ವಾಟಾಳ್ ನಾಗರಾಜ್ ಮೊಮ್ಮಗನ ಮದುವೆ; ಕುದುರಿ ಏರಿ, ಅದ್ದೂರಿಯಾಗಿ ಬಂದ ವಧು-ವರ! PHOTOS
Vatal Nagaraj News: ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಮೊಮ್ಮಗನ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಇಬ್ಬರು ಮಕ್ಕಳು
ವಾಟಾಳ್ ನಾಗರಾಜ್ ಅವರಿಗೆ ಇಬ್ಬರು ಮಕ್ಕಳು. ಒಂದು ಗಂಡು, ಒಂದು ಹೆಣ್ಣು. ಇವರ ಮಗಳ ಹೆಸರು ಅನುಪಮಾ. ಮಹದೇವ್ ಪ್ರಸಾದ್ ಅವರ ಮಗನ ಹೆಸರು.
ಅನುಪಮಾ ಅಂದು ಹೇಳಿದ್ದೇನು?
ವಾಟಾಳ್ ನಾಗರಾಜ್ ಪುತ್ರಿ ಎಂದು ಹೇಳಿಕೊಳ್ಳಲು ಪುಣ್ಯ ಮಾಡಿದ್ದೇನೆ, ತಂದೆ ಜೀವನದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಇಲ್ಲ ಎಂದು ಅನುಪಮಾ ಹೇಳಿದ್ದರು.
ಆರತಕ್ಷತೆ ಕಾರ್ಯಕ್ರಮ
ಅನುಪಮಾ ಹಾಗೂ ಸಿದ್ದೇಶ್ವರ ಕುಮಾರ್ ಅವರ ಪುತ್ರ ಚಂದನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಹಳದಿ ಶಾಸ್ತ್ರ ಕೂಡ ನಡೆದಿದೆ. ಅರಮನೆ ಮೈದಾನದಲ್ಲಿ ಆರತಕ್ಷತೆ ನಡೆದಿದೆ.
ಹುಡುಗಿ ಯಾರು?
ಚಂದನ್ ಅವರು ಪ್ರೇರಣ ರೈ ಎನ್ನುವವರನ್ನು ಮದುವೆಯಾಗಿದ್ದಾರೆ. ಅರಮನೆ ಮೈದಾನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ.
ಗಣ್ಯರು ಭಾಗಿ
ಅಶ್ವಿನಿ ಪುನೀತ್ ರಾಜ್ಕುಮಾರ್, ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

