MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಮದುವೆಗೆ ಬರ್ತಿದ್ದ ನನ್ನ ಗಂಡನನ್ನು ಹಿರಿ ಮಗಳು ತಡೆದಳು; ಚೈತ್ರಾ ಕುಂದಾಪುರ ತಂದೆ ಆರೋಪಕ್ಕೆ ಪತ್ನಿ ಪ್ರತಿಕ್ರಿಯೆ!

ಮದುವೆಗೆ ಬರ್ತಿದ್ದ ನನ್ನ ಗಂಡನನ್ನು ಹಿರಿ ಮಗಳು ತಡೆದಳು; ಚೈತ್ರಾ ಕುಂದಾಪುರ ತಂದೆ ಆರೋಪಕ್ಕೆ ಪತ್ನಿ ಪ್ರತಿಕ್ರಿಯೆ!

ಚೈತ್ರಾ ಕುಂದಾಪುರ ದುಡ್ಡಿಗೋಸ್ಕರ ಏನು ಬೇಕಿದ್ರೂ ಮಾಡ್ತಾಳೆ, ಸರಿಯಿಲ್ಲ ಎಂದು ಅವಳ ತಂದೆಯೇ ಮಾಧ್ಯಮದ ಮುಂದೆ ಆರೋಪ ಮಾಡಿದ್ದಾರೆ. ಇದಕ್ಕೀಗ ಚೈತ್ರಾ ಕುಂದಾಪುರ ತಾಯಿ ರೋಹಿಣಿ ಅವರು ಉತ್ತರ ಕೊಟ್ಟಿದ್ದಾರೆ.

2 Min read
Author : Padmashree Bhat
| Updated : May 16 2025, 10:04 AM IST
Share this Photo Gallery
  • FB
  • TW
  • Linkdin
  • Whatsapp
15

ನನ್ನ ಪತಿ ಜವಾಬ್ದಾರಿ ಇಲ್ಲದ ವ್ಯಕ್ತಿ. ನಮ್ಮ ಮನೆಯ ಯಾವ ಕಷ್ಟಕ್ಕೂ ಸ್ಪಂದಿಸಿದವರಲ್ಲ. ದೊಡ್ಡ ಮಗಳು ಹೇಳಿಕೊಟ್ಟದ್ದನ್ನು ಅವರು ಹೇಳುತ್ತಿದ್ದಾರೆ. ಯಾವ ಮನೆಯ ಜವಾಬ್ದಾರಿಯನ್ನು ತೆಗೆದುಕೊಂಡ ವ್ಯಕ್ತಿಯಲ್ಲ. ಕೆಲಸ ಮಾಡುತ್ತೇನೆ ಎಂದು ಎಲ್ಲೆಲ್ಲೋ ಹೋಗುತ್ತಾರೆ, ಅಲ್ಲಿ ದುಡಿದು ಹಣವನ್ನು ದೊಡ್ಡ ಮಗಳಿಗೆ ಕೊಡುತ್ತಾರೆ. ನನ್ನ ದೊಡ್ಡ ಮಗಳು ಆಸ್ತಿಗೋಸ್ಕರ ತಂದೆಗೆ ಈ ರೀತಿ ಮಾತನಾಡಲು ಹೇಳಿಕೊಟ್ಟಿದ್ದಾಳೆ. ಮಕ್ಕಳಿಗೆ ಓದಿಸುವಾಗಲು ಸಹಾಯ ಮಾಡಿಲ್ಲ, ಮಕ್ಕಳನ್ನು ಕೆಲಸಕ್ಕೆ ಹಾಕು ಎನ್ನುತ್ತಿದ್ದರು. 

25

ಮೂರು ಹೆಣ್ಣು ಮಕ್ಕಳಿಗೂ ವಿದ್ಯಾಭ್ಯಾಸ ನೀಡಿದವರಲ್ಲ. ಆ ಕಾಲದಲ್ಲಿ ಒಂದುವರೆ ಎರಡು ಲಕ್ಷ ರೂಪಾಯಿಯಲ್ಲಿ ಮನೆ ಕಟ್ಟಿದರು. ಅವರು ಕಟ್ಟಿದ ಮನೆ ಬಿದ್ದು ಹೋಗಿದೆ. ನನ್ನ ಗಂಡನಿಗೆ ಮಾತನಾಡಲು ಬರುವುದಿಲ್ಲ, ಅವರು ಒಂಥರ ಮಾನಸಿಕ ವ್ಯಕ್ತಿ. ರಾತೋರಾತ್ರಿ ಮನೆ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಏನೇನೋ ಮಾತನಾಡುತ್ತಾರೆ. 

Related Articles

Related image1
Now Playing
ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ! ಚೈತ್ರ ಅಪ್ಪ ನೋವಿನ ಮಾತು
Related image2
Now Playing
ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ: ಚೈತ್ರಾ ತಂದೆ
35

ನಾನು ಚೂರುಪಾರು ಹಣವನ್ನು ದೊಡ್ಡ ಮಗಳ ಗಂಡನ ಸೊಸೈಟಿಯಲ್ಲಿ ಇಟ್ಟಿದ್ದೆ. ಅದನ್ನು ಕೂಡ ನನ್ನ ಗಂಡ ದೊಡ್ಡ ಮಗಳಿಗೆ ಕೊಟ್ಟಿದ್ದಾರೆ. ನಮ್ಮ ಭೂಮಿ ಬೇಕು ಎಂದು ದೊಡ್ಡ ಮಗಳು ಬೆನ್ನು ಬಿದ್ದಿದ್ದಾಳೆ. ಅವಳ ಮನೆಗೆ ಸಹಾಯ ಮಾಡಲು ಚೈತ್ರ ಜಾಗ ಬರೆದುಕೊಟ್ಟಿದ್ದಾಳೆ. 25 ಲಕ್ಷ ರೂಪಾಯಿಯನ್ನು ಸಾಲವನ್ನು ನಾವೇ ಮಾಡಿಕೊಟ್ಟಿದ್ದೇವೆ. ಅಪ್ಪನ ಬಳಿ ಸಹಿ ಪಡೆದು ಜಾಗ ಒಳ ಹಾಕುವ ಸಂಚು ಮಾಡಿದ್ದಾಳೆ. ಅಮ್ಮ ಮೋಸ ಮಾಡಿದಳು ಎಂದು ಹೇಳಿಕೊಂಡು ಬರುತ್ತಿದ್ದಾಳೆ. ಅಪ್ಪ ಮದುವೆಗೆ ಬರದ ಹಾಗೆ ದೊಡ್ಡ ಮಗಳು ತಡೆದಿದ್ದಾಳೆ.

45

ಕುಂದಾಪುರದವರೆಗೆ ಬಂದವರನ್ನು ಮನೆಗೆ ಕರೆದುಕೊಂಡು ಹೋಗಿದ್ದಾಳೆ. ಮರ್ಯಾದೆ ತೆಗೆಯಲು ಈ ರೀತಿ ಮಾಡಿದ್ದಾಳೆ. ತಂದೆಗೆ ಮದುವೆಗೆ ಬರಬೇಕು ಎಂದು ಬಹಳ ಇಷ್ಟ ಇತ್ತು. ತಾನೆ ಹೋಗಿ ಮದುವೆ ಕಾಗದವನ್ನು ಹಿರಿಯರ ಮನೆಗೆ ಕೊಟ್ಟು ಬಂದಿದ್ದಾರೆ. ಮನೆ ಪೇಂಟಿಂಗ್ ಕೂಡ ತಾವೇ ನಿಂತು ಮಾಡಿಸಿದ್ದಾರೆ. ಮದುವೆಗೆ ಬರುತ್ತೇನೆ ಎಂದು ಹೇಳಿದವರನ್ನು ಮಗಳು ತಡೆದಿದ್ದಾಳೆ. 

55

ನಾನು ಸಹಿ ಹಾಕಿಲ್ಲ ಅಂತ ಹಿರಿಯ ಮಗಳು ಹೀಗೆ ಮಾಡುತ್ತಿದ್ದಾಳೆ. ನನ್ನ ಗಂಡ ಯಾವ ವಿಷಯದಲ್ಲಿ ಜವಾಬ್ದಾರಿ ತಗೊಂಡಿಲ್ಲ. ಅವರಿಗೆ ಮಾತನಾಡಲು ಬರುವುದಿಲ್ಲ ಅವರು , ಅವರ ಅಣ್ಣ ಎಲ್ಲರೂ ಒಂದು ರೀತಿ ಮಾನಸಿಕ ವ್ಯಕ್ತಿಗಳು. ದೊಡ್ಡ ಮಗಳ ಮದುವೆಗೂ ಅವರು ಸರಿಯಾಗಿ ಬಂದಿರುವುದಿಲ್ಲ. ಎಲ್ಲೋ ಬಸ್ಸು ಹತ್ತಿ ಕೂತವರನ್ನು ಹುಡುಗರು ತರ ಕರೆದುಕೊಂಡು ಬಂದಿದ್ದರು. ಚೈತ್ರಾ ಪತಿ 12 ವರ್ಷದಿಂದ ನಮ್ಮ ಮನೆಯಲ್ಲಿ ಇರಲಿಲ್ಲ. ಎರಡು-ಮೂರು ವರ್ಷದ ಹಿಂದೆ ನಮಗೆ ಅವನ ಪರಿಚಯವಾಗಿತ್ತು. ಅವನು ನಮ್ಮ ಮನೆಗೆ ಬಂದು ನೀರು ಸಹ ಕುಡಿಯುತ್ತಿರಲಿಲ್ಲ. ನಾನೇ ಹೆಣ್ಣು ಮಕ್ಕಳನ್ನು ಬೆಳೆಸಿದ್ದು. ಏನಾದರೂ ಹೇಳಿದರೆ ಹೊಡೆಯಲು ಬರುತ್ತಾರೆ, ಜಬರ್ದಸ್ತ್ ಮಾಡುತ್ತಾರೆ. ಇದನ್ನೆಲ್ಲ ನೋಡಿ ನೋಡಿ ನಮಗೆ ಸಾಕಾಗಿದೆ ಅವರ ವಿಷಯ ಬಿಟ್ಟಿದ್ದೇವೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಚೈತ್ರಾ ಕುಂದಾಪುರ
ಬಿಗ್ ಬಾಸ್ ಕನ್ನಡ
ಬಿಗ್ ಬಾಸ್
ಸಂಬಂಧಗಳು

Latest Videos
Recommended Stories
Recommended image1
Aase Serial: ರೋಹಿಣಿ ಪಾತ್ರಕ್ಕೆ ಆಯ್ಕೆಯಾದ ಒಂದೇ ದಿನಕ್ಕೆ ಧಾರಾವಾಹಿಯಿಂದ ಹೊರ ಬಂದ ನಟಿ ರೋಶಿನಿ
Recommended image2
ಚಿಕನ್​-ಮಟನ್​ ಕೂಗಲ್ಲ: ನನ್​ ಊಟ ಯಾರಿಗೂ ಇಷ್ಟ ಆಗಲ್ಲ- ಕಿಚ್ಚ ಸುದೀಪ್​ ಊಟದ ಗುಟ್ಟು ರಟ್ಟು
Recommended image3
Now Playing
ದೊಡ್ಮನೆಯಲ್ಲಿ ಪ್ರೇಮ, ಜಗಳ, ಡ್ರಾಮಾ: ಸೇರಿಗೆ ಸವಾ ಸೆರ್.. ಕಾವ್ಯಗೆ ಗಿಲ್ಲಿ ಕೌಂಟರ್!
Related Stories
Recommended image1
Now Playing
ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥ! ಚೈತ್ರ ಅಪ್ಪ ನೋವಿನ ಮಾತು
Recommended image2
Now Playing
ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ: ಚೈತ್ರಾ ತಂದೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved