MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಂಡ್ಯ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನ ಮಾಡಿ, ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ವಿಕೃತಿ!

ಮಂಡ್ಯ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನ ಮಾಡಿ, ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ವಿಕೃತಿ!

ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆಯಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

1 Min read
Author : Sathish Kumar KH
Published : Aug 07 2025, 11:20 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಮಂಡ್ಯ (ಆ.07): ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ಕಳ್ಳತನ ಮಾಡಿ ಅನ್ಯಧರ್ಮದ ಚಿಹ್ನೆಯನ್ನು ಗೋಡೆಯ ಮೇಲೆ ಬರೆದು ಹೋಗಿದ್ದಾರೆ. ಈ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

25
Image Credit : Asianet News

ಕಳೆದ ರಾತ್ರಿ, ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಮಾಳಿಗೆಕೊಪ್ಪಲು ಗ್ರಾಮದಲ್ಲಿರುವ ಏಳೂರಮ್ಮ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ದೇವಸ್ಥಾನದಲ್ಲಿದ್ದ ಚಿಕ್ಕ ಪುಟ್ಟ ನಗದು ಹಣ ಮತ್ತು ತಟ್ಟೆಯಲ್ಲಿ ಇಟ್ಟಿದ್ದ ಚಿಲ್ಲರೆ ಕಾಸನ್ನು ತೆಗೆದುಕೊಂಡು ಹೋಗಿದ್ದಾರೆ.

Related Articles

Related image1
Now Playing
ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
Related image2
ಕೊಪ್ಪಳ: ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ನಡುರಸ್ತೆಯಲ್ಲಿ ಹಿಂದೂ ಯುವಕನ ಹತ್ಯೆ!
35
Image Credit : Asianet News

ಆದರೆ, ಕಳ್ಳತನದ ನಂತರ ದೇವಸ್ಥಾನದ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಮತ್ತು '786' ಎಂಬ ಸಂಖ್ಯೆಯನ್ನು ಬರೆದಿರುವುದು ಈ ಘಟನೆಯನ್ನು ಹೆಚ್ಚು ಸಂಶಯಾಸ್ಪದವಾಗಿಸಿದೆ.

45
Image Credit : Asianet News

ಮತ್ತೊಂದು ದೇವಸ್ಥಾನಕ್ಕೂ ಕಳ್ಳರ ಎಂಟ್ರಿ

ದುಷ್ಕರ್ಮಿಗಳು ಏಳೂರಮ್ಮ ದೇವಸ್ಥಾನಕ್ಕೂ ಮುನ್ನ ಅದೇ ಗ್ರಾಮದ ದಂಡಿಮಾರಮ್ಮ ದೇವಸ್ಥಾನಕ್ಕೂ ನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ದಂಡಿಮಾರಮ್ಮ ದೇವಸ್ಥಾನದಲ್ಲಿ ಯಾವುದೇ ಕಳ್ಳತನವಾಗಿಲ್ಲ ಮತ್ತು ಯಾವುದೇ ಬರಹವನ್ನು ಬರೆದಿಲ್ಲ. ಈ ಘಟನೆಗಳಿಂದಾಗಿ ದ್ವೇಷದ ಉದ್ದೇಶದಿಂದ ಈ ಕೃತ್ಯ ನಡೆದಿದೆಯೇ ಎಂಬ ಅನುಮಾನ ಮೂಡಿದೆ.

55
Image Credit : Asianet News

ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವಸ್ಥಾನದ ಗೋಡೆ ಮೇಲೆ ಬರೆದಿರುವ ಚಿಹ್ನೆ ಮತ್ತು ಸಂಖ್ಯೆಗಳ ಬಗ್ಗೆ ತೀವ್ರ ತನಿಖೆ ನಡೆಯುತ್ತಿದೆ. ಸದ್ಯ ಗ್ರಾಮದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಈ ಕೃತ್ಯದ ಹಿಂದಿರುವ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಈ ವಿಲಕ್ಷಣ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮತ್ತು ಕೋಪ ಎರಡೂ ಮನೆಮಾಡಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಮಂಡ್ಯ
ದೇವಸ್ಥಾನ
ಹಿಂದಿ ಹೇರಿಕೆ
ಮುಸ್ಲಿಂ

Latest Videos
Recommended Stories
Recommended image1
ಮುಡಾ ಹಗರಣದಲ್ಲಿ ಕೋರ್ಟ್ ಹೊಸ ಆದೇಶ, ಜೈಲಲ್ಲಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಮತ್ತೆ ಪೊಲೀಸ್‌ ಕಸ್ಟಡಿಗೆ!
Recommended image2
ಲೋಕಾಯುಕ್ತ ದಾಳಿ: ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!
Recommended image3
ಕೊಪ್ಪಳದ ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳು ಪತ್ತೆ; ಸಚಿವರೇನ್ ನಿದ್ದೆ ಮಾಡ್ತಿದ್ದಾರಾ?
Related Stories
Recommended image1
Now Playing
ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
Recommended image2
ಕೊಪ್ಪಳ: ಮುಸ್ಲಿಂ ಯುವತಿಯನ್ನ ಪ್ರೀತಿಸಿದ್ದಕ್ಕೆ ನಡುರಸ್ತೆಯಲ್ಲಿ ಹಿಂದೂ ಯುವಕನ ಹತ್ಯೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved