asianet News

ಬೈಕ್ ನಿಯಂತ್ರಣ ತಪ್ಪಿ ಬಿದ್ದು ದುರಂತ

ಮೃತ ಶಿಕ್ಷಕಿಯನ್ನು ಬಾಗಲಕೋಟೆ ತಾಲ್ಲೂಕಿನ ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ದಾನಮ್ಮ ಯಡಹಳ್ಳಿ (51) ಎಂದು ಗುರುತಿಸಲಾಗಿದೆ. ದಾನಮ್ಮ ಯಡಹಳ್ಳಿ ಅವರು ಬಾಗಲಕೋಟೆ ತಾಲ್ಲೂಕಿನ ಸೀತಿಮನಿ ಗ್ರಾಮಕ್ಕೆ ಸಮೀಕ್ಷಾ ಕಾರ್ಯಕ್ಕಾಗಿ ಹೋಗಿದ್ದರು. ಸಮೀಕ್ಷೆಯನ್ನು ಪೂರ್ಣಗೊಳಿಸಿ, ತಮ್ಮ ಮಗನ ಜೊತೆ ಬೈಕ್‌ನಲ್ಲಿ ಬಾಗಲಕೋಟೆ ಕಡೆಗೆ ಹಿಂತಿರುಗುತ್ತಿದ್ದರು. ಈ ವೇಳೆ, ಬೋಡನಾಯಕನದಿನ್ನಿ ಕ್ರಾಸ್ ಬಳಿ ಬೈಕ್ ಚಾಲನೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ.

Related Articles

Related image1
ರಾಜ್ಯದ ಜಾತಿ ಗಣತಿ ಹಿಂದುಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುತ್ತೆ: ಪ್ರಲ್ಹಾದ್‌ ಜೋಶಿ
Related image2
ಬೆಂಗಳೂರು ನಗರದಲ್ಲಿ ನಾಳೆಯಿಂದ ಜಾತಿ ಗಣತಿ ಆರಂಭ
35
ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವು
Image Credit : Asianet News

ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವು

ಬೈಕ್‌ನಿಂದ ಕೆಳಗೆ ಬಿದ್ದ ದಾನಮ್ಮ ಯಡಹಳ್ಳಿ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

45
ಕರ್ತವ್ಯ ನಿರ್ವಹಿಸುವಾಗ ಸಂಭವಿಸಿದ ದುರಂತ
Image Credit : Asianet News

ಕರ್ತವ್ಯ ನಿರ್ವಹಿಸುವಾಗ ಸಂಭವಿಸಿದ ದುರಂತ

ರಾಜ್ಯ ಸರ್ಕಾರದ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆಯ ಕೆಲಸದಲ್ಲಿ ದಾನಮ್ಮ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಕಠಿಣವಾದ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿರುವುದು, ಸಮೀಕ್ಷೆಗೆ ನಿಯೋಜನೆಗೊಂಡಿರುವ ಇತರೆ ಸಿಬ್ಬಂದಿ ವರ್ಗದಲ್ಲಿ ಆತಂಕ ಮೂಡಿಸಿದೆ. ಸರ್ಕಾರಿ ಕರ್ತವ್ಯದ ಸಮಯದಲ್ಲಿ ಈ ದುರಂತ ಸಂಭವಿಸಿದ್ದು, ಶಿಕ್ಷಕಿಯ ಕುಟುಂಬಸ್ಥರಿಗೆ ದೊಡ್ಡ ಆಘಾತವನ್ನುಂಟು ಮಾಡಿದೆ.

55
ಶಾಲೆ, ಸಮೀಕ್ಷಾ ಸಿಬ್ಬಂದಿ ಸಂತಾಪ
Image Credit : Asianet News

ಶಾಲೆ, ಸಮೀಕ್ಷಾ ಸಿಬ್ಬಂದಿ ಸಂತಾಪ

ಶಿಕ್ಷಕಿ ದಾನಮ್ಮ ಅವರ ನಿಧನಕ್ಕೆ ಶಾಲಾ ಸಿಬ್ಬಂದಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಮೀಕ್ಷಾ ಸಿಬ್ಬಂದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮಗನ ಬೈಕ್‌ನಲ್ಲಿ ವಾಪಸ್ ಬರುವಾಗ ತಾಯಿ ಪ್ರಾಣ ಕಳೆದುಕೊಂಡ ಈ ದುರ್ಘಟನೆ ರಾಂಪುರ ಗ್ರಾಮದಲ್ಲಿ ನೀರವ ಮೌನ ಮತ್ತು ದುಃಖವನ್ನು ಆವರಿಸಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಜಾತಿ ಗಣತಿ
ಕರ್ನಾಟಕ ಸುದ್ದಿ
ಬಾಗಲಕೋಟೆ
ಶಿಕ್ಷಕರು

Latest Videos
Recommended Stories
Recommended image1
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
Recommended image2
ಬೆಂಗಳೂರಿನ ಹಲವೆಡೆ ಡಿ.6, 8ಕ್ಕೆ ಪವರ್ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?
Recommended image3
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
Related Stories
Recommended image1
ರಾಜ್ಯದ ಜಾತಿ ಗಣತಿ ಹಿಂದುಗಳನ್ನು ಮತಾಂತರಕ್ಕೆ ಪ್ರೋತ್ಸಾಹಿಸುತ್ತೆ: ಪ್ರಲ್ಹಾದ್‌ ಜೋಶಿ
Recommended image2
ಬೆಂಗಳೂರು ನಗರದಲ್ಲಿ ನಾಳೆಯಿಂದ ಜಾತಿ ಗಣತಿ ಆರಂಭ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved