MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Shivamogga News: ಹೊಸನಗರ ಕಾಲೇಜು ಪ್ರತಿಭಾವಂತ ವಿದ್ಯಾರ್ಥಿನಿ ರಚನಾ ನೇಣಿಗೆ ಶರಣು!

Shivamogga News: ಹೊಸನಗರ ಕಾಲೇಜು ಪ್ರತಿಭಾವಂತ ವಿದ್ಯಾರ್ಥಿನಿ ರಚನಾ ನೇಣಿಗೆ ಶರಣು!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ, ಕೊಡಚಾದ್ರಿ ಸರ್ಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ರಚನಾ (20) ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ.

1 Min read
Author : Sathish Kumar KH
Published : Dec 17 2025, 04:01 PM IST
Share this Photo Gallery
  • FB
  • TW
  • Linkdin
  • Whatsapp
16
ಕಾಲೇಜು ವಿದ್ಯಾರ್ಥಿನಿ ಆತ್ಮ*ಹತ್ಯೆ
Image Credit : Asianet News

ಕಾಲೇಜು ವಿದ್ಯಾರ್ಥಿನಿ ಆತ್ಮ*ಹತ್ಯೆ

ಶಿವಮೊಗ್ಗ (ಡಿ.17): ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಸವೆ ಗ್ರಾಮದಲ್ಲಿ ನಡೆದಿದೆ.

26
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿದಿನದಂತೆ ನಿನ್ನೆ ಕೂಡ ಕಾಲೇಜಿಗೆ ಹೋಗಿ ಸಂಜೆ ಮನೆಗೆ ಮರಳಿದ್ದಳು ಎನ್ನಲಾಗಿದೆ.

Related Articles

Related image1
ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
Related image2
ಹುಬ್ಬಳ್ಳಿ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!
36
ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ
Image Credit : Asianet News

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ

ರಚನಾ ಕಾಲೇಜಿನಿಂದ ಮನೆಗೆ ಬಂದ ಸಮಯದಲ್ಲಿ ಕುಟುಂಬದ ಸದಸ್ಯರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಇದೇ ಸಮಯವನ್ನು ಬಳಸಿಕೊಂಡ ವಿದ್ಯಾರ್ಥಿನಿ, ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಮನೆಯವರು ಮರಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಗಾಬರಿಗೊಂಡ ಕುಟುಂಬಸ್ಥರು ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ರಚನಾ ಕೊನೆಯುಸಿರೆಳೆದಿದ್ದಳು.

46
ನಿಗೂಢವಾಗಿ ಉಳಿದ ಕಾರಣ
Image Credit : Asianet News

ನಿಗೂಢವಾಗಿ ಉಳಿದ ಕಾರಣ

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮ*ಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ.

56
ಡೆತ್ ನೋಟ್ ಲಭ್ಯವಾಗಿಲ್ಲ
Image Credit : Asianet News

ಡೆತ್ ನೋಟ್ ಲಭ್ಯವಾಗಿಲ್ಲ

ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

66
ಪೊಲೀಸರಿಂದ ಸ್ಥಳ ಪರಿಶೀಲನೆ
Image Credit : Asianet News

ಪೊಲೀಸರಿಂದ ಸ್ಥಳ ಪರಿಶೀಲನೆ

ಹೊಸನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಭರವಸೆಯ ವಿದ್ಯಾರ್ಥಿನಿಯ ಸಾವಿನಿಂದ ವಸವೆ ಗ್ರಾಮ ಹಾಗೂ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶೋಕ ಮಡುಗಟ್ಟಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಶಿವಮೊಗ್ಗ
ಕ್ರೈಮ್ ನ್ಯೂಸ್
ವಿದ್ಯಾರ್ಥಿ

Latest Videos
Recommended Stories
Recommended image1
ಕಾರವಾರದಲ್ಲಿ ಸಿಕ್ಕಿದ ಸೀಗಲ್ ಹಕ್ಕಿಯಲ್ಲಿ ಚೈನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ! ಪೊಲೀಸರಿಂದ ತನಿಖೆ
Recommended image2
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಸರ್ಕ್ಯೂಟ್ ಹೌಸ್‌ಗೆ ಗಣ್ಯರ ದಂಡು!
Recommended image3
Now Playing
ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Related Stories
Recommended image1
ಪ್ರತಿಭಾವಂತ ವಿದ್ಯಾರ್ಥಿನಿ ಪ್ರಿಯಾಂಕಾ ಇನ್ನಿಲ್ಲ; ಹೊಟ್ಟೆನೋವು ತಾಳಲಾರದೇ ಆತ್ಮ*ಹತ್ಯೆ!
Recommended image2
ಹುಬ್ಬಳ್ಳಿ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved