MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿವಾದ, ಪ್ರತಾಪ್ ಸಿಂಹ ಸೇರಿ ಹಲವರು ಸಲ್ಲಿಸಿದ್ದ ಪಿಐಎಲ್‌ ಹೈಕೋರ್ಟ್‌ ವಜಾ

ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿವಾದ, ಪ್ರತಾಪ್ ಸಿಂಹ ಸೇರಿ ಹಲವರು ಸಲ್ಲಿಸಿದ್ದ ಪಿಐಎಲ್‌ ಹೈಕೋರ್ಟ್‌ ವಜಾ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್‌ಗಳನ್ನು ಹೈಕೋರ್ಟ್ ವಜಾ ಮಾಡಿದೆ. ಅರ್ಜಿದಾರರ ಯಾವುದೇ ಕಾನೂನಾತ್ಮಕ ಹಕ್ಕು ಉಲ್ಲಂಘನೆಯಾಗಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

2 Min read
Author : Gowthami K
Published : Sep 15 2025, 12:46 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಬೆಂಗಳೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸಾಹಿತಿ ಮತ್ತು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠದಲ್ಲಿ ಈ ಅರ್ಜಿಗಳ ವಿಚಾರಣೆ ನಡೆಯಿತು. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಒಟ್ಟು ಮೂರು ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು. ತಾಯಿ ಭುವನೇಶ್ವರಿ, ಕೆಂಪು-ಹಳದಿ ಭಾವುಟದ ಬಗ್ಗೆ ಮತ್ತು ಬೇರೆ ಧರ್ಮವನ್ನು ಪಾಲಿಸುವ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಸೂಕ್ತ ವ್ಯಕ್ತಿ ಅಲ್ಲ ಎಂಬ ಆರೋಪ ಕೇಳಿಬಂದಿತ್ತು.

25
Image Credit : Asianet News

ಅರ್ಜಿದಾರರ ವಾದ

ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಮೂವರು ಅರ್ಜಿದಾರರು ಭಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವುದು ಸೂಕ್ತವಲ್ಲವೆಂದು ವಾದಿಸಿದ್ದರು. ಬಾನು ಅವರು ಈ ಹಿಂದೆ ಹಲವು ಸಂದರ್ಭಗಳಲ್ಲಿ ಹಿಂದೂ ವಿರೋಧಿ ಹಾಗೂ ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ. ತಾಯಿ ಭುವನೇಶ್ವರಿ, ಕನ್ನಡ ಬಾವುಟ ಹಾಗೂ ಕೆಂಪು-ಹಳದಿ ಬಣ್ಣಗಳ ಕುರಿತು ನೀಡಿದ ಹೇಳಿಕೆಗಳು ಆಕ್ಷೇಪಾರ್ಹವೆಂದು ಕೋರ್ಟ್‌ಗೆ ಸಲ್ಲಿಸಲಾಯಿತು. ಭಾನು ಮುಷ್ತಾಕ್ ಅವರಿಗೆ ಮೂರ್ತಿಪೂಜೆ ಅಥವಾ ಅರಿಶಿನ-ಕುಂಕುಮದ ಮೇಲೆ ನಂಬಿಕೆ ಇಲ್ಲ. ಇಂತಹವರಿಂದ ದಸರಾ ಉದ್ಘಾಟನೆ ನಡೆಯುವುದು ಸಂಪ್ರದಾಯಕ್ಕೆ ವಿರೋಧ ಎಂದು ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದ ಮಂಡಿಸಿದರು.

Related Articles

Related image1
ಬಾನು ಮುಷ್ತಾಕ್​ ಅದ್ಭುತ ಲೇಖಕಿ... Dasara ಉದ್ಘಾಟನೆ ವಿವಾದದ ಬಗ್ಗೆ ನಟ ಅವಿನಾಶ್​ ಹೇಳಿದ್ದೇನು?
Related image2
ದಸರಾ ಉದ್ಘಾಟನೆ ವಿವಾದ: ಬಾನು ಮುಷ್ತಾಕ್ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್ ಸಿಂಹ
35
Image Credit : Asianet News

ಹೈಕೋರ್ಟ್  ಅಭಿಪ್ರಾಯ

ಅರ್ಜಿದಾರರ ವಾದ ಆಲಿಸಿದ ಬಳಿಕ ಸಿಜೆ ವಿಭು ಬಖ್ರು ಪ್ರಮುಖ ಪ್ರಶ್ನೆಗಳನ್ನು ಎತ್ತಿದರು:

  • “ಈ ಪ್ರಕರಣದಲ್ಲಿ ನಿಮ್ಮ ಯಾವ ಕಾನೂನಾತ್ಮಕ ಹಕ್ಕು ಉಲ್ಲಂಘನೆಯಾಗಿದೆ?”
  • “ಪೂಜಾರಿಯ ಹಕ್ಕು ಕಿತ್ತುಕೊಂಡಿದ್ದರೆ ಅಥವಾ ಆಸ್ತಿ ಕಳೆದುಕೊಂಡಿದ್ದರೆ ಕಾನೂನಾತ್ಮಕವಾಗಿ ಪ್ರಶ್ನಿಸಬಹುದಿತ್ತು. ಆದರೆ ಇಲ್ಲಿ ಅಂತಹುದೇನೂ ಇಲ್ಲ.”
  • “ಸಂವಿಧಾನ ಎಲ್ಲರಿಗೂ ತಮ್ಮ ಅಭಿಪ್ರಾಯವನ್ನು ಹೇಳುವ ಹಕ್ಕು ನೀಡಿದೆ. ಅದನ್ನು ಸೂಕ್ತ ವೇದಿಕೆಯಲ್ಲಿ ಮಂಡಿಸಬಹುದು. ಆದರೆ ಕಾನೂನು ಉಲ್ಲಂಘನೆಯ ವಿಚಾರ ಇಲ್ಲ.”
45
Image Credit : Asianet News

ಸರ್ಕಾರದ ವಾದ

ಸರ್ಕಾರದ ಪರವಾಗಿ ಮಹಾಧಿವಕ್ತಾ (ಎಜಿ) ಶಶಿಕಿರಣ್ ಶೆಟ್ಟಿ  ವಾದಿಸಿದರು:

  • ಮುಸ್ಲಿಂ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಇದೇ ಮೊದಲಲ್ಲ. ಸಾಹಿತಿ ನಿಸಾರ್ ಅಹಮದ್ ಅವರನ್ನೂ ಹಿಂದಿನ ದಶಕದಲ್ಲಿ ಆಹ್ವಾನಿಸಲಾಗಿತ್ತು.
  • ಆಗಪ್ರತಾಪ್ ಸಿಂಹಸಹ ದಸರಾ ಸಮಾರಂಭದಲ್ಲಿ ಉಪಸ್ಥಿತರಿದ್ದರು, ಆದರೆ ಯಾವುದೇ ವಿರೋಧ ವ್ಯಕ್ತಪಡಿಸಿರಲಿಲ್ಲ.
  • “ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವಂತಿಲ್ಲ. ಸರ್ಕಾರ ಜಾತ್ಯಾತೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ದೇವಾಲಯಗಳಿಗೆ ಯಾರು ಬೇಕಾದರೂ ಬರಬಹುದು” ಎಂದು ಎಜಿ ತಿಳಿಸಿದರು.
  • ಲೇಖಕಿ ಭಾನು ಮುಷ್ತಾಕ್ ಅವರನ್ನು ಹಿಂದೂ ವಿರೋಧಿ ಎಂದು ಕರೆಯುವುದು ಸೂಕ್ತವಲ್ಲ. ಅವರು ಬೂಕರ್ ಪ್ರಶಸ್ತಿ ವಿಜೇತರು, ಸಾಹಿತ್ಯದಲ್ಲಿ ದೇಶದ ಹೆಸರನ್ನು ಎತ್ತಿದ್ದಾರೆ.
55
Image Credit : Asianet News

ಕೋರ್ಟ್ ತೀರ್ಪು

ಎರಡೂ ಪಕ್ಷಗಳ ವಾದ ಆಲಿಸಿದ ಬಳಿಕ ಹೈಕೋರ್ಟ್ ಸ್ಪಷ್ಟವಾಗಿ ಹೇಳಿತು:

  • ಅರ್ಜಿದಾರರ ಯಾವುದೇ ಕಾನೂನಾತ್ಮಕ ಹಕ್ಕು ಉಲ್ಲಂಘನೆಯಾಗಿಲ್ಲ, ಆದ್ದರಿಂದ ಪಿಐಎಲ್‌ಗಳನ್ನು ಸ್ವೀಕರಿಸಲು ಅವಕಾಶವಿಲ್ಲ.
  • “ವಿಜಯದಶಮಿ ಎಂದರೇನು? ಅದು ಕೆಟ್ಟದ ಮೇಲೆ ಒಳ್ಳೆಯದ ವಿಜಯ. ದೇಶಾದ್ಯಂತ ಈ ಹಬ್ಬವನ್ನು ಅದೇ ಉದ್ದೇಶದಿಂದ ಆಚರಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಹಕ್ಕು ಉಲ್ಲಂಘನೆ ಎಂಬ ಪ್ರಶ್ನೆಯೇ ಇಲ್ಲ” ಎಂದು ಸಿಜೆ ಅಭಿಪ್ರಾಯಪಟ್ಟರು.
  • ಫಲವಾಗಿ, ಹೈಕೋರ್ಟ್ ವಿಭಾಗೀಯ ಪೀಠವು ಎಲ್ಲಾ ಪಿಐಎಲ್‌ಗಳನ್ನು ವಜಾಗೊಳಿಸಿ ಆದೇಶ ನೀಡಿತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ದಸರಾ
ಪ್ರತಾಪ್ ಸಿಂಹ
ಹೈಕೋರ್ಟ್
ಬಾನು ಮುಷ್ತಾಕ್

Latest Videos
Recommended Stories
Recommended image1
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
Recommended image2
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ
Recommended image3
ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
Related Stories
Recommended image1
ಬಾನು ಮುಷ್ತಾಕ್​ ಅದ್ಭುತ ಲೇಖಕಿ... Dasara ಉದ್ಘಾಟನೆ ವಿವಾದದ ಬಗ್ಗೆ ನಟ ಅವಿನಾಶ್​ ಹೇಳಿದ್ದೇನು?
Recommended image2
ದಸರಾ ಉದ್ಘಾಟನೆ ವಿವಾದ: ಬಾನು ಮುಷ್ತಾಕ್ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್ ಸಿಂಹ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved