MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ತುಮಕೂರಿನಲ್ಲಿ 200 ಅಡಿಕೆ ಗಿಡಗಳ ಕಡಿದ ಕಿಡಿಗೇಡಿಗಳು, ಮತ್ತೊಂದೆಡೆ ಕೆರೆ ಒಡೆದು ನೀರು ಪೋಲು

ತುಮಕೂರಿನಲ್ಲಿ 200 ಅಡಿಕೆ ಗಿಡಗಳ ಕಡಿದ ಕಿಡಿಗೇಡಿಗಳು, ಮತ್ತೊಂದೆಡೆ ಕೆರೆ ಒಡೆದು ನೀರು ಪೋಲು

ತುಮಕೂರು ಜಿಲ್ಲೆಯಲ್ಲಿ ರೈತರೊಬ್ಬರ 200 ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕತ್ತರಿಸಿ ಹಾಕಿದ್ದಾರೆ. ಚೆನ್ನತಿಮ್ಮನಪಾಳ್ಯ ಗ್ರಾಮದಲ್ಲಿ ಕೆರೆ ಏರಿ ಒಡೆದು ನೀರು ಪೋಲಾಗಿ ರೈತರಿಗೆ ಬೆಳೆ ಹಾನಿಯಾಗಿದೆ. ದುರಸ್ತಿ ಕಾಮಗಾರಿಯಲ್ಲಿನ ಲೋಪದೋಷಗಳಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

1 Min read
Author : Sathish Kumar KH
Published : Aug 08 2025, 07:17 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ತುಮಕೂರು (ಆ.08): ರೈತ ಜಮೀನಿನಲ್ಲಿ ಬೆಳೆದಿದ್ದ 200ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕತ್ತಿರಿಸಿ ಹಾಕಿ ವಿಕೃತಿ ಮರೆದಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಚಿತ್ತಗಾನಹಳ್ಳಿ ಗ್ರಾಮದಲ್ಲಿ ದುಷ್ಕೃತ್ಯ ನಡೆದಿದೆ. ಗ್ರಾಮದ ರೈತ ರಂಗಣ್ಣ ಅವರಿಗೆ ಸೇರಿದ ಅಡಿಕೆ ತೋಟದಲ್ಲಿ ಸುಮಾರು 200 ಕ್ಕೂ ಹೆಚ್ಚು ನಾಲ್ಕು ವರ್ಷದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಮಚ್ಚಿನಿಂದ ಕತ್ತರಿಸಿ ಹಾಕಿದ್ದಾರೆ.

25
Image Credit : Asianet News

ಈ ಗಿಡಗಳನ್ನು ರಂಗಣ್ಣ ಸುಮಾರು ನಾಲ್ಕು ವರ್ಷಗಳಿಂದ ಸಾಕಿ ಬೆಳೆಸಿಕೊಂಡಿದ್ದರು. ಕಳೆದ ರಾತ್ರಿ ದುಷ್ಕರ್ಮಿಗಳು ತೋಟಕ್ಕೆ ನುಗ್ಗಿ ಗಿಡಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದು, ಇಂದು ಬೆಳಿಗ್ಗೆ ತೋಟದ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

Related image1
ತುಮಕೂರು: ವರಹ ಧ್ವಜ ಹಾರಿಸಿದ್ದಕ್ಕೆ ಐವರು ಹಿಂದೂ ಯುವಕರ ವಿರುದ್ಧ FIR!
Related image2
ನೆಲಮಂಗಲ-ತುಮಕೂರು ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ; ನೋ ಟ್ರಾಫಿಕ್, ಬಿಂದಾಸ್ ಪ್ರಯಾಣ
35
Image Credit : Asianet News

ಕೆರೆ ಏರಿ ಹೊಡೆದು ನೀರು ಪೋಲು:

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಚೆನ್ನತಿಮ್ಮನಪಾಳ್ಯ ಗ್ರಾಮದಲ್ಲಿ ಕೆರೆ ಏರಿ ಒಡೆದು ನೀರು ಪೋಲಾಗಿರುವ ಘಟನೆ ಸಂಭವಿಸಿದೆ. ಕೆರೆಯ ನೀರು ಹೊಳೆಯಂತೆ ಹರಿದು ರೈತರ ಜಮೀನಿಗೆ ನುಗ್ಗಿದ್ದು, ಬೆಳೆ ಹಾನಿಯ ಉಂಟಾಗಿದೆ. ಕಳೆದ 15 ದಿನಗಳ ಹಿಂದೆ ಇದೇ ಕೆರೆ ಏರಿ ಒಡೆದು ಅರ್ಧ ನೀರು ಹೊರಹೋಗಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳಲಾಗಿರಲಿಲ್ಲ.

45
Image Credit : Asianet News

ಗ್ರಾಮಸ್ಥರ ಆಕ್ರೋಶದ ನಡುವೆ, ಕುಣಿಗಲ್ ಶಾಸಕ ಡಾ. ರಂಗನಾಥ್ ಸಮ್ಮುಖದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಬಂದು ಏರಿಯನ್ನು ಸರಿಪಡಿಸಿದ್ದರು. ನಂತರ ಹೇಮಾವತಿ ನಾಲೆಯ ನೀರು ಬಿಟ್ಟು ಕೆರೆ ತುಂಬಿಸಲಾಯಿತು.

55
Image Credit : Asianet News

ಆದರೆ ಕಾಮಗಾರಿ ದೋಷಪೂರಿತವಾಗಿದ್ದರಿಂದ ಇಂದು ಮತ್ತೆ ಕೆರೆ ಏರಿ ಒಡೆದು ಸಂಪೂರ್ಣ ನೀರು ಖಾಲಿಯಾಗಿದೆ. ಕೆರೆಯ ನೀರನ್ನೇ ಅವಲಂಬಿಸಿಕೊಂಡು ಭತ್ತ, ರಾಗಿ, ಜೋಳ ಬೆಳೆದಿದ್ದ ರೈತರು ಈಗ ಆತಂಕದಲ್ಲಿದ್ದಾರೆ. ಗ್ರಾಮಸ್ಥರ ಆಕ್ರೋಶ ಪ್ರಕಾರ, ಅಧಿಕಾರಿಗಳ ಬೇಜವಾಬ್ದಾರಿತನವೇ ಈ ಸ್ಥಿತಿಗೆ ಕಾರಣ. ಗ್ರಾಮಸ್ಥರು ಕೂಡಲೇ ಕೆರೆ ಏರಿಯನ್ನು ಶಾಶ್ವತವಾಗಿ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ತುಮಕೂರು
ಕರ್ನಾಟಕ ಸುದ್ದಿ
ರೈತರು

Latest Videos
Recommended Stories
Recommended image1
ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
Recommended image2
ತಂತ್ರಜ್ಞಾನದ ನೆರವಿನಿಂದ ಜೈಲುಗಳಲ್ಲಿ ಸುಧಾರಣೆ ತರಲು ಅಲೋಕ್ ಕುಮಾರ್ ನೇತೃತ್ವ
Recommended image3
ವಿಂಡ್ ಫ್ಯಾನ್‌ಗಳಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು, ಮರೆಯಾದ ಹಕ್ಕಿಗಳ ಕಲರವ!
Related Stories
Recommended image1
ತುಮಕೂರು: ವರಹ ಧ್ವಜ ಹಾರಿಸಿದ್ದಕ್ಕೆ ಐವರು ಹಿಂದೂ ಯುವಕರ ವಿರುದ್ಧ FIR!
Recommended image2
ನೆಲಮಂಗಲ-ತುಮಕೂರು ಮಾರ್ಗದ ಪ್ರಯಾಣಿಕರಿಗೆ ಸಂತಸದ ಸುದ್ದಿ; ನೋ ಟ್ರಾಫಿಕ್, ಬಿಂದಾಸ್ ಪ್ರಯಾಣ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved