MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • TV Talk
  • ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ! ಹಾಸ್ಯನಟನ ನಿಜ ಜೀವನದಲ್ಲಿ ನಗುವೇ ಇರಲಿಲ್ಲ!

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ! ಹಾಸ್ಯನಟನ ನಿಜ ಜೀವನದಲ್ಲಿ ನಗುವೇ ಇರಲಿಲ್ಲ!

ಜೀ ಕನ್ನಡದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.

1 Min read
Author : Sathish Kumar KH
Published : Aug 01 2025, 09:10 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Facebook

ಕಾರವಾರ (ಆ.01): ಕನ್ನಡ ಕಿರುತೆರೆಯ ಮತ್ತೊಬ್ಬ ಕಲಾವಿದ ಇದೀಗ ಸಾವಿಗೆ ಶರಣಾಗಿದ್ದಾನೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಯನ್ನು ನಗಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಕಾಡಿನ ಹೈದ ಚಂದ್ರಶೇಖರ ಸಿದ್ಧಿ ಆತ್ಮಹ*ತ್ಯೆಗೆ ಶರಣಾಗಿದ್ದಾರೆ. ನಿನ್ನೆ ಮಗನಿಗೆ ನಾನಿನ್ನು ಬರುವುದಿಲ್ಲ ಮಗನೇ ಎಂದು ಹೇಳಿದವನು ಕಾಡಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

26
Image Credit : Facebook

ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತ ಕಲಾವಿದ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮದ ಚಿಮನಳ್ಳಿ ನಿವಾಸಿ ಆಗಿದ್ದನು.

Related Articles

Related image1
ಇವರೇ ನೋಡಿ ಪ್ರಪಂಚದ ಶ್ರೀಮಂತ ಹಾಸ್ಯನಟ… ಇವರ ಒಟ್ಟು ಆಸ್ತಿ 7,00,95,33,830 ಬಿಲಿಯನ್!
Related image2
ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು; ಪೊಲೀಸರ ಮುಂದೆ ನಡೆದೇ ಹೋಯ್ತು ಹೈಡ್ರಾಮಾ!
36
Image Credit : Facebook

ಚಂದ್ರಶೇಖರ್ ಸಿದ್ಧಿ, ಒಬ್ಬ ಕಲಾ ಪ್ರತಿಭೆಯಾಗಿದ್ದು, ತನ್ನ ಅಭಿನಯದ ನಂತರ ಪುನಃ ಊರಿಗೆ ಹೋಗಿ ಜೀವನ ನಡೆಸುತ್ತಿದ್ದನು. ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಅವರು ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಹಾಸ್ಯತ್ಮಕ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಜನಮನ ಗೆದ್ದರೂ, ಅವರು ಜೀವನದಲ್ಲಿ ಆರ್ಥಿಕವಾಗಿ ಸ್ಥಿರತೆ ಕಂಡಿರಲಿಲ್ಲ.

46
Image Credit : Facebook

ಹಾಸ್ಯ ಕಲಾವಿದನ ಆಂತರಿಕ ನೋವು:

ಈ ವರ್ಷ ಜನವರಿಯಿಂದಲೇ ಚಂದ್ರಶೇಖರ್ ಮಾನಸಿಕವಾಗಿ ಜರ್ಜರಿತರಾಗಿದ್ದರು. ಕೆಲವು ಸಮಯದಿಂದ ಕೂಲಿ ಕೆಲಸ ಮಾಡಿ ಕುಟುಂಬವನ್ನು ಪೋಷಿಸುತ್ತಿದ್ದರು ಎನ್ನಲಾಗಿದೆ. ಪತ್ನಿಯ ಜತೆ ಗಲಾಟೆಗಳೂ ಆಗುತ್ತಿದ್ದು, ಅವರು ಒಂದು ಬಾರಿ ಮಾನಸಿಕ ಚಿಕಿತ್ಸೆಯನ್ನೂ ಪಡೆದಿದ್ದರು. ಕೆಲವು ತಿಂಗಳುಗಳು ಉತ್ತಮವಾಗಿದ್ದರೂ, ಮತ್ತೆ ಮಾನಸಿಕ ನೋವಿಗೆ ಒಳಗಿದ್ದರು ಎಂದು ಹೇಳಲಾಗುತ್ತಿದೆ.

56
Image Credit : Facebook

ಮಗು ಜತೆ ವಿದಾಯದ ಮಾತು:

ಚಂದ್ರಶೇಖರ್ ಸಿದ್ಧಿ ತನ್ನ 3 ವರ್ಷದ ಮಗನಿಗೆ 'ನಾನು ಮತ್ತೆ ಬರುವುದಿಲ್ಲ' ಎಂದು ಹೇಳಿ, ಗಟ್ಟಿದ ಮನಸ್ಸಿನಿಂದ ಗುಡ್ಡದತ್ತ ಹೋಗಿದ್ದರು. ಇದಾದ ಬಳಿಕ ಗುಡ್ಡದ ಪ್ರದೇಶದಲ್ಲಿ ಸಾವಿಗೆ ಶರಣಾಗಿದ್ದಾನೆ. ಇಂದು ಅರಣ್ಯ ಪ್ರದೇಶದಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾರೆ.

66
Image Credit : Facebook

ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸ್ಥಳೀಯ ಕಲಾವಿದರು, ನಾಟಕಕಾರರು ಮತ್ತು ಟಿವಿ ಪ್ರೇಕ್ಷಕರಿಗೆ ಈ ಸುದ್ದಿ ಭಾರಿ ಬರಸಿಡಿಲು ಬಡಿದಂತಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಜೀ ಕನ್ನಡ
ಮನರಂಜನಾ ಸುದ್ದಿ
ಸುದ್ದಿ
ಉತ್ತರ ಕನ್ನಡ

Latest Videos
Recommended Stories
Recommended image1
BBK 12: ಇಂಥ ಸಣ್ಣಬುದ್ಧಿ ಸರಿನಾ? ಗಿಲ್ಲಿ ನಟ ಬೇಡಿದರೂ, ಗೋಗರೆದರೂ ಕೇಳಲಿಲ್ಲ: ರಘು ವಿರುದ್ಧ ರೊಚ್ಚಿಗೆದ್ದ ಜನತೆ
Recommended image2
BBK 12: ಏನ್ರೀ ಇದು ತೆವಲು? ರಜತ್‌, ಅಶ್ವಿನಿ ಗೌಡ, ರಘು ಯಾಕೆ ಹೀಗೆಲ್ಲ ಮಾಡಿದ್ರು?
Recommended image3
Aadi Lakshmi Purana Serial: ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ
Related Stories
Recommended image1
ಇವರೇ ನೋಡಿ ಪ್ರಪಂಚದ ಶ್ರೀಮಂತ ಹಾಸ್ಯನಟ… ಇವರ ಒಟ್ಟು ಆಸ್ತಿ 7,00,95,33,830 ಬಿಲಿಯನ್!
Recommended image2
ನಟ ಪ್ರಥಮ್ ಮುಖಕ್ಕೆ ಮಸಿ ಬಳಿದ ಹೋರಾಟಗಾರರು; ಪೊಲೀಸರ ಮುಂದೆ ನಡೆದೇ ಹೋಯ್ತು ಹೈಡ್ರಾಮಾ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved