MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • State
  • ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ

ಆಗಸ್ಟ್ 2024ರಲ್ಲಿ ಗೇಟ್ ಕಿತ್ತುಹೋಗಿ ನೀರು ಸೋರಿಕೆಯಾದ ನಂತರ, ತುಂಗಭದ್ರಾ ಜಲಾಶಯದ ಎಲ್ಲಾ 33 ಶಿಥಿಲಗೊಂಡಿದ್ದ ಗೇಟ್‌ಗಳನ್ನು ಬದಲಾಯಿಸಲು ನಿರ್ಧರಿಸಲಾಯಿತು. ₹52 ಕೋಟಿ ವೆಚ್ಚದ ಈ ಬೃಹತ್ ಯೋಜನೆಯಡಿ, ನೂತನ ಗೇಟ್‌ಗಳ ಅಳವಡಿಕೆ ಕಾರ್ಯವು ಇದೀಗ ಯಶಸ್ವಿಯಾಗಿ ಪೂರ್ಣಗೊಂಡಿದೆ.

2 Min read
Author : Sathish Kumar KH
Published : Apr 26 2026, 10:52 AM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ವಿಜಯನಗರ (ಏ.26): ತುಂಗಭದ್ರಾ ಜಲಾಶಯದ 33 ನೂತನ ಗೇಟ್‌ ಅಳವಡಿಕೆ ಕಾರ್ಯ ಶನಿವಾರ ಸಂಪೂರ್ಣಗೊಂಡಿದೆ ಎಂದು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಓ.ಆರ್.ಕೆ. ರೆಡ್ಡಿ ತಿಳಿಸಿದ್ದಾರೆ.

28
Image Credit : Asianet News

ಈ ಕುರಿತು ಮಾತನಾಡಿದ ಅವರು, ನೂತನ ಗೇಟ್‌ ಅಳವಡಿಕೆ ಕಾರ್ಯ ಡಿ.24, 2025 ರಿಂದ ಪ್ರಾರಂಭವಾಗಿದ್ದು, ಏ.25ಕ್ಕೆ ಸಂಪನ್ನಗೊಂಡಿದೆ. ಇನ್ನೂ ಸಣ್ಣಪುಟ್ಟ ಕೆಲಸಗಳಿದ್ದು, ಮೇ ಅಂತ್ಯದವರೆಗೆ ಪೂರ್ಣಗೊಳ್ಳಲಿದೆ ಎಂದರು.ಆಗಸ್ಟ್ 2024ರ ಮಧ್ಯರಾತ್ರಿ ತುಂಗಭದ್ರಾ ಜಲಾಶಯದ ಗೇಟ್ ನಂ.19 ನೀರಿನ ರಭಸಕ್ಕೆ ಕಿತ್ತು ಹೋದ ಪರಿಣಾಮ 45,000 ಕ್ಯೂಸಕ್‌ ನೀರು ಸೋರಿಕೆ ಆಗಿತ್ತು.

Related Articles

Related image1
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು
Related image2
ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ ಮೇನಲ್ಲಿ ಅಂತ್ಯ, 3 ರಾಜ್ಯಗಳಿಂದ 54 ಕೋಟಿ ವೆಚ್ಚ, ಕರ್ನಾಟಕದ ಪಾಲೆಷ್ಟು?
38
Image Credit : Asianet News

ತಕ್ಷಣ ಎಚ್ಚೆತ್ತ ತುಂಗಭದ್ರಾ ಮಂಡಳಿ ಅಧಿಕಾರಿಗಳು ಜಲಾಶಯ ಗೇಟ್ ತಜ್ಞ ಕನ್ನಯ್ಯ ನಾಯ್ಡು ಅವರನ್ನು ಕರೆಸಿ ಗೇಟ್ ನಂ.19ಕ್ಕೆ ಸ್ಟಾಪ್ ಲಾಕ್ ಅಳವಡಿಸಿ ಪೋಲಾಗುತ್ತಿದ್ದ ನೀರನ್ನು ತಡೆಯುವಲ್ಲಿ ಯಶಸ್ವಿಯಾದರು.

48
Image Credit : Asianet News

ತಜ್ಞ ಕನ್ನಯ್ಯ ನಾಯ್ಡು ತುಂಗಭದ್ರಾ ಜಲಾಶಯದ ಎಲ್ಲ 33 ಗೇಟ್‌ ಪರಿಶೀಲಿಸಿ ಜಲಾಶಯದ ಗೇಟ್‌ಗಳು ಶಿಥಿಲಗೊಂಡಿದ್ದು, ಜಲಾಶಯದ ನೀರನ್ನು ತಡೆಯುವ ಸಾಮರ್ಥ್ಯ ಗೇಟ್‌ಗಳು ಕಳೆದುಕೊಂಡಿವೆ ತಕ್ಷಣವೇ ಬದಲಿಸಬೇಕು ಎಂದು ಕರ್ನಾಟಕ ಹಾಗೂ ಆಂಧ್ರ ಸರ್ಕಾರಕ್ಕೆ ಸಲಹೆ ನೀಡಿದ್ದರು.

58
Image Credit : Asianet News

ಕನ್ನಯ್ಯ ನಾಯ್ಡು ಸಲಹೆ ಗಂಭೀರವಾಗಿ ಪರಿಗಣಿಸಿದ ತುಂಗಭದ್ರಾ ಮಂಡಳಿಯು ಮೇ. 2025ರಲ್ಲಿ ತುಂಗಭದ್ರಾ ಜಲಾಶಯದ ನೂತನ ಗೇಟ್‌ ಅಳವಡಿಸುವ ನಿಟ್ಟಿನಲ್ಲಿ ₹52 ಕೋಟಿ ಟೆಂಡರ್ ಕರೆದು ಗುಜರಾತ್ ಮೂಲದ ಕಂಪನಿಗೆ ಗೇಟ್ ಅಳವಡಿಸುವ ಟೆಂಡರ್ ನೀಡಿದ್ದರು.

68
Image Credit : Asianet News

ಜೂನ್ 2025ರಲ್ಲಿ ಗೇಟ್ ಬದಲಿಸುವ ನಿಟ್ಟಿನಲ್ಲಿ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡು ಒಂದುವರೆ ವರ್ಷ ಅವಧಿ ನೀಡಲಾಯಿತು, ಅಂದರೆ, ಜೂನ್ 2025 ರಿಂದ ಡಿಸೆಂಬರ್ 2026ರವರೆಗೆ ಗೇಟ್‌ ಅಳವಡಿಕೆ ಕಾರ್ಯ ಮುಗಿಸಬೇಕು ಎಂದು ಗುತ್ತಿಗೆದಾರನೊಂದಿಗೆ ಒಪ್ಪಂದ ಮಾಡಲಾಯಿತು.

78
Image Credit : Asianet News

ಜನವರಿ ತಿಂಗಳಲ್ಲಿ ಒಂದು ಗೇಟ್‌ ಸಹ ಅಳವಡಿಕೆ ಮಾಡದ ಕಾರಣ ಕನ್ನಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದರು. ನಂತರ ಗೇಟ್ ಅಳವಡಿಕೆ ಕಾರ್ಯಕ್ಕೆ ಮೂರು ಪ್ರತ್ಯೇಕ ತಂಡ ರಚಿಸಿ ಒಂದು ತಂಡದಿಂದ ಗೇಟ್ ನಿರ್ಮಾಣ, ಇನ್ನೊಂದು ತಂಡ ಹಳೇ ಗೇಟ್‌ ತೆರವು ಕಾರ್ಯಾಚರಣೆ, ಮೂರನೇ ತಂಡದಿಂದ ನೂತನ ಗೇಟ್‌ ಅಳವಡಿಕೆ ಕಾರ್ಯ ಮಾಡಲಾಯಿತು.

88
Image Credit : our own

ಈ ಮೂರು ತಂಡದಲ್ಲಿ ಒಟ್ಟು 120 ಜನರು ಹಗಲು ರಾತ್ರಿ ಕಾರ್ಯ ನಿರ್ವಹಿಸುತ್ತಿದ್ದರು. ಇದಲ್ಲದೆ ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ, ಮುಖ್ಯ ಅಭಿಯಂತರರು, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ತುಂಗಭದ್ರಾ ಮಂಡಳಿ ಇಂಜಿನಿಯರ್ ಈ ಕಾರ್ಯದಲ್ಲಿ ಭಾಗಿಯಾಗಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ತುಂಗಭದ್ರಾ ಅಣೆಕಟ್ಟು
ವಿಜಯನಗರ
ಕೊಪ್ಪಳ

Latest Videos
Recommended Stories
Recommended image1
ಎಸ್ಸೆಸ್ಸೆಲ್ಸಿ ಕನ್ನಡದಲ್ಲಿ ಫೇಲಾಗಿದ್ದು ಮಕ್ಕಳಷ್ಟೇ ಅಲ್ಲ; ಅಮುಲಾಗ್ರ ಬದಲಾವಣೆಗೆ ತಜ್ಞರ ಒತ್ತಡ
Recommended image2
Bengaluru: ದೇಶದ ಮೊದಲ ಬುಲೆಟ್ ರೈಲಿಗೆ ಬೆಂಗಳೂರಿನ ಬಿಇಎಂಎಲ್‌ನಲ್ಲಿ ಬೋಗಿ ಉತ್ಪಾದನೆ
Recommended image3
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಶಾರೀಕ್‌ಗೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟ
Related Stories
Recommended image1
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು
Recommended image2
ತುಂಗಭದ್ರಾ ಡ್ಯಾಂನ ಎಲ್ಲ ಗೇಟ್ ಬದಲಾವಣೆ ಮೇನಲ್ಲಿ ಅಂತ್ಯ, 3 ರಾಜ್ಯಗಳಿಂದ 54 ಕೋಟಿ ವೆಚ್ಚ, ಕರ್ನಾಟಕದ ಪಾಲೆಷ್ಟು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved