11:24 PM (IST) Dec 11

Karnataka News Live 11 December 2025Washing Machine Guide - ಪೌಡರ್ vs ಲಿಕ್ವಿಡ್, ಟಾಪ್-ಲೋಡ್ vs ಫ್ರಂಟ್-ಲೋಡ್ ಯಾವುದು ಉತ್ತಮ?

ಈ ಲೇಖನವು ಟಾಪ್-ಲೋಡ್ ಮತ್ತು ಫ್ರಂಟ್-ಲೋಡ್ ವಾಷಿಂಗ್ ಮೆಷಿನ್‌ಗಳ ನಡುವಿನ ವ್ಯತ್ಯಾಸ ವಿವರಿಸುತ್ತದೆ, ಅವುಗಳ ದಕ್ಷತೆ, ವೆಚ್ಚ ಮತ್ತು ಬಳಕೆಯ ಅನುಕೂಲತೆ ಹೋಲಿಸುತ್ತದೆ. ಜೊತೆಗೆ, ನಿಮ್ಮ ಯಂತ್ರದ ಪ್ರಕಾರಕ್ಕೆ ಅನುಗುಣವಾಗಿ ಲಿಕ್ವಿಡ್ ಅಥವಾ ಪೌಡರ್ ಡಿಟರ್ಜೆಂಟ್‌ ಯಾವುದು ಉತ್ತಮ ಆಯ್ಕೆ ಎಂದು ತಿಳಿಸುತ್ತೆ.

Read Full Story
10:00 PM (IST) Dec 11

Karnataka News Live 11 December 2025Karna Serial ನಿಧಿ ಅರೆಸ್ಟ್​ - ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದೇಕೆ? ಅಷ್ಟಕ್ಕೂ ಆಗಿದ್ದೇನು?

'ಕರ್ಣ' ಸೀರಿಯಲ್‌ನಲ್ಲಿ ನಿಧಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಕುರುಡಿಯೊಬ್ಬಳಿಗೆ ಸಹಾಯ ಮಾಡಲು ಹೋಗಿ, ಆಕೆಯ ಮೋಸದಿಂದ ರೆಡ್‌ಲೈಟ್ ಏರಿಯಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದಾಳೆ. ಈ ಸಂಚಿನ ಹಿಂದೆ ಸಂಜಯ್ ಕೈವಾಡವಿದೆ.
Read Full Story
09:37 PM (IST) Dec 11

Karnataka News Live 11 December 2025ಅಬ್ಬಬ್ಬಾ! ಟ್ವಿಸ್ಟ್‌ ಅಂದ್ರೆ ಇದಪ್ಪಾ- ಎದ್ದು ಬಂದ ಸತ್ತ ಸಂಧ್ಯಾ - ಲಾಯರ್‌ ಭಾರ್ಗವಿನೇ ಜೈಲಿಗೆ ಹೋಗ್ತಾಳಾ?

ಭಾರ್ಗವಿ ಎಲ್‌ಎಲ್‌ಬಿ ಧಾರಾವಾಹಿಯಲ್ಲಿ ಕಥೆ ಅನಿರೀಕ್ಷಿತ ತಿರುವು ಪಡೆದಿದೆ. ಸತ್ತುಹೋದ ಸಂಧ್ಯಾಗೆ ನ್ಯಾಯ ಕೊಡಿಸಲು ಹೋರಾಡುತ್ತಿದ್ದ ಭಾರ್ಗವಿಗೆ, ಸಂಧ್ಯಾಳೇ ಜೀವಂತವಾಗಿ ಕೋರ್ಟ್‌ನಲ್ಲಿ ಎದುರಾಗಿದ್ದಾಳೆ. ಅಷ್ಟೇ ಅಲ್ಲದೆ, ಭಾರ್ಗವಿಯ ವಿರುದ್ಧವೇ ಆರೋಪ ಮಾಡಿ ಎಲ್ಲರಿಗೂ ಆಘಾತ ನೀಡಿದ್ದಾಳೆ.
Read Full Story
09:20 PM (IST) Dec 11

Karnataka News Live 11 December 2025ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

ಸರ್ಕಾರದ ಸಹಾಯಧನ ಮಂಜೂರು ಮಾಡಲು ಉದ್ಯಮಿಯೊಬ್ಬರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಜಂಟಿ ನಿರ್ದೇಶಕ ಲಿಂಗರಾಜು ಮತ್ತು ಸಹಾಯಕ ಪ್ರಸಾದ್, ಉದ್ಯಮಿಯಿಂದ ₹1.15 ಲಕ್ಷ ಲಂಚ ಸ್ವೀಕರಿಸುವಾಗ ವಶಕ್ಕೆ..

Read Full Story
09:18 PM (IST) Dec 11

Karnataka News Live 11 December 2025ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯಕ್ಕೆ ಟ್ರಾಮಾ ಕೇರ್ ಸೆಂಟರ್ & ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ತರಲು ಸಿದ್ಧರಿದ್ದು, ಅದಕ್ಕೆ ಬೇಕಾದ ಜಾಗವನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಪ್ರಸ್ತಾವನೆಯು ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಪ್ರತ್ಯುತ್ತರವಾಗಿ ಮೂಡಿಬಂದಿದೆ.

Read Full Story
08:56 PM (IST) Dec 11

Karnataka News Live 11 December 2025ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಕುಮಾರ ಪರ್ವತದ ತುದಿಯಲ್ಲಿರುವ ಕುಮಾರ ಪಾದಕ್ಕೆ ಬಹುಳ ಷಷ್ಠಿಯಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಪೌರಾಣಿಕ ಹಿನ್ನೆಲೆ ಹೊಂದಿರುವ ಈ ಪರ್ವತವು, ಚಾರಣಿಗರ ನೆಚ್ಚಿನ ತಾಣವೂ ಆಗಿದ್ದು, ಇದರ ಪಾವಿತ್ರ್ಯತೆ ಕಾಪಾಡುವುದು ಮುಖ್ಯವಾಗಿದೆ.

Read Full Story
08:20 PM (IST) Dec 11

Karnataka News Live 11 December 2025ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!

ಉಬರ್ ಭಾರತದಲ್ಲಿ ತನ್ನ ಸೇವೆಯನ್ನು ವಿಸ್ತರಿಸಿದ್ದು, ONDC ಮೂಲಕ 'ಉಬರ್ ಡೈರೆಕ್ಟ್' ಎಂಬ B2B ಲಾಜಿಸ್ಟಿಕ್ಸ್ ಸೇವೆಯನ್ನು ಮತ್ತು ಬೆಂಗಳೂರಿಗೆ ಇನ್-ಆಪ್ ಮೆಟ್ರೋ ಟಿಕೆಟ್ ಸೌಲಭ್ಯವನ್ನು ಪರಿಚಯಿಸಿದೆ. ಮೆಟ್ರೋ ಸೇವೆಯು ಪ್ರಯಾಣಿಕರಿಗೆ QR ಕೋಡ್ ಆಧಾರಿತ ಟಿಕೆಟ್‌ ಒದಗಿಸಲಿದೆ.

Read Full Story
07:48 PM (IST) Dec 11

Karnataka News Live 11 December 2025KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!

ರಾಮನಗರದ ಲಕ್ಷ್ಮೀಪುರ ಗ್ರಾಮದಲ್ಲಿ, ರಸ್ತೆಗೆ ಅಡ್ಡ ಬಂದ ಕುರಿಗಳಿಗೆ ಹಾರ್ನ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚಾಲಕ ಮಂಜುನಾಥ್ ಅವರು ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Read Full Story
07:44 PM (IST) Dec 11

Karnataka News Live 11 December 2025ಬಸ್‌ ಅಪಘಾತದಿಂದ ಪವಾಡಸದೃಶ್ಯವಾಗಿ ಪಾರಾದ 'ರಾಧಾ ಮಿಸ್‌' ಶ್ವೇತಾ ಪ್ರಸಾದ್‌!

'ಕಾಟೇರ' ಖ್ಯಾತಿಯ ನಟಿ ಶ್ವೇತಾ ಆರ್ ಪ್ರಸಾದ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಭೀಕರ ಬಸ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕೆಟ್ಟ ಫೋನ್ ಕರೆಯಿಂದ ಮಾನಸಿಕವಾಗಿ ವಿಚಲಿತರಾಗಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. 

Read Full Story
07:38 PM (IST) Dec 11

Karnataka News Live 11 December 2025ದೆಹಲಿ ಗಲಭೆ ಪ್ರಕರಣ - ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಜೆಎನ್‌ಯು ವಿದ್ವಾಂಸ ಉಮರ್ ಖಾಲಿದ್‌ಗೆ, ಅವರ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 16 ರಿಂದ 29ರವರೆಗೆ ಜಾಮೀನು ನೀಡಲಾಗಿದ್ದು ಹಲವು ನಿರ್ಬಂಧ ವಿಧಿಸಿದೆ.

Read Full Story
07:22 PM (IST) Dec 11

Karnataka News Live 11 December 2025BBK 12 Video - ಸ್ನಾನ ಮಾಡದೇ ತೆಪ್ಪಗೆ ಕುಳಿತ ಸೂರಜ್; ಫ್ಲೈಯಿಂಗ್ ಕಿಸ್ ಕೊಟ್ಟು ಸಂತಸಪಟ್ಟ ರಕ್ಷಿತಾ ಶೆಟ್ಟಿ!

ಬಿಗ್ ಬಾಸ್ ಮನೆಯಲ್ಲಿ ಸೂರಜ್ ಸ್ನಾನ ಮಾಡಿಲ್ಲವೆಂದು ರಕ್ಷಿತಾ ಮತ್ತು ಗಿಲ್ಲಿ ಕಾಲೆಳೆದಾಗ ಮನೆಯಲ್ಲಿ ಗೊಂದಲ ಸೃಷ್ಟಿಯಾಯಿತು. ತಾನು ಸ್ನಾನ ಮಾಡಿದ್ದೇನೆಂದು ಸೂರಜ್ ಪದೇ ಪದೇ ಸಮಜಾಯಿಷಿ ನೀಡಿದರೂ, ಒಪ್ಪದಿದ್ದಾಗ ದೇವರಾಣೆ ಮಾಡಿದರು. ಆಗ ರಕ್ಷಿತಾ ಶೆಟ್ಟಿ ಪ್ಲೈಯಿಂಗ್ ಕಿಸ್ ಕೊಟ್ಟು ಖುಷಿಪಟ್ಟರು.

Read Full Story
07:03 PM (IST) Dec 11

Karnataka News Live 11 December 2025ಮಂಗಳೂರಿನ ವಿದ್ಯಾ ಸಂಪತ್ ಕರ್ಕೇರಗೆ ಮಿಸಸ್ ಅರ್ಥ್ ಇಂಟರ್‌ನ್ಯಾಷನಲ್ 2025 ಕಿರೀಟ!

Vidya Sampath Karkera Mrs Earth 2025: ಮಂಗಳೂರಿನ ವಿದ್ಯಾ ಸಂಪತ್ ಕರ್ಕೇರ ಅವರು ಫಿಲಿಫೈನ್ಸ್‌ನಲ್ಲಿ ನಡೆದ ಮಿಸಸ್ ಅರ್ಥ್‌ ಇಂಟರ್‌ನ್ಯಾಷನಲ್‌ 2025 ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಆಸ್ಟ್ರಲ್‌ ಪೇಜೆಂಟ್ಸ್‌ನ ಬೆಂಬಲದೊಂದಿಗೆ 22 ದೇಶಗಳ ಸ್ಪರ್ಧಿಗಳನ್ನು ಸೋಲಿಸಿ ಭಾರತಕ್ಕೆ ಕೀರ್ತಿ ತಂದಿದ್ದಾರೆ.

Read Full Story
06:45 PM (IST) Dec 11

Karnataka News Live 11 December 2025ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ

ವಿಶ್ವವಿಖ್ಯಾತ ಮೈಸೂರು ಅರಮನೆಯ ವರಹ ಗೇಟ್‌ನ ಮೇಲ್ಛಾವಣಿ ಕುಸಿದು, ನಿರ್ವಹಣೆಯ ನಿರ್ಲಕ್ಷ್ಯವನ್ನು ಮತ್ತೊಮ್ಮೆ ಬಯಲು ಮಾಡಿದೆ. ಈ ಹಿಂದೆ ದರ್ಬಾರ್ ಹಾಲ್ ಸೋರಿಕೆಯಂತಹ ಘಟನೆಗಳು ನಡೆದಿದ್ದು, ಐತಿಹಾಸಿಕ ಕಟ್ಟಡದ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ.

Read Full Story
06:32 PM (IST) Dec 11

Karnataka News Live 11 December 2025ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ - ನಟ ಕಿಶೋರ್‌ ಆಕ್ರೋಶ!

ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ನಟ ಕಿಶೋರ್ ಅವರು ಹಾಲಿ ಸರ್ಕಾರವು ಈ ಗೀತೆಯನ್ನು ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.

Read Full Story
06:10 PM (IST) Dec 11

Karnataka News Live 11 December 2025ಅಡಿಕೆ ತೋಟದ ದುರಂತ - ಗೊನೆ ಕೊಯ್ಯುವಾಗ ಆಯತಪ್ಪಿ ಬಿದ್ದ ಕಾರ್ಮಿಕ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ, ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಮಂಜು ಎಂಬ ಯುವಕ, ಮರದಿಂದ ಆಯತಪ್ಪಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಡಿಕೆ ಗೊನೆ ಕೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ.

Read Full Story
06:08 PM (IST) Dec 11

Karnataka News Live 11 December 2025'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!

ಬೆಂಗಳೂರಿನ ಚಿಕ್ಕಪೇಟೆಯಲ್ಲಿ, ಕನ್ನಡದಲ್ಲಿ ಮಾತನಾಡಲು ಹೇಳಿದ ಗ್ರಾಹಕನಿಗೆ ರಾಜಸ್ಥಾನ ಮೂಲದ ಅಂಗಡಿ ಮಾಲೀಕ ಅವಾಚ್ಯ ಶಬ್ದಗಳಿಂದ ನಿಂದಿಸಿ, 'ನೀನೇ ಹಿಂದಿ ಮಾತಾಡು' ಎಂದು ದರ್ಪ ತೋರಿದ್ದಾನೆ. ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿ, ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾದ ನಂತರ ಕ್ಷಮೆಯಾಚಿಸಿದ್ದಾನೆ.

Read Full Story
06:06 PM (IST) Dec 11

Karnataka News Live 11 December 2025ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಸಂಸದರೊಂದಿಗೆ ವಿಶೇಷ ಸಭೆ ನಡೆಸಿ, ಅವರ ಕಾರ್ಯವೈಖರಿಯ ಬಗ್ಗೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆ, ಸರ್ಕಾರದ ಯೋಜನೆಗಳ ಪ್ರಚಾರ ಮತ್ತು ಜನರೊಂದಿಗೆ ಸಂಪರ್ಕ ಸಾಧಿಸುವ ಕುರಿತು ಸಂಸದರಿಗೆ ಸ್ಪಷ್ಟ ಮಾರ್ಗದರ್ಶನ ನೀಡಿದ್ದಾರೆ.

Read Full Story
05:53 PM (IST) Dec 11

Karnataka News Live 11 December 2025'ನಿಮ್ಮ ಪ್ರೀತಿಯ ಪ್ರತಿ ಹನಿ ಅವರಿಗೆ ತಲುಪಿಸುತ್ತೇನೆ..' ಡೆವಿಲ್‌ ವೀಕ್ಷಿಸಿ ಮನತುಂಬಿ ಬರೆದ ವಿಜಯಲಕ್ಷ್ಮೀ ದರ್ಶನ್‌

ದರ್ಶನ್ ಅನುಪಸ್ಥಿತಿಯಲ್ಲಿ 'ಡೆವಿಲ್' ಸಿನಿಮಾ ಬಿಡುಗಡೆಯಾಗಿದ್ದು, ಅವರ ಪತ್ನಿ ವಿಜಯಲಕ್ಷ್ಮೀ ಚಿತ್ರ ವೀಕ್ಷಿಸಿದ್ದಾರೆ. ಸಿನಿಮಾ ಹಾಗೂ ದರ್ಶನ್‌ರ ನಟನೆಯನ್ನು ಹೊಗಳಿದ ಅವರು, ಅಭಿಮಾನಿಗಳ ಪ್ರೀತಿಯನ್ನು ಕಂಡು ಭಾವುಕರಾಗಿದ್ದು, ಈ ಪ್ರೀತಿಯನ್ನು ದರ್ಶನ್‌ಗೆ ತಲುಪಿಸುವ ಭರವಸೆ ನೀಡಿದ್ದಾರೆ.
Read Full Story
05:33 PM (IST) Dec 11

Karnataka News Live 11 December 2025ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!

ಯತೀಂದ್ರ ಸಿದ್ದರಾಮಯ್ಯ ಅವರ ಅಧಿಕಾರಾವಧಿ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಸರಣಿ ಸಭೆ ನಡೆಸಿದರೆ, ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಮೇಲೆ ಗರಂ ಆಗಿ, ನಂತರ ಪುತ್ರನೊಂದಿಗೆ ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಲು ಯತ್ನಿಸಿದರು.

Read Full Story
05:03 PM (IST) Dec 11

Karnataka News Live 11 December 2025ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರರ ಹೇಳಿಕೆಗಳಿಂದ ಸಿಎಂಗೆ ಮುಜುಗರವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲು ಯತೀಂದ್ರರೊಂದಿಗೆ ಮಾತನಾಡುವುದಾಗಿ ತಿಳಿಸಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು ಎಂದರು

Read Full Story