MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ; ಮುಂದಿನ 4 ದಿನ ಎಲ್ಲೆಲ್ಲಿ ಮಳೆ?

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ; ಮುಂದಿನ 4 ದಿನ ಎಲ್ಲೆಲ್ಲಿ ಮಳೆ?

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದ್ದು, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಹವಾಮಾನ ಇಲಾಖೆಯು ಕಲಬುರಗಿ, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

1 Min read
Author : Mahmad Rafik
Published : Oct 26 2025, 08:15 AM IST
Share this Photo Gallery
  • FB
  • TW
  • Linkdin
  • Whatsapp
16
ವಾಯುಭಾರ ಕುಸಿತ
Image Credit : Asianet News

ವಾಯುಭಾರ ಕುಸಿತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ರೂಪಗೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. (ಸಾಂದರ್ಭಿಕ ಚಿತ್ರ)

26
ರಾಜ್ಯದಲ್ಲಿ 4 ದಿನ ಮಳೆ
Image Credit : Asianet News

ರಾಜ್ಯದಲ್ಲಿ 4 ದಿನ ಮಳೆ

ವಾಯುಭಾರ ಕುಸಿತದಿಂದಾಗಿ ಮುಂದಿನ 4 ದಿನ ಅತ್ಯಧಿಕ ಮಳೆಯಾಗಲಿದೆ. ರಾಜ್ಯದ ಕಲಬುರಗಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)

Related Articles

Related image1
ಹಿರೇಬೆಣಕಲ್ ಶಿಲಾಸಮಾಧಿ ಶೀಘ್ರ ವಿಶ್ವ ಸ್ಮಾರಕ ಪಟ್ಟಿಗೆ!
Related image2
ಹಾಸನಾಂಬೆ ಹುಂಡಿಯಲ್ಲಿ 75 ಗ್ರಾಂಚಿನ್ನ, ಒಂದೂವರೆ ಕೆ.ಜಿ. ಬೆಳ್ಳಿ, ವಿದೇಶಿ ಕರೆನ್ಸಿ, ಒಟ್ಟು ₹25.5 ಕೋಟಿ ಸಂಗ್ರಹ
36
 ಸಾಧಾರಣ ಮಳೆ
Image Credit : social media

ಸಾಧಾರಣ ಮಳೆ

ಇನ್ನುಳಿದಂತೆ ಕೊಡಗು, ಕೋಲಾರ , ಹಾಸನ ಮತ್ತು ಚಾಮರಾಜನಗರಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಗಳಿವೆ. ಕರಾವಳಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)

46
ಓಡಿಶಾದಲ್ಲಿ ಕಟ್ಟೆಚ್ಚರ
Image Credit : Asianet News

ಓಡಿಶಾದಲ್ಲಿ ಕಟ್ಟೆಚ್ಚರ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ರೂಪುಗೊಳ್ಳುತ್ತಿರುವುದರಿಂದ ಒಡಿಶಾದ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರದಲ್ಲಿವೆ. ಬಂಗಾಳಕೊಲ್ಲಿಯಲ್ಲಿನ ಕಡಿಮೆ ಒತ್ತಡದಿಂದಾಗಿ, ಅಕ್ಟೋಬರ್ 27 ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. (ಸಾಂದರ್ಭಿಕ ಚಿತ್ರ)

56
ಮೂರು ದಿನ ಮಳೆ ಜೊತೆ ವೇಗದ ಗಾಳಿ
Image Credit : ANI

ಮೂರು ದಿನ ಮಳೆ ಜೊತೆ ವೇಗದ ಗಾಳಿ

ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆಯಾಗಬಹುದು. ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ. ಈ ಚಂಡಮಾರುತಕ್ಕೆ ರಾಜ್ಯವು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)

ಇದನ್ನೂ ಓದಿ: ಅರ್ಹರು ಎಪಿಎಲ್ ಗೆ ವರ್ಗಾವಣೆ ಆಗಿದ್ದಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಣೆ: ಮುನಿಯಪ್ಪ ಭರವಸೆ

66
ಚಂಡಮಾರುತ ಮತ್ತು ಮಳೆಯ ಎಚ್ಚರಿಕೆ
Image Credit : ANI

ಚಂಡಮಾರುತ ಮತ್ತು ಮಳೆಯ ಎಚ್ಚರಿಕೆ

ಹವಾಮಾನ ಇಲಾಖೆ ಪ್ರಕಾರ, ಅಕ್ಟೋಬರ್ 27, 28 ಮತ್ತು 29 ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 26 ರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಪರಿಹಾರ ಕೇಂದ್ರಗಳಿಗೆ ಅಗತ್ಯ ಆಹಾರ ಸಾಮಾಗ್ರಿ ಪೂರೈಕೆ ಮಾಡಲಾಗಿದೆ ಎಂದು ಸುರೇಶ್ ಪೂಜಾರಿ ಮಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

ಇದನ್ನೂ  ಓದಿ: ಲಾಲ್‌ಬಾಗ್ ಅಡಿಯಲ್ಲಿ ಸುರಂಗ ಮಾರ್ಗ: ಜಿಎಸ್‌ಐ ಅಭಿಪ್ರಾಯ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ನಾಟಕ ಸುದ್ದಿ
ಮಳೆ
ಕರ್ನಾಟಕ ಮಳೆ

Latest Videos
Recommended Stories
Recommended image1
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
Recommended image2
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ
Recommended image3
ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
Related Stories
Recommended image1
ಹಿರೇಬೆಣಕಲ್ ಶಿಲಾಸಮಾಧಿ ಶೀಘ್ರ ವಿಶ್ವ ಸ್ಮಾರಕ ಪಟ್ಟಿಗೆ!
Recommended image2
ಹಾಸನಾಂಬೆ ಹುಂಡಿಯಲ್ಲಿ 75 ಗ್ರಾಂಚಿನ್ನ, ಒಂದೂವರೆ ಕೆ.ಜಿ. ಬೆಳ್ಳಿ, ವಿದೇಶಿ ಕರೆನ್ಸಿ, ಒಟ್ಟು ₹25.5 ಕೋಟಿ ಸಂಗ್ರಹ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved