MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Travel
  • ಈ ದೇವಸ್ಥಾನಕ್ಕೆ ಬಂದ 48 ದಿನಗಳಲ್ಲಿ ಕಿಡ್ನಿ ಕಾಯಿಲೆ ಗುಣವಾಗುತ್ತಂತೆ!

ಈ ದೇವಸ್ಥಾನಕ್ಕೆ ಬಂದ 48 ದಿನಗಳಲ್ಲಿ ಕಿಡ್ನಿ ಕಾಯಿಲೆ ಗುಣವಾಗುತ್ತಂತೆ!

ಸಾಮಾನ್ಯವಾಗಿ ಇಲ್ಲಿಗೆ ಭೇಟಿ ನೀಡಿ ದೇವರನ್ನು ಪೂಜಿಸುವುದರಿಂದ ವ್ಯಕ್ತಿಯ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳು ಗುಣವಾಗುತ್ತವೆ ಎಂದು ಹೇಳಲಾಗುತ್ತದೆ.

2 Min read
Author : Ashwini HR
Published : Sep 10 2025, 05:24 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Instagram

ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಜನರು ಸಾಮಾನ್ಯವಾಗಿ ಉತ್ತಮ ಆಹಾರ, ವ್ಯಾಯಾಮ ಅಥವಾ ವೈದ್ಯರ ಔಷಧಿಗಳನ್ನು ಅವಲಂಬಿಸಿರುತ್ತಾರೆ. ಕೆಲವೊಮ್ಮೆ ನಮಗೆ ತಿಳಿಯದಂತೆ ದೊಡ್ಡ ದೊಡ್ಡ ಕಾಯಿಲೆಗಳು ವಕ್ಕರಿಸುತ್ತವೆ. ಆಗ ಕೆಲವು ಜನರು ಮಾತ್ರ ಇದರಿಂದ ಮುಕ್ತಿ ಪಡೆಯಲು ದೇವರನ್ನು ಆಶ್ರಯಿಸುತ್ತಾರೆ. ಭಾರತದಲ್ಲಿ ಒಂದು ದೇವಾಲಯವಿದೆ. ಸಾಮಾನ್ಯವಾಗಿ ಇಲ್ಲಿಗೆ ಭೇಟಿ ನೀಡಿ ದೇವರನ್ನು ಪೂಜಿಸುವುದರಿಂದ ವ್ಯಕ್ತಿಯ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳು ಗುಣವಾಗುತ್ತವೆ ಎಂದು ಹೇಳಲಾಗುತ್ತದೆ.

26
Image Credit : Instagram

ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿರುವ ಈ ದೇವಾಲಯದ ಹೆಸರು ಊತತುರ್ ಸುದ್ಧ ರತ್ನೇಶ್ವರರ್ ದೇವಸ್ಥಾನ(Oothathur suddha rathneswarar temple).ಈ ಪ್ರಾಚೀನ ಶಿವ ದೇವಾಲಯವು ಕಿಡ್ನಿ ಸ್ಟೋನ್ಸ್, ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (Chronic kidney disease) ಮತ್ತು ಇತರ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆಗೆ ವಿಶೇಷವಾಗಿ ಪ್ರಸಿದ್ಧವಾಗಿದೆ. ಹಾಗಾದರೆ ಬನ್ನಿ ಈ ದೇವಾಲಯದ ವಿಶೇಷತೆ ಏನು ಎಂದು ತಿಳಿಯೋಣ.

Related Articles

Related image1
ಈ ದಿಕ್ಕಿನಲ್ಲಿ ಇದೇ ದಿನ ತುಳಸಿ ಗಿಡ ನೆಟ್ಟರೆ ಹಣದ ತಿಜೋರಿ ತುಂಬಿರುತ್ತೆ, ಆಹಾರದ ಕೊರತೆಯೇ ಇರಲ್ಲ
36
Image Credit : Instagram

ದೇವಾಲಯದ ವೈಶಿಷ್ಟ್ಯಗಳು
ಊತತುರ್ ಸುದ್ಧ ರತ್ನೇಶ್ವರರ್ ದೇವಸ್ಥಾನದಲ್ಲಿ ಭಕ್ತರು ಪೂಜೆ, ಅಭಿಷೇಕ ಮತ್ತು ವಿಶೇಷ ಆಚರಣೆ ನಡೆಸುವುದರಿಂದ ಮೂತ್ರಪಿಂಡದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎಂದು ನಂಬಲಾಗುತ್ತದೆ.

46
Image Credit : Instagram

ದೇವಾಲಯಕ್ಕೆ ಬಂದವರಿಗೆ ಪವಾಡಸದೃಶ ರೀತಿಯಲ್ಲಿ ಮೂತ್ರಪಿಂಡದ ಕಾಯಿಲೆಗಳಿಗೆ ಪರಿಹಾರ ಸಿಗುತ್ತದೆಯಂತೆ. ದೇವಾಲಯದ ಬ್ರಹ್ಮ ತೀರ್ಥ೦ (ಪವಿತ್ರ ಬಾವಿ) ನೀರು ಮತ್ತು ನಟರಾಜನ ಪೂಜೆಯು ಮೂತ್ರಪಿಂಡದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ ಎಂದು ಭಕ್ತರು ನಂಬುತ್ತಾರೆ. ಈ ಬಾವಿಯ ನೀರಿನಲ್ಲಿ ಎಲ್ಲಾ ಪವಿತ್ರ ನದಿಗಳ ನೀರು ಇರುತ್ತದೆ ಮತ್ತು ಅನೇಕ ಔಷಧೀಯ ಗುಣಗಳಿವೆ ಎಂದು ನಂಬಲಾಗಿದೆ. ಇಲ್ಲಿಗೆ ಭೇಟಿ ನೀಡುವ ಭಕ್ತರು ಅಭಿಷೇಕ ಮಾಡಿದ ನಂತರ ಈ ನೀರನ್ನು ಕುಡಿಯುತ್ತಾರೆ. ಇಲ್ಲಿಗೆ ಭೇಟಿ ನೀಡುವ ಅನೇಕ ಭಕ್ತರು ಈ ನೀರನ್ನು 48 ದಿನಗಳ ಕಾಲ ಸೇವಿಸುವುದರಿಂದ ಮತ್ತು ನಿಯಮಿತವಾಗಿ ಪ್ರಾರ್ಥನೆ ಸಲ್ಲಿಸುವುದರಿಂದ ಕಿಡ್ನಿ ಸ್ಟೋನ್‌ ಮತ್ತು ಇತರ ಸಮಸ್ಯೆಗಳು ಸುಧಾರಿಸುತ್ತವೆ ಎಂದು ಹೇಳಿಕೊಳ್ಳುತ್ತಾರೆ.

56
Image Credit : Instagram

ದೇವಾಲಯದಲ್ಲಿ ದರ್ಶನದ ಸಮಯ
ದೇವಾಲಯದಲ್ಲಿ ದರ್ಶನ ಸಮಯ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 8 ರವರೆಗೆ.

ಇಲ್ಲಿದೆ ನೋಡಿ ವಿಡಿಯೋ 

 
 
 
 
View this post on Instagram
 
 
 
 
 
 
 
 
 
 
 

A post shared by The Temple Girl (@thetemplegirl

66
Image Credit : Instagram

ದೇವಾಲಯವನ್ನು ತಲುಪುವುದು ಹೇಗೆ?
ಊತತುರ್ ಸುದ್ಧ ರತ್ನೇಶ್ವರರ್ ದೇವಸ್ಥಾನವು ತಿರುಚ್ಚಿಯಿಂದ 30 ಕಿ ಮೀ ಮತ್ತು ಪಡಲೂರಿನಿಂದ 5 ಕಿ.ಮೀ ದೂರದಲ್ಲಿದೆ. ಹತ್ತಿರದ ವಿಮಾನ ನಿಲ್ದಾಣ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಸುಮಾರು 35 ಕಿ.ಮೀ) ಮತ್ತು ರೈಲು ನಿಲ್ದಾಣ ಲಾಲ್ಗುಡಿ ಅಥವಾ ತಿರುಚ್ಚಿ ಜಂಕ್ಷನ್. ನೀವು ರಸ್ತೆಯ ಮೂಲಕ ಬರುತ್ತಿದ್ದರೆ ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಬಸ್ ಅಥವಾ ಟ್ಯಾಕ್ಸಿ ಮೂಲಕ ಸುಲಭವಾಗಿ ತಲುಪಬಹುದು.

ವಿಶೇಷ ಸೂಚನೆ: ನಂಬಿಕೆಗೆ ತನ್ನದೇ ಆದ ಮಹತ್ವವಿದೆ. ಆದರೆ ಕೇವಲ ಪೂಜೆಯಿಂದ ಯಾವುದೇ ರೋಗವನ್ನು ಗುಣಪಡಿಸಲು ಸಾಧ್ಯವಿಲ್ಲ. ಗಂಭೀರ ಕಾಯಿಲೆಗಳಿಗೆ ವೈದ್ಯಕೀಯ ಸಮಾಲೋಚನೆ, ಸರಿಯಾದ ಔಷಧಿಗಳು, ಸಮತೋಲಿತ ಆಹಾರ ಮತ್ತು ವ್ಯಾಯಾಮ ಕೂಡ ಅಷ್ಟೇ ಮುಖ್ಯ. 

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

AH
Ashwini HR
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ದಿನಪತ್ರಿಕೆ 'ಕ್ರಾಂತಿದೀಪ'ದಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 14 ವರ್ಷಗಳ ಅನುಭವ. ರಾಜ್ಯಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ರಾಜಕೀಯ, ಮನರಂಜನೆ, ಶಿಕ್ಷಣ, ಆರೋಗ್ಯ, ಟ್ರೆಂಡಿಂಗ್‌, ಲೈಫ್‌ಸ್ಟೈಲ್‌ ಕುರಿತಾದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ.ಪ್ರಸ್ತುತ ಸುವರ್ಣ ಡಿಜಿಟಲ್‌ ತಂಡದ ಭಾಗವಾಗಿ ವೃತ್ತಿ ಜೀವನ ಮುಂದುವರಿಸುತ್ತಿದ್ದೇನೆ.
ಪ್ರವಾಸ
ಜೀವನಶೈಲಿ

Latest Videos
Recommended Stories
Recommended image1
Traffic Mantra: ಟ್ರಾಫಿಕ್‌ನಲ್ಲಿ ಶಾಂತವಾಗಿರೋದು ಹೇಗೆ? ಈ ಮಂತ್ರ ಪಠಿಸಿ ಸಾಕು!
Recommended image2
ಭಾರತೀಯರು 2025ರಲ್ಲಿ ಅತಿಹೆಚ್ಚು ಹುಡುಕಾಡಿದ ಪ್ರವಾಸಿ ಸ್ಥಳ ಯಾವುದು? ಟಾಪ್-10ರಲ್ಲಿ ಥೈಲ್ಯಾಂಡ್, ಮಾಲ್ಡೀವ್ಸ್
Recommended image3
ಲೈಸೆನ್ಸ್ ಎಕ್ಸ್‌ಫೈರಿ ಆಗಿದ್ರು 8 ಬಾರಿ ಹಾರಾಟ ನಡೆಸಿದ ಏರ್ ಇಂಡಿಯಾದ ವಿಮಾನ: ತನಿಖೆಗೆ ಡಿಜಿಸಿಎ ಆದೇಶ
Related Stories
Recommended image1
ಈ ದಿಕ್ಕಿನಲ್ಲಿ ಇದೇ ದಿನ ತುಳಸಿ ಗಿಡ ನೆಟ್ಟರೆ ಹಣದ ತಿಜೋರಿ ತುಂಬಿರುತ್ತೆ, ಆಹಾರದ ಕೊರತೆಯೇ ಇರಲ್ಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved