MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಹಾಸನದಲ್ಲಿ ಮತ್ತೆ ಕಾಡಿದ ಹೃದಯಾಘಾತ, ಒಂದೇ ದಿನ ನಾಲ್ವರ ಸಾವು; 40 ದಿನಗಳಲ್ಲಿ 21 ಮಂದಿ ಬಲಿ

ಹಾಸನದಲ್ಲಿ ಮತ್ತೆ ಕಾಡಿದ ಹೃದಯಾಘಾತ, ಒಂದೇ ದಿನ ನಾಲ್ವರ ಸಾವು; 40 ದಿನಗಳಲ್ಲಿ 21 ಮಂದಿ ಬಲಿ

ಹಾಸನ ಜಿಲ್ಲೆಯಲ್ಲಿ ಕೇವಲ 40 ದಿನಗಳಲ್ಲಿ 21 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದು, ಆತಂಕ ಮೂಡಿಸಿದೆ. ಮಹಿಳೆ, ಉಪನ್ಯಾಸಕ, ಯೋಧ ಮತ್ತು ಸರ್ಕಾರಿ ನೌಕರ ಸೇರಿದಂತೆ ವಿವಿಧ ವಯೋಮಾನದವರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ.

2 Min read
Author : Sathish Kumar KH
Published : Jun 30 2025, 12:48 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಹಾಸನ (ಜೂ. 30): ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳ ಆಗುತ್ತಿರುವ ಬೆನ್ನಲ್ಲಿಯೇ ಹಾಸನ ಜಿಲ್ಲೆಯಲ್ಲಿ ಕೇವಲ 40 ದಿನಗಳ ಅವಧಿಯಲ್ಲಿ 21 ಮಂದಿ ಹೃದಯಾಘಾತಕ್ಕೆ ಬಲಿಯಾಗಿರುವ ಅಂಕಿ-ಅಂಶವು ಜಿಲ್ಲೆಯ ಜನತೆಯಲ್ಲಿ ಹೃದಯಾಘಾತ ಭೀತಿಯನ್ನು ತಂದೊಡ್ಡಿದೆ. ಇಂದು ಮಧ್ಯಾಹ್ನ 12 ಗಂಟೆಯೊಳಗೆ ನಾಲ್ವರು ಜನರು ಹಾಸನ ಜಿಲ್ಲೆಯೊಂದರಲ್ಲಿಯೇ ಹೃದಯಾಘಾತಕ್ಕೆ ಬಲಿ ಆಗಿದ್ದಾರೆ.

25
Image Credit : Asianet News

ಮನೆಯಲ್ಲಿ ಕುಸಿದುಬಿದ್ದ ಮಹಿಳೆ ಲೇಪಾಕ್ಷಿ

ಇತ್ತೀಚಿನ ಘಟನೆಯು ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಮನೆಲ್ಲಿದ್ದ ಲೇಪಾಕ್ಷಿ (50) ಎಂಬ ಮಹಿಳೆ ದಿಡೀರ್‌ ಸುಸ್ತಿನಿಂದ ನೆಲಕ್ಕೆ ಬಿದ್ದಿದ್ದಾಳೆ. ಪತಿ ನಾಗರಾಜ್ ಕೂಡಲೇ ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

Related Articles

Related image1
Heart Attacks: ಬೆಳಗ್ಗೆ 6 ರಿಂದ ಮಧ್ಯಾಹ್ನ 12ರ ನಡುವೆ ಹೃದಯಾಘಾತ ಹೆಚ್ಚು! ಹೃದ್ರೋಗ ತಜ್ಞರಿಂದ ಶಾಕಿಂಗ್ ವಿಷ್ಯ ಬಯಲು!
Related image2
Rising Heart Attack in Youths: 19 ವರ್ಷದ ಯುವಕನಿಗೆ ಹೃದಯಾಘಾತ; ರಾತ್ರಿ ಮಲಗಿದ್ದ ಸ್ಥಿತಿಯಲ್ಲೇ ಸಾವು; ಗೆಳೆಯರು ಶಾಕ್!
35
Image Credit : Asianet News

ಟೀ ಕುಡಿಯುತ್ತಿದ್ದಾಗಲೇ ಕುಸಿದ ಲೆಕ್ಚರರ್ ಮುತ್ತಯ್ಯ

ಇನ್ನೊಂದು ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸರ್ಕಾರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಚನ್ನರಾಯಪಟ್ಟಣದ ನಿವಾಸಿಯಾಗಿದ್ದ ಮುತ್ತಯ್ಯ ಅವರು ಟೀ ಕುಡಿಯುತ್ತಿರುವಾಗಲೇ ಬೈಪಾಸ್ ರಸ್ತೆಯಲ್ಲಿ ಕುಸಿದು ಬಿದ್ದಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ.

45
Image Credit : Asianet News

ರಜೆಗೆ ಬಂದಿದ್ದ ಯೋಧ ಲೋಹಿತ್ ಸಾವು

ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಯೋಧ ಲೋಹಿತ್ (38) ಹೃದಯಾಘಾತದಿಂದ ಅಕಾಲಿಕವಾಗಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಕೆಂಬಾಳು ಗ್ರಾಮದಲ್ಲಿ ನಡೆದಿದೆ. 18 ವರ್ಷಗಳಿಂದ ಸೇನೆ ಸೇವೆ ಮಾಡುತ್ತಿದ್ದ ಲೋಹಿತ್, ಜುಲೈ 3ರಂದು ಕರ್ತವ್ಯಕ್ಕೆ ಹಾಜರಾಗಬೇಕಿತ್ತು. 7 ವರ್ಷಗಳ ಹಿಂದೆ ವಿವಾಹವಾಗಿದ್ದ ಲೋಹಿತ್‌ಗೆ 3 ವರ್ಷದ ಹೆಣ್ಣು ಮಗು ಕೂಡಾ ಇದೆ.

55
Image Credit : Asianet News

ಡಿ.ಗ್ರೂಫ್ ನೌಕರನೂ ಸಾವು

ಹೃದಯಾಘಾತದ ತೀವ್ರತೆಯನ್ನು ಮತ್ತಷ್ಟು ಘೋರಗೊಳಿಸಿದ ಘಟನೆ ನಲ್ಲೂರು ಗ್ರಾಮದಲ್ಲಿ ನಡೆದಿದೆ. ನುಗ್ಗೆಹಳ್ಳಿ ನಾಡಕಚೇರಿ ಡಿ ಗ್ರೂಪ್ ನೌಕರನಾಗಿದ್ದ ಕುಮಾರ್ (53) ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಎಲ್ಲಾ ಪ್ರಕರಣಗಳು ತೀವ್ರ ಆತಂಕದ ವಿಷಯವಾಗಿದ್ದು, ಜಿಲ್ಲೆಯ ಆರೋಗ್ಯ ಇಲಾಖೆಯ ಗಮನ ಸೆಳೆದಿವೆ. ಹೃದಯಾಘಾತದ ಈ ಸರಣಿ ಸಾವುಗಳು ಜಿಲ್ಲೆಯಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ನೂತನ ಚಿಂತೆ ಹುಟ್ಟಿಸಿವೆ. ತಜ್ಞರ ಪ್ರಕಾರ ಜೀವನ ಶೈಲಿ, ಆಹಾರ ಕ್ರಮ, ಒತ್ತಡದ ಮಟ್ಟ ಇತ್ಯಾದಿಗಳ ಪರಿಷ್ಕರಣೆ ಅಗತ್ಯವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಹೃದಯಾಘಾತ
ಕರ್ನಾಟಕ ಸುದ್ದಿ
ಆರೋಗ್ಯ
ಆರೋಗ್ಯ ಸಮಸ್ಯೆಗಳು

Latest Videos
Recommended Stories
Recommended image1
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
Recommended image2
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
Recommended image3
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
Related Stories
Recommended image1
Heart Attacks: ಬೆಳಗ್ಗೆ 6 ರಿಂದ ಮಧ್ಯಾಹ್ನ 12ರ ನಡುವೆ ಹೃದಯಾಘಾತ ಹೆಚ್ಚು! ಹೃದ್ರೋಗ ತಜ್ಞರಿಂದ ಶಾಕಿಂಗ್ ವಿಷ್ಯ ಬಯಲು!
Recommended image2
Rising Heart Attack in Youths: 19 ವರ್ಷದ ಯುವಕನಿಗೆ ಹೃದಯಾಘಾತ; ರಾತ್ರಿ ಮಲಗಿದ್ದ ಸ್ಥಿತಿಯಲ್ಲೇ ಸಾವು; ಗೆಳೆಯರು ಶಾಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved