ಅಂದು ಹೇಳಿದಂತೆ ನಡೆದುಕೊಂಡ ನಟ ಉಪೇಂದ್ರ ಮಗ ಆಯುಷ್; ಇದಪ್ಪಾ ಮಾತು ಅಂದ್ರೆ!
Ayush Upendra Movie: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ವುಡ್ಗೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

25 ದಿನಗಳ ಮೊದಲ ಹಂತದ ಶೂಟಿಂಗ್
ಆಯುಷ್ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾಕ್ಕೆ ಕಾಶ್ಮೀರದಲ್ಲೇ ಮುಹೂರ್ತ ನೆರವೇರಿದ್ದು, ಅಲ್ಲಿಯೇ 25 ದಿನಗಳ ಮೊದಲ ಹಂತದ ಶೂಟಿಂಗ್ ಕೂಡ ನಡೆದಿದೆ.
ಡೈರೆಕ್ಟರ್ ಯಾರು?
ಆಯುಷ್ ಅವರು ಹೀರೋ ಆಗಲು ಬೇಕಾಗಿರುವ ಪೂರ್ವ ತಯಾರಿಗಳನ್ನೆಲ್ಲ ಮಾಡಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಮೊದಲಾಸಲ" ಸಿನಿಮಾವನ್ನು ನಿರ್ದೇಶಿಸಿದ್ದ ಪುರುಷೋತ್ತಮ ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಅಭಿಷೇಕ್ ಎನ್ ಸಿರಿವಂತ್ ನಿರ್ಮಾಣ
ಶ್ರೀಕಲ್ಪವೃಕ್ಷ ಮೂವೀ ಮೇಕರ್ಸ್ ಲಾಂಛನದಲ್ಲಿ ಅಭಿಷೇಕ್ ಎನ್ ಸಿರಿವಂತ್ ಸಿನಿಮಾ ನಿರ್ಮಾಣ ನಿರ್ಮಿಸುತ್ತಿದ್ದಾರೆ. ಇದು ಅಭಿಷೇಕ್ ಎನ್ ಸಿರಿವಂತ್ ಅವರ ಮೊದಲ ಸಿನಿಮಾ.
ಎಚ್ ಸಿ ವೇಣು ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಸಿನಿಮಾಕ್ಕಿದೆ.
ಕಾಶ್ಮೀರದಲ್ಲಿ ಉಪೇಂದ್ರ ದಂಪತಿ
ಸದ್ಯದಲ್ಲೇ ಚಿತ್ರದ ಟೈಟಲ್, ಉಳಿದ ತಾರಾಬಳಗ ಮತ್ತು ತಂತ್ರಜ್ಞರ ಕುರಿತು ಮಾಹಿತಿ ನೀಡಲಿದ್ದಾರಂತೆ.
ಕಾಶ್ಮೀರದಲ್ಲಿ ಮಗನ ಮೊದಲ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಇದ್ದರು. ಆಗ ಮಗ ಆಯುಷ್ಗೆ ಮಾರ್ಗದರ್ಶನ ನೀಡಿದ್ದಾರೆ.
ಅಂದು ಆಯುಷ್ ಹೇಳಿದ್ದೇನು?
ಅಂದು ಸಿನಿಮಾ ಬಗ್ಗೆ ಪ್ರಶ್ನೆ ಮಾಡಿದಾಗ, ತಂದೆ ನಿರ್ದೇಶನದಲ್ಲಿ ನಾನು ನಟಿಸೋದಿಲ್ಲ, ನಾನು ಆಯುಷ್ ಆಗಿ ಬೆಳೆಯಬೇಕು, ಅಪ್ಪನ ಹೆಸರು ಇಟ್ಟುಕೊಂಡು ಬೆಳೆಯೋದಿಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅದರಂತೆ ಆಯುಷ್ ಹೆಜ್ಜೆ ಇಟ್ಟಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

