ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗದ ಶಿಫarಸುಗಳನ್ನು ಅಳವಡಿಸಿಕೊಂಡರೆ ಮಾತ್ರ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
- Home
- News
- India News
- India Latest News Live: ನ್ಯಾ. ಕುನ್ಹಾ ಆಯೋಗದ ಶಿಫಾರಸು ಪಾಲಿಸಿದ್ರೆ ಕ್ರಿಕೆಟ್ಗೆ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ
India Latest News Live: ನ್ಯಾ. ಕುನ್ಹಾ ಆಯೋಗದ ಶಿಫಾರಸು ಪಾಲಿಸಿದ್ರೆ ಕ್ರಿಕೆಟ್ಗೆ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ

ನವದೆಹಲಿ: ಆಂತರಿಕ ಸಂಘರ್ಷ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಭಾರತವಿರೋಧಿ ಮನಃಸ್ಥಿತಿಗೆ ತುಪ್ಪ ಸುರಿದು, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸಲು ಪಾಕಿಸ್ತಾನ ಯತ್ನಿಸುತ್ತಿದೆ ಎಂಬ ಸ್ಫೋಟಕ ವಿಚಾರವನ್ನು ಭಾರತದ ಗುಪ್ತಚರ ಸಂಸ್ಥೆಗಳು ಬಹಿರಂಗಪಡಿಸಿವೆ.
ಪಾಕ್ ಗುಪ್ತಚರ ಸಂಸ್ಥೆಯಾದ ಐಎಸ್ಐ ಬೆಂಬಲಿತ ಶಕ್ತಿಗಳು ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್ ಪಕ್ಷಕ್ಕೆ ಭಾರತ ಬೆನ್ನೆಲುಬಾಗಿ ನಿಂತಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ. ಬಾಂಗ್ಲಾ ನಾಗರಿಕರನ್ನು ಭಾರತದ ವಿರುದ್ಧ ಎತ್ತಿಕಟ್ಟಿ, ಭಾರತವು ಬಾಂಗ್ಲಾ ಮೇಲೆ ದಾಳಿ ಮಾಡುವಂತೆ ಪ್ರಚೋದಿಸುವುದು ಇವರ ಉದ್ದೇಶ. ಕಳೆದ ವರ್ಷ ಹಸೀನಾ ಭಾರತಕ್ಕೆ ಪಲಾಯನಗೈದ ದಿನಗಳಿಂದಲೇ ಐಎಸ್ಐ ಈ ಕೆಲಸದಲ್ಲಿ ನಿರತವಾಗಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಈ ಮೂಲಕ ಭಾರತದ ವಿರುದ್ಧ ಇತರ ದೇಶಗಳನ್ನು ಎತ್ತಿಕಟ್ಟಿ ಮೈಕಾಯಿಸಿಕೊಳ್ಳುವ ಪಾಕಿಸ್ತಾನದ ಚಾಳಿ ಮತ್ತೊಮ್ಮೆ ಬಹಿರಂಗವಾಗಿದೆ.
India Latest News Live 24 December 2025ನ್ಯಾ. ಕುನ್ಹಾ ಆಯೋಗದ ಶಿಫಾರಸು ಪಾಲಿಸಿದ್ರೆ ಕ್ರಿಕೆಟ್ಗೆ ಒಪ್ಪಿಗೆ - ಸಿಎಂ ಸಿದ್ದರಾಮಯ್ಯ
India Latest News Live 24 December 2025ವಿಜಯ್ ಹಜಾರೆ ಟ್ರೋಫಿ - ಇಂದು ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲೆ!
India Latest News Live 24 December 2025ಸ್ಮಾರ್ಟ್ಫೋನ್ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್ಬ್ಯಾಂಡ್ ಸಂಪರ್ಕ - ನಭಕ್ಕೆ ಚಿಮ್ಮಿದ LVM3 M6
ಇಸ್ರೋ, ತನ್ನ LVM3-M6 ರಾಕೆಟ್ ಮೂಲಕ ಅಮೆರಿಕದ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಉಪಗ್ರಹವು ಸಾಮಾನ್ಯ ಸ್ಮಾರ್ಟ್ಫೋನ್ಗಳಿಗೆ ನೇರವಾಗಿ ಬಾಹ್ಯಾಕಾಶದಿಂದ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ಒದಗಿಸುವ ಗುರಿ ಹೊಂದಿದೆ.
India Latest News Live 24 December 2025ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾದ ಪಾಕಿಸ್ತಾನದ ಆಸೀಂ ಮುನೀರ್
ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಂ ಮುನೀರ್, ಭಾರತದ ರಫೇಲ್, ಸುಖೋಯ್, ಎಸ್-400 ವ್ಯವಸ್ಥೆಗಳನ್ನು ಹೊಡೆದುರುಳಿಸಿದ್ದೇವೆ ಎಂದು ಬ್ಯಾಕ್ ಟು ಬ್ಯಾಕ್ ಎರಡೆರಡು ಬೊಗಳೆ ಬಿಟ್ಟು ನಗೆಪಾಟಲಿಗೀಡಾಗಿದ್ದಾರೆ.
India Latest News Live 24 December 2025Extreme fast-food consumer - ಸಿಕ್ಕಾಪಟ್ಟೆ ಫಾಸ್ಟ್ಫುಡ್ ತಿನ್ನುತ್ತಿದ್ದ 16ರ ಬಾಲಕಿ ಅನಾರೋಗ್ಯಕ್ಕೆ ಸಾವು
ಅತಿಯಾದ ಫಾಸ್ಟ್ಫುಡ್ ಸೇವನೆಯಿಂದ 16 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಬರ್ಗರ್, ಪಿಜ್ಜಾ, ಮ್ಯಾಗಿ ಮೊದಲಾದ ಫಾಸ್ಟ್ ಫುಡ್ಗಳನ್ನೇ ಹೆಚ್ಚಾಗಿ ಸೇವಿಸುತ್ತಿದ್ದಳು.
India Latest News Live 24 December 2025ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ಪದಚ್ಯುತಗೊಳಿಸುವ ಎಚ್ಚರಿಕೆ
ಭಾರತ ವಿರೋಧಿ ಯುವ ಮುಖಂಡ ಉಸ್ಮಾನ್ ಹದಿ ಹತ್ಯೆಯು ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಹತ್ಯೆಯ ಪಾರದರ್ಶಕ ತನಿಖೆಗೆ ಆಗ್ರಹಿಸಿರುವ ಇನ್ಕಿಲಾಬ್ ಮಂಚ್ ಪಕ್ಷ, ಮಧ್ಯಂತರ ಸರ್ಕಾರವನ್ನು ಪದಚ್ಯುತಗೊಳಿಸುವ ಎಚ್ಚರಿಕೆ ನೀಡಿದೆ.
India Latest News Live 24 December 2025ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ - ಏನಿದು ಕೇಸ್?
ಚೀನಾ ಪ್ರಜೆಗಳಿಗೆ ಅಕ್ರಮವಾಗಿ ವೀಸಾ ನೀಡಿದ ಹಗರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದೋಷಾರೋಪ ಹೊರಿಸಲು ದೆಹಲಿ ಕೋರ್ಟ್ ಆದೇಶಿಸಿದೆ. ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ವಿರುದ್ಧ ಇ.ಡಿ. ಸಲ್ಲಿಸಿದ್ದ ಆರೋಪಪಟ್ಟಿಯನ್ನು ಲಖನೌ ಕೋರ್ಟ್ ಸ್ವೀಕರಿಸಿದೆ.
India Latest News Live 24 December 2025ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ - ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?
ದೇಶದಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಏರಿಕೆ ಪರ್ವ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ 1,40,850 ರು. ಹಾಗೂ 1 ಕೆಜಿ ಬೆಳ್ಳಿಯ ಬೆಲೆ 2,17,250 ರು.ಗೆ ತಲುಪಿ ಹೊಸ ದಾಖಲೆ ನಿರ್ಮಿಸಿದೆ. ಆರ್ಥಿಕ ಅನಿಶ್ಚಿತತೆ, ಅಮೆರಿಕದ ಬಡ್ಡಿ ದರ ಇಳಿಕೆ ಚಿನ್ನದತ್ತ ಹೂಡಿಕೆದಾರರನ್ನು ಸೆಳೆಯುತ್ತಿದೆ