MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Rukmini Vasanth: ‘ಈ ಸಿನಿಮಾ ನನ್ನ ಜೀವನವನ್ನೇ ಬದಲಿಸಿದೆ’… ಕಾಂತಾರ ಚಾಪ್ಟರ್ 1 ಕುರಿತು ರುಕ್ಮಿಣಿ ವಸಂತ್ ಭಾವನಾತ್ಮಕ ಪತ್ರ

Rukmini Vasanth: ‘ಈ ಸಿನಿಮಾ ನನ್ನ ಜೀವನವನ್ನೇ ಬದಲಿಸಿದೆ’… ಕಾಂತಾರ ಚಾಪ್ಟರ್ 1 ಕುರಿತು ರುಕ್ಮಿಣಿ ವಸಂತ್ ಭಾವನಾತ್ಮಕ ಪತ್ರ

ಕಾಂತಾರಾ ಚಾಪ್ಟರ್ 1 ರಿಲೀಸ್ ಆಗಿದ್ದು, ಈ ವರ್ಷದ ಬ್ಲಾಕ್ ಬಸ್ಟರ್ ಸಿನಿಮಾ ಆಗಿ ಈಗಾಗಲೇ ಹೊರಹೊಮ್ಮಿದೆ. ಸಿನಿಮಾ ಬಗ್ಗೆ ಎಲ್ಲೆಡೆಯಿಂದ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿದೆ. ಈ ಸಿನಿಮಾದಲ್ಲಿ ರಾಣಿ ಕನಕವತಿ ಪಾತ್ರದಲ್ಲಿ ಮಿಂಚಿದ ನಟಿ ರುಕ್ಮಿಣಿ ವಸಂತ್ ಈ ಕುರಿತು ಭಾವನಾತ್ಮಕ ಪತ್ರ ಬರೆದಿದ್ದಾರೆ.

2 Min read
Author : Pavna Das
Published : Oct 03 2025, 10:11 AM IST
Share this Photo Gallery
  • FB
  • TW
  • Linkdin
  • Whatsapp
17
ಕಾಂತಾರಾ ಚಾಪ್ಟರ್ 1
Image Credit : Instagram

ಕಾಂತಾರಾ ಚಾಪ್ಟರ್ 1

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್ 1 ಬಿಡುಗಡೆಯಾಗಿ ಭಾರಿ ಸದ್ದು ಮಾಡುತ್ತಿದೆ. ಕಥೆ, ಚಿತ್ರಕಥೆ, ಅಬ್ಬರಕ್ಕೆ ಸಿನಿರಸಿಕರು ಮನಸೋತಿದ್ದಾರೆ. ಇನ್ನು ಈ ಸಿನಿಮಾದಲ್ಲಿ ರಾಣಿ ಕನಕವತಿಯಾಗಿ ನಟಿಸಿದ್ದು ರುಕ್ಮಿಣಿ ವಸಂತ್ (Rukmini Vasanth). ಸಿನಿಮಾ ಟ್ರೈಲರ್ ರಿಲೀಸ್ ಆದಂದಿನಿಂದ ರುಕ್ಮಿಣಿ ಟ್ರೆಂಡಿಂಗ್ ನಲ್ಲಿದ್ದಾರೆ. ಇದೀಗ ಕಾಂತಾರಾ ಸಿನಿಮಾ ಕುರಿತು ರುಕ್ಮಿಣಿ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

27
ನನ್ನ ಜೀವನವನ್ನೇ ಬದಲಾಯಿಸಿದ ಚಿತ್ರ
Image Credit : Instagram

ನನ್ನ ಜೀವನವನ್ನೇ ಬದಲಾಯಿಸಿದ ಚಿತ್ರ

ಎಲ್ಲರಿಗೂ ನಮಸ್ಕಾರ. ಒಂದು ವರ್ಷದ ಹಿಂದೆ ಕನ್ನಡದ ಹೆಮ್ಮೆ ಎನಿಸಿರುವ ಕಾಂತಾರ ಚಾಪ್ಟರ್ 1 (Kantara Chapter 1) ತಂಡ ಸೇರುವ ಅವಕಾಶ ನನಗೆ ಸಿಕ್ಕಿತು. ಈ ಚಿತ್ರದಲ್ಲಿ ಕೆಲಸ ಮಾಡುವುದು ಒಂದು ದೊಡ್ಡ ಜವಾಬ್ದಾರಿಯು ಹೌದು, ಸಾಹಸವು ಹೌದು. ಈ ಚಿತ್ರ ನನ್ನ ಜೀವನವನ್ನೇ ಬದಲಾಯಿಸಿದೆ. ನಾನು ತುಂಬಾ ಕಲಿತಿದ್ದೀನಿ ಮತ್ತು ಅದಕ್ಕಾಗಿ ನಾನು ಬಹಳ ಕೃತಜ್ಞಳಾಗಿದ್ದೇನೆ.

Related Articles

Related image1
Kantara Chapter-1: ಪಿಯುಸಿಯಲ್ಲೇ ಕಥೆ ಬರೆದಿದ್ದೆ- ಸುವರ್ಣ ಟಿವಿಗೆ Rishab Shetty ಅಚ್ಚರಿ ವಿಷ್ಯ ರಿವೀಲ್​
Related image2
Kantara 1 Movie Review: ಅಧರ್ಮದಲ್ಲಿ ನಡೆದು ದೈವವನ್ನು ಕೆಣಕಿದೋರು ಬದುಕಿದ್ದುಂಟಾ? ಅಸಲಿಗೆ ಕಾಂತಾರ ಹೇಗಿದೆ?
37
ನನ್ನನ್ನು ನಂಬಿದ ರಿಷಬ್ ಸರ್ ಗೆ ಥ್ಯಾಂಕ್ಯೂ
Image Credit : Instagram

ನನ್ನನ್ನು ನಂಬಿದ ರಿಷಬ್ ಸರ್ ಗೆ ಥ್ಯಾಂಕ್ಯೂ

ನಮ್ಮ ತಂಡದ ನಾಯಕರು, ನಿರ್ದೇಶಕರು ಆದ ರಿಷಬ್ (Rishab Shetty)ಸರ್ ಅವರಿಗೆ ತುಂಬಾ ತುಂಬಾ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ದಯೆ ಮತ್ತು ಛಲ ಈ ಚಿತ್ರವನ್ನು ತುಂಬಾ ವಿಶೇಷವಾಗಿಸಿದೆ. ನನ್ನನ್ನು ನಂಬಿದ್ದಕ್ಕೆ ಮತ್ತು ನಾನು ಬೆಳೆಯಲು ಸಹಾಯ ಮಾಡಿದ್ದಕ್ಕೆ ಧನ್ಯವಾದಗಳು. ಹೊಂಬಾಳೆ ತಂಡ ನನ್ನನ್ನು ನಿಮ್ಮ ಕುಟುಂಬದಲ್ಲಿ ಒಬ್ಬಳನ್ನಾಗಿಸಿಕೊಂಡಿದ್ದೀರಿ. ನಿಮಗೆ ನಾನು ಸದಾ ಚಿರಋಣಿ. ವಿಜಯ ಸರ್, ಚೆಲುವ ಸರ್, ಆದರ್ಶ್ ಮತ್ತು ತೆರೆ ಮರೆಯಲ್ಲಿರುವ ಎಲ್ಲರಿಗೂ ಹಾಗೂ ನಾನು ಭೇಟಿಯಾಗಲು ಸಾಧ್ಯವಾಗದ ತಂಡದ ಇತರರಿಗೂ ತುಂಬಾ ಧನ್ಯವಾದಗಳು.

47
ಪ್ರಗತಿ ಶೆಟ್ಟಿ- ಅರವಿಂದ್’ಗೆ ಧನ್ಯವಾದಗಳು
Image Credit : Instagram

ಪ್ರಗತಿ ಶೆಟ್ಟಿ- ಅರವಿಂದ್’ಗೆ ಧನ್ಯವಾದಗಳು

ನಮ್ಮ ಸೂಪರ್ ಕೂಲ್ ಕ್ಯಾಮೆರಾ ಮ್ಯಾನ್ ಅರವಿಂದ್ ಮತ್ತು ಬೆಸ್ಟ್ ಆಫ್ ದಿ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಗತಿ, ನೀವು ನನಗೆ ಸಂಪೂರ್ಣ ಹೊಸ ಲುಕ್ ಕೊಟ್ಟಿದ್ದೀರಿ ಮತ್ತು ನಾನು ಸುಂದರವಾಗಿ ಕಾಣುತ್ತಿದ್ದೇನೆ ಅಂತ ಕಾಂಪ್ಲಿಮೆಂಟ್ಸ್ ಬರ್ತಿದೆ. ಅದಕ್ಕೆ ಪ್ರಮುಖ ಕಾರಣ ನೀವೇ. ನಿಮಗೆ ವಿಶೇಷವಾದ ಧನ್ಯವಾದಗಳು. ಕಾಂತಾರದ ಅತ್ಯದ್ಭುತ ಲೋಕವನ್ನು ಸೃಷ್ಟಿ ಮಾಡಿ, ನನ್ನನ್ನು ಅದರ ಒಂದು ನೈಜ್ಯ ಭಾಗವಾಗಿರುವಂತೆ ನೋಡಿಕೊಂಡ ಕಲಾ ನಿರ್ದೇಶಕರಾದ ಬಾಂಗ್ಲಾನ್ ಅವರಿಗೆ ವಿಶೇಷ ಧನ್ಯವಾದಗಳು.

57
ಗುಲ್ಶನ್ ಮತ್ತು ಜಯರಾಂ ಜೊತೆ ಸ್ಕ್ರೀನ್ ಶೇರ್
Image Credit : Instagram

ಗುಲ್ಶನ್ ಮತ್ತು ಜಯರಾಂ ಜೊತೆ ಸ್ಕ್ರೀನ್ ಶೇರ್

ಅಜನೀಶ್ ಸರ್, ನಿಮ್ಮ ಸಂಗೀತಕ್ಕೆ ‘ರೋಮಾಂಚನ’ ಅನ್ನೋದು ಬಿಟ್ಟು ಬೇರೆ ಏನೂ ಹೇಳೋಕೆ ಸಾಧ್ಯ ಇಲ್ಲ. ಥ್ಯಾಂಕ್ಯೂ! ಅನಿ, ಗುರು ಮತ್ತು ನಿರ್ದೇಶನ ತಂಡ ಎಲ್ಲರೂ ನನ್ನ ಡೈಲಾಗ್ಸ್ ಅಲ್ಲಿ ಎಷ್ಟು ಸಹಾಯ ಮಾಡಿದ್ದೀರಾ ಅಂದ್ರೆ ನಿಮಗೆ ಈಗ ಥ್ಯಾಂಕ್ಸ್ ಹೇಳೋಕು ಯಾವ ಪದ ಬಳಸಿ ಹೇಗೆ ಹೇಳಬೇಕು ಅಂತ ನಿಮಗೆ ಕಾಲ್ ಮಾಡೋಣ ಅನಿಸಿದೆ. ನನ್ನ ಹೃದಯವು ನಿಮಗೆ ಧನ್ಯವಾದಗಳಿಂದ ತುಂಬಿದೆ. ನಮ್ಮ ನೃತ್ಯ ಸಂಯೋಜಕರು, ಘೋಷಣ್ ಮಾಸ್ಟರ್ ಗೆ ಹಾಗೂ ನಮ್ಮ ಫೈಟ್ ಮಾಸ್ಟರ್ಸ್ ಆದ ಜೂಜಿ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಅವರಿಗೆ ತುಂಬಾ ಧನ್ಯವಾದಗಳು. ಗುಲ್ಶನ್ ಸರ್ ಮತ್ತು ಜಯರಾಮ್ ಸರ್ ಜೊತೆ ಸ್ಕ್ರಿನ್ ಶೇರ್ ಮಾಡಿದ್ದು ತುಂಬಾ ಖುಷಿ ಇದೆ.

67
ನನ್ನ ತುಂಟಾಟ-ಹುಚ್ಚಾಟ ಸಹಿಸಿಕೊಂಡದ್ದಕ್ಕೆ ಥ್ಯಾಂಕ್ಯೂ
Image Credit : Instagram

ನನ್ನ ತುಂಟಾಟ-ಹುಚ್ಚಾಟ ಸಹಿಸಿಕೊಂಡದ್ದಕ್ಕೆ ಥ್ಯಾಂಕ್ಯೂ

ಕೆಟರಿಂಗ್ ತಂಡ ನಿಮ್ಮ ಶುಚಿಯಾದ ರುಚಿಯಾದ ಆಹಾರ ಮತ್ತು ನೆವರ್ ಎಮ್ಡಿಂಗ್ ಕಾಫಿ ನಮ್ಮನ್ನು ಮುನ್ನಡೆಸಿತು. ನನ್ನದೇ ಆದ ಪುಟ್ಟ ಮೇಕಪ್ ತಂಡ, ಬಿಸಿಲಿರಲಿ, ಮಳೆ ಇರಲಿ ಸದಾ ನನ್ನನ್ನು ಹೊಳೆಯುವಂತೆ ನೋಡಿಕೊಂಡವರು. ನೀವು ನನ್ನ ಹುಚ್ಚಾಟ ತುಂಟಾಟುಳೆಲ್ಲದರಲ್ಲೂ ನನ್ನ ಜೊತೆಯಾಗಿ ನಿಂತಿದ್ದೀರಿ. ಥ್ಯಾಂಕ್ಯೂ ಎಂದರೆ ಕಮ್ಮಿ ಎನಿಸುತ್ತದೆ.

77
ಕನ್ನಡ ಚಲನಚಿತ್ರ ಅಭಿಮಾನಿಗಳಿಗೆ ಧನ್ಯವಾದಗಳು
Image Credit : youtube/sreyas media

ಕನ್ನಡ ಚಲನಚಿತ್ರ ಅಭಿಮಾನಿಗಳಿಗೆ ಧನ್ಯವಾದಗಳು

ಮತ್ತು ಕೊನೆಯದಾಗಿ ಎಲ್ಲರಿಗೂ ವಿಶೇಷವಾಗಿ ನನ್ನನ್ನು ಹರಸಿ, ಹುರಿದುಂಬಿಸುತ್ತಿರುವ ಎಲ್ಲಾ ಕನ್ನಡ ಚಲನಚಿತ್ರ ಅಭಿಮಾನಿಗಳಿಗೆ ತುಂಬು ಹೃದಯದ ಅನಂತಾನಂತ ಧನ್ಯವಾದಗಳು. ನೀವು ನಾನು ಸಿಕ್ಕಾಗಿಲ್ಲ ಕನ್ನಡ ಫಿಲಂ ಯಾವಾಗ? ಅಂತ ಕೇಳ್ತಾ ಇದ್ರಿ ಇಲ್ಲಿದೆ ಉತ್ತರ. ಅಕ್ಟೋಬರ್ ಎರಡರಂದು ಚಿತ್ರಮಂದಿರದಲ್ಲಿ ನಿಮ್ಮನ್ನು ನೋಡಲು ಕಾಯ್ತಾ ಇರ್ತೀನಿ. ಎಂದು ರುಕ್ಮಿಣಿ ವಸಂತ್ ಬರೆದುಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PD
Pavna Das
ಮೂಲತಃ ಮಂಗಳೂರಿನವಳು. ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮದ ಸ್ನಾತಕೋತ್ತರ ಪದವಿ . ಕಳೆದ 12 ವರ್ಷಗಳಿಂದ ಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಕೆಲಸ . ಸುದ್ದಿ ಬಿಡುಗಡೆ, ಗಲ್ಫ್ ಕನ್ನಡಿಗ, ಈ ಟಿವಿ ಭಾರತ್, ಕನ್ನಡ ನ್ಯೂಸ್ ನೌ, ವಿಜಯಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ. ಈಗ ಏಷ್ಯಾನೆಟ್ ಸುವರ್ಣದಲ್ಲಿ ಫ್ರೀಲಾನ್ಸರ್ . ಮನೋರಂಜನೆ, ಲೈಫ್ ಸ್ಟೈಲ್, ಟ್ರಾವೆಲ್ ಬರವಣಿಗೆ ಇಷ್ಟ.
ರುಕ್ಮಿಣಿ ವಸಂತ್
ರಿಷಬ್ ಶೆಟ್ಟಿ
ಕಾಂತಾರ ಚಲನಚಿತ್ರ

Latest Videos
Recommended Stories
Recommended image1
Gilli Nata: ಜೈಲಿಗೆ ಹೋಗಿ ನಟ ದರ್ಶನ್ ಭೇಟಿಯಾಗಲು ಪ್ರಯತ್ನಿಸಿದ್ದು ನಿಜ.. ಸತ್ಯ ಒಪ್ಪಿಕೊಂಡ ಗಿಲ್ಲಿ ನಟ!
Recommended image2
26 ವರ್ಷದ ಬಳಿಕ ಕನ್ನಡಕ್ಕೆ ಮತ್ತೆ ಬರ್ತಿದ್ದಾರೆ ‘Yaare Neenu Cheluve’ ಕಮಲಿ
Recommended image3
Spirit ಚಿತ್ರದಿಂದ ಪ್ರಕಾಶ್​ ರಾಜ್​ ಕಿಕ್​ಔಟ್​! ನಿಜಕ್ಕೂ ಆಗಿದ್ದೇನು? ಮೌನ ಮುರಿದ ನಟ
Related Stories
Recommended image1
Kantara Chapter-1: ಪಿಯುಸಿಯಲ್ಲೇ ಕಥೆ ಬರೆದಿದ್ದೆ- ಸುವರ್ಣ ಟಿವಿಗೆ Rishab Shetty ಅಚ್ಚರಿ ವಿಷ್ಯ ರಿವೀಲ್​
Recommended image2
Kantara 1 Movie Review: ಅಧರ್ಮದಲ್ಲಿ ನಡೆದು ದೈವವನ್ನು ಕೆಣಕಿದೋರು ಬದುಕಿದ್ದುಂಟಾ? ಅಸಲಿಗೆ ಕಾಂತಾರ ಹೇಗಿದೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved