MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಡಿಕೆಶಿ ಟೆಂಪಲ್ ರನ್: ಮಂತ್ರಾಲಯದಲ್ಲಿ ರಾಯರಿಗೆ ತುಲಾಭಾರ ಸೇವೆ ಮಾಡಿದ ಡಿ.ಕೆ. ಶಿವಕುಮಾರ್ ದಂಪತಿ!

ಡಿಕೆಶಿ ಟೆಂಪಲ್ ರನ್: ಮಂತ್ರಾಲಯದಲ್ಲಿ ರಾಯರಿಗೆ ತುಲಾಭಾರ ಸೇವೆ ಮಾಡಿದ ಡಿ.ಕೆ. ಶಿವಕುಮಾರ್ ದಂಪತಿ!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರ ಸಭೆಯಲ್ಲಿ, ಆಂಜನೇಯನ ಉದಾಹರಣೆ ನೀಡಿ ತ್ಯಾಗದ ರಾಜಕಾರಣದ ಮಹತ್ವವನ್ನು ತಿಳಿಸಿದರು.

2 Min read
Author : Sathish Kumar KH
Published : Oct 22 2025, 04:20 PM IST
Share this Photo Gallery
  • FB
  • TW
  • Linkdin
  • Whatsapp
17
Image Credit : Asianet News

ರಾಯಚೂರು (ಅ.22): ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಟೆಂಪಲ್ ರನ್ ಮುಂದುವರಿಸಿದ್ದು, ಮಂತ್ರಾಲಯ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ದೇವಾಲಯಗಳಿಘೆ ಭೇಟಿ ನೀಡಿ ಪೂಜೆ ಸಲ್ಲಿಸಿದರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

27
Image Credit : Asianet News

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ರಾಯರ ಅನುಗ್ರಹಕ್ಕಾಗಿ ವಿಶೇಷ ಸೇವೆ ಸಲ್ಲಿಸಿದರು.

Related Articles

Related image1
ಮಂತ್ರಾಲಯಕ್ಕೆ ಡಿಕೆಶಿ ದಂಪತಿ ಭೇಟಿ, ರಾಯರ ದರ್ಶನ ಪಡೆದ ಡಿಕೆ ಶಿವಕುಮಾರ ಹೇಳಿದ್ದೇನು?
Related image2
ಡಿಸಿಎಂ ಡಿಕೆಶಿ ಜೊತೆಗೆ ಸಭೆ: ಗುತ್ತಿಗೆದಾರರ ಹೋರಾಟಕ್ಕೆ ಜಯ, ಶೇ.10 ಎಫ್‌ಡಿಆರ್ ವಾಪಸ್ಸು ಕೊಡುವ ಭರವಸೆ
37
Image Credit : Asianet News

ಶ್ರೀಮಠದ ಅರ್ಚಕರ ನೇತೃತ್ವದಲ್ಲಿ ಅವರಿಗೆ ತುಲಾಭಾರ ಸೇವೆಯನ್ನು ನೆರವೇರಿಸಲಾಯಿತು. ಮಠದ ತುಲಾಭಾರ ಮಂಟಪದಲ್ಲಿ ಒಂದು ಕಡೆ ಡಿಕೆ ಶಿವಕುಮಾರ್ ಕುಳಿತು, ಮತ್ತೊಂದು ಕಡೆ ಬೆಲ್ಲವನ್ನು ಇಟ್ಟು ತುಲಾಭಾರ ಮಾಡಲಾಯಿತು. ಡಿಕೆಶಿ ಅವರು ಭಕ್ತಿಪೂರ್ವಕವಾಗಿ ರಾಯರ ಆಶೀರ್ವಾದ ಪಡೆದರು.

47
Image Credit : Asianet News

ಮಂತ್ರಾಲಯದ ಬಳಿಕ ಡಿ.ಕೆ. ಶಿವಕುಮಾರ್ ಅವರು ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಇದರ ನಂತರ ಗಾಣದಾಳ ಗ್ರಾಮದಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಆಂಜನೇಯನ ಉದಾಹರಣೆ ನೀಡಿದ ಡಿ.ಕೆ. ಶಿವಕುಮಾರ್, ಸೇವೆ ಮತ್ತು ತ್ಯಾಗದ ರಾಜಕಾರಣದ ಮಹತ್ವವನ್ನು ಕಾರ್ಯಕರ್ತರಿಗೆ ಮನದಟ್ಟು ಮಾಡಿಕೊಟ್ಟರು.

57
Image Credit : Asianet News

'ರಾಮನ ತಂದೆ ದಶರಥ ಮಹಾರಾಜನ ದೇವಸ್ಥಾನ ಎಲ್ಲಿಯೂ ನೋಡಲು ಸಾಧ್ಯವಿಲ್ಲ. ಆದರೆ ರಾಮನ ಭಂಟ ಆಂಜನೇಯನ ದೇವಸ್ಥಾನ ಎಲ್ಲ ಕಡೆ ನೋಡಲು ಸಿಗುತ್ತದೆ. ಏಕೆಂದರೆ ಆಂಜನೇಯ ಸಮಾಜದ ಒಬ್ಬ ಸೇವಕ, ಒಬ್ಬ ತ್ಯಾಗಿ. ಸಮಾಜದಲ್ಲಿ ಯಾರು ತ್ಯಾಗ ಮಾಡುತ್ತಾರೆ, ಯಾರು ಸೇವೆ ಮಾಡುತ್ತಾರೆ, ಅವರಿಗೆ ಸಮಾಜ ಗುರುತಿಸುತ್ತದೆ ಎಂಬುದಕ್ಕೆ ಈ ಪಂಚಮುಖಿ ಆಂಜನೇಯನೇ ಸಾಕ್ಷಿ' ಎಂದು ಹೇಳಿದರು.

67
Image Credit : Asianet News

ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಪಕ್ಷದಲ್ಲಿನ ಗುಂಪು ರಾಜಕಾರಣದ ಬಗ್ಗೆ ಎಚ್ಚರಿಕೆ ನೀಡಿದರು. 'ಪಕ್ಷಕ್ಕಿಂತ ವ್ಯಕ್ತಿ ಯಾವ ಕಾರಣಕ್ಕೂ ದೊಡ್ಡವರಲ್ಲ. ಯಾವಾಗಲೂ ವ್ಯಕ್ತಿ ಪೂಜೆ ಮಾಡಲು ಹೋಗಬಾರದು. ನೀವೇನು ಇದ್ದರೂ ಪಕ್ಷ ಪೂಜೆ ಮಾಡಬೇಕು. ನಾವು ಈ ಗುಂಪು ರಾಜಕಾರಣ ಮಾಡಲು ಅವಕಾಶ ಕೊಟ್ಟಿಲ್ಲ. ಗುಂಪು ರಾಜಕಾರಣದಿಂದ ಏನು ಪ್ರಯೋಜನ ಆಗಿಲ್ಲ' ಎಂದು ಗುಡುಗಿದರು.

77
Image Credit : Asianet News

ಶಾಸಕರಾಗಿಲ್ಲದಿದ್ದರೂ ಬೋಸರಾಜು ಅವರನ್ನು ಮಂತ್ರಿ ಮಾಡಿದ್ದೇಕೆ ಎಂಬುದನ್ನು ವಿವರಿಸಿದ ಡಿಕೆಶಿ 'ಬೋಸರಾಜು ಕಳೆದ 45 ವರ್ಷಗಳಿಂದ ಸೇವೆ ಮಾಡಿದ್ದಾರೆ. ತೆಲಂಗಾಣಕ್ಕೆ ಹೋಗಿ ದುಡಿದಿದ್ದಾರೆ. ಹೀಗಾಗಿ ಈತ ಪಕ್ಷಕ್ಕಾಗಿ ದುಡಿದಿದ್ದಾರೆ, ಅದಕ್ಕಾಗಿ ಪಕ್ಷ ಗುರುತಿಸಿ ಮಂತ್ರಿ ಮಾಡಿದ್ದಾರೆ. ರಾಜಕಾರಣದಲ್ಲಿ ಯಾರು ಬೇಕಾದರೂ ಎಷ್ಟರ ಮಟ್ಟಿಗೆಯಾದರೂ ಬೆಳೆಯಬಹುದು. ಪಕ್ಷದಲ್ಲಿ ಸಣ್ಣ-ದೊಡ್ಡ ಹುದ್ದೆ ಎಂದು ಭಾವಿಸಬೇಡಿ. 'ಬೂತ್‌ಗಳ ನಾಯಕತ್ವ ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು. ಬೂತಿನಲ್ಲಿ ಬಹುಮತ ನೀಡುವವನೇ ನಿಜವಾದ ನಾಯಕ. ವೇದಿಕೆ ಮೇಲೆ ಕುಳಿತುಕೊಳ್ಳುವವರು ನಾಯಕರಲ್ಲ' ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಡಿ.ಕೆ. ಶಿವಕುಮಾರ್
ಕರ್ನಾಟಕ ಸುದ್ದಿ
ಮಂತ್ರಾಲಯ
ಶ್ರೀ ರಾಘವೇಂದ್ರ ಮಹಾತ್ಮೆ

Latest Videos
Recommended Stories
Recommended image1
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
Recommended image2
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
Recommended image3
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
Related Stories
Recommended image1
ಮಂತ್ರಾಲಯಕ್ಕೆ ಡಿಕೆಶಿ ದಂಪತಿ ಭೇಟಿ, ರಾಯರ ದರ್ಶನ ಪಡೆದ ಡಿಕೆ ಶಿವಕುಮಾರ ಹೇಳಿದ್ದೇನು?
Recommended image2
ಡಿಸಿಎಂ ಡಿಕೆಶಿ ಜೊತೆಗೆ ಸಭೆ: ಗುತ್ತಿಗೆದಾರರ ಹೋರಾಟಕ್ಕೆ ಜಯ, ಶೇ.10 ಎಫ್‌ಡಿಆರ್ ವಾಪಸ್ಸು ಕೊಡುವ ಭರವಸೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved