12:13 PM (IST) Dec 19

India News Live 19th December: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 - ಜಾರ್ಖಂಡ್‌ಗೆ ಚೊಚ್ಚಲ ಕಿರೀಟ, ಶತಕ ಚಚ್ಚಿ ಅಪರೂಪದ ದಾಖಲೆ ಬರೆದ ಇಶಾನ್ ಕಿಶನ್!

ಸಯ್ಯದ್‌ ಮುಷ್ತಾಕ್‌ ಅಲಿ ರಾಷ್ಟ್ರೀಯ ಟಿ20 ಟೂರ್ನಿಯ ಫೈನಲ್‌ನಲ್ಲಿ ಹರ್ಯಾಣವನ್ನು 69 ರನ್‌ಗಳಿಂದ ಮಣಿಸಿ ಜಾರ್ಖಂಡ್‌ ಚೊಚ್ಚಲ ಬಾರಿಗೆ ಚಾಂಪಿಯನ್‌ ಆಗಿದೆ. ನಾಯಕ ಇಶಾನ್‌ ಕಿಶನ್‌ ಅವರ ಸ್ಫೋಟಕ ಶತಕದ (101) ನೆರವಿನಿಂದ ಜಾರ್ಖಂಡ್‌ 262 ರನ್‌ಗಳ ದಾಖಲೆಯ ಮೊತ್ತ ಕಲೆಹಾಕಿತು.
Read Full Story
12:00 PM (IST) Dec 19

India News Live 19th December: ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!

ಒಡಿಶಾ ಶಾಸಕರ ವೇತನ ಮತ್ತು ಭತ್ಯೆಗಳನ್ನು ಮೂರು ಪಟ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ, ಆಡಳಿತಾರೂಢ ಬಿಜೆಪಿ ಶಾಸಕರೇ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರಿಗೆ ಈ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

Read Full Story
11:19 AM (IST) Dec 19

India News Live 19th December: ಆ್ಯಶಸ್‌ ಮೂರನೇ ಟೆಸ್ಟ್‌ನಲ್ಲಿ ಭುಗಿಲೆದ್ದ ಸ್ನಿಕೋ ಮೀಟರ್ ವಿವಾದ!

ಆಸ್ಟ್ರೇಲಿಯಾ-ಇಂಗ್ಲೆಂಡ್‌ ನಡುವಿನ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಸ್ನಿಕೋ ಮೀಟರ್ ತಂತ್ರಜ್ಞಾನವು ವಿವಾದಕ್ಕೆ ಕಾರಣವಾಗಿದೆ. ಅಡಿಲೇಡ್ ಟೆಸ್ಟ್‌ನಲ್ಲಿ 3 ಬಾರಿ ತಪ್ಪಾದ ತೀರ್ಪು ನೀಡಿದ್ದು, ಆಸೀಸ್ ವೇಗಿ ಸ್ಟಾರ್ಕ್ ಸೇರಿದಂತೆ ಹಲವು ಆಟಗಾರರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Read Full Story
11:14 AM (IST) Dec 19

India News Live 19th December: ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ತೀವ್ರಗಾಮಿ ನಾಯಕ ಷರೀಫ್ ಉಸ್ಮಾನ್ ಹಾದಿಯ ಹತ್ಯೆಯ ನಂತರ ಬಾಂಗ್ಲಾದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಢಾಕಾ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿಭಟನಾಕಾರರು ಮಾಧ್ಯಮ ಸಂಸ್ಥೆಗಳು ಮತ್ತು ರಾಜಕೀಯ ಕಚೇರಿಗಳಿಗೆ ಬೆಂಕಿ ಹಚ್ಚಿದ್ದು, ಆ ದೇಶದಲ್ಲಿ ಭಾರತ ವಿರೋಧಿ ಭಾವನೆಗಳು ತೀವ್ರಗೊಂಡಿವೆ.

Read Full Story
10:55 AM (IST) Dec 19

India News Live 19th December: Ind vs SA 5th T20I - ಇಂದು ಭಾರತ vs ದಕ್ಷಿಣ ಆಫ್ರಿಕಾ ಫೈನಲ್ ಫೈಟ್

ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಸರಣಿ ಗೆಲುವಿನ ಗುರಿ ಹೊಂದಿದೆ. 2-1 ಮುನ್ನಡೆಯಲ್ಲಿದ್ದರೂ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಶುಭ್‌ಮನ್‌ ಗಿಲ್‌ ಅವರ ಫಾರ್ಮ್‌ ತಂಡಕ್ಕೆ ಚಿಂತೆಯುಂಟುಮಾಡಿದೆ. ಜಸ್‌ಪ್ರೀತ್ ಬೂಮ್ರಾ ತಂಡಕ್ಕೆ ಮರಳಿರುವುದು ತಂಡದ ಬಲ ಹೆಚ್ಚಿಸಿದೆ.
Read Full Story
10:20 AM (IST) Dec 19

India News Live 19th December: Epstein Sex Scandal - 68 ಹೊಸ ಫೋಟೋ ರಿಲೀಸ್‌, ಮಹಿಳೆಯರ ಜೊತೆ ಬಿಲ್‌ಗೇಟ್ಸ್‌, ಸೆರ್ಗಿ ಬ್ರಿನ್‌!

ಎಪ್ಸ್ಟೀನ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ 68 ಹೊಸ ಫೋಟೋಗಳು ಬಿಡುಗಡೆಯಾಗಿದ್ದು, ಇದರಲ್ಲಿ ಬಿಲ್ ಗೇಟ್ಸ್, ವುಡಿ ಅಲೆನ್, ಸೆರ್ಗೆ ಬ್ರಿನ್ ಸೇರಿದಂತೆ ಹಲವು ಪ್ರಮುಖರು ಕಾಣಿಸಿಕೊಂಡಿದ್ದಾರೆ. ಮಹಿಳೆಯ ದೇಹದ ಮೇಲೆ 'ಲೋಲಿಟಾ' ಪುಸ್ತಕದ ಸಂದೇಶಗಳನ್ನು ಬರೆದಿರುವ ಚಿತ್ರಗಳು ಬಹಿರಂಗಗೊಂಡಿದೆ.

Read Full Story
07:46 AM (IST) Dec 19

India News Live 19th December: ಕಾಂಡೋಮ್‌ನ ಜಿಎಸ್‌ಟಿ ಕಡಿತ ಮಾಡಲಾಗದ ದುಸ್ಥಿತಿಗೆ ಪಾಕ್‌!

ವಿದೇಶಿ ಸಾಲದ ನೆರವಿನಿಂದಲೇ ಸರ್ಕಾರ ನಡೆಸುತ್ತಿರುವ ಪಾಕಿಸ್ತಾನ ಇದೀಗ ಕಾಂಡೋಮ್‌ ಸೇರಿದಂತೆ ಗರ್ಭನಿರೋಧಕಗಳ ಮೇಲಿನ ತೆರಿಗೆ ಕಡಿತ ಮಾಡಲಾಗದ ಪರಿಸ್ಥಿತಿ ತಲುಪಿದೆ. ನಿಜ. ಐಎಂಎಫ್‌ನಿಂದ ಸಾಲ ಪಡೆದಿರುವ ಪಾಕಿಸ್ತಾನ, ಇದೀಗ ಆ ಹಣಕಾಸು ಸಂಸ್ಥೆಯ ಸೂಚನೆ ಅನ್ವಯವೇ ನಡೆದುಕೊಳ್ಳಬೇಕಾಗಿ ಬಂದಿದೆ.

Read Full Story
07:46 AM (IST) Dec 19

India News Live 19th December: ನೌಕರರಿಗೆ ಸಂಬಳ, ಪಿಂಚಣಿ ನೀಡಲು ಕೇರಳದಲ್ಲಿ ತತ್ವಾರ

ಕೇರಳ ಸರ್ಕಾರದ ಆರ್ಥಿಕ ನಿರ್ವಹಣೆ ಹಳಿ ತಪ್ಪಿದ ಕಾರಣ ನೀಡಿ, 2025-26ನೇ ಆರ್ಥಿಕ ವರ್ಷದ ಕೊನೆಯ 3 ತಿಂಗಳಲ್ಲಿ ರಾಜ್ಯ ಸಾಲ ಪಡೆಯಬಹುದಾದ ಮೊತ್ತದ ಮಿತಿಯಲ್ಲಿ ಕೇಂದ್ರ ಸರ್ಕಾರ ಸುಮಾರು 6,000 ಕೋಟಿ ರು.ಗಳಷ್ಟು ಕಡಿತ ಮಾಡಿದೆ. ಇದು ಕೇರಳ ಮತ್ತು ಕೇಂದ್ರದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

Read Full Story
07:45 AM (IST) Dec 19

India News Live 19th December: ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ

ಭಾರತ ಮತ್ತು ಒಮಾನ್‌ ದೇಶಗಳು ಮಹತ್ವದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಗುರುವಾರ ಇಲ್ಲಿ ಸಹಿಹಾಕಿವೆ. ಇದರನ್ವಯ ಇನ್ನುಮುಂದೆ ಭಾರತದಿಂದ ಆಮದಾಗುವ ಶೇ.98 ವಿಧದ ವಸ್ತುಗಳ ಮೇಲಿನ ತೆರಿಗೆಯನ್ನು ಒಮಾನ್‌ ಶೂನ್ಯಕ್ಕೆ ಇಳಿಸಿದೆ.

Read Full Story
07:45 AM (IST) Dec 19

India News Live 19th December: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ

ಪರಮಾಣು ಇಂಧನ ಕ್ಷೇತ್ರವನ್ನು ಖಾಸಗಿಯವರಿಗೂ ತೆರೆಯುವ ‘ಶಾಂತಿ’ ಮಸೂದೆಗೆ ಸಂಸತ್ತಿನ ಅನುಮೋದನೆ ಲಭಿಸಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಈ ಬಿಲ್‌ಗೆ ಗುರುವಾರ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಹಸಿರುನಿಶಾನೆ ತೋರಲಾಗಿದೆ. ರಾಷ್ಟ್ರಪತಿಯ ಅಂಕಿತದಿಂದಿಗೆ ಅದು ಕಾಯ್ದೆಯಾಗುವುದಷ್ಟೇ ಬಾಕಿ ಇದೆ.

Read Full Story
07:45 AM (IST) Dec 19

India News Live 19th December: ಚುನಾವಣೆ ಸೋಲಿನ ಬಳಿಕ ಸಿಪಿಎಂಗೆ ಅಯ್ಯಪ್ಪನ ಭಕ್ತಿ!

ಶಬರಿಮಲೆ ಚಿನ್ನ ಕಳವು ಪ್ರಕರಣದಿಂದಾಗಿ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತನಗಾದ ಹಿನ್ನಡೆಯಿಂದ ಹತಾಶೆಗೊಂಡಿರುವ ಕೇರಳದ ಸಿಪಿಎಂ ನೇತೃತ್ವದ ಎಲ್‌ಡಿಎಫ್‌ ಸರ್ಕಾರ, ಚುನಾವಣೆ ವೇಳೆ ವೈರಲ್‌ ಆಗಿದ್ದ ಅಯ್ಯಪ್ಪನ ಭಕ್ತಿಗೀತೆ ಹೋಲುವ ವೈರಲ್‌ ಗೀತೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Read Full Story
07:44 AM (IST) Dec 19

India News Live 19th December: ಸಿಡ್ನಿಯಲ್ಲಿ ಇನ್ನೊಂದು ದಾಳಿ ಸಂಚು ವಿಫಲ

15 ಅಮಾಯಕ ಯಹೂದಿಗಳನ್ನು ಬಲಿ ಪಡೆದ ಬೋಂಡಿ ಬೀಚ್‌ ಉಗ್ರ ದಾಳಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವ ಮುನ್ನವೇ ಆಸ್ಟ್ರೇಲಿಯಾ ಪೊಲೀಸರು ಮತ್ತೊಂದು ಸಂಭವನೀಯ ದಾಳಿಯ ಸಂಚು ವಿಫಲಗೊಳಿಸಿದ್ದಾರೆ.

Read Full Story
07:44 AM (IST) Dec 19

India News Live 19th December: ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!

ಮರುಭೂಮಿ ದೇಶ ಸೌದಿ ಅರೇಬಿಯಾದಲ್ಲಿ ಅಪರೂಪದ ಹಿಮಪಾತ ಮತ್ತು ಗುಡುಗುಸಹಿತ ಮಳೆಯಾಗಿದೆ. ಉತ್ತರದ ತಬೂಕ್ ಪ್ರದೇಶದ ಜಬಲ್ ಅಲ್ ಲಾವ್ಜ್ ಬೆಟ್ಟ ಮತ್ತು ಇತರ ಬೆಟ್ಟಗಳು ಹಿಮದಿಂದ ಆವೃತವಾದ ಅದ್ಭುತ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Read Full Story