MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಬಳಕೆಗೆ ಮುಕ್ತವಾದ ಭಾಗಮಂಡಲ ಮೇಲ್ಸೇತುವೆ; ಹತ್ತಾರು ಗ್ರಾಮಗಳಿಗೆ ಇನ್ನು ಪ್ರವಾಹ ಭೀತಿ ಇಲ್ಲ

ಬಳಕೆಗೆ ಮುಕ್ತವಾದ ಭಾಗಮಂಡಲ ಮೇಲ್ಸೇತುವೆ; ಹತ್ತಾರು ಗ್ರಾಮಗಳಿಗೆ ಇನ್ನು ಪ್ರವಾಹ ಭೀತಿ ಇಲ್ಲ

ಮಳೆಗಾಲ ಬಂತೆಂದರೆ ಸಾಕು ಮೂರು ನಾಲ್ಕು ತಿಂಗಳ ಕಾಲ ಪ್ರವಾಹ ಭೀತಿಗೆ ಸಿಲುಕಿ ನಲುಗಿ ಹೋಗುತ್ತಿದ್ದ ಕೊಡಗು ಜಿಲ್ಲೆ ಭಾಗಮಂಡಲಕ್ಕೆ ಇನ್ನು ಮುಂದೆ ಪ್ರವಾಹದ ಭೀತಿ ಇಲ್ಲ.. ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಮುಗಿದಿದ್ದು, ಬಳಕೆಗೆ ಮುಕ್ತವಾಗಿದೆ. 

2 Min read
Author : Suvarna News
Published : May 14 2024, 08:59 PM IST
Share this Photo Gallery
  • FB
  • TW
  • Linkdin
  • Whatsapp
14

ಹೌದು ಪ್ರಸಿದ್ಧ ಪುಣ್ಯ ಕ್ಷೇತ್ರ ಭಾಗಮಂಡಲದಲ್ಲಿ ಭಗಂಡೇಶ್ವರನ ಸನ್ನಿಧಿ ಇದೆ. ಇಲ್ಲಿಗೆ ನಿತ್ಯ ನೂರಾರು ಭಕ್ತರು ಜಿಲ್ಲೆಯಷ್ಟೇ ಅಲ್ಲ, ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಬಂದು ಹೋಗುತ್ತಾರೆ. ಇಲ್ಲಿರುವ ಕಾವೇರಿ, ಕನ್ನಿಕೆ ಹಾಗೂ ಸುಜ್ಯೋತಿ ನದಿಗಳ ಹೊಂದಾಗುವ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತರಾಗುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ತ್ರಿವೇಣಿ ಸಂಗಮ ಕಳೆದ ಐದಾರು ವರ್ಷಗಳಿಂದ ಮಳೆಗಾಲ ಬಂತೆಂದರೆ ಈ ಮೂರು ನದಿಗಳು ಉಕ್ಕಿ ಹರಿದು ಪ್ರವಾಹದ ರೂಪ ತಳೆದು ನಾಲ್ಕೈದು ತಿಂಗಳ ಅವಧಿಯಲ್ಲಿ ಹಲವು ಬಾರಿ ಭಾಗಮಂಡಲವನ್ನು ಮುಳುಗಡೆ ಮಾಡಿ ಬಿಡುತಿತ್ತು. ಈ ಸಂದರ್ಭದಲ್ಲಿ ಭಾಗಮಂಡಲ, ಕೋರಂಗಾಲ, ಚೇರಂಗಾಲ, ತಲಕಾವೇರಿ, ಕುಯ್ಯಂಗೇರಿ, ಅಯ್ಯಂಗೇರಿ ಸೇರಿದಂತೆ ಸುತ್ತಮುತ್ತಲ ಹತ್ತಾರು ಹಳ್ಳಿಗಳ ಸಾವಿರಾರು ಕುಟುಂಬಗಳು ಪಡಬಾರದ ಕಷ್ಟ ಪಡುತ್ತಿದ್ದವು. ಅತ್ತಿಂದಿತ್ತ ಪ್ರವಾಹ ದಾಟಲಾಗದೆ ಸಂಕಷ್ಟ ಎದುರಿಸುತ್ತಿದ್ದವು. 

24

ಆದರೆ ಈ ಬಾರಿ ಅಂತಹ ಪ್ರವಾಹ ಭೀತಿಯಿಂದ ಹೊರ ಬಂದು ನೆಮ್ಮದಿ ನಿಟ್ಟುಸಿರು ಬಿಟ್ಟಿವೆ. ಹೌದು ಭಾಗಮಂಡಲದಲ್ಲಿ ಮೂರು ದಿಕ್ಕುಗಳಿಗೆ ಸಂಪರ್ಕ ಕಲ್ಪಿಸುವಂತೆ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದ್ದು ಜನರು ಫುಲ್ ಖುಷಿಯಾಗಿದ್ದಾರೆ. 2018 ರಲ್ಲಿ 28 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಕಾಮಗಾರಿ ಮಂದಗತಿಯಲ್ಲಿ ನಡೆದಿದ್ದರಿಂದ ಜನರ ಓಡಾಟಕ್ಕೆ ಮುಕ್ತವಾಗಿರಲಿಲ್ಲ. ಅದರಲ್ಲೂ 2018 ರಿಂದ ನಿರಂತರ ಪ್ರವಾಹ ಎದುರಾದಾಗಲೆಲ್ಲಾ ಭಾಗಮಂಡಲದಿಂದ ಆಚೆಗೆ ಇರುವ ಯಾವುದೇ ಗ್ರಾಮಗಳ ಜನರು ಮಡಿಕೇರಿಯತ್ತ ತೆರಳು ಸಾಧ್ಯವಾಗದೇ ಪ್ರವಾಹದ ದಿಗ್ಭಂಧನದಲ್ಲಿ ಸಿಲುಕಿಬಿಡುತ್ತಿದ್ದರು. ಯಾರಿಗೆ ಯಾವುದೇ ತೊಂದರೆ ಆದರೂ ತ್ರಿವೇಣಿ ಸಂಗಮ ಮುಳುಗಡೆಯಾಗುತ್ತಿದ್ದರಿಂದ ಅಲ್ಲಿಯೇ ಸಿಲುಕಿ ಪರದಾಡಬೇಕಾಗಿತ್ತು. ಕೋರಂಗಾಲ, ತಲಕಾವೇರಿಯಲ್ಲಿ ಭೂಕುಸಿತವಾಗಲೆಲ್ಲಾ ಅಲ್ಲಿ ಸತ್ತವರನ್ನೂ, ಗಾಯಗೊಂಡವರನ್ನು ಇತ್ತ ಕಡೆಗೆ ಸಾಗಿಸಲಾಗದೆ ಪಡಬಾರದ ಕಷ್ಟ ಪಡಬೇಕಾಗಿತ್ತು. ಅಂದಿನಿಂದಲೂ ಮೇಲ್ಸೇತುವೆ ಕಾಮಗಾರಿಯನ್ನು ಆದಷ್ಟು ಬೇಗನೇ ಮುಗಿಸುವಂತೆ ಜನರು ಎಷ್ಟೇ ಒತ್ತಾಯಿಸಿದ್ದರೂ ಕಾಮಗಾರಿ ಪೂರ್ಣಗೊಂಡಿರಲೇ ಇಲ್ಲ. 2022 ರ ವರೆಗೂ ಪ್ರವಾಹದ ಪರಿಸ್ಥಿತಿಯಲ್ಲೇ ಜನರು ನಲುಗಿ ಹೋಗಿದ್ದರು. ಕಳೆದ ಬಾರಿಯೇ ಮೇಲ್ಸೇತುವೆ ಕಾಮಗಾರಿ ಮುಗಿಯುವ ಹಂತ ತಲುಪಿದ್ದರೂ ಅದರ ಸಂಪರ್ಕ ರಸ್ತೆಗಳ ಕಾಮಗಾರಿ ಮುಗಿಯದೇ ಬಳಕೆಗೆ ದೊರೆತ್ತಿರಲಿಲ್ಲ. ಆದರೆ ಈ ಬಾರಿ ಬಹುತೇಕ ಕಾಮಗಾರಿ ಮುಗಿದಿದ್ದು ಸಾರ್ವಜನಿಕರ ಬಳಕೆಗೆ ಮೇಲ್ಸೇತುವೆ ಮುಕ್ತವಾಗಿದೆ. 

34

ಹೀಗಾಗಿ ಜನರು ಈ ಬಾರಿ ಪ್ರವಾಹದ ಪರಿಸ್ಥಿತಿ ಎದುರಾದರೂ ಯಾವುದೇ ಆತಂಕವಿಲ್ಲದೆ ತಮ್ಮ ನಿತ್ಯದ ಬದುಕು ದೂಡಬಹುದೆಂಬ ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ. ಮೇಲ್ಸೇತುವೆ ಕಾಮಗಾರಿ ಮುಗಿದು ಅದು ಸಾರ್ವಜನಿಕರ ಬಳಕೆಗೆ ದೊರೆತ್ತಿರುವುದರಿಂದ ಪ್ರವಾಸಿಗರು ಕೂಡ ಯಾವುದೇ ಅಡ್ಡಿ ಆತಂಕವಿಲ್ಲದೆ, ಭಾಗಮಂಡಲ ಮತ್ತು ತಲಕಾವೇರಿಗಳಿಗೆ ತೆರಳಬಹುದು. ಆದರೆ ಭಾಗಮಂಡಲ ತಗ್ಗು ಪ್ರದೇಶವಾಗಿದ್ದು, ಒಂದು ವೇಳೆ ಮತ್ತೆ ಯತ್ತಾಸ್ಥಿತಿಯಲ್ಲಿ ಮಳೆಗಾಲದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾದರೆ ಭಾಗಮಂಡಲದ ಅಂಗಡಿ ಮುಂಗಟ್ಟುಗಳು, ಕೆಲವು ಮನೆಗಳು ಮುಳುಗಡೆಯಾವುದು ಮಾತ್ರ ತಪ್ಪಲ್ಲ.

44

 ಏನೇ ಆಗಲಿ ಕಳೆದ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಭಾಗಮಂಡಲದ ಮೇಲ್ಸೇತುವೆ ಕಾಮಗಾರಿ ಮುಗಿದಿರುವುದು ಸುತ್ತಮುತ್ತಲ ಗ್ರಾಮಗಳಿಗೆ ಮತ್ತು ಪ್ರವಾಸಿಗರ ಓಡಾಟಕ್ಕೆ ಸಾಕಷ್ಟು ಅನುಕೂಲವಾಗಿರುವುದಂತು ಸತ್ಯ.

ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ಕೊಡಗು
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಆಯುರ್ವೇದ ಕೇವಲ ಮನೆಮದ್ದಲ್ಲ, ಇದೊಂದು ವೈಜ್ಞಾನಿಕ ಚಿಕಿತ್ಸಾ ಪದ್ಧತಿ: ತಪ್ಪು ಕಲ್ಪನೆಗಳನ್ನು ಬಿಟ್ಟುಬಿಡಿ!
Recommended image2
ಮಂಡ್ಯದಲ್ಲಿ ARAI ಕೇಂದ್ರ ಸ್ಥಾಪನೆಗೆ ಬಸರಾಳು ಬಳಿ 105 ಎಕರೆ ಭೂಮಿ ಲಭ್ಯ: ಕುಮಾರಸ್ವಾಮಿಗೆ ಪತ್ರ ಬರೆದ ಎಂ.ಬಿ. ಪಾಟೀಲ
Recommended image3
ಮಿಲ್ಕಿ ಬ್ಯೂಟಿ ಮುಂದೆ ಸಿಲ್ಕ್‌ನಂತೆ ಜಾರಿದ ಕರ್ನಾಟಕ ಸರ್ಕಾರ; ಮೈಸೂರ್ ಸ್ಯಾಂಡಲ್ ಸೋಪ್ ಅಧಿಕೃತ ರಾಯಭಾರಿಯಾದ ತಮನ್ನಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved