MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಧರ್ಮಸ್ಥಳ ಕೇಸ್‌ ನಲ್ಲಿ ಅಣ್ಣಾಮಲೈ ಹೆಸರು ಹೇಳಿದ್ಯಾಕೆ ಸೆಂಥಿಲ್? ಗಣಿ ಧಣಿ ರೆಡ್ಡಿಯ ಸ್ಫೋಟಕ ಹೇಳಿಕೆ

ಧರ್ಮಸ್ಥಳ ಕೇಸ್‌ ನಲ್ಲಿ ಅಣ್ಣಾಮಲೈ ಹೆಸರು ಹೇಳಿದ್ಯಾಕೆ ಸೆಂಥಿಲ್? ಗಣಿ ಧಣಿ ರೆಡ್ಡಿಯ ಸ್ಫೋಟಕ ಹೇಳಿಕೆ

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಂಸದ ಸೆಂಥಿಲ್ ವಿರುದ್ಧ ಧರ್ಮಸ್ಥಳ ವಿವಾದ, ಅಪಪ್ರಚಾರ ಹಾಗೂ ಎಡಪಂಥೀಯ, ನಗರ ನಕ್ಸಲ್ ಭಾಗಿತ್ವದ ಆರೋಪಗಳನ್ನು ಮಾಡಿದ್ದಾರೆ.  ರಾಜ್ಯ ಸರ್ಕಾರದ ಬೆಂಬಲವಿರುವುದರಿಂದ ಎಸ್ಐಟಿ ವಿಚಾರಣೆ ಕಷ್ಟ ಎಂದಿದ್ದಾರೆ.   ಸೆಂಥಿಲ್ ರಾಹುಲ್ ಗಾಂಧಿಯ ಬಲಗೈ ಎಂದು ಆರೋಪಿಸಿದ್ದಾರೆ.

2 Min read
Author : Gowthami K
Published : Sep 06 2025, 03:27 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬಳ್ಳಾರಿ: ಸಂಸದ ಸಸಿಕಾಂತ್ ಸೆಂಥಿಲ್ ಅವರು ತನ್ನ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆ ಮತ್ತು ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಶನಿವಾರ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮತ್ತೆ ಸೆಂಥಿಲ್ ವಿರುದ್ಧ ಧ್ವನಿ ಎತ್ತಿದ್ದಾರೆ. ಇತ್ತೀಚಿನ ಧರ್ಮಸ್ಥಳ ವಿವಾದ, ಅಪಪ್ರಚಾರ ಹಾಗೂ ಸೆಂಥಿಲ್ ಪಾತ್ರದ ಬಗ್ಗೆ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಅವರು ಹಿಂದೂ ಧಾರ್ಮಿಕ ಭಾವನೆ. ಮೇಲೆ ಎಡಪಂಕ್ತಿಯರು ನಗರ ನಕ್ಸಲ್ ಭಾಗಿಯಾಗಿದ್ದಾರೆ ಎಂದು ಹೇಳಿದ್ದೇ ಅದಕ್ಕೆ ಬದ್ಧ ಎಂದಿದ್ದಾರೆ. ಧರ್ಮಸ್ಥಳ ವಿಚಾರ ರಾಜ್ಯದ ಮಟ್ಟದಲ್ಲಷ್ಟೇ ಅಲ್ಲದೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ ಎಂದು ರೆಡ್ಡಿ ಹೇಳಿದರು. “ಇದು ಹಿಂದೂ ಧಾರ್ಮಿಕ ಭಾವನೆಗೆ ಸಂಬಂಧಿಸಿದ ವಿಚಾರ. ಇದರಲ್ಲಿ ಎಡಪಂಥೀಯರು, ನಗರ ನಕ್ಸಲ್‌ಗಳು ಭಾಗಿಯಾಗಿದ್ದಾರೆ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ” ಎಂದು ಅಭಿಪ್ರಾಯಪಟ್ಟರು. ಬಳ್ಳಾರಿ ಮೂಲದ ಸಮೀರ್, ಸೌಜನ್ಯ ಪ್ರಕರಣಗಳ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯಿತು, ಮಿಲಿಯನ್ ವೀಕ್ಷಣೆ ಗಳಿಸಿ ಅನಗತ್ಯ ಕುತಂತ್ರ ರೂಪಿಸಲಾಯಿತು ಎಂದರು.

25
Image Credit : Asianet News

ಸೆಂಥಿಲ್ ವಿರುದ್ಧ ಗಂಭೀರ ಆರೋಪ

ಜನಾರ್ದನ ರೆಡ್ಡಿ ಅವರು ತಮ್ಮ ಹೇಳಿಕೆಯಲ್ಲಿ, ಮುಸುಕುದಾರಿ ಚಿನ್ನಯ್ಯ ಸೇರಿದಂತೆ ಕೆಲವು ಮಂದಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಿದರು. ಇದರ ಹಿಂದೆ ತಮಿಳುನಾಡು ಮೂಲದ ಎಡಪಂಥೀಯ ಚಿಂತನೆಯ ಸೆಂಥಿಲ್ ಇದ್ದಾನೆ ಎಂದು ನಾನು ಮೊದಲು ಹೇಳಿದ್ದೇನೆ. ಸೆಂಥಿಲ್ ಎಡಪಂಥೀಯರ ಪರವಾಗಿ ಮಾತನಾಡಿ, ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದಾನೆ. “ಸೆಂಥಿಲ್ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದಾನೆ. ಆದರೆ ನನಗೆ ಇದು ಹೊಸದೇನಲ್ಲ. ಪತ್ರಿಕಾ ಕ್ಷೇತ್ರದಲ್ಲಿದ್ದಾಗಲೂ, ರಾಜಕೀಯ ಜೀವನದಲ್ಲೂ ನಾನು ಅನೇಕ ಬಾರಿ ಇಂತಹ ಪ್ರಕರಣಗಳನ್ನು ಎದುರಿಸಿದ್ದೇನೆ” ಎಂದು ಪ್ರತಿಕ್ರಿಯಿಸಿದರು.

Related Articles

Related image1
ರೆಡ್ಡಿ ವಿರುದ್ಧ ಕೇಸ್ ಹಾಕಿ ಅಣ್ಣಾಮಲೈ ಎಳೆದು ತಂದ ಸೆಂಥಿಲ್, ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್!
Related image2
ಧರ್ಮಸ್ಥಳ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ
35
Image Credit : Asianet News

ಸಿಬಿಐ ತನಿಖೆಗೆ ಆಗ್ರಹ

ರೆಡ್ಡಿ ಅವರ ಪ್ರಕಾರ, ಸ್ಥಳೀಯ ಪೊಲೀಸರು ಅಥವಾ ಎಸ್ಐಟಿ ಮೂಲಕ ಈ ಪ್ರಕರಣದ ನಿಜಾಂಶ ಹೊರಬರಲು ಸಾಧ್ಯವಿಲ್ಲ. “ಸೆಂಥಿಲ್‌ಗೆ ರಾಜ್ಯ ಸರ್ಕಾರದ ಬೆಂಬಲವಿರುವುದರಿಂದ ಎಸ್ಐಟಿ ವಿಚಾರಣೆ ಕಷ್ಟ. ಹೀಗಾಗಿ ಸಿಬಿಐ ಅಥವಾ ಎನ್ಐಎ ತನಿಖೆ ಅಗತ್ಯ. ಗಡಿಯಾಚೆಯವರೂ, ವಿದೇಶಿ ಸಂಘಟನೆಗಳೂ ಈ ಅಪಪ್ರಚಾರದಲ್ಲಿ ಕೈವಾಡವಿಟ್ಟಿರಬಹುದಾದ್ದರಿಂದ ರಾಷ್ಟ್ರಮಟ್ಟದಲ್ಲಿ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು. ಪತ್ರಿಕೆಯ ಎಡಿಟರ್ ಅಗಿದ್ದಾಗಿನಿಂದಲೂ ರಾಜಕೀಯ ಬಂದ ಮೇಲೂ ಈ ರೀತಿಯ ಕೇಸ್ ನೋಡಿದ್ದೇನೆ. ತಾವು ಭಾಗಿಯಾಗಿಲ್ಲ ಅನ್ನೊದಾದ್ರೂ ಸಿಎಂ ಭೇಟಿ ಮಾಡಿ ಸಿಬಿಐ ತನಿಖೆಗೆ ಅಗ್ರಹಿಸಬೇಕಿತ್ತು. ಕರವಳಿ ಭಾಗದಲ್ಲಿ ಬಿಜೆಪಿ ಪ್ರಬಲವಾಗಿದೆ ಎಂದು ಸೆಂಥಿಲ್ ಅದನ್ನು ತುಳಿಯು ಕೆಲಸ ಮಾಡ್ತಿದ್ದಾರೆ. ಸಮಾಜ ಒಡೆಯೋದಕ್ಕಾಗಿಯೇ ಸೆಂಥಿಲ್ ರಾಜಕೀಯಕ್ಕೆ ಬಂದಿದ್ದಾರೆ. ಸೆಂಥಿಲ್ ಹೆಸರನ್ನು ಶಾಸಕ ಯಶಪಾಲ್ ಸುವರ್ಣ ವಿಜಯೇಂದ್ರ ಕೂಡ ಹೇಳಿದ್ದಾರೆ.

45
Image Credit : ‍‍X

ಕಾಂಗ್ರೆಸ್ ನೇತೃತ್ವದ ವಿರುದ್ಧ ಆರೋಪ

ಸುದ್ದಿಗೋಷ್ಠಿಯಲ್ಲಿ ರೆಡ್ಡಿ ಕಾಂಗ್ರೆಸ್ ನಾಯಕತ್ವವನ್ನೂ ಗುರಿಯಾಗಿಸಿಕೊಂಡು, “ಸೆಂಥಿಲ್ ರಾಹುಲ್ ಗಾಂಧಿಯ ಬಲಗೈ. ರಾಹುಲ್ ಗಾಂಧಿ ಸ್ವತಃ ಶಿಕ್ಷೆಗೆ ಒಳಗಾಗಿದ್ದಾರೆ. ಸೋನಿಯಾ ಗಾಂಧಿ ಹೆರಾಲ್ಡ್ ಕೇಸ್‌ನಲ್ಲಿ ಜಾಮೀನು ಪಡೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಕೂಡ ಶಿಕ್ಷೆಗೆ ಒಳಗಾಗಿದ್ದಾರೆ ಎನ್ನುವದು ಸೆಂಥಿಲ್ ಮರೆಯಬಾರದು. ಸೋನಿಯಾ ಗಾಂಧಿ ಹೆರಾಲ್ಡ್ ಕೇಸ್ ನಲ್ಲಿ ಬೆಲ್ ತೆಗೆದುಕೊಂಡು ಹೊರಗಿದ್ದಾರೆ. ಹೆರಾಲ್ಡ್ ಕೇಸ್‌ನಲ್ಲಿ ರಾಹುಲ್ ಗಾಂಧಿ ಕೋಟಿ ಕೋಟಿ ಲೂಟಿ ಹೊಡೆದಿದ್ದಾರೆ. ಬಳ್ಳಾರಿ ಯೂಟ್ಯೂಬರ್ ನಿಂದ ಸ್ಟಾರ್ಟ್ ಅಗಿ ಎಡಪಂಥೀಯ ನಿಲುವಿನಂತ ಹೋಗಿದೆ. ಮೂಲ ಸೂತ್ರಧಾರ ಸೆಂಥಿಲ್ ಎಂದು ಪರೋಕ್ಷವಾಗಿ ಹೇಳಿದ ಜನಾರ್ದನ ರೆಡ್ಡಿ, ಅಣ್ಣಾ ಮಲೈ ಫೇಸ್ ಮಾಡೋಕೆ ಅಗದೇ ಅವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ಅಣ್ಣಪ್ಪ ದೇವರೇ ಧರ್ಮಸ್ಥಳದಲ್ಕಿ ಷಡ್ಯಂತ್ರ ಪ್ರೂ ಮಾಡಿದ್ದಾರೆ. ಎಸ್ಐಟಿಯಿಂದ ನಿಜ ಹೊರಗೆ ಬಂದಿದೆ ಅದ್ರೇ ಸಿಬಿಐ ವಿಚಾರಣೆಯಾದ್ರೆ ಹೊರರಾಜ್ಯ ಹೊರ ದೇಶದ ಷಡ್ಯಂತ್ರ ಹೊರಗೆ ಬರುತ್ತದೆ. ಸೆಂಥಿಲ್ ವಿರುದ್ಧ ಲಿಗಲೀ ಫೈಟ್ ಮಾಡ್ತೇನೆ. ಸೆಂಥಿಲ್ ವಿರುದ್ಧ ನನ್ನ ಹೇಳಿಕೆಗೆ ಬದ್ಧ. ರಾಷ್ಟ್ರ ಮಟ್ಟದ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

55
Image Credit : Gali Janardhan Reddy Facebook

 ಕಾರವಾರ ಹಾಗೂ ಕರಾವಳಿ ಭಾಗದಲ್ಲಿ ಬಿಜೆಪಿ ಬಲ ಹೆಚ್ಚುತ್ತಿರುವುದನ್ನು ತಡೆಯಲು ಸೆಂಥಿಲ್ ರಾಜಕೀಯಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು. “ಸೆಂಥಿಲ್ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇನೆ” ಸೆಂಥಿಲ್ ಹೆಸರನ್ನು ಶಾಸಕರಾದ ಯಶಪಾಲ್ ಸುವರ್ಣ ಹಾಗೂ ವಿಜಯೇಂದ್ರ ಕೂಡ ಉಲ್ಲೇಖಿಸಿದ್ದಾರೆ ಎಂದು ರೆಡ್ಡಿ ಹೇಳಿದರು. “ಸೆಂಥಿಲ್ ವಿರುದ್ಧ ಲೀಗಲ್ ಫೈಟ್ ಮಾಡುತ್ತೇನೆ. ನನ್ನ ಹೇಳಿಕೆಗೆ ನಾನು ಬದ್ಧ. ಇದು ಕೇವಲ ರಾಜ್ಯದ ವಿಷಯವಲ್ಲ, ರಾಷ್ಟ್ರಮಟ್ಟದಲ್ಲಿ ತನಿಖೆ ಆಗಲೇಬೇಕು” ಎಂದು ರೆಡ್ಡಿ ತಮ್ಮ ಮಾತನ್ನು ಸಮಾಪಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಧರ್ಮಸ್ಥಳ
ಮಂಗಳೂರು
ದಕ್ಷಿಣ ಕನ್ನಡ
ಜಿ. ಜನಾರ್ದನ ರೆಡ್ಡಿ
ರಾಹುಲ್ ಗಾಂಧಿ
ಬಳ್ಳಾರಿ

Latest Videos
Recommended Stories
Recommended image1
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
Recommended image2
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
Recommended image3
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ
Related Stories
Recommended image1
ರೆಡ್ಡಿ ವಿರುದ್ಧ ಕೇಸ್ ಹಾಕಿ ಅಣ್ಣಾಮಲೈ ಎಳೆದು ತಂದ ಸೆಂಥಿಲ್, ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್!
Recommended image2
ಧರ್ಮಸ್ಥಳ: ನ್ಯಾಯಕ್ಕಾಗಿ ಸೋನಿಯಾ ಗಾಂಧಿಗೆ 50 ಮಹಿಳೆಯರಿಂದ ಪತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved