MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • Chitradurga: ಮಗಳೆಂಬ ಮಮತೆಯ ಒಡಲನ್ನೇ ಸುಟ್ಟು ಕರಕಲು ಮಾಡಿದ ಬಸ್ ದುರಂತ!

Chitradurga: ಮಗಳೆಂಬ ಮಮತೆಯ ಒಡಲನ್ನೇ ಸುಟ್ಟು ಕರಕಲು ಮಾಡಿದ ಬಸ್ ದುರಂತ!

Chitradurga Bus Fire: 5 Women Killed, DNA Tests to Identify Victims ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಐವರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಸ್‌ನಲ್ಲಿದ್ದ 33 ಪ್ರಯಾಣಿಕರ ಪೈಕಿ ಐವರು ಮೃತಪಟ್ಟಿದ್ದು, ಮದುವೆ ನಿಶ್ಚಯವಾಗಿದ್ದ ಯುವತಿಯರ ಸಾವಾಗಿದೆ.

2 Min read
Author : Santosh Naik
Published : Dec 25 2025, 04:07 PM IST
Share this Photo Gallery
  • FB
  • TW
  • Linkdin
  • Whatsapp
19
Image Credit : Asianet News

ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಖಾಸಗಿ ಬಸ್‌ ಅಪಘಾತದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 5 ಎಂದು ಚಿತ್ರದುರ್ಗ ಎಸ್‌ಪಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಮೃತಪಟ್ಟವರೆಲ್ಲರೂ ಹೆಣ್ಣುಮಕ್ಕಳಾಗಿದ್ದಾರೆ.

29
Image Credit : Asianet News

ಬಸ್‌ನಲ್ಲಿ ಒಟ್ಟು 33 ಜನ ಪ್ರಯಾಣಿಕರಿದ್ದರು. 29 ಸೀಟ್‌ ಬುಕ್ಕಿಂಗ್‌ ಆಗಿದ್ದರೆ, 28 ಮಂದಿ ಪ್ರಯಾಣಕ್ಕೆ ಬಂದಿದ್ದರು. ಮಾರ್ಗಮಧ್ಯೆ ಇಬ್ಬರು ಪ್ರಯಾಣಿಕರು ಬಸ್‌ಗೆ ಹತ್ತಿದ್ದರು. ತಲಾ ಒಬ್ಬ ಡ್ರೈವರ್‌ ಹಾಗೂ ಕಂಡಕ್ಟರ್‌ ಸೇರಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು.

Related Articles

Related image1
ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್
Related image2
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
39
Image Credit : Asianet News

ಒಟ್ಟು ಜೀವಂತವಾಗಿರುವ ಪ್ರಯಾಣಿಕರ ಸಂಖ್ಯೆ 28 ಮಂದಿ. ಬಸ್‌ನಲ್ಲಿ ಒಟ್ಟು 4 ಮೃತದೇಹಗಳು ಸಿಕ್ಕಿದ್ದು, ಇನ್ನೂ ಒಬ್ಬರ ಬಗ್ಗೆ ಮಾಹಿತಿ ಸಿಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

49
Image Credit : Asianet News

5 ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮೇಲ್ನೋಟದಿಂದ ಅವುಗಳನ್ನು ಗುರುತಿಸುವುದು ಕಷ್ಟಸಾಧ್ಯ ಎಂದು ಪೊಲೀಸರು ಹೇಳಿದ್ದು, ಡಿಎನ್‌ಎ ಮ್ಯಾಚಿಂಗ್‌ ಮೂಲಕ ಶವವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ.

59
Image Credit : Asianet News

ಮೃತಪಟ್ಟ ವ್ಯಕ್ತಿಗಳಲ್ಲಿ ಬಿಂದು ಬೆಂಗಳೂರು ಮೂಲದವರಾಗಿದ್ದು, ಬಸ್‌ನಲ್ಲಿ 8L ಸೀಟ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಸ್ನೇಹಿತೆ ಕವಿತಾ ಅವರ ಬ್ಯಾಚುಲರೇಟ್‌ ಪಾರ್ಟಿಗಾಗಿ ಗೋಕರ್ಣಕ್ಕೆ ತನ್ನ ಮಗಳೊಂದಿಗೆ ಪ್ರಯಾಣ ಮಾಡುತ್ತಿದ್ದರು,

69
Image Credit : Asianet News

ಗ್ರೇಯ ಎನ್ನುವವರು ಬಿಂದು ಅವರ ಎಂಟು ವರ್ಷದ ಪುತ್ರಿ. ಆಕೆಗೆ ಟಿಕೆಟ್‌ ಖರೀದಿ ಮಾಡಿರಲಿಲ್ಲ. ಬಿಂದು ಅವರೊಂದಿಗೆ 8L ಸೀಟ್‌ನಲ್ಲಿಯೇ ಪ್ರಯಾಣ ಮಾಡಿದ್ದರು.

79
Image Credit : Asianet News

2L ಸೀಟ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಮಾನಸ ಅವರೂ ಸಾವು ಕಂಡಿದ್ದಾರೆ. ಚೆನ್ನರಾಯಪಟ್ಟಣ ಮೂಲದವರಾಗಿದ್ದು, ಇನ್ನು 6 ತಿಂಗಳಲ್ಲಿ ಅವರ ಮದುವೆ ಆಗುವುದರಲ್ಲಿತ್ತು. ಆಕೆಗೆ ನೀಡಿದ್ದ ಚಿನ್ನದ ಸರವನ್ನು ತಂದೆ ಚಂದ್ರೇಗೌಡ ನೀಡಿದ್ದರು. ಆ ಮೂಲಕ ಆಕೆಯ ಶವ ಗುರುತಿಸಲಾಗಿದೆ.

89
Image Credit : Asianet News

11L ಸೀಟ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ನವ್ಯಾ ಕೂಡ ಚೆನ್ನರಾಯಪಟ್ಟಣದವರು. ಏಪ್ರಿಲ್‌ 28ಕ್ಕೆ ಅವರ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗೆ ಆಕೆಯ ಎಂಗೇಜ್‌ಮೆಂಟ್‌ ಕೂಡ ನಡೆದಿತ್ತು ಎಂದು ಆಕೆಯ ತಂದೆ ಮಂಜಪ್ಪ ಹೇಳಿದ್ದಾರೆ.

99
Image Credit : Asianet News

11U ಸೀಟ್‌ನಲ್ಲಿ ಭಟ್ಕಳ ಮೂಲದ ರಶ್ಮಿ ಮಹಾಲೆ ಪ್ರಯಾಣ ಮಾಡುತ್ತಿದ್ದರು. ಆಕೆಯೂ ಕೂಡ ಸಾವು ಕಂಡಿದ್ದಾರೆ. ತನ್ನ ಸ್ನೇಹಿತೆಯರಾದ ಗಗನಾ ಹಾಗೂ ರಕ್ಷಿತಾ ಜೊತೆ ಅವರು ಗೋಕರ್ಣಕ್ಕೆ ಪ್ರಯಾಣ ಮಾಡುತ್ತಿದ್ದರು. ಆರಂಭದಲ್ಲಿ ಇವರು ಸೇಫ್‌ ಎನ್ನಲಾಗಿತ್ತಾದರೂ, ಪೊಲೀಸರು ಈಕೆ ಸಾವು ಕಂಡಿರುವುದನ್ನು ಖಚಿತಪಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕರ್ನಾಟಕ ಸುದ್ದಿ
ಚಿತ್ರದುರ್ಗ
ಅಪಘಾತ
ರಸ್ತೆ ಸಾರಿಗೆ
ಅಗ್ನಿ ಅವಘಡ

Latest Videos
Recommended Stories
Recommended image1
ಚಿತ್ರದುರ್ಗ ಬಸ್‌ ದುರಂತದಲ್ಲಿ 6 ಮಂದಿ ಸಜೀವ ದಹನ, ಎಸ್‌ಪಿ ಸ್ಪಷ್ಟನೆ, ಇಬ್ಬರು ಗೆಳತಿಯರ ಮೃತದೇಹ ಗುರುತಿಸಲು ಚೈನ್ ಅಡ್ಡಿ!
Recommended image2
Now Playing
ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Recommended image3
ವರ್ಷಾಂತ್ಯ, ಹೊಸವರ್ಷದ ಸಂಭ್ರಮ ಹಾಳು ಮಾಡುವ ಘೋರ ದುರಂತಗಳು, ಡಿಸೆಂಬರ್‌-ಜನವರಿಯಲ್ಲೇ ಅಪಘಾತ ಆಗೋದ್ಯಾಕೆ?
Related Stories
Recommended image1
ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್
Recommended image2
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved