MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • State
  • ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!

ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಆರ್ಥಿಕ ಸಂಕಷ್ಟದಲ್ಲಿರುವ ಪವಿತ್ರಾ ಗೌಡ ಅವರು ದರ್ಶನ್ ಭೇಟಿಗಾಗಿ ಹರಸಾಹಸ ಪಡುತ್ತಿದ್ದಾರೆ. ಆದರೆ, ಪವಿತ್ರಾ ಮೇಲೆಯೇ ದರ್ಶನ್ ಕೆಂಡಾಮಂಡಲವಾಗಿದ್ದಾರೆ.

2 Min read
Author : Sathish Kumar KH
Published : Dec 19 2025, 05:07 PM IST
Share this Photo Gallery
  • FB
  • TW
  • Linkdin
  • Whatsapp
16
ದರ್ಶನ್ ಭೇಟಿಗೆ ಪರದಾಡುತ್ತಿರುವ ಪವಿತ್ರಾ
Image Credit : Sicial Media

ದರ್ಶನ್ ಭೇಟಿಗೆ ಪರದಾಡುತ್ತಿರುವ ಪವಿತ್ರಾ

ಬೆಂಗಳೂರು (ಡಿ.19): ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ (Trial) ನ್ಯಾಯಾಲಯದಲ್ಲಿ ಅಧಿಕೃತವಾಗಿ ಆರಂಭವಾಗುತ್ತಿದ್ದಂತೆ, ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿರುವ ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ಈ ಪೈಕಿ ಎ-1 ಆರೋಪಿ ಪವಿತ್ರಾ ಗೌಡಗೆ ಸಂಕಷ್ಟಗಳು ಹೆಚ್ಚಾಗಿದ್ದು, ಆರ್ಥಿಕ ನೆರವಿಗಾಗಿ ನಟ ದರ್ಶನ್ ಭೇಟಿಗೆ ಅವರು ನಡೆಸುತ್ತಿರುವ ಸರ್ವ ಪ್ರಯತ್ನಗಳೂ ವಿಫಲವಾಗುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.

26
ಬೆದರಿದ ಪವಿತ್ರಾ ಗೌಡ
Image Credit : Asianet News

ಬೆದರಿದ ಪವಿತ್ರಾ ಗೌಡ

ಈ ಪ್ರಕರಣದ ವಿಚಾರಣೆ ಆರಂಭವಾಗಿರುವುದರಿಂದ ಸಾಕ್ಷ್ಯಗಳ ಮುಂದೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವುದು ಪವಿತ್ರಾ ಗೌಡಗೆ ಸವಾಲಾಗಿದೆ. ಅಷ್ಟೇ ಅಲ್ಲದೆ, ಜೈಲು ಪಾಲಾದ ನಂತರ ಪವಿತ್ರಾಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸಲು ಹಣದ ಅಗತ್ಯವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ್ದ ಡಿಜಿಪಿ (ಕಾರಾಗೃಹ) ಅಲೋಕ್ ಕುಮಾರ್ ಅವರ ಬಳಿ ಪವಿತ್ರಾ ಗೌಡ ದರ್ಶನ್ ಭೇಟಿಗೆ ಅವಕಾಶ ಕಲ್ಪಿಸಿಕೊಡುವಂತೆ ಕಣ್ಣೀರು ಹಾಕಿದ್ದಾರೆ.

Related Articles

Related image1
Now Playing
ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Related image2
ದರ್ಶನ್ ಪವಿತ್ರಾ ಗೌಡ ಮದುವೆ ಆಗಿದ್ರಾ? ಮದುಮಗನ ಗೆಟಪ್‌ನಲ್ಲಿ ದರ್ಶನ್, ಪವಿತ್ರಾ ಕೊರಳಲ್ಲಿ ಅರಿಶಿನ ದಾರ!
36
ಪ್ಲೀಸ್ ಸರ್ ಒಮ್ಮೆ ದರ್ಶನ್ ಭೇಟಿ ಮಾಡಿಸಿ
Image Credit : Asianet News

ಪ್ಲೀಸ್ ಸರ್ ಒಮ್ಮೆ ದರ್ಶನ್ ಭೇಟಿ ಮಾಡಿಸಿ

ಡಿಜಿಪಿ ಅಲೋಕ್ ಕುಮಾರ್ ಅವರು ಜೈಲು ಭೇಟಿಗೆ ಆಗಮಿಸಿದಾಗ ಸೆಲ್‌ನಲ್ಲಿದ್ದ ಪವಿತ್ರಾ ಗೌಡ ಅವರು, 'ಪ್ಲೀಸ್ ಸಾರ್, ಟ್ರಯಲ್ ಶುರುವಾಗಿದೆ, ಒಮ್ಮೆ ದರ್ಶನ್ ಭೇಟಿ ಮಾಡಿಸಿ, ನನ್ನ ಕಷ್ಟ ಹೇಳಿಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಅಲೋಕ್ ಕುಮಾರ್ ಕಾನೂನಿನ ಚೌಕಟ್ಟಿನಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

46
ದರ್ಶನ್ 'ಡೋಂಟ್ ಕೇರ್'
Image Credit : Instagram

ದರ್ಶನ್ 'ಡೋಂಟ್ ಕೇರ್'

ಪವಿತ್ರಾ ಗೌಡ ಜೈಲಿನ ಸಿಬ್ಬಂದಿಗಳ ಮೂಲಕ ದರ್ಶನ್‌ಗೆ ಹಲವು ಸಂದೇಶಗಳನ್ನು ರವಾನಿಸಿದ್ದಾರೆ. 'ಕಾನೂನು ಹೋರಾಟಕ್ಕೆ 20 ಲಕ್ಷ ರೂಪಾಯಿ ಹಣದ ಸಹಾಯ ಬೇಕು' ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

56
ಪವಿತ್ರಾ ಮೇಲೆ ದರ್ಶನ್ ಕೆಂಡಾಮಂಡಲ
Image Credit : Asianet News

ಪವಿತ್ರಾ ಮೇಲೆ ದರ್ಶನ್ ಕೆಂಡಾಮಂಡಲ

ಆದರೆ, ಇದಕ್ಕೆ ದರ್ಶನ್ ಮಾತ್ರ ಪವಿತ್ರಾ ಗೌಡ ಮೇಲೆ ಕೆಂಡಾಮಂಡಲವಾಗಿದ್ದಾರೆ. 'ನಿನ್ನಿಂದಲೇ ನಾನು ಇಂದು ಈ ಪರಿಸ್ಥಿತಿಗೆ ಬಂದಿದ್ದೇನೆ' ಎಂಬ ಆಕ್ರೋಶ ಹೊರಹಾಕಿರುವ ದರ್ಶನ್, ಯಾವುದೇ ಕಾರಣಕ್ಕೂ ಪವಿತ್ರಾರನ್ನು ಭೇಟಿಯಾಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ ಎನ್ನಲಾಗಿದೆ.

66
ಒಂದೂವರೆ ದಶಕದ ಸ್ನೇಹ ತುಂಡಾಗುವ ಆತಂಕ
Image Credit : our own

ಒಂದೂವರೆ ದಶಕದ ಸ್ನೇಹ ತುಂಡಾಗುವ ಆತಂಕ

ತನ್ನನ್ನು ಭೇಟಿ ಮಾಡಲು ಬರುವ ಆಪ್ತರ ಬಳಿಯೂ ದರ್ಶನ್ ಕೇವಲ ಕಾನೂನು ಹೋರಾಟದ ಬಗ್ಗೆ ಮಾತ್ರ ಚರ್ಚಿಸುತ್ತಿದ್ದು, ಪವಿತ್ರಾ ವಿಚಾರ ಬಂದಾಗ ಮೌನವಾಗುತ್ತಿದ್ದಾರೆ ಅಥವಾ ಸಿಡಿಮಿಡಿಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ, ಒಂದೂವರೆ ದಶಕಗಳ ಸ್ನೇಹ ಈಗ ಕೊಲೆ ಪ್ರಕರಣದ ತನಿಖೆಯ ಹಂತದಲ್ಲಿ ಜೈಲಿನ ಗೋಡೆಗಳ ನಡುವೆ ಕಮರಿಹೋಗುವ ಹಂತಕ್ಕೆ ತಲುಪಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ದರ್ಶನ್ ತೂಗುದೀಪ
ಪವಿತ್ರಾ ಗೌಡ
ರೇಣುಕಾಸ್ವಾಮಿ ಪ್ರಕರಣ

Latest Videos
Recommended Stories
Recommended image1
ನೈಋತ್ಯ ರೈಲ್ವೆಯಲ್ಲಿ ವಂದೇ ಭಾರತ್ ಹವಾ, ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆ, ಆದಾಯದಲ್ಲೂ ಚಾಕ್‌ಪಾಟ್‌!
Recommended image2
ಬಿಐಎಎಲ್ ನಿರ್ಬಂಧವಿದ್ದರೂ ಬೆಂಗಳೂರು 2ನೇ ಏರ್‌ಪೋರ್ಟ್‌ ನಿರ್ಮಾಣ ಪ್ರಕ್ರಿಯೆ ಆರಂಭ: ಎಂ.ಬಿ. ಪಾಟೀಲ
Recommended image3
ಭಾರತದಲ್ಲಿ 40 ಲಕ್ಷ ಮಂದಿಯಲ್ಲಿದೆ ಲೈಸೆನ್ಸ್ ಗನ್, ಯಾವ ರಾಜ್ಯಕ್ಕೆ ಮೊದಲ ಸ್ಥಾನ?
Related Stories
Recommended image1
Now Playing
ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Recommended image2
ದರ್ಶನ್ ಪವಿತ್ರಾ ಗೌಡ ಮದುವೆ ಆಗಿದ್ರಾ? ಮದುಮಗನ ಗೆಟಪ್‌ನಲ್ಲಿ ದರ್ಶನ್, ಪವಿತ್ರಾ ಕೊರಳಲ್ಲಿ ಅರಿಶಿನ ದಾರ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved