MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು

ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು

ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಲಕ್ಷಾಂತರ ಮೌಲ್ಯದ ಗಿರ್ ಹಸುಗಳ ಕಳ್ಳತನ! ಕಳ್ಳರು ಒಂದು ಹಸುವಿನ ಕತ್ತು ಕೊಯ್ದು ಕ್ರೌರ್ಯ ಮೆರೆದಿದ್ದಾರೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ವಿವರ ತಿಳಿಯಿರಿ.

1 Min read
Author : Sathish Kumar KH
Published : Dec 08 2025, 06:47 PM IST
Share this Photo Gallery
  • FB
  • TW
  • Linkdin
  • Whatsapp
15
ಗುಜರಾತಿನ ಗಿರ್ ತಳಿಯ ಹಸು ಕಳ್ಳತನ
Image Credit : Asianet News

ಗುಜರಾತಿನ ಗಿರ್ ತಳಿಯ ಹಸು ಕಳ್ಳತನ

ಬೆಂಗಳೂರು ಗ್ರಾಮಾಂತರ (ಡಿ.08): ಗುಜರಾತಿನಿಂದ ತಂದು ಪ್ರೀತಿಯಿಂದ ಸಾಕಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೂರು ಗಿರ್ ಹಸುಗಳನ್ನು ಖತರ್ನಾಕ್ ಕಳ್ಳರು ಕಳ್ಳತನ ಮಾಡಿರುವ ಹಾಗೂ ಒಂದು ದೊಡ್ಡ ಹಸುವಿನ ಕುತ್ತಿಗೆಯನ್ನು ಕತ್ತರಿಸಿ ಕ್ರೌರ್ಯವನ್ನು ಮೆರೆದ ವಿಕೃತಿಯ ಘಟನೆ ನೆಲಮಂಗಲ ಬಳಿಯ ಗೌಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌಡಹಳ್ಳಿ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಎಂಬುವವರು ಈ ಹಸುಗಳನ್ನು ಸಾಕಿದ್ದರು. ಇವರು ಗುಜರಾತ್‌ನಿಂದ ತಂದಿದ್ದ ಗಿರ್ ತಳಿಯ ಈ 3 ಹಸುಗಳು ಸುಮಾರು 4 ಲಕ್ಷ ರೂಪಾಯಿಗಳಷ್ಟು ಬೆಲೆ ಬಾಳುತ್ತಿದ್ದವು ಎನ್ನಲಾಗಿದೆ.

25
ಕುತ್ತಿಗೆ ಕೊಯ್ದು ಕ್ರೌರ್ಯ
Image Credit : Asianet News

ಕುತ್ತಿಗೆ ಕೊಯ್ದು ಕ್ರೌರ್ಯ

ಕಳ್ಳರು ಈ ಹಸುಗಳನ್ನು ಕಳವು ಮಾಡುವಾಗ ಒಂದು ಹಸುವಿನ ಕುತ್ತಿಗೆಯನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಕಳ್ಳರಿಂದ ಹೇಗೋ ತಪ್ಪಿಸಿಕೊಂಡು ಹಿಂತಿರುಗಿರುವ ಒಂದು ಚಿಕ್ಕ ಗಿರ್ ಹಸುವಿನ ಕತ್ತಿನ ಭಾಗದಲ್ಲಿ ಸುಮಾರು ಎರಡು ಇಂಚುಗಳಷ್ಟು ಆಳದ ಗಾಯವಾಗಿದ್ದು, ರಕ್ತಸ್ರಾವವಾಗಿರುವುದು ಕಂಡುಬಂದಿದೆ.

Related Articles

Related image1
ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಬೆನ್ನಲ್ಲೇ ಹಸುವಿನ ಮೇಲೆ ಮತ್ತೊಂದು ಹೇಯ ಕೃತ್ಯ
Related image2
RTI ದಾಖಲೆ ಪಡೆಯಲು ಹಸು ಮಾರಿದ ರೈತ; ಎತ್ತಿನಗಾಡಿಯಲ್ಲಿ ಸಾಗಿಸಿದ 16,000 ಪುಟಗಳ ದಾಖಲೆ!
35
ಅಧಿಕ ಹಾಲು ಕೊಡುವ ಗಿರ್ ತಳಿ
Image Credit : Asianet News

ಅಧಿಕ ಹಾಲು ಕೊಡುವ ಗಿರ್ ತಳಿ

ಕಳ್ಳರು ಹಸುವಿನ ಕೊರಳನ್ನು ಕೊಯ್ದು ಗಾಯಗೊಳಿಸಿರುವ ರೀತಿ ಸ್ಥಳೀಯರಲ್ಲಿ ಆಕ್ರೋಶ ಮತ್ತು ಆತಂಕ ಮೂಡಿಸಿದೆ. ಕಳವು ಮಾಡಿ ಕತ್ತು ಕೊಯ್ದು ವಿಕೃತಿ ಮೆರೆದಿರುವ ಕುರಿತು ಮಾದನಾಯಕನಹಳ್ಳಿ ಪೊಲೀಸರಿಗೆ ದೂರು ನೀಡಲಾಗಿದೆ. ವಿಜಯಲಕ್ಷ್ಮಿ ಅವರು ಪ್ರೀತಿಯಿಂದ ಸಾಕಿದ್ದ, ಅಧಿಕ ಹಾಲು ನೀಡುವ ಈ ತಳಿಯ ಹಸುಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ.

45
ತನಿಖೆ ಆರಂಭಿಸಿದ ಪೊಲೀಸರು
Image Credit : Asianet News

ತನಿಖೆ ಆರಂಭಿಸಿದ ಪೊಲೀಸರು

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳ್ಳತನಕ್ಕೆ ಯತ್ನಿಸಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಸುವಿನ ಕೊರಳನ್ನು ಕಳ್ಳರು ಕ್ರೂರವಾಗಿ ಕೊಯ್ದಿದ್ದಾರೆಯೇ ಅಥವಾ ಯಾವುದಾದರೂ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

55
ಹಸು ಕಳ್ಳತನ ಮೊದಲೇನಲ್ಲ
Image Credit : Asianet News

ಹಸು ಕಳ್ಳತನ ಮೊದಲೇನಲ್ಲ

ಈ ಹಿಂದೆ ಕೂಡ ರಾಜ್ಯದ ಹಲವು ಕಡೆ ಇಂತಹ ಬೆಲೆ ಬಾಳುವ ತಳಿಯ ಹಸುಗಳ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿದೆ. ಮೂರು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಹಸುಗಳ ಕಳ್ಳತನ ಮತ್ತು ಕತ್ತು ಕೊಯ್ದು ಕ್ರೌರ್ಯ ಮೆರೆದಿರುವ ಈ ಘಟನೆಯು ಗೌಡಹಳ್ಳಿ ಗ್ರಾಮದ ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಬೆಂಗಳೂರು ಗ್ರಾಮಾಂತರ

Latest Videos
Recommended Stories
Recommended image1
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!
Recommended image2
ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
Recommended image3
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
Related Stories
Recommended image1
ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಬೆನ್ನಲ್ಲೇ ಹಸುವಿನ ಮೇಲೆ ಮತ್ತೊಂದು ಹೇಯ ಕೃತ್ಯ
Recommended image2
RTI ದಾಖಲೆ ಪಡೆಯಲು ಹಸು ಮಾರಿದ ರೈತ; ಎತ್ತಿನಗಾಡಿಯಲ್ಲಿ ಸಾಗಿಸಿದ 16,000 ಪುಟಗಳ ದಾಖಲೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved