MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ

ಚಿತ್ರದುರ್ಗ ಬಸ್ ದುರಂತ: ಏ.28ಕ್ಕೆ ಮದುವೆ, ಎಲ್ಲಿದ್ದೀಯಮ್ಮಾ...ಫೋಟೋ ಹಿಡಿದುಕೊಂಡು ಆಸ್ಪತ್ರೆಯಲ್ಲಿ ಹಾಸನದ ಅಪ್ಪನ ಹುಡುಕಾಟ

ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದ ನಂತರ, ಹಾಸನದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ನವ್ಯ ಮತ್ತು ಮಾನಸ ಕಣ್ಮರೆಯಾಗಿದ್ದಾರೆ. ಏಪ್ರಿಲ್‌ನಲ್ಲಿ ಮದುವೆ ನಿಗದಿಯಾಗಿದ್ದ ನವ್ಯ ಸೇರಿದಂತೆ ಮಕ್ಕಳಿಗೆ ಪೋಷಕರು ಆಸ್ಪತ್ರೆಗಳಲ್ಲಿ ಕಣ್ಣೀರಿನೊಂದಿಗೆ ಹುಡುಕಾಟ ನಡೆಸುತ್ತಿದ್ದಾರೆ.

2 Min read
Author : Gowthami K
Published : Dec 25 2025, 12:27 PM IST
Share this Photo Gallery
  • FB
  • TW
  • Linkdin
  • Whatsapp
15
ಮಕ್ಕಳನ್ನು ಕಾಣದೇ ಪೋಷಕರು ಕಂಗಾಲು
Image Credit : Asianet News

ಮಕ್ಕಳನ್ನು ಕಾಣದೇ ಪೋಷಕರು ಕಂಗಾಲು

ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತ ಪ್ರಕರಣವು ರಾಜ್ಯದಾದ್ಯಂತ ತೀವ್ರ ನೋವು ಮತ್ತು ಆತಂಕ ಮೂಡಿಸಿದೆ. ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ (Hassan) ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ. ಮಕ್ಕಳನ್ನು ಕಾಣದೇ ಪೋಷಕರು ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನವ್ಯ ಮತ್ತು ಮಾನಸ ಅವರೇ ಅಪಘಾತದ ಬಳಿಕ ಪತ್ತೆಯಾಗದೆ ಇರುವ ಇಬ್ಬರು ಯುವತಿಯರು.

25
ಹಾಸನದ ಆತ್ಮೀಯ ಗೆಳತಿಯರು
Image Credit : Asianet News

ಹಾಸನದ ಆತ್ಮೀಯ ಗೆಳತಿಯರು

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನಿವಾಸಿಯಾದ ನವ್ಯ ಹಾಗೂ ಚನ್ನರಾಯಪಟ್ಟಣದ ಮಾನಸ, ಇಬ್ಬರೂ ಆತ್ಮೀಯ ಗೆಳತಿಯರು. ಹಾಸನದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ್ದ ಅವರು, ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಪೂರ್ಣಗೊಳಿಸಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಉದ್ಯೋಗ ಹಾಗೂ ಜೀವನದಲ್ಲಿ ಮುಂದಿನ ಹಂತಕ್ಕೆ ಹೆಜ್ಜೆ ಇಡುತ್ತಿದ್ದ ಈ ಯುವತಿಯರು ಬೆಂಗಳೂರಿನಿಂದ ಬಸ್‌ನಲ್ಲಿ ಪ್ರಯಾಣ ಆರಂಭಿಸಿದ್ದರು. ಆದರೆ ಮಧ್ಯರಾತ್ರಿ ಚಿತ್ರದುರ್ಗದ ಬಳಿ ನಡೆದ ಭೀಕರ ಅಪಘಾತವು ಅವರ ಜೀವನದ ದಿಕ್ಕನ್ನೇ ಬದಲಿಸಿದೆ. ಅಪಘಾತದ ಬಳಿಕ ನವ್ಯ ಮತ್ತು ಮಾನಸ ಅವರ ಯಾವುದೇ ಸುಳಿವು ಲಭ್ಯವಾಗದೇ ಇರುವುದರಿಂದ, ಅವರ ಪೋಷಕರು ಆತಂಕದಲ್ಲಿ ಮುಳುಗಿದ್ದಾರೆ. ಮಗಳ ಫೋಟೋ ಹಿಡಿದುಕೊಂಡೇ ಆಸ್ಪತ್ರೆಯಿಂದ ಆಸ್ಪತ್ರೆಗೆ ನವ್ಯ ತಂದೆ ಮಂಜಪ್ಪ ಅಲೆದಾಡುತ್ತಿರುವ ದೃಶ್ಯಗಳು ಕಣ್ಣೀರು ತರಿಸುವಂತಿವೆ.

Related Articles

Related image1
ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ
Related image2
ಚಿತ್ರದುರ್ಗ ಬಸ್ ದುರಂತ; ಬೆಂಕಿಯಿಂದ 45 ಶಾಲಾ ಮಕ್ಕಳನ್ನು ರಕ್ಷಿಸಿ ರಾಜ್ಯದ ಹೀರೋ ಆದ ಸಚಿನ್!
35
ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಹುಡುಕಾಟ
Image Credit : Asianet News

ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಹುಡುಕಾಟ

ಅಪಘಾತದ ಸುದ್ದಿ ತಿಳಿದ ತಕ್ಷಣವೇ ನವ್ಯ ತಂದೆ ಮಂಜಪ್ಪ ಹಾಗೂ ಮಾನಸ ತಾಯಿ ದ್ರಾಕ್ಷಾಯಣಿ ಅವರು ಚಿತ್ರದುರ್ಗದ ಹಿರಿಯೂರು ತಾಲೂಕು ಆಸ್ಪತ್ರೆಗೆ ಆಗಮಿಸಿ ತಮ್ಮ ಮಕ್ಕಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಪ್ರತಿ ವಾರ್ಡ್, ಪ್ರತಿ ಬೆಡ್‌ ಪರಿಶೀಲಿಸುತ್ತಾ, ಗಾಯಾಳುಗಳ ಪಟ್ಟಿ ನೋಡುತ್ತಾ, ಜೀವದಾಳದಲ್ಲಿ ಒಂದಾದರೂ ಸುಳಿವು ಸಿಗಬಹುದೆಂಬ ಭರವಸೆಯೊಂದಿಗೆ ಕಣ್ಣೀರಿಡುತ್ತಿದ್ದಾರೆ. ಸ್ನೇಹಿತೆ ಮಿಲನ ಅವರಿಂದ ಮಾಹಿತಿ ಪಡೆದುಕೊಂಡ ವೇಳೆ ಹೆತ್ತವರಿಗೆ ಬರಸಿಡಿಲು ಹೊಡೆದಂತಾಗಿದೆ “ಮಗಳು ಸುರಕ್ಷಿತವಾಗಿ ಮರಳಲಿ ಎಂಬುದೇ ನಮ್ಮ ಒಂದೇ ಪ್ರಾರ್ಥನೆ,” ಎಲ್ಲಿದ್ದಿಯಮ್ಮಾ.... ಎಂದು ಪೋಷಕರು ಅಳುತ್ತಿದ್ದಾರೆ.

45
ಸಿಗಂದೂರಿಗೆ ಹೊರಟಿದ್ದರು
Image Credit : Asianet News

ಸಿಗಂದೂರಿಗೆ ಹೊರಟಿದ್ದರು

ಬೆಳಿಗ್ಗೆ 7 ಗಂಟೆಗೆ ನಮಗೆ ವಿಷ್ಯ ತಿಳಿಯಿತು. ಮಿಲನಾ ಫೋನ್ ಮಾಡಿದ ಬಳಿಕ ನಮಗೆ ಗೊತ್ತಾಯ್ತು. ನವ್ಯಾ, ಮಾನಸಾ, ಮಿಲನಾ ಮೂವರು ಬೆಸ್ಟ್ ಫ್ರೆಂಡ್ಸ್ ಆಗಿದ್ದರು. ಮೂವರು ಒಟ್ಟಿಗೆ ಇಂಜಿನಿಯರಿಂಗ್ ಓದಿ, ಸಾಫ್ಟ್‌ವೇರ್‌ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ರಜೆ ಇತ್ತು ಎಂಬ ಕಾರಣಕ್ಕೆ ಸಿಗಂದೂರಿಗೆ ಹೊರಟಿದ್ದರು. ನನಗೆ ಒಬ್ಬನೇ ಮಗ ಹಾಗೂ ಒಬ್ಬಳೇ ಮಗಳಿದ್ದಾಳೆ. ಎಪ್ರಿಲ್‌ನಲ್ಲಿ ನವ್ಯಾ ಮದುವೆ ಕೂಡ ಫಿಕ್ಸ್ ಆಗಿತ್ತು ಎಂದು ತಂದೆ ಮಂಜಪ್ಪ ಮಾಧ್ಯಮದವರ ಮುಂದೆ ಕಣ್ಣೀರಿಟ್ಟಿದ್ದಾರೆ.

55
ಏಪ್ರಿಲ್ 28ರಂದು ನವ್ಯ ಮದುವೆ
Image Credit : Asianet News

ಏಪ್ರಿಲ್ 28ರಂದು ನವ್ಯ ಮದುವೆ

ನವ್ಯ ಜೀವನದ ಹೊಸ ಅಧ್ಯಾಯಕ್ಕೆ ಸಿದ್ಧವಾಗುತ್ತಿದ್ದಳು. ಇದೇ ಏಪ್ರಿಲ್ 28ರಂದು ನವ್ಯ ಮದುವೆ ನಿಗದಿಯಾಗಿತ್ತು ಎಂದು ತಂದೆ ಮಂಜಪ್ಪ ಕಣ್ಣೀರಿನಿಂದ ಹೇಳಿಕೊಂಡಿದ್ದಾರೆ. “ಮಗಳ ಮದುವೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಇಂದು ಆಕೆಯ ಫೋಟೋ ಹಿಡಿದು ಆಸ್ಪತ್ರೆಗಳಲ್ಲಿ ಹುಡುಕಾಡಬೇಕಾದ ಸ್ಥಿತಿ ಬಂದಿದೆ,” ಎಂಬ ಅವರ ಮಾತುಗಳು ಕರಳು ಹಿಂಡುವಂತಿವೆ. ಈ ದುರ್ಘಟನೆಯು ಕೇವಲ ಅಪಘಾತವಷ್ಟೇ ಅಲ್ಲ, ಹಲವು ಕುಟುಂಬಗಳ ಬದುಕನ್ನೇ ಅಸ್ತವ್ಯಸ್ತಗೊಳಿಸಿದೆ. ನವ್ಯ ಮತ್ತು ಮಾನಸ ಸುರಕ್ಷಿತವಾಗಿ ಪತ್ತೆಯಾಗಲಿ ಎಂಬುದೇ ಎಲ್ಲರ ಪ್ರಾರ್ಥನೆಯಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಚಿತ್ರದುರ್ಗ
ಅಪಘಾತ
ಅಗ್ನಿ ಅವಘಡ
ಹಾಸನ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಚಿತ್ರದುರ್ಗ ಬಸ್‌ ದುರಂತದಲ್ಲಿ 6 ಮಂದಿ ಸಜೀವ ದಹನ, ಎಸ್‌ಪಿ ಸ್ಪಷ್ಟನೆ, ಇಬ್ಬರು ಗೆಳತಿಯರ ಮೃತದೇಹ ಗುರುತಿಸಲು ಚೈನ್ ಅಡ್ಡಿ!
Recommended image2
Now Playing
ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Recommended image3
ವರ್ಷಾಂತ್ಯ, ಹೊಸವರ್ಷದ ಸಂಭ್ರಮ ಹಾಳು ಮಾಡುವ ಘೋರ ದುರಂತಗಳು, ಡಿಸೆಂಬರ್‌-ಜನವರಿಯಲ್ಲೇ ಅಪಘಾತ ಆಗೋದ್ಯಾಕೆ?
Related Stories
Recommended image1
ಚಿತ್ರದುರ್ಗ ಬಸ್‌ ದುರಂತ, ಕಣ್ಣು ಬಿಟ್ಟಾಗ ಸುತ್ತಲೂ ಬೆಂಕಿಯ ಜ್ವಾಲೆ! ಗಾಯಾಳು ಕಿರಣ್ ಬಿಚ್ಚಿಟ್ಟ ಭಯಾನಕ ಅನುಭವ
Recommended image2
ಚಿತ್ರದುರ್ಗ ಬಸ್ ದುರಂತ; ಬೆಂಕಿಯಿಂದ 45 ಶಾಲಾ ಮಕ್ಕಳನ್ನು ರಕ್ಷಿಸಿ ರಾಜ್ಯದ ಹೀರೋ ಆದ ಸಚಿನ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved