MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • TV Talk
  • Amruthadhaare Serial: ಬಾಣಂತಿ ಭೂಮಿಕಾಗೆ ಮಹಾಮಾರಿ ಕಾಯಿಲೆ, ಆ ಸತ್ಯ ಸ್ಫೋಟವಾದ್ರೆ ಪ್ರಾಣಕ್ಕೆ ಕಂಟಕ!

Amruthadhaare Serial: ಬಾಣಂತಿ ಭೂಮಿಕಾಗೆ ಮಹಾಮಾರಿ ಕಾಯಿಲೆ, ಆ ಸತ್ಯ ಸ್ಫೋಟವಾದ್ರೆ ಪ್ರಾಣಕ್ಕೆ ಕಂಟಕ!

Amruthadhaare Kannada Serial: 'ಅಮೃತಧಾರೆ' ಧಾರಾವಾಹಿಯಲ್ಲಿ ಮಗನ ಆರೈಕೆಯಲ್ಲಿ ಬ್ಯುಸಿಯಿರೋ ಭೂಮಿಗೆ ತನಗೆ ಮಗಳು ಹುಟ್ಟಿರೋದು ಗೊತ್ತಿಲ್ಲ. ಈಗ ಅವಳ ಪ್ರಾಣಕ್ಕೆ ಅಪಾಯ ಬರುವಂತೆ ಕಾಣುತ್ತಿದೆ. 

2 Min read
Author : Padmashree Bhat
| Updated : Jul 22 2025, 09:57 AM IST
Share this Photo Gallery
  • FB
  • TW
  • Linkdin
  • Whatsapp
16
ಶಾಕಿಂಗ್‌ ವಿಷಯ ಗೊತ್ತಾದರೆ ಭೂಮಿ ಪ್ರಾಣಕ್ಕೆ ಸಂಚಕಾರ!
Image Credit : zee5

ಶಾಕಿಂಗ್‌ ವಿಷಯ ಗೊತ್ತಾದರೆ ಭೂಮಿ ಪ್ರಾಣಕ್ಕೆ ಸಂಚಕಾರ!

'ಅಮೃತಧಾರೆ' ಧಾರಾವಾಹಿಯಲ್ಲಿ ತನಗೆ ಅವಳಿ ಮಕ್ಕಳು ಹುಟ್ಟಿರೋದು ಭೂಮಿಗೆ ಗೊತ್ತಾಗಿಲ್ಲ. ಆದರೆ ಗೌತಮ್‌ ಯಾವುದೋ ವಿಷಯವನ್ನು ಮುಚ್ಚಿಡ್ತಿದ್ದಾನೆ ಅಂತ ಭೂಮಿಗೆ ಗೊತ್ತಾಗಿದೆ. ಈ ಮಧ್ಯೆ ಭೂಮಿಗೆ ಶಾಕಿಂಗ್‌ ವಿಷಯ ಗೊತ್ತಾದರೆ ಅವಳ ಪ್ರಾಣಕ್ಕೆ ಅಪಾಯ ಆಗುವುದಂತೆ.

26
ತುಂಬ ಪೊಸೆಸ್ಸಿವ್‌ ಆಗಿರೋ ಭೂಮಿಕಾ!
Image Credit : zee5

ತುಂಬ ಪೊಸೆಸ್ಸಿವ್‌ ಆಗಿರೋ ಭೂಮಿಕಾ!

ಭೂಮಿ ಮಗನಿಗೆ ವ್ಯಾಕ್ಸಿನೇಶನ್‌ ಹಾಕಬೇಕಿತ್ತು. ಮಗನಿಗೆ ಇಂಜೆಕ್ಷನ್‌ ಕೊಟ್ಟರೆ ನೋವಾಗುತ್ತದೆ ಅಂತ ಭೂಮಿ ಅಳಲು ಶುರು ಮಾಡಿದಳು. ಡಾಕ್ಟರ್‌, ಸುಧಾ ಸೇರಿಕೊಂಡು ಅವಳನ್ನು ರೂಮ್‌ನಿಂದ ಹೊರಗಡೆ ಕಳಿಸಿ, ಮಗುವಿಗೆ ಇಂಜೆಕ್ಷನ್‌ ಕೊಟ್ಟರು. ಆಗ ಭೂಮಿ ಮಾತ್ರ ಸಿಕ್ಕಾಪಟ್ಟೆ ಒದ್ದಾಡಿದ್ದಳು.

Related Articles

Related image1
ಕಳೆದ ಆರು ತಿಂಗಳಿಂದ Amruthadhaare Serial ನಟಿ ಸಾರಾ ಅಣ್ಣಯ್ಯಗೆ ಅದೇ ಪ್ರಶ್ನೆ ಕೇಳ್ತಿರೋ ವೀಕ್ಷಕರು!
Related image2
Amruthadhaare Serial: ಮಗಳು ಸಿಗೋ ಮುಂಚೆ, ಗೌತಮ್‌ ದಿವಾನ್‌ಗೆ ಡಿವೋರ್ಸ್‌ ಆಗೋದು ಪಕ್ಕಾನಾ?
36
ಭೂಮಿ ಬಳಿ ಸತ್ಯ ಮುಚ್ಚಿಟ್ಟಿರೋ ಗೌತಮ್!‌
Image Credit : zee5

ಭೂಮಿ ಬಳಿ ಸತ್ಯ ಮುಚ್ಚಿಟ್ಟಿರೋ ಗೌತಮ್!‌

ಇನ್ನು ಅದೇ ಆಸ್ಪತ್ರೆಗೆ ಡಾಕ್ಟರ್‌ ಕರ್ಣನನ್ನು ಭೇಟಿ ಮಾಡಲು ಗೌತಮ್‌ ಹಾಗೂ ಆನಂದ್‌ ಕೂಡ ಬಂದಿದ್ದರು. ಡೆಲಿವರಿ ಸರ್ಟಿಫಿಕೇಟ್‌ನಲ್ಲಿ ಭೂಮಿಗೆ ಅವಳಿ ಮಕ್ಕಳಾಗಿವೆ ಎಂದಿತ್ತು. ಅದು ಯಾರ ಕಣ್ಣಿಗೆ ಬೀಳಬಾರದು ಎಂದು ಗೌತಮ್‌ ಆ ಸೆರ್ಟಿಫಿಕೇಟ್‌ ಬದಲಾಯಿಸಲು ಪ್ಲ್ಯಾನ್‌ ಮಾಡಿದ್ದನು. ಮಗಳು ಕಾಣೆಯಾಗಿರೋ ವಿಷಯ ಏನಾದರೂ ಭೂಮಿಗೆ ಗೊತ್ತಾದರೆ ಅವಳು ಸಹಿಸೋದಿಲ್ಲ ಅಂತ ಅವನು ಈ ವಿಷಯವನ್ನು ಮುಚ್ಚಿಟ್ಟಿದ್ದನು.

46
ಎಚ್ಚರಿಕೆ ಕೊಟ್ಟಿರೋ ಡಾಕ್ಟರ್!‌
Image Credit : zee5

ಎಚ್ಚರಿಕೆ ಕೊಟ್ಟಿರೋ ಡಾಕ್ಟರ್!‌

ಡಾಕ್ಟರ್‌ ಬಳಿ ಮಗಳನ್ನು ಯಾರೋ ಕಿಡ್ನ್ಯಾಪ್‌ ಮಾಡಿದ್ದಾರೆ. ಈ ವಿಷಯ ಯಾರಿಗೂ ಗೊತ್ತಿಲ್ಲ, ದಯವಿಟ್ಟು ಸೆರ್ಟಿಫಿಕೇಟ್‌ ಅಲ್ಲಿರುವ ಅವಳಿ ಮಕ್ಕಳನ್ನು ಬದಲಾಯಿಸಿ ಎಂದು ಕೇಳಿಕೊಂಡನು. ಆಗ ಡಾಕ್ಟರ್‌ ಅವನಿಗೆ, “ತಾಯಿಗೆ ಮಗು ಬಗ್ಗೆ ಪೊಸೆಸ್ಸಿವ್‌ನೆಸ್‌ ಇರುತ್ತದೆ. ಆದರೆ ವಯಸ್ಸಾದ ಬಳಿಕ ಮಗು ಆಗಿರೋದಿಕ್ಕೋ ಏನೋ ಭೂಮಿ ಸಿಕ್ಕಾಪಟ್ಟೆ ಪೊಸೆಸ್ಸಿವ್‌ ಆಗಿದ್ದಾಳೆ. ಭೂಮಿಕಾ ತನ್ನ ಮಗುಗೆ ವ್ಯಾಕ್ಸಿನೇಶನ್‌ ಮಾಡೋವಾಗ ತುಂಬ ಭಯಪಟ್ಟಳು. ಭೂಮಿ ಮೆಂಟಲಿ ವೀಕ್‌ ಆಗಿದ್ದಾಳೆ. ಅವಳಿಗೆ ಶಾಕಿಂಗ್‌ ನ್ಯೂಸ್‌ ಹೇಳಿದರೆ ಪ್ರಾಣಕ್ಕೆ ಅಪಾಯ ಆಗಬಹುದು” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

56
ಮುಂದೆ ಏನಾಗುವುದು?
Image Credit : zee5

ಮುಂದೆ ಏನಾಗುವುದು?

ಇನ್ನೊಂದು ಕಡೆ ಭೂಮಿಗೆ ಆಸ್ಪತ್ರೆಯಲ್ಲಿದ್ದಾಗ ಶಕುಂತಲಾ ಹೇಳಿದ ಮಾತು ಆಗ ಕಿವಿಗೆ ಬಿದ್ದು, ಈಗ ನೆನಪಿಗೆ ಬರುತ್ತಿದ್ಯಾ ಏನೋ! ಹೊಸ ಪ್ರೋಮೋದಲ್ಲಿ ಶಕುಂತಲಾ ಆಸ್ಪತ್ರೆಯಲ್ಲಿದ್ದಾಗ ಜಯದೇವ್‌ಗೆ ಫೋನ್‌ ಮಾಡಿ ಭೂಮಿ ಹೊಟ್ಟೆಯಲ್ಲಿ ಇನ್ನೊಂದು ಮಗು ಇದೆಯಂತೆ ಎಂದು ಹೇಳಿದ ಮಾತು ಈಗ ಭೂಮಿಗೆ ನೆನಪಿಗೆ ಬಂದಂತಿದೆ. ಇನ್ನೊಂದು ಕಡೆ ಜಯದೇವ್‌ ಹೊತ್ತೊಯ್ದ ದೃಶ್ಯವನ್ನು ಮತ್ತೆ ಪ್ರಸಾರ ಮಾಡಲಾಗಿದೆ. ಒಟ್ಟಿನಲ್ಲಿ ಈ ವಿಷಯ ಭೂಮಿ ಕಿವಿಗೆ ಬಿದ್ದರೇ ಏನಾಗುವುದೋ ಏನೋ!

66
ಪಾತ್ರಧಾರಿಗಳು
Image Credit : zee5

ಪಾತ್ರಧಾರಿಗಳು

ಭೂಮಿಕಾ ಸದಾಶಿವ- ಛಾಯಾ ಸಿಂಗ್‌

ಗೌತಮ್‌ ದಿವಾನ್- ರಾಜೇಶ್‌ ನಟರಂಗ‌

ಸುಧಾ- ಮೇಘನಾ ಶೆಣೋಯ್‌

ಆನಂದ್-‌ ಸಿಲ್ಲಿ ಲಲ್ಲಿ ಆನಂದ್‌

ಶಕುಂತಲಾ - ವನಿತಾ ವಾಸು

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ಅಮೃತಧಾರೆ
ಜೀ ಕನ್ನಡ
ಕನ್ನಡ ಧಾರಾವಾಹಿ

Latest Videos
Recommended Stories
Recommended image1
Bigg Boss ನಮ್ರತಾ ಗೌಡ- ಕಾರ್ತಿಕ್​ ಮಹೇಶ್​ ಮದ್ವೆಗೆ ಸಂಗೀತಾ ಶೃಂಗೇರಿ ಗ್ರೀನ್ ಸಿಗ್ನಲ್​: ನಟಿ ಹೇಳಿದ್ದೇನು?
Recommended image2
Karna Serial: ಡಿಪ್ರೆಶನ್‌ಗೆ ಹೋದಳಾ ನಿಧಿ? ; ಇನ್ನು ಕರ್ಣ-ನಿತ್ಯಾ ರಿಯಲ್‌ ಮದುವೆ ಆಗಬೇಕು!
Recommended image3
ಬೆಂಗಳೂರಿನ ಜನತೆಗೆ ಮುದ್ದಾದ ಪ್ರಶ್ನೆ ಕೇಳಿದ ರಕ್ಷಿತಾ ಶೆಟ್ಟಿ: ಬೆಂಗಳೂರಿಗರೇ ನಿಮ್ಮ ಉತ್ತರ ಏನು?
Related Stories
Recommended image1
ಕಳೆದ ಆರು ತಿಂಗಳಿಂದ Amruthadhaare Serial ನಟಿ ಸಾರಾ ಅಣ್ಣಯ್ಯಗೆ ಅದೇ ಪ್ರಶ್ನೆ ಕೇಳ್ತಿರೋ ವೀಕ್ಷಕರು!
Recommended image2
Amruthadhaare Serial: ಮಗಳು ಸಿಗೋ ಮುಂಚೆ, ಗೌತಮ್‌ ದಿವಾನ್‌ಗೆ ಡಿವೋರ್ಸ್‌ ಆಗೋದು ಪಕ್ಕಾನಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved