MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ 11 ಆರ್‌ಸಿಬಿ ಅಭಿಮಾನಿಗಳ ಸಾವು; ಬಿಜೆಪಿ ಆರೋಪ

ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ 11 ಆರ್‌ಸಿಬಿ ಅಭಿಮಾನಿಗಳ ಸಾವು; ಬಿಜೆಪಿ ಆರೋಪ

ಆರ್‌ಸಿಬಿ ವಿಜಯೋತ್ಸವದ ಕಾಲ್ತುಳಿತ ಘಟನೆಯ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ ಆರ್‌ಸಿಬಿ ಅಭಿಮಾನಿಗಳ ಸಾವು ಆಗಿದೆ ಎಂದು ಆರೋಪಿಸಿದೆ. 

2 Min read
Author : Sathish Kumar KH
Published : Jun 17 2025, 03:52 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ಬೆಂಗಳೂರು (ಜೂ.‌ 17): ಕಾಂಗ್ರೆಸ್ ನಾಯಕರ ಫೋಟೋ ತೆವಲಿಗೆ ಅಮಾಯಕ ಆರ್‌ಸಿಬಿ ಅಭಿಮಾನಿಗಳ ಸಾವು ಆಗಿದೆ. ಜೊತೆಗೆ, ಸರ್ಕಾರ ಮಾಡಿದ ತಪ್ಪಿಗೆ ಪೊಲೀಸ್ ಅಧಿಕಾರಿಗಳಿಗೆ ಬರೆ ಹಾಕಿದ್ದು ಸರಿಯೇ? ಎಂದು ಬಿಜೆಪಿ ನಾಯಕರು ಖಂಡಿಸಿದರು. ಮುಂದುವರೆದು, ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಘಟನೆ ಕುರಿತು ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

28
Image Credit : Asianet News

ಬೆಂಗಳೂರಿನ ಸ್ವತಂತ್ರ್ಯ ಉದ್ಯಾನದ ಬಳಿ ನಡೆದ ಪ್ರತಿಭಟನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. 

ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

Related Articles

Related image1
ಚಿನ್ನಸ್ವಾಮಿ ಕಾಲ್ತುಳಿತ: ಆರ್‌ಸಿಬಿ ಇವೆಂಟ್‌ಗೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ ಸಿದ್ದರಾಮಯ್ಯ ಎಂದ ರಾಜಭವನ
Related image2
ಕಾಲ್ತುಳಿತ : ತುರ್ತು ಅಧಿವೇಶನ ಕರೆಯಲು ಸಿಎಂಗೆ ಅಶೋಕ್‌ ಪತ್ರ
38
Image Credit : Asianet News

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.

48
Image Credit : Asianet News

ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದರು.

58
Image Credit : Asianet News

ಸರ್ಕಾರ ಪ್ರತಿಷ್ಠೆಗೆ RCB ಅಭಿಮಾನಿಗಳನ್ನು ಬಲಿಕೊಟ್ಟ ಕಾಂಗ್ರೆಸ್‌ಗೆ ಧಿಕ್ಕಾರ:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಬೆಂಗಳೂರಿನ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಎದ್ದು ಕಾಣುತ್ತುದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆಂಬ ಮಾಹಿತಿ ಇದ್ದರೂ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಆಯೋಜಿಸಿ ಭದ್ರತೆ ನೀಡಲಾಗದೇ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಪ್ರಚಾರದ ಗೀಳಿಗೆ ಅಮಾಯಕರ ಬಲಿ ಪಡೆಯಲಾಗಿದೆ ಎಂದು ಆರೋಪಿಸಿದರು.

68
Image Credit : Asianet News

ಸರ್ಕಾರದ ವೈಫಲ್ಯದ ಹೊಣೆ ಹೊತ್ತುಕೊಂಡು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆ ನೀಡಬೇಕು. ಜೂನ್ 4ನೇ ತಾರೀಕು ರಾಜ್ಯಾದ್ಯಂತ, ದೇಶಾದ್ಯಂತ #RCB ಸಂಭ್ರಮಾಚರಣೆ ನಡೆಯುತ್ತಿದ್ದರೆ, ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಪೈಪೋಟಿ ನಡೆಯುತ್ತಿತ್ತು.

78
Image Credit : Asianet News

ಆರ್‌ಸಿಬಿ (RCB) ಗೆಲುವಿನ ಸಂಭ್ರಮವನ್ನು ನಮ್ಮ ಸರ್ಕಾರದ ಜನಪ್ರಿಯತೆ ಹೆಚ್ಚಿಸಿಕೊಳ್ಳಬೇಕು ಎಂಬ ಪುಕ್ಕಟ್ಟೆ ಪ್ರಚಾರ ಪಡೆದುಕೊಳ್ಳುವ ಹಠ ಹಾಗೂ ಚಟಕ್ಕೆ ಬಿದ್ದು ಉಪಮುಖ್ಯಮಂತ್ರಿಗಳಂತೂ ಏರ್ಪೋರ್ಟ್ ಗೆ ದಾವಿಸಿ ಕ್ರೀಡಾಪಟುಗಳನ್ನು ಸ್ವಾಗತಿಸಿ ಕ್ರೀಡಾಂಗಣದಲ್ಲಿ ಕಪ್ ಎತ್ತಿ ಹಿಡಿದು ತಾವೇ ಗೆದ್ದವರಂತೆ ಬಿಂಬಿಸಿಕೊಂಡರು.

88
Image Credit : Asianet News

ಈ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ವರದಿ ಕೊಟ್ಟರೂ ಸಹ ಲೆಕ್ಕಿಸದೇ ಪುಕ್ಕಟ್ಟೆ ಪ್ರಚಾರದ ಗೀಳಿಗೆ ಬಿದ್ದು ಎರಡೂ ಕಡೆ ಕಾರ್ಯಕ್ರಮ ನಡೆಸಿದರ ಪರಿಣಾಮವಾಗಿ 11 ಮುಗ್ಧ ಜೀವಗಳ ಬಲಿ ತೆಗೆದುಕೊಂಡರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಆರ್‌ಸಿಬಿ
ಕಾಲ್ತುಳಿತ
ಎಂ ಚಿನ್ನಸ್ವಾಮಿ ಕ್ರೀಡಾಂಗಣ
ಆರ್. ಅಶೋಕ್
ಬಿ. ವೈ. ವಿಜಯೇಂದ್ರ

Latest Videos
Recommended Stories
Recommended image1
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
Recommended image2
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ
Recommended image3
ಸುಳ್ಳು ಆರೋಪ ಮಾಡಿದರೆ ಒದ್ದು ಒಳಗೆ ಹಾಕಬೇಕಾಗುತ್ತದೆ: ಸಚಿವ ಎಂ.ಬಿ.ಪಾಟೀಲ್‌
Related Stories
Recommended image1
ಚಿನ್ನಸ್ವಾಮಿ ಕಾಲ್ತುಳಿತ: ಆರ್‌ಸಿಬಿ ಇವೆಂಟ್‌ಗೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ ಸಿದ್ದರಾಮಯ್ಯ ಎಂದ ರಾಜಭವನ
Recommended image2
ಕಾಲ್ತುಳಿತ : ತುರ್ತು ಅಧಿವೇಶನ ಕರೆಯಲು ಸಿಎಂಗೆ ಅಶೋಕ್‌ ಪತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved