MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ಒಂದೇ ಮಳೆಗೆ ಕೋಡಿ ಬಿದ್ದ ವಿವಿ ಸಾಗರ, ಮಾದಾಪುರ ಕೆರೆ, ರೈತರ ದೀಪಾವಳಿ ಸಂಭ್ರಮ ಡಬಲ್

ಒಂದೇ ಮಳೆಗೆ ಕೋಡಿ ಬಿದ್ದ ವಿವಿ ಸಾಗರ, ಮಾದಾಪುರ ಕೆರೆ, ರೈತರ ದೀಪಾವಳಿ ಸಂಭ್ರಮ ಡಬಲ್

ಒಂದೇ ಮಳೆಗೆ ಕೋಡಿ ಬಿದ್ದ ವಿವಿ ಸಾಗರ, ಮಾದಾಪುರ ಕೆರೆ, ರೈತರ ದೀಪಾವಳಿ ಸಂಭ್ರಮ ಡಬಲ್,  ವಿವಿ ಸಾಗರ ಡ್ಯಾಂ ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಕೋಡಿ ಬಿದ್ದರೆ, ಇತ್ತ ಶಾಶ್ವತ ಬರಗಾಲಕ್ಕೆ ತುತ್ತಾಗಿದ್ದ ಕಡೂರು ತಾಲೂಕು ಇದೀಗ ನಳನಳಿಸುತ್ತಿದೆ. 

2 Min read
Author : Chethan Kumar
Published : Oct 20 2025, 03:06 PM IST
Share this Photo Gallery
  • FB
  • TW
  • Linkdin
  • Whatsapp
16
ಮತ್ತೆ ಅಬ್ಬರಿಸುತ್ತಿದೆ ಮಳೆ
Image Credit : Asianet News

ಮತ್ತೆ ಅಬ್ಬರಿಸುತ್ತಿದೆ ಮಳೆ

ಮತ್ತೆ ಅಬ್ಬರಿಸುತ್ತಿದೆ ಮಳೆ

ಮಳೆಗಾಲ ಮುಗೀತು ಅಂದುಕೊಂಡಾಗಲೇ ಮತ್ತೆ ಅಬ್ಬರಿಸಲು ಶುರುವಾಗಿದೆ. ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ದೇಶದ ಹಲವು ರಾಜ್ಯಗಳು ಭಾರಿ ಮಳೆ ಹಾಗೂ ಪ್ರವಾಹಕ್ಕೆ ತುತ್ತಾಗಿದೆ. ಮತ್ತೆ ಮಳೆರಾಯನ ಆರ್ಭಟಕ್ಕೆ ಎರಡನೇ ಬಾರಿಗೆ ರಾಜ್ಯದ ಜಲಾಶಯಗಳು ಭರ್ತಿಯಾಗಿದೆ.ಹಲವು ಡ್ಯಾಂ, ಕೆರೆಗಳು ಕೋಡಿ ಬಿದ್ದಿದಿದೆ. ಸ್ಥಳೀಯರಲ್ಲಿ ಸಂತಸ ಹೆಚ್ಚಾಗಿದೆ.

26
ಎರಡನೇ ಬಾರಿಗೆ ಕೋಡಿ ಬಿದ್ದ ವಿವಿ ಸಾಗರ ಡ್ಯಾಂ
Image Credit : Asianet News

ಎರಡನೇ ಬಾರಿಗೆ ಕೋಡಿ ಬಿದ್ದ ವಿವಿ ಸಾಗರ ಡ್ಯಾಂ

ಎರಡನೇ ಬಾರಿಗೆ ಕೋಡಿ ಬಿದ್ದ ವಿವಿ ಸಾಗರ ಡ್ಯಾಂ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯ ವರ್ಷದಲ್ಲಿ ಎರಡನೇ ಬಾರಿಗೆ ಕೋಡಿ ಬಿದ್ದಿದೆ. ಕೋಟೆನಾಡಿನ ಅನ್ಮದಾತರ ಜೀವನಾಡಿ ಆಗಿರುವ ವಿವಿ ಸಾಗರ ಜಲಾಶಯ ಎರಡನೇ ಭಾರಿಗೆ ಕೋಡಿ ಬಿದ್ದ ಕಾರಣ ರೈತರ ಮುಖದಲ್ಲಿ ಮಂದಹಾಸ ಕಾಣುತ್ತಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವರ್ಷದಲ್ಲಿ ಎರಡನೇ ಬಾರಿ ಕೋಡಿ ಬಿದ್ದಿದೆ ಎಂದು ಸಂಭ್ರಮಿಸಿದ್ದಾರೆ.

Related Articles

Related image1
ದೀಪಾವಳಿಗೆ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹಲೆವೆಡೆ ಭಾರಿ ಮಳೆ
Related image2
ವಾಯುಭಾರ ಕುಸಿತ : 2 ರಾಜ್ಯಕ್ಕೆ ಇಂದು ಭಾರಿ ಮಳೆ ಸಾಧ್ಯತೆ
36
ದೇವರ ಕೃಪೆಯಿಂದ ಜಲಾಶಯ ಭರ್ತಿ
Image Credit : Asianet News

ದೇವರ ಕೃಪೆಯಿಂದ ಜಲಾಶಯ ಭರ್ತಿ

ದೇವರ ಕೃಪೆಯಿಂದ ಜಲಾಶಯ ಭರ್ತಿ

ದೇವರ ಕೃಪೆಯಿಂದ ಮತ್ತು ಸರ್ಕಾರದ ದೃಢ ಸಂಕಲ್ಪದಿಂದ ಜಲಾಶಯ ಭರ್ತಿ ಎಂದು ರೈತರು ಹೇಳಿದ್ದಾರೆ. ರೈತರ ಕನಸಿಗೆ ಜೀವ ತುಂಬಿದ ದಿನ ವಿವಿ ಸಾಗರ ಮತ್ತೆ ತುಂಬಿ ಹರಿಯುತ್ತಿದೆ. ಭಗವಂತನ ಆಶೀರ್ವಾದ, ಸರ್ಕಾರದ ಶ್ರಮ, ಜನರ ವಿಶ್ವಾಸ ಇವುಗಳೆಲ್ಲ ಸೇರಿ ಈ ದಿನವನ್ನು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿಸಿದೆ ಎಂದು ರೈತರು ಸಂಭ್ರಮಪಟ್ಟಿದ್ದಾರೆ.

46
ಮಾದಾಪುರ ಕೆರೆ ಸಂಪೂರ್ಣ ಭರ್ತಿ
Image Credit : Asianet News

ಮಾದಾಪುರ ಕೆರೆ ಸಂಪೂರ್ಣ ಭರ್ತಿ

ಮಾದಾಪುರ ಕೆರೆ ಸಂಪೂರ್ಣ ಭರ್ತಿ

ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಒಂದೇ ರಾತ್ರಿ ಮಳೆಗೆ ಸುಮಾರು 15 ಎಕರೆ ವಿರ್ಸೀರ್ಣದ ಮಾದಾಪುರ ಕೆರೆ ಭರ್ತಿಯಾಗಿದೆ. ಕಡೂರು ತಾಲೂಕಿನಲ್ಲಿ ಮಾದಾಪುರ ಕೆರೆ ಭರ್ತಿಯಾಗಿರುವುದು ಸ್ಥಳೀಯ ದೀಪಾವಳಿ ಸಂಭ್ರಮ ಹೆಚ್ಚಿಸಿದೆ. ಕಡೂರು ಶಾಶ್ವತ ಬರಗಾಲಕ್ಕೆ ತುತ್ತಾದ ತಾಲೂಕು ಎಂದು ಗುರುತಿಸಿಗೊಂಡಿದೆ. ಆದರೆ ಈ ಬಾರಿ ಮಾದಾಪುರ ಕೆರೆ ಭರ್ತಿಯಾಗುವ ಮೂಲಕ ನಳನಳಿಸುತ್ತಿದೆ.

56
ಕಡೂರಿನಲ್ಲಿ ಈ ವರ್ಷ ಉತ್ತಮ ಮಳೆ
Image Credit : Asianet News

ಕಡೂರಿನಲ್ಲಿ ಈ ವರ್ಷ ಉತ್ತಮ ಮಳೆ

ಕಡೂರಿನಲ್ಲಿ ಈ ವರ್ಷ ಉತ್ತಮ ಮಳೆ

ಈ ವರ್ಷಪೂರ್ತಿ ಕಡೂರಿನಲ್ಲೂ ಆಗಾಗ್ಗೆ ಸಾಧಾರಣ ಮಳೆಯಾಗಿತ್ತು, ಭಾನುವಾರ ಸಂಜೆಯಿಂದ ಆರಂಭವಾದ ಒಂದೇ ಮಳೆಗೆ ಕೆರೆ ಭರ್ತಿಯಾಗಿದೆ. ಗುಂಡಿಗಳಲ್ಲಿ ಅಲ್ಪ-ಸ್ವಲ್ಪ ನೀರು ಬಿಟ್ಟರೆ ಕೆರೆ ಖಾಲಿ ಇತ್ತು. ಒಂದೇ ರಾತ್ರಿ ಮಳೆಗೆ ಕೆರೆ ಕೋಡಿ ಬಿದ್ದು ಹಳ್ಳಿಗರಲ್ಲಿ ಸಂತಸ ಮೂಡಿದೆ.

66
ಒಂದೆಡೆ ಕೆರೆ ಭರ್ತಿ ಮತ್ತೊಂದೆಡೆ ರೈತರ ಬದುಕು ತತ್ತರ
Image Credit : Asianet News

ಒಂದೆಡೆ ಕೆರೆ ಭರ್ತಿ ಮತ್ತೊಂದೆಡೆ ರೈತರ ಬದುಕು ತತ್ತರ

ಒಂದೆಡೆ ಕೆರೆ ಭರ್ತಿ ಮತ್ತೊಂದೆಡೆ ರೈತರ ಬದುಕು ತತ್ತರ

ಅಕಾಲಿಕವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರೈತನ ಬೆಳೆಗಳು ನಾಶವಾಗಿದೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮಾಕವಳ್ಳಿ ಸೇರಿದಂತೆ ಹಲವೆಡೆ ರೈತ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಾಲ ಮಾಡಿ ಬೆಳೆ ಬೆಳೆದಿದ್ದ ರೈತ ಕಂಲಾಗಿದ್ದಾನೆ. ಇದರ ಪರಿಣಾಮ ಲಕ್ಷ ಲಕ್ಷ ರೂಪಾಯಿ ನಷ್ಟ ಅನುಭವಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಕರ್ನಾಟಕ ಮಳೆ
ಬೆಂಗಳೂರು ಮಳೆ

Latest Videos
Recommended Stories
Recommended image1
ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?
Recommended image2
Share Market: ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!
Recommended image3
ಖ್ಯಾತ ನಟ, ಎಂಪಿ, ಕೋಟಿ ಕೋಟಿ ಇದ್ರೂ, ತಳ್ಳೋ ಗಾಡೀಲಿ ಊಟ ಸವಿದ ಜಗ್ಗೇಶ್!
Related Stories
Recommended image1
ದೀಪಾವಳಿಗೆ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಹಲೆವೆಡೆ ಭಾರಿ ಮಳೆ
Recommended image2
ವಾಯುಭಾರ ಕುಸಿತ : 2 ರಾಜ್ಯಕ್ಕೆ ಇಂದು ಭಾರಿ ಮಳೆ ಸಾಧ್ಯತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved