MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್

ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್

ಗೋಕರ್ಣ ಪ್ರವಾಸಕ್ಕೆ ಹೊರಟಿದ್ದ ಬೆಂಗಳೂರಿನ ಐಟಿ ಉದ್ಯೋಗಿಗಳ ತಂಡ ಚಿತ್ರದುರ್ಗದ ಬಳಿ ಭೀಕರ ಬಸ್ ಅಪಘಾತಕ್ಕೆ ಸಿಲುಕಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 27 ವರ್ಷದ ಬಿಂದು ಮತ್ತು ಅವರ 8ವರ್ಷದ ಮಗಳು ಶ್ರೀಯಾ ನಾಪತ್ತೆಯಾಗಿದ್ದಾರೆ. ಕುಟುಂಬಸ್ಥರು ಅವರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

2 Min read
Author : Gowthami K
Published : Dec 25 2025, 01:33 PM IST
Share this Photo Gallery
  • FB
  • TW
  • Linkdin
  • Whatsapp
15
 ದುರಂತದಲ್ಲಿ ಮಿಸ್‌ ಆಗಿರುವ ತಾಯಿ ಮತ್ತು ಮಗಳು
Image Credit : Asianet News

ದುರಂತದಲ್ಲಿ ಮಿಸ್‌ ಆಗಿರುವ ತಾಯಿ ಮತ್ತು ಮಗಳು

ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಬಸ್ ದುರಂತವು ಬೆಂಗಳೂರಿನ ಮಾವಳ್ಳಿ ನಿವಾಸದ ಕುಟುಂಬ ಹಾಗೂ ಸಹದ್ಯೋಗಿಗಳ ಬದುಕನ್ನೇ ಅಸ್ತವ್ಯಸ್ತಗೊಳಿಸಿದೆ. ತಂಡದಲ್ಲಿದ್ದ ಕವಿತಾ ಎಂಬಾಕೆಯ ಮದುವೆ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಬ್ಯಾಚುಲರ್‌ ಪಾರ್ಟಿ ಮತ್ತು ಮತ್ತು ಕ್ರಿಸ್ಮಸ್ ರಜೆಯ ಪ್ರಯುಕ್ತ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದ ಏಳು ಜನರ ತಂಡ ಅಪಘಾತಕ್ಕೆ ಸಿಲುಕಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನೂ 27 ವರ್ಷದ ಬಿಂದು ಹಾಗೂ ಆಕೆಯ 8ವರ್ಷದ ಪುತ್ರಿ ಶ್ರೀಯಾ ನಾಪತ್ತೆಯಾಗಿದ್ದು, ಅವರಿಗಾಗಿ ಕುಟುಂಬ ಹುಡುಕಾಟ ನಡೆಸುತ್ತಿದೆ.

25
ಟ್ರಿಪ್ ಗೂ ಮುನ್ನ ತೆಗೆದುಕೊಂಡ ಫೋಟೋ
Image Credit : Asianet News

ಟ್ರಿಪ್ ಗೂ ಮುನ್ನ ತೆಗೆದುಕೊಂಡ ಫೋಟೋ

ಬೆಂಗಳೂರಿನ ಮಾವಳ್ಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಕವಿತಾ ಹಾಗೂ ಮಂಜುನಾಥ್ ಸೇರಿದಂತೆ ಏಳು ಮಂದಿ ಗೋಕರ್ಣ ಪ್ರವಾಸಕ್ಕೆ ಹೊರಟಿದ್ದರು. ಮಂಜುನಾಥ್, ಕವಿತಾ, ದಿಲೀಪ್, ಸಂಧ್ಯಾ, ಶಶಾಂಕ್, ಬಿಂದು ಹಾಗೂ ಪುಟ್ಟ ಮಗು ಗ್ರೀಯಾ ಎಲ್ಲರೂ ಒಂದೇ ತಂಡವಾಗಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ಹೆಚ್ಚಿನವರು ಐಟಿ ಕಂಪನಿಗಳಲ್ಲಿ ಉದ್ಯೋಗಿಗಳಾಗಿದ್ದು, ಸಹದ್ಯೋಗಿಗಳಾಗಿಯೇ ಈ ಪ್ರವಾಸವನ್ನು ಯೋಜಿಸಿದ್ದರು.

Related Articles

Related image1
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
Related image2
ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ
35
ದುರಂತದಲ್ಲಿ ಗಾಯಗೊಂಡ ಮಂಜುನಾಥ್
Image Credit : Asianet News

ದುರಂತದಲ್ಲಿ ಗಾಯಗೊಂಡ ಮಂಜುನಾಥ್

ಮಾವಳ್ಳಿಯಿಂದ ಮೂರು ದಿನಗಳ ಗೋಕರ್ಣ ಟ್ರಿಪ್‌ಗಾಗಿ ಹೊರಟಿದ್ದ ಈ ತಂಡ, ಮಧ್ಯರಾತ್ರಿ ಚಿತ್ರದುರ್ಗದ ಬಳಿ ನಡೆದ ಭೀಕರ ಬಸ್ ಅಪಘಾತಕ್ಕೆ ಸಿಲುಕಿತು. ಅಪಘಾತದಲ್ಲಿ ಮಂಜುನಾಥ್‌ಗೆ ಗಂಭೀರ ಗಾಯಗಳಾಗಿದ್ದು, ವಿಶೇಷವಾಗಿ ಸೊಂಟದ ಕೆಳಭಾಗ ಹಾಗೂ ಎಡ ಕಾಲಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ತಕ್ಷಣವೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ತೀವ್ರ ನಿಗಾ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಣಾಪಾಯ ಇಲ್ಲ ಎನ್ನುವ ಮಾಹಿತಿ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ನೀಡಿದೆ. ಇನ್ನೂ ಅಪಘಾತದಲ್ಲಿ ಶಶಾಂಕ್ ಹಾಗೂ ಸಂಧ್ಯಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರೂ ವಿಠಲ್ ಮಲ್ಯ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

45
ಮದುಮಗಳು ಕವಿತಾ ಮತ್ತು ಸಂಬಂಧಿಕರು
Image Credit : Asianet News

ಮದುಮಗಳು ಕವಿತಾ ಮತ್ತು ಸಂಬಂಧಿಕರು

ಆದರೆ ಈ ದುರಂತದಲ್ಲಿ ಅತ್ಯಂತ ನೋವಿನ ಸಂಗತಿ ಎಂದರೆ, ಬಿಂದು ಹಾಗೂ ಆಕೆಯ 8 ವರ್ಷದ ಮಗಳು ಶ್ರೀಯಾ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ತಾಯಿ–ಮಗು ನಾಪತ್ತೆಯಾಗಿರುವ ಸುದ್ದಿ ಕುಟುಂಬಸ್ಥರನ್ನು ಕಂಗಾಲು ಮಾಡಿದೆ. ಬಿಂದುಗಾಗಿ ಕುಟುಂಬಸ್ಥರು ಆಸ್ಪತ್ರೆಗಳಿಂದ ಹಿಡಿದು ಅಪಘಾತ ಸ್ಥಳದವರೆಗೂ ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಂಜುನಾಥ್ ಸಹೋದರ ದೀಪಕ್ ಮಾತನಾಡಿ, “ನಮ್ಮ ತಂಡದಲ್ಲಿ ಏಳು ಜನರಿದ್ದರು. ಮಂಜುನಾಥ್ ಹೊರತುಪಡಿಸಿ ಉಳಿದ ಆರು ಮಂದಿ ಸಂಬಂಧಿಕರು ಮತ್ತು ಆತ್ಮೀಯರು. ಬ್ಯಾಚುಲರ್ ಪಾರ್ಟಿ ಹಾಗೂ ರಜೆಯ ಕಾರಣ ಗೋಕರ್ಣಕ್ಕೆ ಹೊರಟಿದ್ದೆವು. ಈಗ ತಾಯಿ–ಮಗು ಕುರಿತು ಯಾವುದೇ ಮಾಹಿತಿ ಸಿಗದೇ ಇರುವುದು ನಮ್ಮನ್ನು ತೀವ್ರವಾಗಿ ಕಾಡುತ್ತಿದೆ,” ಎಂದು ಹೇಳಿದರು.

55
ಕವಿತಾ ತಂದೆ ಕಾಂತರಾಜು ಮಾಹಿತಿ
Image Credit : Asianet News

ಕವಿತಾ ತಂದೆ ಕಾಂತರಾಜು ಮಾಹಿತಿ

ಇನ್ನೊಂದೆಡೆ, ಕವಿತಾ ಕುಟುಂಬಕ್ಕೂ ಈ ಅಪಘಾತ ಭಾರೀ ಆಘಾತ ತಂದಿದೆ. ಕವಿತಾ ತಂದೆ ಕಾಂತರಾಜು ಮಾತನಾಡಿ, “ಫೆಬ್ರುವರಿಯಲ್ಲಿ ನನ್ನ ಮಗಳು ಕವಿತಾ ಮದುವೆ ನಿಗದಿಯಾಗಿತ್ತು. ಅದಕ್ಕಾಗಿ ರಜೆ ಸಮಯದಲ್ಲಿ ಕುಟುಂಬ ಹಾಗೂ ಸ್ನೇಹಿತರು ಸೇರಿ ಪ್ರವಾಸಕ್ಕೆ ಹೊರಟಿದ್ದರು. ಇಂದು ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಅಪಘಾತದ ವಿಷಯ ತಿಳಿಯಿತು. ಮಗಳು ಬಸ್‌ನಿಂದ ಜಿಗಿದ ಕಾರಣ ಸ್ವಲ್ಪ ನೋವು ಆಗಿದೆ ಎಂದು ಹೇಳಿದ್ದಾರೆ,” ಎಂದು ಮಾಹಿತಿ ನೀಡಿದ್ದಾರೆ. ಕವಿತಾ, ಮಂಜುನಾಥ್ ಹಾಗೂ ಇತರರು ಎಲ್ಲರೂ ಮಾವಳ್ಳಿ–ಶ್ರೀನಿವಾಸಪುರ ಭಾಗದವರಾಗಿದ್ದು, ಒಂದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಸಂತಸದ ಪ್ರವಾಸವಾಗಿ ಆರಂಭವಾದ ಈ ಪ್ರಯಾಣ, ಕ್ಷಣಮಾತ್ರದಲ್ಲಿ ದುಃಖದ ದುರಂತವಾಗಿ ಮಾರ್ಪಟ್ಟಿದೆ.

ಚಿತ್ರದುರ್ಗ ಬಸ್ ದುರಂತದಲ್ಲಿ ತಾಯಿ–ಮಗು ನಾಪತ್ತೆ ಪ್ರಕರಣವು ಇನ್ನೂ ಆತಂಕದಲ್ಲಿದ್ದು, ಪೊಲೀಸ್ ಹಾಗೂ ರಕ್ಷಣಾ ತಂಡಗಳಿಂದ ಹುಡುಕಾಟ ಮುಂದುವರಿದಿದೆ. ಬಿಂದು ಹಾಗೂ ಪುಟ್ಟ ಗ್ರೀಯಾ ಸುರಕ್ಷಿತವಾಗಿ ಪತ್ತೆಯಾಗಲಿ ಎಂಬುದೇ ಇದೀಗ ಕುಟುಂಬಸ್ಥರು ಹಾಗೂ ಸಾರ್ವಜನಿಕರ ಪ್ರಾರ್ಥನೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಿತ್ರದುರ್ಗ
ಬೆಂಗಳೂರು
ಅಪಘಾತ
ಅಗ್ನಿ ಅವಘಡ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಚಿತ್ರದುರ್ಗ ಬಸ್‌ ದುರಂತದಲ್ಲಿ 6 ಮಂದಿ ಸಜೀವ ದಹನ, ಎಸ್‌ಪಿ ಸ್ಪಷ್ಟನೆ, ಇಬ್ಬರು ಗೆಳತಿಯರ ಮೃತದೇಹ ಗುರುತಿಸಲು ಚೈನ್ ಅಡ್ಡಿ!
Recommended image2
Now Playing
ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Recommended image3
ವರ್ಷಾಂತ್ಯ, ಹೊಸವರ್ಷದ ಸಂಭ್ರಮ ಹಾಳು ಮಾಡುವ ಘೋರ ದುರಂತಗಳು, ಡಿಸೆಂಬರ್‌-ಜನವರಿಯಲ್ಲೇ ಅಪಘಾತ ಆಗೋದ್ಯಾಕೆ?
Related Stories
Recommended image1
ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ
Recommended image2
ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved