MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರಷ್ಟೇ ಅಲ್ಲ, ಶಿವಮೊಗ್ಗದಲ್ಲೂ ರಸ್ತೆಗುಂಡಿ ಹಾವಳಿ; ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು!

ಬೆಂಗಳೂರಷ್ಟೇ ಅಲ್ಲ, ಶಿವಮೊಗ್ಗದಲ್ಲೂ ರಸ್ತೆಗುಂಡಿ ಹಾವಳಿ; ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು!

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಡಿಕಲ್ ರೆಪ್ ಮಹೇಶ್ (34) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ.

1 Min read
Author : Sathish Kumar KH
Published : Sep 15 2025, 02:27 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಶಿವಮೊಗ್ಗ (ಸೆ. 15): ರಸ್ತೆ ಗುಂಡಿಗಳು ಶಿವಮೊಗ್ಗದಲ್ಲಿ ಮತ್ತೊಂದು ಅಮೂಲ್ಯ ಜೀವ ಬಲಿ ಪಡೆದಿವೆ. ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಸಾವನ್ನಪ್ಪಿದ ದಾರುಣ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

25
Image Credit : Asianet News

ಮೃತ ಯುವಕನನ್ನು ವಿನೋಬನಗರ ನಿವಾಸಿ ಮಹೇಶ್ (34) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮೆಡಿಕಲ್ ರೆಪ್ ಆಗಿದ್ದ ಮಹೇಶ್, ನಿನ್ನೆ ರಾತ್ರಿ ತಮ್ಮ ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಮಲವಗೊಪ್ಪದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಆಳವಾದ ರಸ್ತೆ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದಾಗ ಅವರ ಬೈಕ್ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹೇಶ್ ಬೈಕ್‌ನಿಂದ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

Related Articles

Related image1
ಗಂಟಲಿನಲ್ಲಿ ಸಿಲುಕಿದ ಕೋಳಿ ಮೂಳೆ: ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆದ ಶಿವಮೊಗ್ಗ ವೈದ್ಯರು!
Related image2
ರಸ್ತೆ ನಿರ್ಮಾಣದ ವೇಳೆ ಮಸೀದಿಯಲ್ಲಿ ಸುರಂಗ ಪತ್ತೆ, ಭದ್ರತೆಗೆ 200 ಪೊಲೀಸರ ನಿಯೋಜನೆ, ಅಲ್ಲಿ ಸಿಕ್ಕಿದ್ದು ಏನು?
35
Image Credit : Asianet News

ಘಟನೆ ನಡೆದ ತಕ್ಷಣವೇ ಸ್ಥಳೀಯರು ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮಹೇಶ್ ಅವರನ್ನು ಸ್ಥಳೀಯ ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದರು. ಆದರೆ, ತಲೆಗೆ ಗಂಭೀರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:  ಗಂಟಲಿನಲ್ಲಿ ಸಿಲುಕಿದ ಕೋಳಿ ಮೂಳೆ, ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆದ ವೈದ್ಯರು

45
Image Credit : Asianet News

ಹದಗೆಟ್ಟ ರಸ್ತೆಗಳು ನಾಗರಿಕರ ಜೀವಕ್ಕೆ ಕುತ್ತು:

ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಲವು ವರ್ಷಗಳಿಂದ ನಗರದ ರಸ್ತೆಗಳು ಹದಗೆಟ್ಟಿದ್ದು, ಸಾಕಷ್ಟು ಅಪಘಾತಗಳಿಗೆ ಕಾರಣವಾಗಿವೆ ಎಂದು ನಾಗರಿಕರು ದೂರಿದ್ದಾರೆ. ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಹಲವಾರು ಬಾರಿ ಒತ್ತಾಯಿಸಿದ್ದರೂ ಪಾಲಿಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಹದಗೆಟ್ಟ ರಸ್ತೆಗಳು ನಾಗರಿಕರ ಜೀವಕ್ಕೆ ಕುತ್ತು ತರುತ್ತಿದ್ದರೂ ಸಂಬಂಧಪಟ್ಟವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

55
Image Credit : Asianet News

ಈ ದುರ್ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ನಗರದ ರಸ್ತೆಗಳನ್ನು ಕೂಡಲೇ ದುರಸ್ತಿ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೂರ್ವ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶಿವಮೊಗ್ಗ
ರಸ್ತೆ ಸಾರಿಗೆ
ಕರ್ನಾಟಕ ಸುದ್ದಿ
ಅಪಘಾತ

Latest Videos
Recommended Stories
Recommended image1
ಎಚ್‌ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
Recommended image2
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
Recommended image3
Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
Related Stories
Recommended image1
ಗಂಟಲಿನಲ್ಲಿ ಸಿಲುಕಿದ ಕೋಳಿ ಮೂಳೆ: ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆದ ಶಿವಮೊಗ್ಗ ವೈದ್ಯರು!
Recommended image2
ರಸ್ತೆ ನಿರ್ಮಾಣದ ವೇಳೆ ಮಸೀದಿಯಲ್ಲಿ ಸುರಂಗ ಪತ್ತೆ, ಭದ್ರತೆಗೆ 200 ಪೊಲೀಸರ ನಿಯೋಜನೆ, ಅಲ್ಲಿ ಸಿಕ್ಕಿದ್ದು ಏನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved