ದಿ ರೈಸ್ ಆಫ್ ಅಶೋಕದಲ್ಲಿ ನನ್ನ 3 ವರ್ಷಗಳ ಶ್ರಮ ಇದೆ: ನೀನಾಸಂ ಸತೀಶ್
ಹಳ್ಳಿಯಲ್ಲಿ ಸಿನಿಮಾ ಕನಸು ಕಾಣುತ್ತ ಬೆಳೆದ ನಾನು ಒನ್ ಫೈನ್ ಡೇ ಸಿನಿಮಾ ಮಾಡಬೇಕು ಎಂಬ ಕನಸಿನಲ್ಲಿ ಗಾಂಧೀನಗರಕ್ಕೆ ಬಂದೆ. ಸವಾಲುಗಳ ಸರಮಾಲೆಗಳ ನಡುವೆಯೇ ಬೆಳೆದೆ ಎಂದರು ನೀನಾಸಂ ಸತೀಶ್.

ನೀನಾಸಂ ಸತೀಶ್ ಜೂ.20ರಂದು ಹುಟ್ಟುಹಬ್ಬ ಆಚರಿಸಿದ್ದಾರೆ. ಅವರ ದಿ ರೈಸ್ ಆಫ್ ಅಶೋಕ ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅವರ ಜೊತೆ ಮಾತುಕತೆ.
ಹಳ್ಳಿಯಲ್ಲಿ ಸಿನಿಮಾ ಕನಸು ಕಾಣುತ್ತ ಬೆಳೆದ ನಾನು ಒನ್ ಫೈನ್ ಡೇ ಸಿನಿಮಾ ಮಾಡಬೇಕು ಎಂಬ ಕನಸಿನಲ್ಲಿ ಗಾಂಧೀನಗರಕ್ಕೆ ಬಂದೆ. ಸವಾಲುಗಳ ಸರಮಾಲೆಗಳ ನಡುವೆಯೇ ಬೆಳೆದೆ. ಆ ಹಂತದಿಂದ ಈ ಹಂತದವರೆಗಿನ ಬದುಕು ಎಷ್ಟು ಚಾಲೆಂಜಿಂಗ್ ಆಗಿತ್ತೋ ಅಷ್ಟೇ ಸವಾಲಾಗಿದ್ದು ‘ರೈಸ್ ಆಫ್ ಅಶೋಕ’ ಸಿನಿಮಾವನ್ನು ಕೊನೆಮುಟ್ಟಿಸುವ ಕೆಲಸ.
70ರ ದಶಕ, ಮುಡಿಕಟ್ಟೆ ಅನ್ನೋ ಊರು. ಮುಡಿ ಕೊಡೋದಕ್ಕೆ ಬರುವ ಜನ, ಅದರಿಂದಲೇ ಬದುಕು ಕಟ್ಟಿಕೊಳ್ಳುವ ಸವಿತಾ ಸಮುದಾಯ. ಅವರ ಪ್ರತಿನಿಧಿಯಂಥಾ ಅಶೋಕ ತನ್ನ ಜನರಿಗಾಗಿ ಹೇಗೆ ಕ್ರಾಂತಿಕಾರಿಯಾಗಿ ಬೆಳೆಯುತ್ತಾನೆ ಅನ್ನುವ ಅಂಶವೇ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಹೈಲೈಟ್.
ನೈಜ ಘಟನೆಗಳಿಂದಲೂ ಪ್ರೇರಣೆ ಪಡೆಯಲಾಗಿದೆ. ಒಮ್ಮೆ ಸಿನಿಮಾ ನೋಡಲು ಕೂತರೆ ಕೊನೆಯವರೆಗೂ ಅಲ್ಲಾಡಲ್ಲ, ಅಷ್ಟು ತೀವ್ರವಾಗಿ ಈ ಚಿತ್ರ ಪ್ರೇಕ್ಷಕನನ್ನು ಹಿಡಿದಿಡುತ್ತದೆ. ಸದ್ಯಕ್ಕೀಗ ಸಿನಿಮಾದ ಪೋಸ್ಟ್ಪ್ರೊಡಕ್ಷನ್ ಕೆಲಸ ಭರದಿಂದ ನಡೆಯುತ್ತಿದೆ.
ಆಗಸ್ಟ್ ಹೊತ್ತಿಗೆ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ಸಿನಿಮಾ ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಏಕೆಂದರೆ ಸಿನಿಮಾ ಕಥೆ ಅಷ್ಟು ಗಟ್ಟಿಯಾಗಿದೆ. ಇದರ ಜೊತೆಗೆ ‘ಅಯೋಗ್ಯ 2’ ಸಿನಿಮಾವೂ ಟೇಕಾಫ್ ಆಗ್ತಿದೆ. ಜುಲೈಯಲ್ಲಿ ಆ ಸಿನಿಮಾ ಶೂಟ್ನಲ್ಲಿ ಭಾಗಿಯಾಗುವೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

