MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಮೇ.17ರಿಂದ ಮೇ.21ರವರೆಗೆ ಹೆಬ್ಬಾಳ ಮೇಲ್ಸೇತುವೆ ಭಾಗಶಃ ಬಂದ್; ಪರ್ಯಾಯ ಮಾರ್ಗ ಇಲ್ಲಿದೆ ನೋಡಿ!

ಮೇ.17ರಿಂದ ಮೇ.21ರವರೆಗೆ ಹೆಬ್ಬಾಳ ಮೇಲ್ಸೇತುವೆ ಭಾಗಶಃ ಬಂದ್; ಪರ್ಯಾಯ ಮಾರ್ಗ ಇಲ್ಲಿದೆ ನೋಡಿ!

ಮೇ 17 ರಿಂದ 21 ರವರೆಗೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ಹೆಚ್ಚುವರಿ ರಾಂಪ್ ಅಳವಡಿಕೆ ಕಾಮಗಾರಿಯಿಂದಾಗಿ ರಾತ್ರಿ 12 ರಿಂದ ಬೆಳಿಗ್ಗೆ 3 ರವರೆಗೆ ಸಂಚಾರ ನಿರ್ಬಂಧ. ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ಸಾಗುವ ವಾಹನಗಳು ಪರ್ಯಾಯ ಮಾರ್ಗ ಬಳಸಬೇಕು.

1 Min read
Author : Sathish Kumar KH
Published : May 17 2025, 08:45 AM IST
Share this Photo Gallery
  • FB
  • TW
  • Linkdin
  • Whatsapp
15

ಬೆಂಗಳೂರು (ಮೇ 17): ಹೆಬ್ಬಾಳ ಮೇಲ್ಸೇತುವೆಯಲ್ಲಿ ಹೆಚ್ಚುವರಿ ರಾಂಪ್ ಅಳವಡಿಸುವ ಕಾಮಗಾರಿಯ ಹಿನ್ನೆಲೆಯಲ್ಲಿ, ಮೇ 17 ರಿಂದ ಮೇ 21ರ ತನಕ 5 ದಿನಗಳ ಕಾಲ ಮೆಲ್ಸೇತುವೆಯ ಒಂದು ಭಾಗವನ್ನು ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿದಿನ ರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆಯವರೆಗೆ ಈ ಕಾಮಗಾರಿ ನಡೆಯಲಿದ್ದು, ಈ ಅವಧಿಯಲ್ಲಿ ಕೆಲವು ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧಿತವಾಗಲಿದೆ.

25

ಕಾಮಗಾರಿಯ ವಿವರ: ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಾಗುವ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರಾಂಪ್ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಇದರ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ ಏಳು ಉಕ್ಕಿನ ಗರ್ಡರ್‌ಗಳನ್ನು ಅಳವಡಿಸಲಾಗುತ್ತಿದೆ. ಸುರಕ್ಷತಾ ಕ್ರಮವಾಗಿ, ಈ ಕಾಮಗಾರಿ ನಡೆಯುವ ವೇಳೆ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ.

Related Articles

Related image1
ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
Related image2
Bengaluru: ಬಾಸ್‌ನ 1.51 ಕೋಟಿ ಕದ್ದು, ದೇವಸ್ಥಾನದ ಹುಂಡಿಗೆ ಹಾಕಿದ ಡ್ರೈವರ್‌!
35

ಸಂಚಾರ ಬಂದ್ ವಿವರ:
ದಿನಾಂಕ: ಮೇ 17 ರಿಂದ ಮೇ 21ರವರೆಗೆ
ಸಮಯ: ಪ್ರತಿದಿನ ರಾತ್ರಿ 12 ರಿಂದ ಬೆಳಗಿನ ಜಾವ 3 ಗಂಟೆ ತನಕ
ಪ್ರಭಾವಿತ ಮಾರ್ಗ: ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ಸಾಗುವ ಹೆಬ್ಬಾಳ ಮೇಲ್ಸೇತು
ಯಾವ ವಾಹನಗಳಿದೆ ನಿಷೇಧ: ಎಲ್ಲಾ ರೀತಿಯ ವಾಹನಗಳಿಗೆ ನಿಷೇಧ

45

ಪರ್ಯಾಯ ಮಾರ್ಗದ ಸೂಚನೆ:
ಈ ಅವಧಿಯಲ್ಲಿ ಏರ್ಪೋರ್ಟ್ ಅಥವಾ ಎಸ್ಟೀಮ್ ಮಾಲ್‌ನಿಂದ ಮೇಖ್ರಿ ವೃತ್ತದ ಕಡೆಗೆ ತೆರಳುವ ವಾಹನಚಾಲಕರು ಈ ಕೆಳಗಿನ ಪರ್ಯಾಯ ಮಾರ್ಗವನ್ನು ಅನುಸರಿಸಬಹುದು:
ಎಸ್ಟೀಮ್ ಮಾಲ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಪ್ರವೇಶ ಪಡೆಯಬೇಕು
ಹೆಬ್ಬಾಳ ವೃತ್ತದಲ್ಲಿ ಹೊರವರ್ತುಲಕ್ಕೆ ಬಲ ತಿರುಗಬೇಕು
ತುಮಕೂರು ರಸ್ತೆಯ ಮೂಲಕ ಚಲಿಸಬೇಕು
ನಂತರ, ಕುವೆಂಪು ವೃತ್ತದಲ್ಲಿ ಎಡ ತಿರುಗಿ
ನ್ಯೂ ಬಿಇಎಲ್ ರಸ್ತೆಯ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದು

55

ನಗರದ ಬಹುಮುಖ್ಯ ಸಂಚಾರದ ಕೇಂದ್ರವಾಗಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ನಡೆಯುತ್ತಿರುವ ಇಂಜಿನಿಯರಿಂಗ್ ಕಾಮಗಾರಿ ಕಾರಣದಿಂದಾಗಿ ಕೆಲ ಸಮಯದ ತಾತ್ಕಾಲಿಕ ಅಡಚಣೆಗೊಳಗಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಈ ಸಮಯದಲ್ಲಿ ಪರ್ಯಾಯ ಮಾರ್ಗಗಳನ್ನು ಉಪಯೋಗಿಸಿ, ಸಹಕಾರ ನೀಡಬೇಕಾಗಿ ನಗರ ಪೊಲೀಸ್ ಇಲಾಖೆ ವಿನಂತಿಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಂಗಳೂರು ಸಂಚಾರ
ಬೆಂಗಳೂರು
ಪ್ರವಾಸ

Latest Videos
Recommended Stories
Recommended image1
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
Recommended image2
ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ: ಸಚಿವ ಎಂ.ಬಿ.ಪಾಟೀಲ್
Recommended image3
ಶಕ್ತಿಯಡಿ ಸರ್ಕಾರದಿಂದ ಸಾರಿಗೆ ನಿಗಮಕ್ಕೆ ₹4000 ಕೋಟಿ ಬಾಕಿ: ಸಚಿವ ರಾಮಲಿಂಗಾರೆಡ್ಡಿ
Related Stories
Recommended image1
ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
Recommended image2
Bengaluru: ಬಾಸ್‌ನ 1.51 ಕೋಟಿ ಕದ್ದು, ದೇವಸ್ಥಾನದ ಹುಂಡಿಗೆ ಹಾಕಿದ ಡ್ರೈವರ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved